Homeಮುಖಪುಟಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ ಸಮಜ್ ಲೀಜಿಯೇ....!!

ಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ ಸಮಜ್ ಲೀಜಿಯೇ….!!

- Advertisement -
- Advertisement -

ಇಂದು ಇಡೀ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಅತಿ ಹೆಚ್ಚು ದಾಖಲಾಗುತ್ತಿರುವುದು ಮಹಾರಾಷ್ಯ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ, ಆದರೆ ಗುಜರಾತಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಮಹಾರಾಷ್ಟ್ರಕ್ಕಿಂತ ಕಡಿಮೆ ಇರಲು ಕಾರಣ ಅಲ್ಲಿ ಸೋಂಕಿತರು ಕಡಿಮೆ ಇರುವುದಲ್ಲ. ಬದಲಿಗೆ ಟೆಸ್ಟ್ ಗಳನ್ನೇ ಕಡಿಮೆ ಮಾಡುತ್ತಿರುವುದು!

ವಾಸ್ತವದಲ್ಲಿ ಮಹಾರಾಷ್ಟ್ರದಲ್ಲಿ ಮಾಡುತ್ತಿರುವ ಟೆಸ್ಟ್ ಗಳ ಅರ್ಧದಷ್ಟು ಟೆಸ್ಟ್ ಗಳನ್ನೂ ಸಹ ಗುಜರಾತ್ ಸರ್ಕಾರ ಮಾಡುತ್ತಿಲ್ಲ. ಸೋಂಕಿತರನ್ನು ಆಸ್ಪತ್ರೆಯಲ್ಲಿ ನೋಂದಾಯಿಸಿಕೊಳ್ಳುತ್ತಿಲ್ಲ. ಸತ್ತವರ ಸರಿಯಾದ ದಾಖಲೆಗಳನ್ನು ಇಟ್ಟುಕೊಳ್ಳುತ್ತಿಲ್ಲ ಹಾಗು ಸಂಬಂಧಿಕರಿಗೂ ತಿಳಿಸುತ್ತಿಲ್ಲ.

ಅದರಲ್ಲೂ ವಿಶೇಷವಾಗಿ ಗುಜರಾತ್ ನ ರಾಜಧಾನಿ ಅಹಮದಾಬಾದಿನ ಸರ್ಕಾರಿ ಆಸ್ಪತ್ರೆ ಸಾವಿನ ಕೂಪವಾಗಿ ಬಿಟ್ಟಿದೆ. ಈವರೆಗೆ ಗುಜರಾತಿನಲ್ಲಿ ಕೋವಿಡ್ ನಿಂದ ಸತ್ತವರಲ್ಲಿ ಅರ್ಧದಷ್ಟು ಭಾಗ ಸತ್ತಿರುವುದು ಅಹಮದಾಬಾದಿನ ಈ ಆಸ್ಪತ್ರೆಯಲ್ಲೇ.. ಕಾರಣ ನಿರ್ಲಕ್ಷ್ಯ, ಸಿಬ್ಬಂದಿ ಹಾಗು ಪರಿಕರಗಳ ಕೊರತೆ, ಸರ್ಕಾರದ ಬೇಜವಾಬ್ದಾರಿ ಇತ್ಯಾದಿ…

ಹೀಗೆ ಕೋವಿಡ್ ನಿರ್ವಹಣೆಯಲ್ಲಿ ಗುಜರಾತ್ ಮಾಡೆಲ್ ಎಂದರೆ ಸುಳ್ಳುಗಳನ್ನು ಹೇಳುತ್ತಾ ಸತ್ಯವನ್ನು ಮರೆಮಾಚುತ್ತಾ ನಡೆಸುತ್ತಿರುವ ಕಪಟವಾಗಿದೆ.

ಇತ್ತೀಚೆಗೆ, ಇವೆಲ್ಲವನ್ನೂ ಕಂಡು ಬೇಸತ್ತ ಅಹಮದಾಬಾದಿನ ಸರ್ಕಾರಿ ಆಸ್ಪತ್ರೆಯ ಅನಾಮಧೇಯ ವೈದ್ಯರೊಬ್ಬರು ಗುಜರಾತಿನ ಹೈಕೋರ್ಟಿಗೆ ಪತ್ರವೊಂದನ್ನು ಬರೆದಿದ್ದರು. ಅದನ್ನು ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯೊಂದನ್ನು ಗುಜರಾತಿನ ಹೈಕೋರ್ಟು ದಾಖಲಿಸಿಕೊಂಡಿತು ಪ್ರಾರಂಭಿಕ ವಿಚಾರಣೆಯಲ್ಲಿ ಸರ್ಕಾರ ವು ಸತ್ಯಗಳನ್ನು ಮರೆಮಾಚುತ್ತಿರುವುದನ್ನು ಕಂಡುಕೊಂಡಿದ್ದ ಹೈಕೋರ್ಟಿನ ದ್ವಿಸದಸ್ಯ ಪೀಠ ಕೂಡಲೇ ಸರಿಯಾದ ಕ್ರಮಗಳನ್ನು ಜಾರಿಗೊಳಿಸಲು ಆದೇಶಿಸಿತ್ತು.

