Homeಮುಖಪುಟಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ ಸಮಜ್ ಲೀಜಿಯೇ....!!

ಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ ಸಮಜ್ ಲೀಜಿಯೇ….!!

- Advertisement -
- Advertisement -

ಇಂದು ಇಡೀ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಅತಿ ಹೆಚ್ಚು ದಾಖಲಾಗುತ್ತಿರುವುದು ಮಹಾರಾಷ್ಯ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ, ಆದರೆ ಗುಜರಾತಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಮಹಾರಾಷ್ಟ್ರಕ್ಕಿಂತ ಕಡಿಮೆ ಇರಲು ಕಾರಣ ಅಲ್ಲಿ ಸೋಂಕಿತರು ಕಡಿಮೆ ಇರುವುದಲ್ಲ. ಬದಲಿಗೆ ಟೆಸ್ಟ್ ಗಳನ್ನೇ ಕಡಿಮೆ ಮಾಡುತ್ತಿರುವುದು!

ವಾಸ್ತವದಲ್ಲಿ ಮಹಾರಾಷ್ಟ್ರದಲ್ಲಿ ಮಾಡುತ್ತಿರುವ ಟೆಸ್ಟ್ ಗಳ ಅರ್ಧದಷ್ಟು ಟೆಸ್ಟ್ ಗಳನ್ನೂ ಸಹ ಗುಜರಾತ್ ಸರ್ಕಾರ ಮಾಡುತ್ತಿಲ್ಲ. ಸೋಂಕಿತರನ್ನು ಆಸ್ಪತ್ರೆಯಲ್ಲಿ ನೋಂದಾಯಿಸಿಕೊಳ್ಳುತ್ತಿಲ್ಲ. ಸತ್ತವರ ಸರಿಯಾದ ದಾಖಲೆಗಳನ್ನು ಇಟ್ಟುಕೊಳ್ಳುತ್ತಿಲ್ಲ ಹಾಗು ಸಂಬಂಧಿಕರಿಗೂ ತಿಳಿಸುತ್ತಿಲ್ಲ.

ಅದರಲ್ಲೂ ವಿಶೇಷವಾಗಿ ಗುಜರಾತ್ ನ ರಾಜಧಾನಿ ಅಹಮದಾಬಾದಿನ ಸರ್ಕಾರಿ ಆಸ್ಪತ್ರೆ ಸಾವಿನ ಕೂಪವಾಗಿ ಬಿಟ್ಟಿದೆ. ಈವರೆಗೆ ಗುಜರಾತಿನಲ್ಲಿ ಕೋವಿಡ್ ನಿಂದ ಸತ್ತವರಲ್ಲಿ ಅರ್ಧದಷ್ಟು ಭಾಗ ಸತ್ತಿರುವುದು ಅಹಮದಾಬಾದಿನ ಈ ಆಸ್ಪತ್ರೆಯಲ್ಲೇ.. ಕಾರಣ ನಿರ್ಲಕ್ಷ್ಯ, ಸಿಬ್ಬಂದಿ ಹಾಗು ಪರಿಕರಗಳ ಕೊರತೆ, ಸರ್ಕಾರದ ಬೇಜವಾಬ್ದಾರಿ ಇತ್ಯಾದಿ…

ಹೀಗೆ ಕೋವಿಡ್ ನಿರ್ವಹಣೆಯಲ್ಲಿ ಗುಜರಾತ್ ಮಾಡೆಲ್ ಎಂದರೆ ಸುಳ್ಳುಗಳನ್ನು ಹೇಳುತ್ತಾ ಸತ್ಯವನ್ನು ಮರೆಮಾಚುತ್ತಾ ನಡೆಸುತ್ತಿರುವ ಕಪಟವಾಗಿದೆ.

ಇತ್ತೀಚೆಗೆ, ಇವೆಲ್ಲವನ್ನೂ ಕಂಡು ಬೇಸತ್ತ ಅಹಮದಾಬಾದಿನ ಸರ್ಕಾರಿ ಆಸ್ಪತ್ರೆಯ ಅನಾಮಧೇಯ ವೈದ್ಯರೊಬ್ಬರು ಗುಜರಾತಿನ ಹೈಕೋರ್ಟಿಗೆ ಪತ್ರವೊಂದನ್ನು ಬರೆದಿದ್ದರು. ಅದನ್ನು ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯೊಂದನ್ನು ಗುಜರಾತಿನ ಹೈಕೋರ್ಟು ದಾಖಲಿಸಿಕೊಂಡಿತು ಪ್ರಾರಂಭಿಕ ವಿಚಾರಣೆಯಲ್ಲಿ ಸರ್ಕಾರ ವು ಸತ್ಯಗಳನ್ನು ಮರೆಮಾಚುತ್ತಿರುವುದನ್ನು ಕಂಡುಕೊಂಡಿದ್ದ ಹೈಕೋರ್ಟಿನ ದ್ವಿಸದಸ್ಯ ಪೀಠ ಕೂಡಲೇ ಸರಿಯಾದ ಕ್ರಮಗಳನ್ನು ಜಾರಿಗೊಳಿಸಲು ಆದೇಶಿಸಿತ್ತು.

