Homeಮುಖಪುಟಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ ಸಮಜ್ ಲೀಜಿಯೇ....!!

ಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ ಸಮಜ್ ಲೀಜಿಯೇ….!!

- Advertisement -
- Advertisement -

ಇಂದು ಇಡೀ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಅತಿ ಹೆಚ್ಚು ದಾಖಲಾಗುತ್ತಿರುವುದು ಮಹಾರಾಷ್ಯ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ, ಆದರೆ ಗುಜರಾತಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಮಹಾರಾಷ್ಟ್ರಕ್ಕಿಂತ ಕಡಿಮೆ ಇರಲು ಕಾರಣ ಅಲ್ಲಿ ಸೋಂಕಿತರು ಕಡಿಮೆ ಇರುವುದಲ್ಲ. ಬದಲಿಗೆ ಟೆಸ್ಟ್ ಗಳನ್ನೇ ಕಡಿಮೆ ಮಾಡುತ್ತಿರುವುದು!

ವಾಸ್ತವದಲ್ಲಿ ಮಹಾರಾಷ್ಟ್ರದಲ್ಲಿ ಮಾಡುತ್ತಿರುವ ಟೆಸ್ಟ್ ಗಳ ಅರ್ಧದಷ್ಟು ಟೆಸ್ಟ್ ಗಳನ್ನೂ ಸಹ ಗುಜರಾತ್ ಸರ್ಕಾರ ಮಾಡುತ್ತಿಲ್ಲ. ಸೋಂಕಿತರನ್ನು ಆಸ್ಪತ್ರೆಯಲ್ಲಿ ನೋಂದಾಯಿಸಿಕೊಳ್ಳುತ್ತಿಲ್ಲ. ಸತ್ತವರ ಸರಿಯಾದ ದಾಖಲೆಗಳನ್ನು ಇಟ್ಟುಕೊಳ್ಳುತ್ತಿಲ್ಲ ಹಾಗು ಸಂಬಂಧಿಕರಿಗೂ ತಿಳಿಸುತ್ತಿಲ್ಲ.

ಅದರಲ್ಲೂ ವಿಶೇಷವಾಗಿ ಗುಜರಾತ್ ನ ರಾಜಧಾನಿ ಅಹಮದಾಬಾದಿನ ಸರ್ಕಾರಿ ಆಸ್ಪತ್ರೆ ಸಾವಿನ ಕೂಪವಾಗಿ ಬಿಟ್ಟಿದೆ. ಈವರೆಗೆ ಗುಜರಾತಿನಲ್ಲಿ ಕೋವಿಡ್ ನಿಂದ ಸತ್ತವರಲ್ಲಿ ಅರ್ಧದಷ್ಟು ಭಾಗ ಸತ್ತಿರುವುದು ಅಹಮದಾಬಾದಿನ ಈ ಆಸ್ಪತ್ರೆಯಲ್ಲೇ.. ಕಾರಣ ನಿರ್ಲಕ್ಷ್ಯ, ಸಿಬ್ಬಂದಿ ಹಾಗು ಪರಿಕರಗಳ ಕೊರತೆ, ಸರ್ಕಾರದ ಬೇಜವಾಬ್ದಾರಿ ಇತ್ಯಾದಿ…

ಹೀಗೆ ಕೋವಿಡ್ ನಿರ್ವಹಣೆಯಲ್ಲಿ ಗುಜರಾತ್ ಮಾಡೆಲ್ ಎಂದರೆ ಸುಳ್ಳುಗಳನ್ನು ಹೇಳುತ್ತಾ ಸತ್ಯವನ್ನು ಮರೆಮಾಚುತ್ತಾ ನಡೆಸುತ್ತಿರುವ ಕಪಟವಾಗಿದೆ.

ಇತ್ತೀಚೆಗೆ, ಇವೆಲ್ಲವನ್ನೂ ಕಂಡು ಬೇಸತ್ತ ಅಹಮದಾಬಾದಿನ ಸರ್ಕಾರಿ ಆಸ್ಪತ್ರೆಯ ಅನಾಮಧೇಯ ವೈದ್ಯರೊಬ್ಬರು ಗುಜರಾತಿನ ಹೈಕೋರ್ಟಿಗೆ ಪತ್ರವೊಂದನ್ನು ಬರೆದಿದ್ದರು. ಅದನ್ನು ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯೊಂದನ್ನು ಗುಜರಾತಿನ ಹೈಕೋರ್ಟು ದಾಖಲಿಸಿಕೊಂಡಿತು ಪ್ರಾರಂಭಿಕ ವಿಚಾರಣೆಯಲ್ಲಿ ಸರ್ಕಾರ ವು ಸತ್ಯಗಳನ್ನು ಮರೆಮಾಚುತ್ತಿರುವುದನ್ನು ಕಂಡುಕೊಂಡಿದ್ದ ಹೈಕೋರ್ಟಿನ ದ್ವಿಸದಸ್ಯ ಪೀಠ ಕೂಡಲೇ ಸರಿಯಾದ ಕ್ರಮಗಳನ್ನು ಜಾರಿಗೊಳಿಸಲು ಆದೇಶಿಸಿತ್ತು.

