Homeಮುಖಪುಟಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ ಸಮಜ್ ಲೀಜಿಯೇ....!!

ಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ ಸಮಜ್ ಲೀಜಿಯೇ….!!

- Advertisement -
- Advertisement -

ಇಂದು ಇಡೀ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಅತಿ ಹೆಚ್ಚು ದಾಖಲಾಗುತ್ತಿರುವುದು ಮಹಾರಾಷ್ಯ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ, ಆದರೆ ಗುಜರಾತಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಮಹಾರಾಷ್ಟ್ರಕ್ಕಿಂತ ಕಡಿಮೆ ಇರಲು ಕಾರಣ ಅಲ್ಲಿ ಸೋಂಕಿತರು ಕಡಿಮೆ ಇರುವುದಲ್ಲ. ಬದಲಿಗೆ ಟೆಸ್ಟ್ ಗಳನ್ನೇ ಕಡಿಮೆ ಮಾಡುತ್ತಿರುವುದು!

ವಾಸ್ತವದಲ್ಲಿ ಮಹಾರಾಷ್ಟ್ರದಲ್ಲಿ ಮಾಡುತ್ತಿರುವ ಟೆಸ್ಟ್ ಗಳ ಅರ್ಧದಷ್ಟು ಟೆಸ್ಟ್ ಗಳನ್ನೂ ಸಹ ಗುಜರಾತ್ ಸರ್ಕಾರ ಮಾಡುತ್ತಿಲ್ಲ. ಸೋಂಕಿತರನ್ನು ಆಸ್ಪತ್ರೆಯಲ್ಲಿ ನೋಂದಾಯಿಸಿಕೊಳ್ಳುತ್ತಿಲ್ಲ. ಸತ್ತವರ ಸರಿಯಾದ ದಾಖಲೆಗಳನ್ನು ಇಟ್ಟುಕೊಳ್ಳುತ್ತಿಲ್ಲ ಹಾಗು ಸಂಬಂಧಿಕರಿಗೂ ತಿಳಿಸುತ್ತಿಲ್ಲ.

ಅದರಲ್ಲೂ ವಿಶೇಷವಾಗಿ ಗುಜರಾತ್ ನ ರಾಜಧಾನಿ ಅಹಮದಾಬಾದಿನ ಸರ್ಕಾರಿ ಆಸ್ಪತ್ರೆ ಸಾವಿನ ಕೂಪವಾಗಿ ಬಿಟ್ಟಿದೆ. ಈವರೆಗೆ ಗುಜರಾತಿನಲ್ಲಿ ಕೋವಿಡ್ ನಿಂದ ಸತ್ತವರಲ್ಲಿ ಅರ್ಧದಷ್ಟು ಭಾಗ ಸತ್ತಿರುವುದು ಅಹಮದಾಬಾದಿನ ಈ ಆಸ್ಪತ್ರೆಯಲ್ಲೇ.. ಕಾರಣ ನಿರ್ಲಕ್ಷ್ಯ, ಸಿಬ್ಬಂದಿ ಹಾಗು ಪರಿಕರಗಳ ಕೊರತೆ, ಸರ್ಕಾರದ ಬೇಜವಾಬ್ದಾರಿ ಇತ್ಯಾದಿ…

ಹೀಗೆ ಕೋವಿಡ್ ನಿರ್ವಹಣೆಯಲ್ಲಿ ಗುಜರಾತ್ ಮಾಡೆಲ್ ಎಂದರೆ ಸುಳ್ಳುಗಳನ್ನು ಹೇಳುತ್ತಾ ಸತ್ಯವನ್ನು ಮರೆಮಾಚುತ್ತಾ ನಡೆಸುತ್ತಿರುವ ಕಪಟವಾಗಿದೆ.

ಇತ್ತೀಚೆಗೆ, ಇವೆಲ್ಲವನ್ನೂ ಕಂಡು ಬೇಸತ್ತ ಅಹಮದಾಬಾದಿನ ಸರ್ಕಾರಿ ಆಸ್ಪತ್ರೆಯ ಅನಾಮಧೇಯ ವೈದ್ಯರೊಬ್ಬರು ಗುಜರಾತಿನ ಹೈಕೋರ್ಟಿಗೆ ಪತ್ರವೊಂದನ್ನು ಬರೆದಿದ್ದರು. ಅದನ್ನು ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯೊಂದನ್ನು ಗುಜರಾತಿನ ಹೈಕೋರ್ಟು ದಾಖಲಿಸಿಕೊಂಡಿತು ಪ್ರಾರಂಭಿಕ ವಿಚಾರಣೆಯಲ್ಲಿ ಸರ್ಕಾರ ವು ಸತ್ಯಗಳನ್ನು ಮರೆಮಾಚುತ್ತಿರುವುದನ್ನು ಕಂಡುಕೊಂಡಿದ್ದ ಹೈಕೋರ್ಟಿನ ದ್ವಿಸದಸ್ಯ ಪೀಠ ಕೂಡಲೇ ಸರಿಯಾದ ಕ್ರಮಗಳನ್ನು ಜಾರಿಗೊಳಿಸಲು ಆದೇಶಿಸಿತ್ತು.

