Homeಮುಖಪುಟಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ ಸಮಜ್ ಲೀಜಿಯೇ....!!

ಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ ಸಮಜ್ ಲೀಜಿಯೇ….!!

- Advertisement -
- Advertisement -

ಇಂದು ಇಡೀ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಅತಿ ಹೆಚ್ಚು ದಾಖಲಾಗುತ್ತಿರುವುದು ಮಹಾರಾಷ್ಯ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ, ಆದರೆ ಗುಜರಾತಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಮಹಾರಾಷ್ಟ್ರಕ್ಕಿಂತ ಕಡಿಮೆ ಇರಲು ಕಾರಣ ಅಲ್ಲಿ ಸೋಂಕಿತರು ಕಡಿಮೆ ಇರುವುದಲ್ಲ. ಬದಲಿಗೆ ಟೆಸ್ಟ್ ಗಳನ್ನೇ ಕಡಿಮೆ ಮಾಡುತ್ತಿರುವುದು!

ವಾಸ್ತವದಲ್ಲಿ ಮಹಾರಾಷ್ಟ್ರದಲ್ಲಿ ಮಾಡುತ್ತಿರುವ ಟೆಸ್ಟ್ ಗಳ ಅರ್ಧದಷ್ಟು ಟೆಸ್ಟ್ ಗಳನ್ನೂ ಸಹ ಗುಜರಾತ್ ಸರ್ಕಾರ ಮಾಡುತ್ತಿಲ್ಲ. ಸೋಂಕಿತರನ್ನು ಆಸ್ಪತ್ರೆಯಲ್ಲಿ ನೋಂದಾಯಿಸಿಕೊಳ್ಳುತ್ತಿಲ್ಲ. ಸತ್ತವರ ಸರಿಯಾದ ದಾಖಲೆಗಳನ್ನು ಇಟ್ಟುಕೊಳ್ಳುತ್ತಿಲ್ಲ ಹಾಗು ಸಂಬಂಧಿಕರಿಗೂ ತಿಳಿಸುತ್ತಿಲ್ಲ.

ಅದರಲ್ಲೂ ವಿಶೇಷವಾಗಿ ಗುಜರಾತ್ ನ ರಾಜಧಾನಿ ಅಹಮದಾಬಾದಿನ ಸರ್ಕಾರಿ ಆಸ್ಪತ್ರೆ ಸಾವಿನ ಕೂಪವಾಗಿ ಬಿಟ್ಟಿದೆ. ಈವರೆಗೆ ಗುಜರಾತಿನಲ್ಲಿ ಕೋವಿಡ್ ನಿಂದ ಸತ್ತವರಲ್ಲಿ ಅರ್ಧದಷ್ಟು ಭಾಗ ಸತ್ತಿರುವುದು ಅಹಮದಾಬಾದಿನ ಈ ಆಸ್ಪತ್ರೆಯಲ್ಲೇ.. ಕಾರಣ ನಿರ್ಲಕ್ಷ್ಯ, ಸಿಬ್ಬಂದಿ ಹಾಗು ಪರಿಕರಗಳ ಕೊರತೆ, ಸರ್ಕಾರದ ಬೇಜವಾಬ್ದಾರಿ ಇತ್ಯಾದಿ…

ಹೀಗೆ ಕೋವಿಡ್ ನಿರ್ವಹಣೆಯಲ್ಲಿ ಗುಜರಾತ್ ಮಾಡೆಲ್ ಎಂದರೆ ಸುಳ್ಳುಗಳನ್ನು ಹೇಳುತ್ತಾ ಸತ್ಯವನ್ನು ಮರೆಮಾಚುತ್ತಾ ನಡೆಸುತ್ತಿರುವ ಕಪಟವಾಗಿದೆ.

ಇತ್ತೀಚೆಗೆ, ಇವೆಲ್ಲವನ್ನೂ ಕಂಡು ಬೇಸತ್ತ ಅಹಮದಾಬಾದಿನ ಸರ್ಕಾರಿ ಆಸ್ಪತ್ರೆಯ ಅನಾಮಧೇಯ ವೈದ್ಯರೊಬ್ಬರು ಗುಜರಾತಿನ ಹೈಕೋರ್ಟಿಗೆ ಪತ್ರವೊಂದನ್ನು ಬರೆದಿದ್ದರು. ಅದನ್ನು ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯೊಂದನ್ನು ಗುಜರಾತಿನ ಹೈಕೋರ್ಟು ದಾಖಲಿಸಿಕೊಂಡಿತು ಪ್ರಾರಂಭಿಕ ವಿಚಾರಣೆಯಲ್ಲಿ ಸರ್ಕಾರ ವು ಸತ್ಯಗಳನ್ನು ಮರೆಮಾಚುತ್ತಿರುವುದನ್ನು ಕಂಡುಕೊಂಡಿದ್ದ ಹೈಕೋರ್ಟಿನ ದ್ವಿಸದಸ್ಯ ಪೀಠ ಕೂಡಲೇ ಸರಿಯಾದ ಕ್ರಮಗಳನ್ನು ಜಾರಿಗೊಳಿಸಲು ಆದೇಶಿಸಿತ್ತು.

