Homeಮುಖಪುಟಎಎಪಿ ಕೌನ್ಸಿಲರ್ ರಾಮಚಂದ್ರ ಅವರನ್ನು ಬಿಜೆಪಿ ಅಪಹರಿಸಿದೆ: ಮನೀಶ್ ಸಿಸೋಡಿಯಾ

ಎಎಪಿ ಕೌನ್ಸಿಲರ್ ರಾಮಚಂದ್ರ ಅವರನ್ನು ಬಿಜೆಪಿ ಅಪಹರಿಸಿದೆ: ಮನೀಶ್ ಸಿಸೋಡಿಯಾ

- Advertisement -
- Advertisement -

“ನಾಗರಿಕ ಸಂಸ್ಥೆಯಲ್ಲಿ ಬವಾನಾದ ಶಹಾಬಾದ್ ಡೈರಿಯನ್ನು ಪ್ರತಿನಿಧಿಸುವ ಪಕ್ಷದ ಕೌನ್ಸಿಲರ್ ರಾಮಚಂದ್ರ ಅವರನ್ನು ಬಿಜೆಪಿ ಅಪಹರಿಸಿದೆ” ಎಂದು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ಗಂಭೀರ  ಆರೋಪ ಮಾಡಿದೆ.

ಈ ಬಗ್ಗೆ ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಎಎಪಿ ಹಿರಿಯ ನಾಯಕ ಮನೀಶ್ ಸಿಸೋಡಿಯಾ, “ಬಿಜೆಪಿ ಕೌನ್ಸಿಲರ್ ರಾಮಚಂದ್ರ ಅವರಿಗೆ ಇಡಿ-ಸಿಬಿಐನಿಂದ ಬೆದರಿಕೆ ಹಾಕಲಾಯಿತು. ಅವರು ಹೆದರುವುದಿಲ್ಲ, ಬಿಜೆಪಿ ಗೂಂಡಾಗಳು ಅವರನ್ನು ಕಾರಿನಲ್ಲಿ ಕರೆದೊಯ್ದರು” ಎಂದು ಆರೋಪಿಸಿದ್ದಾರೆ.

ದೆಹಲಿ ಬಿಜೆಪಿಯ ಮಾಧ್ಯಮ ಉಸ್ತುವಾರಿ ಪ್ರವೀಣ್ ಶಂಕರ್ ಕಪೂರ್ ಅವರು ತಮ್ಮ ಪಕ್ಷಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ನಿರಾಕರಿಸಿದರು. “ನೀವು ನಕಲಿ ಸಂಚಲನದ ರಾಜರು, ಕೌನ್ಸಿಲರ್ ರಾಮಚಂದ್ರ ಅವರು ನಿಮ್ಮ ಪಕ್ಷದಲ್ಲಿಲ್ಲ, ಅದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಆದರೆ, ಅವರು ತಮ್ಮ ಮನೆಯಲ್ಲಿ ಕುಳಿತು ವದಂತಿಗಳನ್ನು ಹಬ್ಬಿಸುತ್ತಿದ್ದೀರಿ ಎಂಬುದು ಖಚಿತ” ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ವಾರ್ಡ್ ನಂ 28 ರಿಂದ ಕೌನ್ಸಿಲರ್ ಆಗಿರುವ ರಾಮ್ ಚಂದರ್ ಕಳೆದ ಭಾನುವಾರ ಬಿಜೆಪಿ ಸೇರಿದ ಐವರು ಸದಸ್ಯರಲ್ಲಿ ಒಬ್ಬರು. ಆದರೆ, ಕೆಲವು ದಿನಗಳ ನಂತರ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕನಸಿನಲ್ಲಿ ನೋಡಿದ ನಂತರ ತಮ್ಮ ನಿರ್ಧಾರ ಬದಲಾಯಿಸಿ ಎಎಪಿಗೆ ಮರಳಿದ್ದಾಗಿ ಹೇಳಿದ್ದರು.

ಬಳಿಕ ವಿಡಿಯೋ ಸಂದೇಶದಲ್ಲಿ ತನ್ನನ್ನು ಕೆಲವರು ಬಿಜೆಪಿ ಕೇಂದ್ರ ಕಚೇರಿಗೆ ಕರೆದೊಯ್ದಿದ್ದಾರೆ ಎಂದು ಹೇಳಿದ್ದಾರೆ.

