Homeಕರ್ನಾಟಕಪ್ರಿಯಾಂಕ್ ಖರ್ಗೆ ಹೇಳಿಕೆ ಖಂಡಿಸಿ ಮಹಿಳಾ ಆಯೋಗಕ್ಕೆ ಎಎಪಿ ದೂರು

ಪ್ರಿಯಾಂಕ್ ಖರ್ಗೆ ಹೇಳಿಕೆ ಖಂಡಿಸಿ ಮಹಿಳಾ ಆಯೋಗಕ್ಕೆ ಎಎಪಿ ದೂರು

ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ಈಗಾಗಲೇ ಕ್ಷಮೆ ಕೇಳಿದ್ದು, ಸ್ಪಷ್ಟನೆಯನ್ನೂ ನೀಡಿದ್ದಾರೆ.

- Advertisement -
- Advertisement -

ಯುವತಿಯರು ಸರಕಾರಿ ಕೆಲಸ ಪಡೆಯಲು ಮಂಚ ಹತ್ತಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸಚಿವ ಪ್ರಿಯಾಂಕ ಖರ್ಗೆ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕವು ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಸಲ್ಲಿಸಿದೆ.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿಯ ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, “ಮಾಜಿ ಸಚಿವರಾದ ಪ್ರಿಯಾಂಕ ಖರ್ಗೆಯವರು ಆಗಸ್ಟ್‌ 12, 2022ರಂದು ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಮಹಿಳೆಯರ ವಿರುದ್ಧ ಮಾತನಾಡಿದ್ದಾರೆ. ಇದು ಲಂಚ-ಮಂಚದ ಸರಕಾರ, ಯುವಕರಿಗೆ ನೌಕರಿ ಬೇಕಂದ್ರೆ ಲಂಚ ಕೊಡಬೇಕು. ಯುವತಿಯರಿಗೆ ನೌಕರಿ ಬೇಕೆಂದರೆ ಮಂಚ ಹತ್ತಬೇಕು ಎನ್ನುವ ಕೀಳು ಹೇಳಿಕೆಯನ್ನು ನೀಡಿದ್ದಾರೆ. ಇದು ಉದ್ಯೋಗಸ್ಥ ಹಾಗೂ ಉದ್ಯೋಗಾಕಾಂಕ್ಷಿ ಮಹಿಳೆಯರಿಗೆ ಮಾಡಿರುವ ಅವಮಾನವಾಗಿದ್ದು, ಮಹಿಳಾ ಆಯೋಗವು ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜಕೀಯವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ಕೀಳು ಹೇಳಿಕೆ ನೀಡುವುದು ಹೊಸತೇನಲ್ಲ. ಆದರೆ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಪ್ರಮುಖ ಪಾತ್ರವಹಿಸಿರುವ ರಾಜಕೀಯ ಕುಟುಂಬದ ಕುಡಿಯಾಗಿರುವ ಪ್ರಿಯಾಂಕ್‌ರವರು ಸರಕಾರಿ ಕೆಲಸ ಪಡೆಯುವ ಎಲ್ಲಾ ಮಹಿಳಾ ಅಭ್ಯರ್ಥಿಗಳ ಮೇಲೆ ಕಪ್ಪು ಚುಕ್ಕೆಯನ್ನು ಬರುವಂತಹ ಈ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯ ತೀವ್ರತೆಯನ್ನು ಗಮನಿಸಿ ರಾಜ್ಯ ಮಹಿಳಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು” ಎಂದು ಮಾಧ್ಯಮ ವಕ್ತಾರೆ ಉಷಾ ಮೋಹನ್ ಒತ್ತಾಯಿಸಿದ್ದಾರೆ.