ಆದರೆ ತನ್ನ ನಿರ್ಲಕ್ಷ್ಯ ಹಾಗು ದುಷ್ಟತನವನ್ನು ಮರೆಮಾಚಲು ಗುಜರಾತ್ ಹಾಗು ಕೇಂದ್ರದ ಬಿಜೆಪಿ ಸರ್ಕಾರ ಹೈ ಕೋರ್ಟನ್ನು ಕೂಡಾ ಬ್ಲಾಕ್ ಮೇಲ್ ಮಾಡುತ್ತಿದೆ.

ಮೋದಿ ಮತ್ತು ಶಾ ಕ್ರೊನಾಲಜಿ

ಅದು ಹೇಗೆಂದು ಅರ್ಥವಾಗಬೇಕೆಂದರೆ ಕೆಳಗಿನ ಕ್ರೋನಾಲಜಿಯನ್ನು ಗಮನಿಸಬೇಕು..

ಮೇ 22-

ಅಹಮದಾಬಾದಿನ ಹೈಕೋರ್ಟಿನ ಜಸ್ಟಿಸ್ ಪಾರ್ದಿವಾಲ ಮತ್ತು ಜಸ್ಟಿಸ್ ವೋರಾ ಪೀಠ:

“ಕೋವಿಡ್ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಗುಜರಾತ್ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಅದರಲ್ಲೂ ಅಹಮದಾಬಾದಿನ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಯ ಆಗರವಾಗಿದೆ. ಸಾವಿನ ಸೆರೆಮನೆಯಾಗಿದೆ. ಗುಜರಾತ್ ಸರ್ಕಾರ ಮೇ 29ರ ಒಳಗೆ ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಂಡು ವರದಿಯನ್ನು ನೀಡದಿದ್ದರೆ ಕೋರ್ಟು ಕಠಿಣವಾದ ಆದೇಶಗಳನ್ನು ನೀಡಬೇಕಾಗುತ್ತದೆ”

ಮೇ 25-

ಹೈಕೋರ್ಟು ಈ ಕ್ರಮಗಳಿಗೆ ಮುಂದಾಗಬಾರದೆಂದು ಸರ್ಕಾರಿ ವಕೀಲರ ಮನವಿ. ಈ ಮನವಿಯಿಂದ ಕೆಂಡಾಮಂಡಲವಾಗುವ ಕೋರ್ಟು ಮೇ 29 ರೊಳಗೆ ಸರಿಯಾದ ತಿದ್ದುಪಡಿ ಕ್ರಮಗಳನ್ನು ತೆಗೆದುಕೊಂಡು ವರದಿ ಮಾಡಲು ಸೂಚನೆ ಹಾಗು ಆಸ್ಪತೆಯ ಖುದ್ದು ಭೇಟಿ ಕಾರ್ಯಕ್ರಮದ ಘೋಷಣೆ.

ಮೇ 29-

ಅಹಮದಾಬಾದಿನ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾದ ಜಸ್ಟಿಸ್ ವಿಕ್ರಂ ನಾಥರಿಂದ ಈ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವಿಚಾರಣೆ ನಡೆಸುತ್ತಿದ್ದ ಪಾರ್ದಿವಾಲ್ -ವೋರಾ ಪೀಠದ ಪುನರ್ರಚನೆ.

ಈ ಹಿಂದಿನ ಜಸ್ಟಿಸ್ ಪಾರ್ದಿವಾಲ ಮತ್ತು ಜಸ್ಟಿಸ್ ವೋರಾ ಪೀಠದಲ್ಲಿ ಆದೇಶಗಳನ್ನು ಬರೆದ ಜಸ್ಟಿಸ್ ಪಾರ್ದಿವಾಲ ಆ ಪೀಠದ ಹಿರಿಯ ನ್ಯಾಯಾಧೀಶರಾಗಿದ್ದರು.

ಪುನರ್ರಚಿತವಾದ ಪೀಠದ ಜವಾಬ್ದಾರಿಯನ್ನು ಈಗ ಸಾಕ್ಷಾತ್ ಮುಖ್ಯ ನ್ಯಾಯಮೂರ್ತಿ ವಿಕ್ರಂ ನಾಥರೇ ವಹಿಸಿಕೊಂಡಿದ್ದರಿಂದ ಹಳೆಯ ಪೀಠದಲ್ಲಿ ಹಿರಿಯ ನ್ಯಾಯಾಧೀಶರಾಗಿದ್ದ ಪಾರ್ದಿವಾಲಾರವರು ಈ ಹೊಸ ದ್ವಿಸದಸ್ಯ ಪೀಠದಲ್ಲಿ ಕಿರಿಯ ಸಹಚರರಾದರು !

