Homeಮುಖಪುಟದೆಹಲಿ ಗಲಭೆ ಪ್ರಕರಣ: ಪಬ್ಲಿಕ್ ಪ್ರಾಸಿಕ್ಯೂಟರ್‌ಗಳ ಆಯ್ಕೆ ಮಾಡಲಿರುವ ಪೊಲೀಸರು, ಪ್ರಶ್ನಿಸಿದ ಆಪ್ ಸರ್ಕಾರ

ದೆಹಲಿ ಗಲಭೆ ಪ್ರಕರಣ: ಪಬ್ಲಿಕ್ ಪ್ರಾಸಿಕ್ಯೂಟರ್‌ಗಳ ಆಯ್ಕೆ ಮಾಡಲಿರುವ ಪೊಲೀಸರು, ಪ್ರಶ್ನಿಸಿದ ಆಪ್ ಸರ್ಕಾರ

- Advertisement -
- Advertisement -

ಈ ವರ್ಷದ ಗಣರಾಜ್ಯೋತ್ಸವದ ಸಮಯದಲ್ಲಿ ದೆಹಲಿಯ ಕೆಂಪುಕೋಟೆಯ ಬಳಿ ನಡೆದ ಗದ್ದಲಗಳು ಮತ್ತು ಮತ್ತು ಕಳೆದ ವರ್ಷದ ಈಶಾನ್ಯ ದೆಹಲಿಯಲ್ಲಿ ನಡೆದ ಕೋಮುಗಲಭೆಗಳಿಗೆ ಸಂಬಂಧಿಸಿದ ಪ್ರಕರಣಗಳಿಗೆ, ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳಾಗಿ (ಎಸ್‌ಪಿಪಿ) ಪೊಲೀಸರು ಆಯ್ಕೆ ಮಾಡುವ ವಕೀಲರನ್ನು ನೇಮಿಸಲು ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ನಿರ್ಧರಿಸಿದ್ದಾರೆ.

ಈ ನಿರ್ಧಾರವನ್ನು ಪ್ರಶ್ನಿಸಿ ಕೇಜ್ರಿವಾಲ್‌‌ ನೇತೃತ್ವದ ಎಎಪಿ ಸರ್ಕಾರವು ದೆಹಲಿ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಿದೆ. ಅರ್ಜಿಯನ್ನು ಪರಿಗಣಿಸಿರುವ ಹೈಕೋರ್ಟ್‌ ಶುಕ್ರವಾರ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರ ಉತ್ತರವನ್ನು ಕೋರಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರಿದ್ದ ನ್ಯಾಯಪೀಠವು ದೆಹಲಿ ಲೆಫ್ಟಿನೆಂಟ್‌ ಅವರಿಗೆ ನೋಟಿಸ್ ನೀಡಿದೆ. ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಲು ಹಾಗೂ ನಿರ್ಧಾರವನ್ನು ತಡೆಹಿಡಿಯಲು ಅರ್ಜಿಯನ್ನು ಸಲ್ಲಿಸುವಂತೆ ಎಲ್‌ಜಿಯನ್ನು ಕೇಳಿದೆ.

ಇದನ್ನೂ ಓದಿ: ದೆಹಲಿ ಗಲಭೆ: ಪೊಲೀಸರು ಅಮಾಯಕರಿಗೆ ಅಪರಾಧಿ ಪಟ್ಟ ಕಟ್ಟುತ್ತಿದ್ದಾರೆ- ಪ್ರಶಾಂತ್‌ ಭೂಷಣ್

ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 21 ರಂದು ಮುಂದಿನ ನಡೆಸುವುದಾಗಿ ನ್ಯಾಯಾಲಯವು ಪಟ್ಟಿ ಮಾಡಿದೆ.

ಹೈಕೋರ್ಟ್‌ನಲ್ಲಿ ದೆಹಲಿ ಸರ್ಕಾರವನ್ನು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮತ್ತು ರಾಹುಲ್ ಮೆಹ್ರಾ ಪ್ರತಿನಿಧಿಸಿದ್ದಾರೆ. ಅವರು ವಕೀಲರನ್ನು ಎಸ್‌ಪಿಪಿಗಳಾಗಿ ಆಯ್ಕೆ ಮಾಡಲು ದೆಹಲಿ ಪೊಲೀಸರಿಗೆ ಅವಕಾಶ ನೀಡುವ ಲೆಫ್ಟಿನೆಂಟ್‌ಗಳ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ಇದರ ಜೊತೆಗೆ ರೈತರ ಆಂದೋಲನ ಮತ್ತು ಜನವರಿ 26, 2021 ರ ಗದ್ದಲಕ್ಕೆ ಸಂಬಂಧಿಸಿದ ಪ್ರಕರಣಗಳು ಹಾಗೂ 2020 ರ ಫೆಬ್ರವರಿಯಲ್ಲಿ ನಡೆದ ದೆಹಲಿ ಗಲಭೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಾನೂನು ಕ್ರಮಕ್ಕಾಗಿ ನ್ಯಾಯಾಲಯದಲ್ಲಿ ಹಾಜರಾಗಲಿದ್ದಾರೆ.

ಈ ಪ್ರಕರಣಗಳಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್‌(ಎಸ್‌ಪಿಪಿ)ಗಳನ್ನು ದೆಹಲಿ ಪೊಲೀಸರು ಆಯ್ಕೆ ಮಾಡಿದ್ದಾರೆ. ಆದ್ದರಿಂದ ಇದರಲ್ಲಿ ಅವರ ಹಿತಾಸಕ್ತಿ ಕಾಯುವ ಗಂಭೀರ ಸಂಶಯವಿದೆ ಎಂದು ಅವರು ಹೇಳಿದ್ದಾರೆ.

“ನಾವು ನೇಮಿಸಿದ ಎಸ್‌ಪಿಪಿಗಳು ಸ್ವತಂತ್ರ ವ್ಯಕ್ತಿಗಳು. ನೀವು ಎಸ್‌ಪಿಪಿಗಳನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ. ದೆಹಲಿ ಪೊಲೀಸರೇ ತನಿಖೆಯ ಭಾಗವಾಗಿದ್ದಾರೆ” ಎಂದು ಸಿಂಘ್ವಿ ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

ಇದನ್ನೂ ಓದಿ: ತಿಲಕ್‌ ಮತ್ತು ಗಾಂಧಿ ಮೇಲೆ ದೇಶದ್ರೋಹದ ಪ್ರಕರಣಗಳು – ಮೃದುಲಾ ಮುಖರ್ಜಿ ಭಾಷಣ ಭಾಗ-2

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ಬಿತ್ತುವ, ವಿಭಜನೀಯ ಶಕ್ತಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು: ಅಡ್ಮಿರಲ್ ರಾಮದಾಸ್ ಅವರ ಕೊನೆಯ ಸಂದೇಶ...

0
ಲೋಕಸಭೆ ಚುನಾವಣೆ ಹೊಸ್ತಿಲ್ಲಲ್ಲಿ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ರಾಮ್‌ದಾಸ್ ಅವರ ಕೊನೆಯ ಕಾಲದ ಸಂದೇಶವನ್ನು ಅವರ ಪತ್ನಿ ಲಲಿತಾ ರಾಮದಾಸ್‌ ಸಾರ್ವಜನಿಕರ ಮುಂದಿಟ್ಟಿದ್ದು, ದ್ವೇಷಿಸುವ, ವಿಭಜನೀಯ, ಸರ್ವಾಧಿಕಾರಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು ಎಂದು...