ಆದರೆ ತನ್ನ ನಿರ್ಲಕ್ಷ್ಯ ಹಾಗು ದುಷ್ಟತನವನ್ನು ಮರೆಮಾಚಲು ಗುಜರಾತ್ ಹಾಗು ಕೇಂದ್ರದ ಬಿಜೆಪಿ ಸರ್ಕಾರ ಹೈ ಕೋರ್ಟನ್ನು ಕೂಡಾ ಬ್ಲಾಕ್ ಮೇಲ್ ಮಾಡುತ್ತಿದೆ.

ಮೋದಿ ಮತ್ತು ಶಾ ಕ್ರೊನಾಲಜಿ

ಅದು ಹೇಗೆಂದು ಅರ್ಥವಾಗಬೇಕೆಂದರೆ ಕೆಳಗಿನ ಕ್ರೋನಾಲಜಿಯನ್ನು ಗಮನಿಸಬೇಕು..

ಮೇ 22-

ಅಹಮದಾಬಾದಿನ ಹೈಕೋರ್ಟಿನ ಜಸ್ಟಿಸ್ ಪಾರ್ದಿವಾಲ ಮತ್ತು ಜಸ್ಟಿಸ್ ವೋರಾ ಪೀಠ:

“ಕೋವಿಡ್ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಗುಜರಾತ್ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಅದರಲ್ಲೂ ಅಹಮದಾಬಾದಿನ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಯ ಆಗರವಾಗಿದೆ. ಸಾವಿನ ಸೆರೆಮನೆಯಾಗಿದೆ. ಗುಜರಾತ್ ಸರ್ಕಾರ ಮೇ 29ರ ಒಳಗೆ ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಂಡು ವರದಿಯನ್ನು ನೀಡದಿದ್ದರೆ ಕೋರ್ಟು ಕಠಿಣವಾದ ಆದೇಶಗಳನ್ನು ನೀಡಬೇಕಾಗುತ್ತದೆ”

ಮೇ 25-

ಹೈಕೋರ್ಟು ಈ ಕ್ರಮಗಳಿಗೆ ಮುಂದಾಗಬಾರದೆಂದು ಸರ್ಕಾರಿ ವಕೀಲರ ಮನವಿ. ಈ ಮನವಿಯಿಂದ ಕೆಂಡಾಮಂಡಲವಾಗುವ ಕೋರ್ಟು ಮೇ 29 ರೊಳಗೆ ಸರಿಯಾದ ತಿದ್ದುಪಡಿ ಕ್ರಮಗಳನ್ನು ತೆಗೆದುಕೊಂಡು ವರದಿ ಮಾಡಲು ಸೂಚನೆ ಹಾಗು ಆಸ್ಪತೆಯ ಖುದ್ದು ಭೇಟಿ ಕಾರ್ಯಕ್ರಮದ ಘೋಷಣೆ.

ಮೇ 29-

ಅಹಮದಾಬಾದಿನ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾದ ಜಸ್ಟಿಸ್ ವಿಕ್ರಂ ನಾಥರಿಂದ ಈ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವಿಚಾರಣೆ ನಡೆಸುತ್ತಿದ್ದ ಪಾರ್ದಿವಾಲ್ -ವೋರಾ ಪೀಠದ ಪುನರ್ರಚನೆ.

ಈ ಹಿಂದಿನ ಜಸ್ಟಿಸ್ ಪಾರ್ದಿವಾಲ ಮತ್ತು ಜಸ್ಟಿಸ್ ವೋರಾ ಪೀಠದಲ್ಲಿ ಆದೇಶಗಳನ್ನು ಬರೆದ ಜಸ್ಟಿಸ್ ಪಾರ್ದಿವಾಲ ಆ ಪೀಠದ ಹಿರಿಯ ನ್ಯಾಯಾಧೀಶರಾಗಿದ್ದರು.

ಪುನರ್ರಚಿತವಾದ ಪೀಠದ ಜವಾಬ್ದಾರಿಯನ್ನು ಈಗ ಸಾಕ್ಷಾತ್ ಮುಖ್ಯ ನ್ಯಾಯಮೂರ್ತಿ ವಿಕ್ರಂ ನಾಥರೇ ವಹಿಸಿಕೊಂಡಿದ್ದರಿಂದ ಹಳೆಯ ಪೀಠದಲ್ಲಿ ಹಿರಿಯ ನ್ಯಾಯಾಧೀಶರಾಗಿದ್ದ ಪಾರ್ದಿವಾಲಾರವರು ಈ ಹೊಸ ದ್ವಿಸದಸ್ಯ ಪೀಠದಲ್ಲಿ ಕಿರಿಯ ಸಹಚರರಾದರು !