ಮೇ 31-

ಮುಖ್ಯ ನ್ಯಾಯಮೂರ್ತಿ ವಿಕ್ರಂ ನಾಥ ಹಾಗೂ ಜಸ್ಟಿಸ್ ಪಾರ್ದಿವಾಲರ ಪೀಠ :

“ಗುಜರಾತ್ ಸರ್ಕಾರವು ಕೋವಿಡ್ ನಿರ್ವಹಣೆಯಲ್ಲಿ ಅತ್ಯುತ್ತಮವಾದ ಕೆಲಸವನ್ನು ಮಾಡುತ್ತಿದೆ. ಸರ್ಕಾರವು ಈಗ ತೆಗೆದುಕೊಂಡಿರುವ ಕ್ರಮಗಳನ್ನು ತೆಗೆದುಕೊಳ್ಳದಿರುತ್ತಿದ್ದರೆ ನಾವೆಲ್ಲರೂ ಸತ್ತೇ ಹೋಗಿರುತ್ತಿದ್ದೆವು. ಅಹಮದಾಬಾದಿನ ಆಸ್ಪತ್ರೆಯೂ ಸಹ ಅತ್ಯುತ್ತಮವಾಗಿದೆ. ಈ ಸಾರ್ವಜನಿಕ ಮೊಕದ್ದಮೆಯನ್ನು ಕೋರ್ಟು ಅಲಹಾಬಾದ್ ಕೈಗೆತ್ತಿಕೊಂಡಿರುವುದು ಸರ್ಕಾರದ ಮೇಲೆ ಆಕ್ಷೇಪಣೆ ಮಾಡುವುದಕ್ಕಲ್ಲ. ವಿರೋಧ ಪಕ್ಷಗಳೂ ಸಹ ಇಂದಿನ ಸಂದರ್ಭದಲ್ಲಿ ಸರ್ಕಾರಕ್ಕೆ ರಚನಾತ್ಮಕ ಸಹಕಾರ ಕೊಡಬೇಕು”

ಅಡಿ ಟಿಪ್ಪಣಿ :

ಅಹಮದಾಬಾದಿನ ಹಾಲಿ ಮುಖ್ಯನ್ಯಾಯಮೂರ್ತಿ ವಿಕ್ರಂ ನಾಥರು 2014 ರಲ್ಲಿ ಉತ್ತರಪ್ರದೇಶದ ಅಲಹಾಬಾದಿನ ಹೈಕೋರ್ಟಿನ ನ್ಯಾಯಾಧೀಶರಾಗಿದ್ದಾಗ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ನರೇಂದ್ರ ಮೋದಿಯವರ ಗೆಲುವನ್ನು ಪ್ರಶ್ನಿಸಿದ್ದ ತಕರಾರು ಅರ್ಜಿಯನ್ನು ಹೆಚ್ಚಿನ ವಿಚಾರಣೆಯಿಲ್ಲದೆ ವಜಾ ಮಾಡಿದ್ದರು.

ಆದರೂ 2019 ರ ಏಪ್ರಿಲ್ ನಲ್ಲಿ ಸುಪ್ರೀಂ ಕೋರ್ಟಿನ ಕೊಲಿಜಿಯಂ ಆಗ ಅಲಹಾಬಾದ್ ಹೈಕೋರ್ಟಿನ ಹಿರಿಯ ನ್ಯಾಯಾಧೀಶರಾಗಿದ್ದ ವಿಕ್ರಂ ನಾಥರನ್ನು ಆಂಧ್ರಪ್ರದೇಶದ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರನ್ನಾಗಿಸಲು ಮಾಡಿದ್ದ ಶಿಪಾರಸ್ಸುಗಳನ್ನು ಮೋದಿ ಸರ್ಕಾರ ವಾಪಸ್ ಕಳಿಸಿತ್ತು .

ಆದರೆ 2019 ರ ಆಗಸ್ಟ್ ನಲ್ಲಿ ಮೋದಿ ಸರ್ಕಾರವೇ ಕೊಲಿಜಿಯಂ ಗೆ ವಿಶೇಷ ಮನವಿ ಮಾಡಿ ಜಸ್ಟಿಸ್ ವಿಕ್ರಂ ನಾಥರನ್ನು ಗುಜರಾತಿನ ಮುಖ್ಯ ನ್ಯಾಯಾಧೀಶರನ್ನಾಗಿಸಿಕೊಂಡಿತು…!!

ಒಂದು ಗಿಳಿಪಾಠ : ಭಾರತದ ನ್ಯಾಯಾಂಗವು ಒಂದು ಸ್ವತಂತ್ರ ಸಂಸ್ಥೆಯಾಗಿದೆ.


ಓದಿ: ರಸ್ತೆಯಲ್ಲಿ ಕೊರೊನಾ ಸೋಂಕಿತರ ಶವ; ಗುಜರಾತ್‌ ಮಾಡೆಲ್ ಧ್ವಂಸ ಮಾಡಿ: ಜಿಗ್ನೇಶ್‌ ಮೇವಾನಿ ಆಕ್ರೋಶ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...