Homeಮುಖಪುಟಲಿಂಬಾವಳಿ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ‘ರೇಪ್‌’ ಹೇಳಿಕೆಗೆ ಕಾಂಗ್ರೆಸ್‌ ಆಕ್ರೋಶ

ಲಿಂಬಾವಳಿ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ‘ರೇಪ್‌’ ಹೇಳಿಕೆಗೆ ಕಾಂಗ್ರೆಸ್‌ ಆಕ್ರೋಶ

- Advertisement -
- Advertisement -

ರಾಜಕಾಲುವೆ ಒತ್ತುವರಿಗೆ ಸಂಬಂಧಿಸಿ ಅಹವಾಲು ಸಲ್ಲಿಸಲು ಯತ್ನಿಸಿದ ಮಹಿಳೆಯನ್ನು ನಿಂದಿಸಿದ್ದಲ್ಲದೇ, ಆಕೆಯನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಅರವಿಂದ್‌ ಲಿಂಬಾವಳಿ ವಿರುದ್ಧ ಆಮ್‌ ಆದ್ಮಿ ಪಾರ್ಟಿಯು ಮಹಿಳಾ ಆಯೋಗಕ್ಕೆ ದೂರು ನೀಡಿತು.

ಮಾಧ್ಯಮಗಳ ಜೊತೆ ಮಾತನಾಡಿದ ಬೆಂಗಳೂರು ನಗರ ಎಎಪಿ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, “ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಅರವಿಂದ್‌ ಲಿಂಬಾವಳಿಯವರ ದರ್ಪ ಮಿತಿಮೀರಿದೆ. ರಾಜಕಾಲುವೆ ಒತ್ತುವರಿ ಸಂಬಂಧ ದೂರು ನೀಡಲು ಆಗಮಿಸಿದ ಮಹಿಳೆಯನ್ನು ಲಿಂಬಾವಳಿ ನಿಂದಿಸಿದ್ದಾರೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಧಿಕಾರ ದುರ್ಬಳಕೆ ಮಾಡಿಕೊಂಡು ಪೊಲೀಸರ ಮೇಲೆ ಪ್ರಭಾವ ಮೀರಿ ಆಕೆಯ ಬಂಧನವಾಗುವಂತೆ ಮಾಡಿದ್ದಾರೆ. ಜನರ ಸಮಸ್ಯೆಯನ್ನು ಆಲಿಸುವ ಸೌಜನ್ಯವಿಲ್ಲದ ಲಿಂಬಾವಳಿಯವರು ಶಾಸಕರಾಗಿರುವುದು ಕ್ಷೇತ್ರದ ದುರಾದೃಷ್ಟ” ಎಂದು ಹೇಳಿದ್ದಾರೆ.

“ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪೊಲೀಸರು ಮಹಿಳೆ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಜನರ ಸಮಸ್ಯೆ ಆಲಿಸುವ ಬದಲು ಅವರ ವಿರುದ್ಧವೇ ಕ್ರಮಕೈಗೊಂಡಿರುವುದು ಖಂಡನೀಯ. ಸಂತ್ರಸ್ತ ಮಹಿಳೆ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣವನ್ನು ರದ್ದುಪಡಿಸಬೇಕು. ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿದ ಲಿಂಬಾವಳಿ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು. ಅರವಿಂದ್‌ ಲಿಂಬಾವಳಿಯವರು ಸಮಸ್ತ ಮಹಿಳೆಯರ ಕ್ಷಮೆ ಕೇಳಬೇಕು” ಎಂದು ಕುಶಲಸ್ವಾಮಿ ಆಗ್ರಹಿಸಿದ್ದಾರೆ.

ಅಲ್ಲದೇ, “ನಾನೇನು ಅವಳನ್ನು ರೇಪ್‌ ಮಾಡಿದ್ದೇನಾ?” ಎನ್ನುವ ಮೂಲಕ ಘಟನೆಯನ್ನು ಲಿಂಬಾವಳಿ ಸಮರ್ಥಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್‌ ಪ್ರತಿಕ್ರಿಯೆ ನೀಡಿದ್ದು, “ಮಹಿಳೆಯ ಮೇಲೆ ದಬ್ಬಾಳಿಕೆ ಎಸಗಿದ್ದಲ್ಲದೆ ‘ನಾನೇನು ರೇಪ್ ಮಾಡಿದ್ನಾ’ ಎಂದು ಉದ್ಧಟತನದಲ್ಲಿ ಕೇಳಿದ ಅರವಿಂದ್ ಲಿಂಬಾವಳಿ ಅವರ ಮಾತುಗಳು ಇಡೀ ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿ. ಲಿಂಬಾವಳಿಯ ಈ ಮಾತುಗಳು ಇಡೀ ಸ್ತ್ರೀ ಕುಲಕ್ಕೆ ಮಾಡಿದ ಘೋರ ಅವಮಾನ. ಇಂತಹ ಕೊಳಕು ಮನಸ್ಥಿತಿಯ ಶಾಸಕನ ವಿರುದ್ಧ ಕ್ರಮ ಕೈಗೊಳ್ಳದೆ ಸಿಎಂ ಮೌನವಹಿಸಿರುವುದು ಏಕೆ” ಪ್ರಶ್ನಿಸಿದೆ.