ಮೇ 31-

ಮುಖ್ಯ ನ್ಯಾಯಮೂರ್ತಿ ವಿಕ್ರಂ ನಾಥ ಹಾಗೂ ಜಸ್ಟಿಸ್ ಪಾರ್ದಿವಾಲರ ಪೀಠ :

“ಗುಜರಾತ್ ಸರ್ಕಾರವು ಕೋವಿಡ್ ನಿರ್ವಹಣೆಯಲ್ಲಿ ಅತ್ಯುತ್ತಮವಾದ ಕೆಲಸವನ್ನು ಮಾಡುತ್ತಿದೆ. ಸರ್ಕಾರವು ಈಗ ತೆಗೆದುಕೊಂಡಿರುವ ಕ್ರಮಗಳನ್ನು ತೆಗೆದುಕೊಳ್ಳದಿರುತ್ತಿದ್ದರೆ ನಾವೆಲ್ಲರೂ ಸತ್ತೇ ಹೋಗಿರುತ್ತಿದ್ದೆವು. ಅಹಮದಾಬಾದಿನ ಆಸ್ಪತ್ರೆಯೂ ಸಹ ಅತ್ಯುತ್ತಮವಾಗಿದೆ. ಈ ಸಾರ್ವಜನಿಕ ಮೊಕದ್ದಮೆಯನ್ನು ಕೋರ್ಟು ಅಲಹಾಬಾದ್ ಕೈಗೆತ್ತಿಕೊಂಡಿರುವುದು ಸರ್ಕಾರದ ಮೇಲೆ ಆಕ್ಷೇಪಣೆ ಮಾಡುವುದಕ್ಕಲ್ಲ. ವಿರೋಧ ಪಕ್ಷಗಳೂ ಸಹ ಇಂದಿನ ಸಂದರ್ಭದಲ್ಲಿ ಸರ್ಕಾರಕ್ಕೆ ರಚನಾತ್ಮಕ ಸಹಕಾರ ಕೊಡಬೇಕು”

ಅಡಿ ಟಿಪ್ಪಣಿ :

ಅಹಮದಾಬಾದಿನ ಹಾಲಿ ಮುಖ್ಯನ್ಯಾಯಮೂರ್ತಿ ವಿಕ್ರಂ ನಾಥರು 2014 ರಲ್ಲಿ ಉತ್ತರಪ್ರದೇಶದ ಅಲಹಾಬಾದಿನ ಹೈಕೋರ್ಟಿನ ನ್ಯಾಯಾಧೀಶರಾಗಿದ್ದಾಗ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ನರೇಂದ್ರ ಮೋದಿಯವರ ಗೆಲುವನ್ನು ಪ್ರಶ್ನಿಸಿದ್ದ ತಕರಾರು ಅರ್ಜಿಯನ್ನು ಹೆಚ್ಚಿನ ವಿಚಾರಣೆಯಿಲ್ಲದೆ ವಜಾ ಮಾಡಿದ್ದರು.

ಆದರೂ 2019 ರ ಏಪ್ರಿಲ್ ನಲ್ಲಿ ಸುಪ್ರೀಂ ಕೋರ್ಟಿನ ಕೊಲಿಜಿಯಂ ಆಗ ಅಲಹಾಬಾದ್ ಹೈಕೋರ್ಟಿನ ಹಿರಿಯ ನ್ಯಾಯಾಧೀಶರಾಗಿದ್ದ ವಿಕ್ರಂ ನಾಥರನ್ನು ಆಂಧ್ರಪ್ರದೇಶದ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರನ್ನಾಗಿಸಲು ಮಾಡಿದ್ದ ಶಿಪಾರಸ್ಸುಗಳನ್ನು ಮೋದಿ ಸರ್ಕಾರ ವಾಪಸ್ ಕಳಿಸಿತ್ತು .

ಆದರೆ 2019 ರ ಆಗಸ್ಟ್ ನಲ್ಲಿ ಮೋದಿ ಸರ್ಕಾರವೇ ಕೊಲಿಜಿಯಂ ಗೆ ವಿಶೇಷ ಮನವಿ ಮಾಡಿ ಜಸ್ಟಿಸ್ ವಿಕ್ರಂ ನಾಥರನ್ನು ಗುಜರಾತಿನ ಮುಖ್ಯ ನ್ಯಾಯಾಧೀಶರನ್ನಾಗಿಸಿಕೊಂಡಿತು…!!

ಒಂದು ಗಿಳಿಪಾಠ : ಭಾರತದ ನ್ಯಾಯಾಂಗವು ಒಂದು ಸ್ವತಂತ್ರ ಸಂಸ್ಥೆಯಾಗಿದೆ.


ಓದಿ: ರಸ್ತೆಯಲ್ಲಿ ಕೊರೊನಾ ಸೋಂಕಿತರ ಶವ; ಗುಜರಾತ್‌ ಮಾಡೆಲ್ ಧ್ವಂಸ ಮಾಡಿ: ಜಿಗ್ನೇಶ್‌ ಮೇವಾನಿ ಆಕ್ರೋಶ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...