ಆದರೆ ತನ್ನ ನಿರ್ಲಕ್ಷ್ಯ ಹಾಗು ದುಷ್ಟತನವನ್ನು ಮರೆಮಾಚಲು ಗುಜರಾತ್ ಹಾಗು ಕೇಂದ್ರದ ಬಿಜೆಪಿ ಸರ್ಕಾರ ಹೈ ಕೋರ್ಟನ್ನು ಕೂಡಾ ಬ್ಲಾಕ್ ಮೇಲ್ ಮಾಡುತ್ತಿದೆ.

ಮೋದಿ ಮತ್ತು ಶಾ ಕ್ರೊನಾಲಜಿ

ಅದು ಹೇಗೆಂದು ಅರ್ಥವಾಗಬೇಕೆಂದರೆ ಕೆಳಗಿನ ಕ್ರೋನಾಲಜಿಯನ್ನು ಗಮನಿಸಬೇಕು..

ಮೇ 22-

ಅಹಮದಾಬಾದಿನ ಹೈಕೋರ್ಟಿನ ಜಸ್ಟಿಸ್ ಪಾರ್ದಿವಾಲ ಮತ್ತು ಜಸ್ಟಿಸ್ ವೋರಾ ಪೀಠ:

“ಕೋವಿಡ್ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಗುಜರಾತ್ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಅದರಲ್ಲೂ ಅಹಮದಾಬಾದಿನ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಯ ಆಗರವಾಗಿದೆ. ಸಾವಿನ ಸೆರೆಮನೆಯಾಗಿದೆ. ಗುಜರಾತ್ ಸರ್ಕಾರ ಮೇ 29ರ ಒಳಗೆ ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಂಡು ವರದಿಯನ್ನು ನೀಡದಿದ್ದರೆ ಕೋರ್ಟು ಕಠಿಣವಾದ ಆದೇಶಗಳನ್ನು ನೀಡಬೇಕಾಗುತ್ತದೆ”

ಮೇ 25-

ಹೈಕೋರ್ಟು ಈ ಕ್ರಮಗಳಿಗೆ ಮುಂದಾಗಬಾರದೆಂದು ಸರ್ಕಾರಿ ವಕೀಲರ ಮನವಿ. ಈ ಮನವಿಯಿಂದ ಕೆಂಡಾಮಂಡಲವಾಗುವ ಕೋರ್ಟು ಮೇ 29 ರೊಳಗೆ ಸರಿಯಾದ ತಿದ್ದುಪಡಿ ಕ್ರಮಗಳನ್ನು ತೆಗೆದುಕೊಂಡು ವರದಿ ಮಾಡಲು ಸೂಚನೆ ಹಾಗು ಆಸ್ಪತೆಯ ಖುದ್ದು ಭೇಟಿ ಕಾರ್ಯಕ್ರಮದ ಘೋಷಣೆ.

ಮೇ 29-

ಅಹಮದಾಬಾದಿನ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾದ ಜಸ್ಟಿಸ್ ವಿಕ್ರಂ ನಾಥರಿಂದ ಈ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವಿಚಾರಣೆ ನಡೆಸುತ್ತಿದ್ದ ಪಾರ್ದಿವಾಲ್ -ವೋರಾ ಪೀಠದ ಪುನರ್ರಚನೆ.

ಈ ಹಿಂದಿನ ಜಸ್ಟಿಸ್ ಪಾರ್ದಿವಾಲ ಮತ್ತು ಜಸ್ಟಿಸ್ ವೋರಾ ಪೀಠದಲ್ಲಿ ಆದೇಶಗಳನ್ನು ಬರೆದ ಜಸ್ಟಿಸ್ ಪಾರ್ದಿವಾಲ ಆ ಪೀಠದ ಹಿರಿಯ ನ್ಯಾಯಾಧೀಶರಾಗಿದ್ದರು.

ಪುನರ್ರಚಿತವಾದ ಪೀಠದ ಜವಾಬ್ದಾರಿಯನ್ನು ಈಗ ಸಾಕ್ಷಾತ್ ಮುಖ್ಯ ನ್ಯಾಯಮೂರ್ತಿ ವಿಕ್ರಂ ನಾಥರೇ ವಹಿಸಿಕೊಂಡಿದ್ದರಿಂದ ಹಳೆಯ ಪೀಠದಲ್ಲಿ ಹಿರಿಯ ನ್ಯಾಯಾಧೀಶರಾಗಿದ್ದ ಪಾರ್ದಿವಾಲಾರವರು ಈ ಹೊಸ ದ್ವಿಸದಸ್ಯ ಪೀಠದಲ್ಲಿ ಕಿರಿಯ ಸಹಚರರಾದರು !