ತನ್ನದೇ ಮತಕ್ಷೇತ್ರದ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದರೂ ಶಾಸಕ ಅರವಿಂದ್ ಲಿಂಬಾವಳಿ ವಿರುದ್ಧ ಕ್ರಮ ಜರುಗಿಸದೆ ನಾಲಿಗೆ ಉದ್ಧವಾಗಲು ಬಿಟ್ಟ ಮುಖ್ಯಮಂತ್ರಿ Basavaraj Bommai ಅವರು ಮಂಡಿಯೂರಿ ರಾಜ್ಯದ ಮಹಿಳೆಯರ ಕ್ಷಮೆ ಕೇಳಬೇಕು. ಬಿಜೆಪಿಗೆ ನಿಜಕ್ಕೂ ಮಹಿಳೆಯರ ಮೇಲೆ ಗೌರವ ಇದ್ದರೆ ಲಿಂಬಾವಳಿಯನ್ನು ವಜಾಗೊಳಿಸಿ ನಿರೂಪಿಸಲಿ ಎಂದು ಸವಾಲು ಹಾಕಿದೆ.

ಇದನ್ನೂ ಓದಿರಿ: ‘ರೇಪ್‌ ಮಾಡಿದ್ದೀನಾ ಅವಳಿಗೆ?’: ಮತ್ತೆ ನಾಲಗೆ ಹರಿಬಿಟ್ಟ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

“ಬಿಜೆಪಿಯು ರೇಪ್ ಆರೋಪಿ ರಮೇಶ್ ಜಾರಕಿಹೊಳಿಯನ್ನೇ ಸಮರ್ಥಿಸಿಕೊಂಡಿದೆ. ಮೈಸೂರಿನ ರೇಪ್ ಸಂತ್ರಸ್ತೆಯನ್ನು ದೂಷಿಸಿದೆ, ಗುಜರಾತಿನಲ್ಲಿ ರೇಪಿಸ್ಟರನ್ನು ಸನ್ಮಾನಿಸಿದೆ, ಕಾಶ್ಮೀರದಲ್ಲಿ ರೇಪ್ ಆರೋಪಿಗಳ ಮೆರವಣಿಗೆಯನ್ನೇ ಮಾಡಿದೆ ಇಂಥ ಮಹಿಳಾ ವಿರೋಧಿ ಬಿಜೆಪಿಗೆ ಲಿಂಬಾವಳಿ ಮಾತು ಪ್ರಿಯವಾಗಬಹುದು, ಆದರೆ ರಾಜ್ಯದ ಮಹಿಳೆಯರಿಗೆ ಅದು ಅಸಹ್ಯವಾಗಿದೆ” ಎಂದು ಆಕ್ರೋಶ ಹೊರಹಾಕಿದೆ.

ರಾಜ್ಯ ಯೂತ್ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, “ಅಧಿಕಾರದ ಅಮಲು ನೆತ್ತಿಗೆರಿ, ದುರಂಕಾರ ಪರಮಾವಧಿಯಲ್ಲಿ. ನ್ಯಾಯ ಕೇಳಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ್ದಲ್ಲದೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅಸಹ್ಯಕರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ಇದೇನಾ ನಿಮ್ಮ ಧರ್ಮ ರಕ್ಷಣೆ, ಇದೇನಾ ನಮ್ಮ ಹಿಂದೂ ಧರ್ಮದಲ್ಲಿ ಹೇಳಿಕೊಡುವುದು. ಶಾಸಕರಾಗಿ ಸಾಧನೆ ತೋರಿಸಲಾಗದೆ ಸಾಮಾನ್ಯ ಜನರ ಮೇಲೆ ದರ್ಪ ತೋರಿಸುತ್ತಿದ್ದಾರೆ. ಈ ಕೂಡಲೇ ಅರವಿಂದ್ ಲಿಂಬಾವಳಿಯ ರಾಜೀನಾಮೆ ಪಡೆಯಬೇಕು, ಪಕ್ಷದಿಂದ ಉಚ್ಚಾಟಿಸಬೇಕು” ಎಂದು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...