Homeಮುಖಪುಟಲಿಂಬಾವಳಿ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ‘ರೇಪ್‌’ ಹೇಳಿಕೆಗೆ ಕಾಂಗ್ರೆಸ್‌ ಆಕ್ರೋಶ

ಲಿಂಬಾವಳಿ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ‘ರೇಪ್‌’ ಹೇಳಿಕೆಗೆ ಕಾಂಗ್ರೆಸ್‌ ಆಕ್ರೋಶ

- Advertisement -
- Advertisement -

ರಾಜಕಾಲುವೆ ಒತ್ತುವರಿಗೆ ಸಂಬಂಧಿಸಿ ಅಹವಾಲು ಸಲ್ಲಿಸಲು ಯತ್ನಿಸಿದ ಮಹಿಳೆಯನ್ನು ನಿಂದಿಸಿದ್ದಲ್ಲದೇ, ಆಕೆಯನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಅರವಿಂದ್‌ ಲಿಂಬಾವಳಿ ವಿರುದ್ಧ ಆಮ್‌ ಆದ್ಮಿ ಪಾರ್ಟಿಯು ಮಹಿಳಾ ಆಯೋಗಕ್ಕೆ ದೂರು ನೀಡಿತು.

ಮಾಧ್ಯಮಗಳ ಜೊತೆ ಮಾತನಾಡಿದ ಬೆಂಗಳೂರು ನಗರ ಎಎಪಿ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, “ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಅರವಿಂದ್‌ ಲಿಂಬಾವಳಿಯವರ ದರ್ಪ ಮಿತಿಮೀರಿದೆ. ರಾಜಕಾಲುವೆ ಒತ್ತುವರಿ ಸಂಬಂಧ ದೂರು ನೀಡಲು ಆಗಮಿಸಿದ ಮಹಿಳೆಯನ್ನು ಲಿಂಬಾವಳಿ ನಿಂದಿಸಿದ್ದಾರೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಧಿಕಾರ ದುರ್ಬಳಕೆ ಮಾಡಿಕೊಂಡು ಪೊಲೀಸರ ಮೇಲೆ ಪ್ರಭಾವ ಮೀರಿ ಆಕೆಯ ಬಂಧನವಾಗುವಂತೆ ಮಾಡಿದ್ದಾರೆ. ಜನರ ಸಮಸ್ಯೆಯನ್ನು ಆಲಿಸುವ ಸೌಜನ್ಯವಿಲ್ಲದ ಲಿಂಬಾವಳಿಯವರು ಶಾಸಕರಾಗಿರುವುದು ಕ್ಷೇತ್ರದ ದುರಾದೃಷ್ಟ” ಎಂದು ಹೇಳಿದ್ದಾರೆ.

“ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪೊಲೀಸರು ಮಹಿಳೆ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಜನರ ಸಮಸ್ಯೆ ಆಲಿಸುವ ಬದಲು ಅವರ ವಿರುದ್ಧವೇ ಕ್ರಮಕೈಗೊಂಡಿರುವುದು ಖಂಡನೀಯ. ಸಂತ್ರಸ್ತ ಮಹಿಳೆ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣವನ್ನು ರದ್ದುಪಡಿಸಬೇಕು. ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿದ ಲಿಂಬಾವಳಿ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು. ಅರವಿಂದ್‌ ಲಿಂಬಾವಳಿಯವರು ಸಮಸ್ತ ಮಹಿಳೆಯರ ಕ್ಷಮೆ ಕೇಳಬೇಕು” ಎಂದು ಕುಶಲಸ್ವಾಮಿ ಆಗ್ರಹಿಸಿದ್ದಾರೆ.

ಅಲ್ಲದೇ, “ನಾನೇನು ಅವಳನ್ನು ರೇಪ್‌ ಮಾಡಿದ್ದೇನಾ?” ಎನ್ನುವ ಮೂಲಕ ಘಟನೆಯನ್ನು ಲಿಂಬಾವಳಿ ಸಮರ್ಥಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್‌ ಪ್ರತಿಕ್ರಿಯೆ ನೀಡಿದ್ದು, “ಮಹಿಳೆಯ ಮೇಲೆ ದಬ್ಬಾಳಿಕೆ ಎಸಗಿದ್ದಲ್ಲದೆ ‘ನಾನೇನು ರೇಪ್ ಮಾಡಿದ್ನಾ’ ಎಂದು ಉದ್ಧಟತನದಲ್ಲಿ ಕೇಳಿದ ಅರವಿಂದ್ ಲಿಂಬಾವಳಿ ಅವರ ಮಾತುಗಳು ಇಡೀ ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿ. ಲಿಂಬಾವಳಿಯ ಈ ಮಾತುಗಳು ಇಡೀ ಸ್ತ್ರೀ ಕುಲಕ್ಕೆ ಮಾಡಿದ ಘೋರ ಅವಮಾನ. ಇಂತಹ ಕೊಳಕು ಮನಸ್ಥಿತಿಯ ಶಾಸಕನ ವಿರುದ್ಧ ಕ್ರಮ ಕೈಗೊಳ್ಳದೆ ಸಿಎಂ ಮೌನವಹಿಸಿರುವುದು ಏಕೆ” ಪ್ರಶ್ನಿಸಿದೆ.