ಆದರೆ ತನ್ನ ನಿರ್ಲಕ್ಷ್ಯ ಹಾಗು ದುಷ್ಟತನವನ್ನು ಮರೆಮಾಚಲು ಗುಜರಾತ್ ಹಾಗು ಕೇಂದ್ರದ ಬಿಜೆಪಿ ಸರ್ಕಾರ ಹೈ ಕೋರ್ಟನ್ನು ಕೂಡಾ ಬ್ಲಾಕ್ ಮೇಲ್ ಮಾಡುತ್ತಿದೆ.

ಮೋದಿ ಮತ್ತು ಶಾ ಕ್ರೊನಾಲಜಿ

ಅದು ಹೇಗೆಂದು ಅರ್ಥವಾಗಬೇಕೆಂದರೆ ಕೆಳಗಿನ ಕ್ರೋನಾಲಜಿಯನ್ನು ಗಮನಿಸಬೇಕು..

ಮೇ 22-

ಅಹಮದಾಬಾದಿನ ಹೈಕೋರ್ಟಿನ ಜಸ್ಟಿಸ್ ಪಾರ್ದಿವಾಲ ಮತ್ತು ಜಸ್ಟಿಸ್ ವೋರಾ ಪೀಠ:

“ಕೋವಿಡ್ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಗುಜರಾತ್ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಅದರಲ್ಲೂ ಅಹಮದಾಬಾದಿನ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಯ ಆಗರವಾಗಿದೆ. ಸಾವಿನ ಸೆರೆಮನೆಯಾಗಿದೆ. ಗುಜರಾತ್ ಸರ್ಕಾರ ಮೇ 29ರ ಒಳಗೆ ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಂಡು ವರದಿಯನ್ನು ನೀಡದಿದ್ದರೆ ಕೋರ್ಟು ಕಠಿಣವಾದ ಆದೇಶಗಳನ್ನು ನೀಡಬೇಕಾಗುತ್ತದೆ”

ಮೇ 25-

ಹೈಕೋರ್ಟು ಈ ಕ್ರಮಗಳಿಗೆ ಮುಂದಾಗಬಾರದೆಂದು ಸರ್ಕಾರಿ ವಕೀಲರ ಮನವಿ. ಈ ಮನವಿಯಿಂದ ಕೆಂಡಾಮಂಡಲವಾಗುವ ಕೋರ್ಟು ಮೇ 29 ರೊಳಗೆ ಸರಿಯಾದ ತಿದ್ದುಪಡಿ ಕ್ರಮಗಳನ್ನು ತೆಗೆದುಕೊಂಡು ವರದಿ ಮಾಡಲು ಸೂಚನೆ ಹಾಗು ಆಸ್ಪತೆಯ ಖುದ್ದು ಭೇಟಿ ಕಾರ್ಯಕ್ರಮದ ಘೋಷಣೆ.

ಮೇ 29-

ಅಹಮದಾಬಾದಿನ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾದ ಜಸ್ಟಿಸ್ ವಿಕ್ರಂ ನಾಥರಿಂದ ಈ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವಿಚಾರಣೆ ನಡೆಸುತ್ತಿದ್ದ ಪಾರ್ದಿವಾಲ್ -ವೋರಾ ಪೀಠದ ಪುನರ್ರಚನೆ.

ಈ ಹಿಂದಿನ ಜಸ್ಟಿಸ್ ಪಾರ್ದಿವಾಲ ಮತ್ತು ಜಸ್ಟಿಸ್ ವೋರಾ ಪೀಠದಲ್ಲಿ ಆದೇಶಗಳನ್ನು ಬರೆದ ಜಸ್ಟಿಸ್ ಪಾರ್ದಿವಾಲ ಆ ಪೀಠದ ಹಿರಿಯ ನ್ಯಾಯಾಧೀಶರಾಗಿದ್ದರು.

ಪುನರ್ರಚಿತವಾದ ಪೀಠದ ಜವಾಬ್ದಾರಿಯನ್ನು ಈಗ ಸಾಕ್ಷಾತ್ ಮುಖ್ಯ ನ್ಯಾಯಮೂರ್ತಿ ವಿಕ್ರಂ ನಾಥರೇ ವಹಿಸಿಕೊಂಡಿದ್ದರಿಂದ ಹಳೆಯ ಪೀಠದಲ್ಲಿ ಹಿರಿಯ ನ್ಯಾಯಾಧೀಶರಾಗಿದ್ದ ಪಾರ್ದಿವಾಲಾರವರು ಈ ಹೊಸ ದ್ವಿಸದಸ್ಯ ಪೀಠದಲ್ಲಿ ಕಿರಿಯ ಸಹಚರರಾದರು !