ಆದರೆ ತನ್ನ ನಿರ್ಲಕ್ಷ್ಯ ಹಾಗು ದುಷ್ಟತನವನ್ನು ಮರೆಮಾಚಲು ಗುಜರಾತ್ ಹಾಗು ಕೇಂದ್ರದ ಬಿಜೆಪಿ ಸರ್ಕಾರ ಹೈ ಕೋರ್ಟನ್ನು ಕೂಡಾ ಬ್ಲಾಕ್ ಮೇಲ್ ಮಾಡುತ್ತಿದೆ.

ಮೋದಿ ಮತ್ತು ಶಾ ಕ್ರೊನಾಲಜಿ

ಅದು ಹೇಗೆಂದು ಅರ್ಥವಾಗಬೇಕೆಂದರೆ ಕೆಳಗಿನ ಕ್ರೋನಾಲಜಿಯನ್ನು ಗಮನಿಸಬೇಕು..

ಮೇ 22-

ಅಹಮದಾಬಾದಿನ ಹೈಕೋರ್ಟಿನ ಜಸ್ಟಿಸ್ ಪಾರ್ದಿವಾಲ ಮತ್ತು ಜಸ್ಟಿಸ್ ವೋರಾ ಪೀಠ:

“ಕೋವಿಡ್ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಗುಜರಾತ್ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಅದರಲ್ಲೂ ಅಹಮದಾಬಾದಿನ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಯ ಆಗರವಾಗಿದೆ. ಸಾವಿನ ಸೆರೆಮನೆಯಾಗಿದೆ. ಗುಜರಾತ್ ಸರ್ಕಾರ ಮೇ 29ರ ಒಳಗೆ ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಂಡು ವರದಿಯನ್ನು ನೀಡದಿದ್ದರೆ ಕೋರ್ಟು ಕಠಿಣವಾದ ಆದೇಶಗಳನ್ನು ನೀಡಬೇಕಾಗುತ್ತದೆ”

ಮೇ 25-

ಹೈಕೋರ್ಟು ಈ ಕ್ರಮಗಳಿಗೆ ಮುಂದಾಗಬಾರದೆಂದು ಸರ್ಕಾರಿ ವಕೀಲರ ಮನವಿ. ಈ ಮನವಿಯಿಂದ ಕೆಂಡಾಮಂಡಲವಾಗುವ ಕೋರ್ಟು ಮೇ 29 ರೊಳಗೆ ಸರಿಯಾದ ತಿದ್ದುಪಡಿ ಕ್ರಮಗಳನ್ನು ತೆಗೆದುಕೊಂಡು ವರದಿ ಮಾಡಲು ಸೂಚನೆ ಹಾಗು ಆಸ್ಪತೆಯ ಖುದ್ದು ಭೇಟಿ ಕಾರ್ಯಕ್ರಮದ ಘೋಷಣೆ.

ಮೇ 29-

ಅಹಮದಾಬಾದಿನ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾದ ಜಸ್ಟಿಸ್ ವಿಕ್ರಂ ನಾಥರಿಂದ ಈ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವಿಚಾರಣೆ ನಡೆಸುತ್ತಿದ್ದ ಪಾರ್ದಿವಾಲ್ -ವೋರಾ ಪೀಠದ ಪುನರ್ರಚನೆ.

ಈ ಹಿಂದಿನ ಜಸ್ಟಿಸ್ ಪಾರ್ದಿವಾಲ ಮತ್ತು ಜಸ್ಟಿಸ್ ವೋರಾ ಪೀಠದಲ್ಲಿ ಆದೇಶಗಳನ್ನು ಬರೆದ ಜಸ್ಟಿಸ್ ಪಾರ್ದಿವಾಲ ಆ ಪೀಠದ ಹಿರಿಯ ನ್ಯಾಯಾಧೀಶರಾಗಿದ್ದರು.