ಕ್ಷಮೆ ಕೇಳಿರುವ ಪ್ರಿಯಾಂಕ್ ಖರ್ಗೆ

ಮಾಜಿ ಸಚಿವರಾದ ಪ್ರಿಯಾಂಕ್ ಖರ್ಗೆಯವರು ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದು, ಕ್ಷಮೆಯನ್ನೂ ಯಾಚಿಸಿದ್ದಾರೆ. “ರಾಜ್ಯ ಸರಕಾರವನ್ನು ಲಂಚ-ಮಂಚ ಸರ್ಕಾರ ಎಂದು ಕರೆದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಹೇಳಿಕೆಯಿಂದ ಯಾರಿಗಾದರೂ ನೋವುಂಟಾಗಿದ್ದರೆ ಕ್ಷಮೆ ಕೇಳಲು ಸಿದ್ದನಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿರಿ: ಸಂತ ಸೇವಾಲಾಲ್‌ರ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್‌ ಶಿಬಿರ ಆಯೋಜನೆ: ಬಂಜಾರ ಮುಖಂಡರ ಆಕ್ರೋಶ

ಈ ಕುರಿತು ಫೇಸ್‌ಬುಕ್‌ ಖಾತೆಯಲ್ಲಿ ಸ್ಪಷ್ಟನೆಯನ್ನು ನೀಡಿರುವ ಅವರು, “ನನ್ನ ಇಡೀ ಜೀವನ ಬಾಬಾಸಾಹೇಬರ ಆದರ್ಶಗಳ ಹಾದಿಯಲ್ಲಿ ಸಾಗಿದ್ದೇನೆ. ನಾಡಿನ ಹೆಣ್ಣು ಮಕ್ಕಳಿಗೆ ಯಾವುದೇ ರೀತಿಯಲ್ಲಿ ಅವಮಾನವಾಗುವ ರೀತಿಯಲ್ಲಿ ನನ್ನ ಮಾತುಗಳಲ್ಲಿ ನಾನು ಅರ್ಥೈಸಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವುಂಟಾಗಿದ್ದರೆ, ನಾನು ಕ್ಷಮೆ ಕೇಳಲು ಸಿದ್ದನಿದ್ದೇನೆ. ಆದರೆ ಬಿಜೆಪಿ, ಹೆಣ್ಣು ಮಕ್ಕಳಿಗೆ ನಿಜವಾಗಿ ಅಪಮಾನ ಮಾಡಿರುವ ತನ್ನೆಲ್ಲಾ ನಾಯಕರ ಬಳಿ ರಾಜೀನಾಮೆ ಪಡೆದು ರಾಜ್ಯದ ಮಹಿಳಾ ಸಮುದಾಯಕ್ಕೆ ಎಸಗಿದ ಅವಮಾನಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳುವ ಕೆಲಸ ಮಾಡಲಿದೆಯಾ? ಇದಕ್ಕೆ ಸಕಾರಾತ್ಮಕ ರೀತಿಯಲ್ಲಿ ಬಿಜೆಪಿಯಿಂದ ಉತ್ತರವನ್ನು ನಿರೀಕ್ಷಿಸಬಹುದೇ?” ಎಂದು ಪ್ರಶ್ನಿಸಿದ್ದಾರೆ.

“ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಒಂದಲ್ಲಾ ಒಂದು ಹಗರಣಗಳು ದಿನಂಪ್ರತಿ ಬೆಳಕಿಗೆ ಬರುತ್ತಲೇ ಇವೆ. ಇದು ಈ ಸರ್ಕಾರದ ಭ್ರಷ್ಟಾಚಾರದ ವಿರಾಟ್ ರೂಪ ಹಾಗೂ ಲಂಚಕೋರ ಆಡಳಿತಕ್ಕೆ ಹಿಡಿದ ಕೈಗನ್ನಡಿ. ವಿಶೇಷವಾಗಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರ ರಾಜ್ಯದ ಸಾವಿರಾರು ಯುವಕರ ಕಣ್ಣಲ್ಲಿ ನೀರು ತರಿಸುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಇತ್ತೀಚಿಗೆ ನಡೆದ KPTCL ಪರೀಕ್ಷೆಯಲ್ಲಿ ಆಗಿರುವ ಅಕ್ರಮಕ್ಕೆ ಯಾವುದೇ ಶಿಕ್ಷೆ ನೀಡಿದರೂ ಕಮ್ಮಿಯೇ. ಸರ್ಕಾರಿ ಕೆಲಸ ಒಂದಿಡೀ ಕುಟುಂಬವನ್ನೇ ಬಡತನದಿಂದ ಮೇಲೆತ್ತುವ, ಸುಭದ್ರ ಭವಿಷ್ಯ ಕಟ್ಟಿಕೊಡುವ ಅವಕಾಶ. ಲಂಚ ಪಡೆದು ಪರೀಕ್ಷೆಯಲ್ಲಿ ಅಕ್ರಮವಾಗಿ ಉತ್ತೀರ್ಣರಾಗುವ ಮೂಲಕ ವ್ಯವಸ್ಥಿತವಾಗಿ ಬಡವರ್ಗದ ಹಾಗೂ ಯೋಗ್ಯ ಯುವ ಜನರ ಕೈಯಿಂದ ಆ ಅವಕಾಶವನ್ನು ಕಿತ್ತುಕೊಳ್ಳುವುದನ್ನು ಈ ಭ್ರಷ್ಟ ಬಿಜೆಪಿ ಸರ್ಕಾರ ಸಕ್ರಮಗೊಳಿಸಿಬಿಟ್ಟಿದೆ. ಇದನ್ನು ವಿರೋಧಿಸಿ ನಾನು ನಡೆಸಿದ ಪತ್ರಿಕಾಗೋಷ್ಟಿಯಲ್ಲಿ ಈ ಸರ್ಕಾರವನ್ನು ಲಂಚ-ಮಂಚದ ಸರ್ಕಾರವೆಂದು ಕರೆದಿದ್ದೆ. ತನ್ನ ಅಕ್ರಮಗಳನ್ನು ಮುಚ್ಚಿಕೊಳ್ಳಲು, ತನ್ನ ಭ್ರಷ್ಟ ರೂಪವನ್ನು ರಕ್ಷಿಸಿಕೊಳ್ಳಲು, ಹಾಗೂ ತನ್ನ ತಪ್ಪನ್ನು ಸಮರ್ಥಿಸಿಕೊಳ್ಳಲು ನನ್ನ ಹೇಳಿಕೆಯನ್ನು ಅವರ ಅನುಕೂಲಕ್ಕೆ ತಕ್ಕಂತೆ ತಿರುಚಿ KPTCL ಅಕ್ರಮವನ್ನು ಈ ಮೂಲಕ ಮುಚ್ಚಿ ಹಾಕಲು ಬಿಜೆಪಿ ಹೊರಟು ನಿಂತಿದೆ” ಎಂದು ಟೀಕಿಸಿದ್ದಾರೆ.

“ಕೆಲಸಕ್ಕಾಗಿ ಬಂದ ಯುವತಿಯನ್ನು ಈ ಸರ್ಕಾರದ ಮಂತ್ರಿ ಮೋಸ ಮಾಡಿ, ಸಿಕ್ಕಿ ಬಿದ್ದು ರಾಜೀನಾಮೆ ನೀಡಬೇಕಾಯಿತು. ಆದರೆ ಅವರ ಬಳಿ ಕ್ಷಮೆಯನ್ನು ಬಿಜೆಪಿಯ ಯಾರೊಬ್ಬರೂ ಕೇಳಲಿಲ್ಲ. ಕೇಂದ್ರ ಮಂತ್ರಿಯೊಬ್ಬರು ಅಶ್ಲೀಲವಾಗಿ ಪರಸ್ತ್ರೀಯೊಬ್ಬರೊಂದಿಗೆ ನಡೆಸಿದ್ದ ವಿಡಿಯೋ ವೈರಲ್ ಆದಾಗ ಹೆಣ್ಣನ್ನು ತೃಣವಾಗಿ ಕಂಡಿದ್ದ ಅವರ ಬಳಿ ಬಿಜೆಪಿಯ ಯಾರೊಬ್ಬರೂ ಕ್ಷಮೆಗೆ ಆಗ್ರಹಿಸಲಿಲ್ಲ. ಸದನದಲ್ಲಿ ಕೂತು ಪಾರ್ನ್ ವೀಕ್ಷಿಸಿ ಇಡೀ ರಾಜ್ಯದ ಹೆಣ್ಣು ಕುಲಕ್ಕೆ ಅಪಮಾನ ಮಾಡಿದವರ ಬಳಿ ಕ್ಷಮೆಗೆ ಆಗ್ರಹಿಸಲಿಲ್ಲ, ಬದಲಾಗಿ ಮತ್ತೆ ಟಿಕೆಟ್ ಕೊಟ್ಟು ಗೆಲ್ಲಿಸಿಕೊಂಡು ಬಂದರು, ಸೋತವರನ್ನು MLC ಮಾಡಿ DCM ಮಾಡಿದ್ದು ಇದೇ BJP ಪಕ್ಷ” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿರಿ: ಮಹಿಳೆಯ ಬಗ್ಗೆ ಮೋದಿ ಆಡಿದ ಮಾತಿಗೆ ಅರ್ಥವಿಲ್ಲವೆ?: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆ ಬಳಿಕ ಪ್ರತಿಪಕ್ಷಗಳ ವಾಗ್ದಾಳಿ