ತನ್ನದೇ ಮತಕ್ಷೇತ್ರದ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದರೂ ಶಾಸಕ ಅರವಿಂದ್ ಲಿಂಬಾವಳಿ ವಿರುದ್ಧ ಕ್ರಮ ಜರುಗಿಸದೆ ನಾಲಿಗೆ ಉದ್ಧವಾಗಲು ಬಿಟ್ಟ ಮುಖ್ಯಮಂತ್ರಿ Basavaraj Bommai ಅವರು ಮಂಡಿಯೂರಿ ರಾಜ್ಯದ ಮಹಿಳೆಯರ ಕ್ಷಮೆ ಕೇಳಬೇಕು. ಬಿಜೆಪಿಗೆ ನಿಜಕ್ಕೂ ಮಹಿಳೆಯರ ಮೇಲೆ ಗೌರವ ಇದ್ದರೆ ಲಿಂಬಾವಳಿಯನ್ನು ವಜಾಗೊಳಿಸಿ ನಿರೂಪಿಸಲಿ ಎಂದು ಸವಾಲು ಹಾಕಿದೆ.

ಇದನ್ನೂ ಓದಿರಿ: ‘ರೇಪ್‌ ಮಾಡಿದ್ದೀನಾ ಅವಳಿಗೆ?’: ಮತ್ತೆ ನಾಲಗೆ ಹರಿಬಿಟ್ಟ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

“ಬಿಜೆಪಿಯು ರೇಪ್ ಆರೋಪಿ ರಮೇಶ್ ಜಾರಕಿಹೊಳಿಯನ್ನೇ ಸಮರ್ಥಿಸಿಕೊಂಡಿದೆ. ಮೈಸೂರಿನ ರೇಪ್ ಸಂತ್ರಸ್ತೆಯನ್ನು ದೂಷಿಸಿದೆ, ಗುಜರಾತಿನಲ್ಲಿ ರೇಪಿಸ್ಟರನ್ನು ಸನ್ಮಾನಿಸಿದೆ, ಕಾಶ್ಮೀರದಲ್ಲಿ ರೇಪ್ ಆರೋಪಿಗಳ ಮೆರವಣಿಗೆಯನ್ನೇ ಮಾಡಿದೆ ಇಂಥ ಮಹಿಳಾ ವಿರೋಧಿ ಬಿಜೆಪಿಗೆ ಲಿಂಬಾವಳಿ ಮಾತು ಪ್ರಿಯವಾಗಬಹುದು, ಆದರೆ ರಾಜ್ಯದ ಮಹಿಳೆಯರಿಗೆ ಅದು ಅಸಹ್ಯವಾಗಿದೆ” ಎಂದು ಆಕ್ರೋಶ ಹೊರಹಾಕಿದೆ.

ರಾಜ್ಯ ಯೂತ್ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, “ಅಧಿಕಾರದ ಅಮಲು ನೆತ್ತಿಗೆರಿ, ದುರಂಕಾರ ಪರಮಾವಧಿಯಲ್ಲಿ. ನ್ಯಾಯ ಕೇಳಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ್ದಲ್ಲದೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅಸಹ್ಯಕರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ಇದೇನಾ ನಿಮ್ಮ ಧರ್ಮ ರಕ್ಷಣೆ, ಇದೇನಾ ನಮ್ಮ ಹಿಂದೂ ಧರ್ಮದಲ್ಲಿ ಹೇಳಿಕೊಡುವುದು. ಶಾಸಕರಾಗಿ ಸಾಧನೆ ತೋರಿಸಲಾಗದೆ ಸಾಮಾನ್ಯ ಜನರ ಮೇಲೆ ದರ್ಪ ತೋರಿಸುತ್ತಿದ್ದಾರೆ. ಈ ಕೂಡಲೇ ಅರವಿಂದ್ ಲಿಂಬಾವಳಿಯ ರಾಜೀನಾಮೆ ಪಡೆಯಬೇಕು, ಪಕ್ಷದಿಂದ ಉಚ್ಚಾಟಿಸಬೇಕು” ಎಂದು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...