ಮೇ 31-

ಮುಖ್ಯ ನ್ಯಾಯಮೂರ್ತಿ ವಿಕ್ರಂ ನಾಥ ಹಾಗೂ ಜಸ್ಟಿಸ್ ಪಾರ್ದಿವಾಲರ ಪೀಠ :

“ಗುಜರಾತ್ ಸರ್ಕಾರವು ಕೋವಿಡ್ ನಿರ್ವಹಣೆಯಲ್ಲಿ ಅತ್ಯುತ್ತಮವಾದ ಕೆಲಸವನ್ನು ಮಾಡುತ್ತಿದೆ. ಸರ್ಕಾರವು ಈಗ ತೆಗೆದುಕೊಂಡಿರುವ ಕ್ರಮಗಳನ್ನು ತೆಗೆದುಕೊಳ್ಳದಿರುತ್ತಿದ್ದರೆ ನಾವೆಲ್ಲರೂ ಸತ್ತೇ ಹೋಗಿರುತ್ತಿದ್ದೆವು. ಅಹಮದಾಬಾದಿನ ಆಸ್ಪತ್ರೆಯೂ ಸಹ ಅತ್ಯುತ್ತಮವಾಗಿದೆ. ಈ ಸಾರ್ವಜನಿಕ ಮೊಕದ್ದಮೆಯನ್ನು ಕೋರ್ಟು ಅಲಹಾಬಾದ್ ಕೈಗೆತ್ತಿಕೊಂಡಿರುವುದು ಸರ್ಕಾರದ ಮೇಲೆ ಆಕ್ಷೇಪಣೆ ಮಾಡುವುದಕ್ಕಲ್ಲ. ವಿರೋಧ ಪಕ್ಷಗಳೂ ಸಹ ಇಂದಿನ ಸಂದರ್ಭದಲ್ಲಿ ಸರ್ಕಾರಕ್ಕೆ ರಚನಾತ್ಮಕ ಸಹಕಾರ ಕೊಡಬೇಕು”

ಅಡಿ ಟಿಪ್ಪಣಿ :

ಅಹಮದಾಬಾದಿನ ಹಾಲಿ ಮುಖ್ಯನ್ಯಾಯಮೂರ್ತಿ ವಿಕ್ರಂ ನಾಥರು 2014 ರಲ್ಲಿ ಉತ್ತರಪ್ರದೇಶದ ಅಲಹಾಬಾದಿನ ಹೈಕೋರ್ಟಿನ ನ್ಯಾಯಾಧೀಶರಾಗಿದ್ದಾಗ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ನರೇಂದ್ರ ಮೋದಿಯವರ ಗೆಲುವನ್ನು ಪ್ರಶ್ನಿಸಿದ್ದ ತಕರಾರು ಅರ್ಜಿಯನ್ನು ಹೆಚ್ಚಿನ ವಿಚಾರಣೆಯಿಲ್ಲದೆ ವಜಾ ಮಾಡಿದ್ದರು.

ಆದರೂ 2019 ರ ಏಪ್ರಿಲ್ ನಲ್ಲಿ ಸುಪ್ರೀಂ ಕೋರ್ಟಿನ ಕೊಲಿಜಿಯಂ ಆಗ ಅಲಹಾಬಾದ್ ಹೈಕೋರ್ಟಿನ ಹಿರಿಯ ನ್ಯಾಯಾಧೀಶರಾಗಿದ್ದ ವಿಕ್ರಂ ನಾಥರನ್ನು ಆಂಧ್ರಪ್ರದೇಶದ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರನ್ನಾಗಿಸಲು ಮಾಡಿದ್ದ ಶಿಪಾರಸ್ಸುಗಳನ್ನು ಮೋದಿ ಸರ್ಕಾರ ವಾಪಸ್ ಕಳಿಸಿತ್ತು .

ಆದರೆ 2019 ರ ಆಗಸ್ಟ್ ನಲ್ಲಿ ಮೋದಿ ಸರ್ಕಾರವೇ ಕೊಲಿಜಿಯಂ ಗೆ ವಿಶೇಷ ಮನವಿ ಮಾಡಿ ಜಸ್ಟಿಸ್ ವಿಕ್ರಂ ನಾಥರನ್ನು ಗುಜರಾತಿನ ಮುಖ್ಯ ನ್ಯಾಯಾಧೀಶರನ್ನಾಗಿಸಿಕೊಂಡಿತು…!!

ಒಂದು ಗಿಳಿಪಾಠ : ಭಾರತದ ನ್ಯಾಯಾಂಗವು ಒಂದು ಸ್ವತಂತ್ರ ಸಂಸ್ಥೆಯಾಗಿದೆ.


ಓದಿ: ರಸ್ತೆಯಲ್ಲಿ ಕೊರೊನಾ ಸೋಂಕಿತರ ಶವ; ಗುಜರಾತ್‌ ಮಾಡೆಲ್ ಧ್ವಂಸ ಮಾಡಿ: ಜಿಗ್ನೇಶ್‌ ಮೇವಾನಿ ಆಕ್ರೋಶ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...