ಈ ಸರ್ಕಾರದ ಮಂತ್ರಿಯೊಬ್ಬರು ‘ಈ ರಾಜ್ಯದ ಯಾವ ಶಾಸಕ ಏಕ ಪತ್ನಿವೃತಸ್ಥ?’ ಎಂಬ ಪ್ರಶ್ನೆ ಬಿಜೆಪಿಗೆ ಈ ನಾಡಿನ ಹೆಣ್ಣು ಮಕ್ಕಳ ಅವಮಾನದಂತೆ ಕಂಡುಬರಲಿಲ್ಲ. ಈ ನಾಡಿನ ಹೆಣ್ಣು ಮಕ್ಕಳು ಕೆಲಸಕ್ಕಾಗಿ ಹೋದಾಗ ಅಶ್ಲೀಲವಾಗಿ ವರ್ತಿಸಿ ‘ಮೀ ಟೂ’ ಪ್ರಕರಣದಲ್ಲಿ ಬಿಜೆಪಿಯ ಇಬ್ಬರು ಸಂಸದರು ಸಿಕ್ಕಿ ಬಿದ್ದಾಗ ಬಿಜೆಪಿ ಅವರ ಬಳಿ ಕ್ಷಮೆ ಕೇಳಲಿಲ್ಲ. ಈ ರಾಜ್ಯದ ಸಚಿವ ಸಂಪುಟದ ಸಚಿವರ ‘ಮಂಚದ ವಿಚಾರ’ಕ್ಕೆ ಹೆದರಿ ಹೈಕೋರ್ಟ್ ನಿಂದ ಸ್ಟೇ ತಂದಾಗ ಬಿಜೆಪಿ ಇವರ್ಯಾರ ಬಳಿಯೂ ಕ್ಷಮೆ ಕೇಳಲಿಲ್ಲ ಎಂದಿದ್ದಾರೆ.

ಈ ಸರ್ಕಾರದ ಅನಿಷ್ಟ ಆಡಳಿತಕ್ಕೆ ಇವರ ಕಾರ್ಯಕರ್ತರೇ ‘ಜನಾಕ್ರೋಶ’ ರೂಪಿಸಿ ಇವರ ಜನೋತ್ಸವಕ್ಕೆ ಬ್ರೇಕ್ ಹಾಕಿದ್ದಾರೆ. ಇನ್ನು ಈಗಷ್ಟೆ ಬಿಜೆಪಿ ಸರ್ಕಾರದ ಮಂತ್ರಿಯೊಬ್ಬರು, ‘ಬಿಜೆಪಿ ಸರ್ಕಾರ ಆಡಳಿತ ಮಾಡುತ್ತಿಲ್ಲ, ಬದಲಿಗೆ ಮ್ಯಾನೇಜ್ಮೆಂಟ್ ನಡೆಸುತ್ತಿದ್ದೇವೆ’ ಎಂದು ಮಾತನಾಡಿರುವ ಆಡಿಯೋ ವೈರೆಲ್ ಆಗುತ್ತಿದೆ. ಈ ಸರ್ಕಾರದಲ್ಲಿ ಆಗಿರುವ ಹಾಗೂ ಈಗಲೂ ಘಟಿಸುತ್ತಿರುವ ಮಂಚ-ಲಂಚದ ಪ್ರಕರಣಗಳಿಗೆ ಕನ್ನಡಿಯಾಗಿ ಮಾತನಾಡುವುದು ವಿರೋಧ ಪಕ್ಷವಾಗಿ ನಮ್ಮ ಆದ್ಯ ಕರ್ತವ್ಯ. ಆ ಕೆಲಸವನ್ನು ಇಂದು ನಾವು ಸರಿಯಾಗಿ ನಿರ್ವಹಿಸುತ್ತಿರುವದರಿಂದಲೇ ಬಿಜೆಪಿ ನಾಯಕರು ಇಂದು ವಿಚಲಿತರಾಗಿ ಹೇಳಿಕೆ ನೀಡುತ್ತಿರುವುದು ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...