Homeಮುಖಪುಟಪಂಜಾಬ್‌: ರಾಜ್ಯಸಭೆ ಅಭ್ಯರ್ಥಿಯಾಗಿ ಕ್ರಿಕೆಟಿಗ ಹರ್ಭಜನ್ ಸಿಂಗ್‌ರನ್ನು ಆಯ್ಕೆ ಮಾಡಿದ ಎಎಪಿ

ಪಂಜಾಬ್‌: ರಾಜ್ಯಸಭೆ ಅಭ್ಯರ್ಥಿಯಾಗಿ ಕ್ರಿಕೆಟಿಗ ಹರ್ಭಜನ್ ಸಿಂಗ್‌ರನ್ನು ಆಯ್ಕೆ ಮಾಡಿದ ಎಎಪಿ

- Advertisement -
- Advertisement -

ಕ್ರಿಕೆಟಿಗ ಹರ್ಭಜನ್ ಸಿಂಗ್, ದೆಹಲಿ ಶಾಸಕ ರಾಘವ್ ಚಡ್ಡಾ ಮತ್ತು ಐಐಟಿ ದೆಹಲಿಯ ಪ್ರೊಫೆಸರ್ ಡಾ. ಸಂದೀಪ್ ಪಾಠಕ್ ಅವರು ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಮಾರ್ಚ್ 31 ರಂದು ರಾಜ್ಯಸಭೆಗೆ ಚುನಾವಣೆ ನಡೆಯಲಿದೆ. ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ ಕುಲಪತಿ ಅಶೋಕ್ ಮಿತ್ತಲ್ ಅವರನ್ನೂ ಎಎಪಿ ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಿದೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

117 ವಿಧಾನಸಭಾ ಸ್ಥಾನಗಳ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎಎಪಿ 92 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿತ್ತು. ಇದರ ನಂತರ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರು ಭಗವಂತ್ ಮಾನ್ ಅವರಿಗೆ ಅಭಿನಂದನಾ ಸಂದೇಶವನ್ನು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ವೈಫಲ್ಯಗಳ ಮೇಲಿನ ಕೋಪ; ಪಂಜಾಬ್‌ಅನ್ನು ಸುಲಭವಾಗಿ ಒಲಿಸಿಕೊಂಡ ಆಪ್

“ಆಮ್‌ ಆದ್ಮಿ ಪಕ್ಷಕ್ಕೆ ಶುಭಾಶಯಗಳು ಮತ್ತು ನಮ್ಮ ಹೊಸ ಮುಖ್ಯಮಂತ್ರಿಯಾಗುತ್ತಿರುವ ನನ್ನ ಸ್ನೇಹಿತ ಭಗವಂತ ಮಾನ್ ಅವರಿಗೆ ಅಭಿನಂದನೆಗಳು. ಭಗತ್ ಸಿಂಗ್ ಅವರ ಗ್ರಾಮ ಖಟ್ಕರಕಲನ್‌ನಲ್ಲಿ ಅವರು ಹೊಸ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದು ಕೇಳಿ ತುಂಬಾ ಸಂತೋಷವಾಗಿದೆ. ಎಂತಹ ಚಿತ್ರಣ, ಇದು ಮಾತಾ ಜಿಗೆ ಹೆಮ್ಮೆಯ ಕ್ಷಣ” ಎಂದು ಹರ್ಭಜನ್‌ ಸಿಂಗ್‌ ಬರೆದಿದ್ದರು.

13 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್ 31 ರಂದು ಚುನಾವಣೆ ನಡೆಯಲಿದೆ. 13 ಸ್ಥಾನಗಳಲ್ಲಿ, ಪಂಜಾಬ್ ಶಾಸಕರು ಐದು ಸಂಸದರಿಗೆ ಮತ ಹಾಕಲಿದ್ದಾರೆ. ಮೂವರು ಕೇರಳದಿಂದ ಆಯ್ಕೆಯಾಗಲಿದ್ದು, ಇಬ್ಬರು ಅಸ್ಸಾಂನಿಂದ ಮತ್ತು ತಲಾ ಒಬ್ಬೊಬ್ಬರು ಹಿಮಾಚಲ ಪ್ರದೇಶ, ನಾಗಾಲ್ಯಾಂಡ್ ಮತ್ತು ತ್ರಿಪುರಾದಿಂದ ಆಯ್ಕೆಯಾಗಲಿದ್ದಾರೆ.

ಪಂಜಾಬ್‌ನ ಗೆಲುವು ರಾಜ್ಯಸಭೆಯಲ್ಲಿ ಆಪ್‌ಗೆ ಹೆಚ್ಚಿನ ಬಲ ತುಂಬಲಿದೆ. ಪಕ್ಷವು ಪ್ರಸ್ತುತ ಮೇಲ್ಮನೆಯಲ್ಲಿ ಮೂವರು ಸಂಸದರನ್ನು ಹೊಂದಿದ್ದು, ಅವರೆಲ್ಲರೂ ದೆಹಲಿಯವರಾಗಿದ್ದಾರೆ.

ಇದನ್ನೂ ಓದಿ: ಭ್ರಷ್ಟಾಚಾರ ವಿರೋಧಿ ಸಹಾಯವಾಣಿ ನನ್ನ ವೈಯಕ್ತಿಕ ನಂಬರ್‌ ಆಗಿರಲಿದೆ: ಪಂಜಾಬ್ ಸಿಎಂ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...