ಮೇ 31-

ಮುಖ್ಯ ನ್ಯಾಯಮೂರ್ತಿ ವಿಕ್ರಂ ನಾಥ ಹಾಗೂ ಜಸ್ಟಿಸ್ ಪಾರ್ದಿವಾಲರ ಪೀಠ :

“ಗುಜರಾತ್ ಸರ್ಕಾರವು ಕೋವಿಡ್ ನಿರ್ವಹಣೆಯಲ್ಲಿ ಅತ್ಯುತ್ತಮವಾದ ಕೆಲಸವನ್ನು ಮಾಡುತ್ತಿದೆ. ಸರ್ಕಾರವು ಈಗ ತೆಗೆದುಕೊಂಡಿರುವ ಕ್ರಮಗಳನ್ನು ತೆಗೆದುಕೊಳ್ಳದಿರುತ್ತಿದ್ದರೆ ನಾವೆಲ್ಲರೂ ಸತ್ತೇ ಹೋಗಿರುತ್ತಿದ್ದೆವು. ಅಹಮದಾಬಾದಿನ ಆಸ್ಪತ್ರೆಯೂ ಸಹ ಅತ್ಯುತ್ತಮವಾಗಿದೆ. ಈ ಸಾರ್ವಜನಿಕ ಮೊಕದ್ದಮೆಯನ್ನು ಕೋರ್ಟು ಅಲಹಾಬಾದ್ ಕೈಗೆತ್ತಿಕೊಂಡಿರುವುದು ಸರ್ಕಾರದ ಮೇಲೆ ಆಕ್ಷೇಪಣೆ ಮಾಡುವುದಕ್ಕಲ್ಲ. ವಿರೋಧ ಪಕ್ಷಗಳೂ ಸಹ ಇಂದಿನ ಸಂದರ್ಭದಲ್ಲಿ ಸರ್ಕಾರಕ್ಕೆ ರಚನಾತ್ಮಕ ಸಹಕಾರ ಕೊಡಬೇಕು”

ಅಡಿ ಟಿಪ್ಪಣಿ :

ಅಹಮದಾಬಾದಿನ ಹಾಲಿ ಮುಖ್ಯನ್ಯಾಯಮೂರ್ತಿ ವಿಕ್ರಂ ನಾಥರು 2014 ರಲ್ಲಿ ಉತ್ತರಪ್ರದೇಶದ ಅಲಹಾಬಾದಿನ ಹೈಕೋರ್ಟಿನ ನ್ಯಾಯಾಧೀಶರಾಗಿದ್ದಾಗ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ನರೇಂದ್ರ ಮೋದಿಯವರ ಗೆಲುವನ್ನು ಪ್ರಶ್ನಿಸಿದ್ದ ತಕರಾರು ಅರ್ಜಿಯನ್ನು ಹೆಚ್ಚಿನ ವಿಚಾರಣೆಯಿಲ್ಲದೆ ವಜಾ ಮಾಡಿದ್ದರು.

ಆದರೂ 2019 ರ ಏಪ್ರಿಲ್ ನಲ್ಲಿ ಸುಪ್ರೀಂ ಕೋರ್ಟಿನ ಕೊಲಿಜಿಯಂ ಆಗ ಅಲಹಾಬಾದ್ ಹೈಕೋರ್ಟಿನ ಹಿರಿಯ ನ್ಯಾಯಾಧೀಶರಾಗಿದ್ದ ವಿಕ್ರಂ ನಾಥರನ್ನು ಆಂಧ್ರಪ್ರದೇಶದ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರನ್ನಾಗಿಸಲು ಮಾಡಿದ್ದ ಶಿಪಾರಸ್ಸುಗಳನ್ನು ಮೋದಿ ಸರ್ಕಾರ ವಾಪಸ್ ಕಳಿಸಿತ್ತು .

ಆದರೆ 2019 ರ ಆಗಸ್ಟ್ ನಲ್ಲಿ ಮೋದಿ ಸರ್ಕಾರವೇ ಕೊಲಿಜಿಯಂ ಗೆ ವಿಶೇಷ ಮನವಿ ಮಾಡಿ ಜಸ್ಟಿಸ್ ವಿಕ್ರಂ ನಾಥರನ್ನು ಗುಜರಾತಿನ ಮುಖ್ಯ ನ್ಯಾಯಾಧೀಶರನ್ನಾಗಿಸಿಕೊಂಡಿತು…!!

ಒಂದು ಗಿಳಿಪಾಠ : ಭಾರತದ ನ್ಯಾಯಾಂಗವು ಒಂದು ಸ್ವತಂತ್ರ ಸಂಸ್ಥೆಯಾಗಿದೆ.


ಓದಿ: ರಸ್ತೆಯಲ್ಲಿ ಕೊರೊನಾ ಸೋಂಕಿತರ ಶವ; ಗುಜರಾತ್‌ ಮಾಡೆಲ್ ಧ್ವಂಸ ಮಾಡಿ: ಜಿಗ್ನೇಶ್‌ ಮೇವಾನಿ ಆಕ್ರೋಶ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....