“ನನ್ನನ್ನು ಇಡಿ ಮತ್ತು ಸಿಬಿಐನಿಂದ ಬಂಧಿಸಲಾಗುವುದು ಎಂದು ಅವರು ನನಗೆ ಬೆದರಿಕೆ ಹಾಕಿದರು. ನಮ್ಮ ಪಕ್ಷದ ಹಿರಿಯ ನಾಯಕರು ಪೊಲೀಸ್ ಕಮಿಷನರ್‌ಗೆ ಕರೆ ಮಾಡಿದಾಗ ನನ್ನ ಮಗ ಆಕಾಶ್ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದನು. ಅವರಿಗೆ (ಬಿಜೆಪಿ) ವಿಷಯ ತಿಳಿದಾಗ ಅವರು ನನ್ನನ್ನು ಮನೆಗೆ ಕಳುಹಿಸಿದ್ದಾರೆ” ಎಂದು ಚಂದರ್ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

“ನಾನು ಬಿಜೆಪಿಗೆ ಹೇಳಲು ಬಯಸುತ್ತೇನೆ, ನಾನು ಇಡಿ ಮತ್ತು ಸಿಬಿಐಗೆ ಹೆದರುವುದಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ನಾನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸೈನಿಕ” ಎಂದು ಅವರು ಪಕ್ಷ ಹಂಚಿಕೊಂಡ ವೀಡಿಯೊದಲ್ಲಿ ಹೇಳಿದ್ದಾರೆ.

ಭಾನುವಾರ, ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರು ರಾಮ್ ಚಂದರ್ ಅವರ ಮಗ ಆಕಾಶ್ ಅವರ ತಂದೆಯನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿ ಎಕ್ಸ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ವೀಡಿಯೋದಲ್ಲಿ ಮಾತನಾಡಿರುವ ಆಕಾಶ್, “ನನ್ನ ತಂದೆಗೆ ಬಿಜೆಪಿಯ ಮಾಜಿ ಕೌನ್ಸಿಲರ್‌ನಿಂದ ಕರೆ ಬಂದಿದೆ, ‘ನಿಮ್ಮನ್ನು ಭೇಟಿಯಾಗಲು ನಾವು ನಿಮ್ಮ ಮನೆಯ ಬಳಿ ಕೆಳಗೆ ನಿಂತಿದ್ದೇವೆ’ ಎಂದು ಹೇಳಿದರು. ನನ್ನ ತಂದೆ ಅವರ ಕಚೇರಿಗೆ ಕೆಳಗಿಳಿದರು. ನಾಲ್ಕೈದು ಜನರು ನನ್ನ ತಂದೆಯನ್ನು ಇಡಿ-ಸಿಬಿಐಗೆ ಸಿಲುಕಿಸುವುದಾಗಿ ಬೆದರಿಕೆ ಹಾಕಿದರು ಮತ್ತು ನಾವು ಅವರನ್ನು ಹುಡುಕುತ್ತಿದ್ದೇವೆ” ಎಂದರು.

ಸಿಂಗ್ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ, ಆಕಾಶ್ ಹೊರಿಸಿದ ಆರೋಪಗಳನ್ನು ಪುನರುಚ್ಚರಿಸಿದ್ದಾರೆ.

ಎಎಪಿ ಶಾಸಕ ಮತ್ತು ಎಂಸಿಡಿ ಉಸ್ತುವಾರಿ ದುರ್ಗೇಶ್ ಪಾಠಕ್ ಅವರು ದೆಹಲಿಯಲ್ಲಿ ಬಿಜೆಪಿ “ಕಾನೂನು ಮತ್ತು ಸುವ್ಯವಸ್ಥೆಯನ್ನು ಅಪಹಾಸ್ಯ ಮಾಡುತ್ತಿದೆ” ಎಂದು ಆರೋಪಿಸಿದರು.

ಇದನ್ನೂ ಓದಿ; ಮಹಾರಾಷ್ಟ್ರ: ಶಿವಾಜಿ ಪ್ರತಿಮೆ ಕುಸಿತ ವಿರೋಧಿಸಿ ಮಹಾ ವಿಕಾಸ್ ಅಘಾಡಿಯಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...