ಪುನರ್ರಚಿತವಾದ ಪೀಠದ ಜವಾಬ್ದಾರಿಯನ್ನು ಈಗ ಸಾಕ್ಷಾತ್ ಮುಖ್ಯ ನ್ಯಾಯಮೂರ್ತಿ ವಿಕ್ರಂ ನಾಥರೇ ವಹಿಸಿಕೊಂಡಿದ್ದರಿಂದ ಹಳೆಯ ಪೀಠದಲ್ಲಿ ಹಿರಿಯ ನ್ಯಾಯಾಧೀಶರಾಗಿದ್ದ ಪಾರ್ದಿವಾಲಾರವರು ಈ ಹೊಸ ದ್ವಿಸದಸ್ಯ ಪೀಠದಲ್ಲಿ ಕಿರಿಯ ಸಹಚರರಾದರು !

ಮೇ 31-

ಮುಖ್ಯ ನ್ಯಾಯಮೂರ್ತಿ ವಿಕ್ರಂ ನಾಥ ಹಾಗೂ ಜಸ್ಟಿಸ್ ಪಾರ್ದಿವಾಲರ ಪೀಠ :

“ಗುಜರಾತ್ ಸರ್ಕಾರವು ಕೋವಿಡ್ ನಿರ್ವಹಣೆಯಲ್ಲಿ ಅತ್ಯುತ್ತಮವಾದ ಕೆಲಸವನ್ನು ಮಾಡುತ್ತಿದೆ. ಸರ್ಕಾರವು ಈಗ ತೆಗೆದುಕೊಂಡಿರುವ ಕ್ರಮಗಳನ್ನು ತೆಗೆದುಕೊಳ್ಳದಿರುತ್ತಿದ್ದರೆ ನಾವೆಲ್ಲರೂ ಸತ್ತೇ ಹೋಗಿರುತ್ತಿದ್ದೆವು. ಅಹಮದಾಬಾದಿನ ಆಸ್ಪತ್ರೆಯೂ ಸಹ ಅತ್ಯುತ್ತಮವಾಗಿದೆ. ಈ ಸಾರ್ವಜನಿಕ ಮೊಕದ್ದಮೆಯನ್ನು ಕೋರ್ಟು ಅಲಹಾಬಾದ್ ಕೈಗೆತ್ತಿಕೊಂಡಿರುವುದು ಸರ್ಕಾರದ ಮೇಲೆ ಆಕ್ಷೇಪಣೆ ಮಾಡುವುದಕ್ಕಲ್ಲ. ವಿರೋಧ ಪಕ್ಷಗಳೂ ಸಹ ಇಂದಿನ ಸಂದರ್ಭದಲ್ಲಿ ಸರ್ಕಾರಕ್ಕೆ ರಚನಾತ್ಮಕ ಸಹಕಾರ ಕೊಡಬೇಕು”

ಅಡಿ ಟಿಪ್ಪಣಿ :

ಅಹಮದಾಬಾದಿನ ಹಾಲಿ ಮುಖ್ಯನ್ಯಾಯಮೂರ್ತಿ ವಿಕ್ರಂ ನಾಥರು 2014 ರಲ್ಲಿ ಉತ್ತರಪ್ರದೇಶದ ಅಲಹಾಬಾದಿನ ಹೈಕೋರ್ಟಿನ ನ್ಯಾಯಾಧೀಶರಾಗಿದ್ದಾಗ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ನರೇಂದ್ರ ಮೋದಿಯವರ ಗೆಲುವನ್ನು ಪ್ರಶ್ನಿಸಿದ್ದ ತಕರಾರು ಅರ್ಜಿಯನ್ನು ಹೆಚ್ಚಿನ ವಿಚಾರಣೆಯಿಲ್ಲದೆ ವಜಾ ಮಾಡಿದ್ದರು.

ಆದರೂ 2019 ರ ಏಪ್ರಿಲ್ ನಲ್ಲಿ ಸುಪ್ರೀಂ ಕೋರ್ಟಿನ ಕೊಲಿಜಿಯಂ ಆಗ ಅಲಹಾಬಾದ್ ಹೈಕೋರ್ಟಿನ ಹಿರಿಯ ನ್ಯಾಯಾಧೀಶರಾಗಿದ್ದ ವಿಕ್ರಂ ನಾಥರನ್ನು ಆಂಧ್ರಪ್ರದೇಶದ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರನ್ನಾಗಿಸಲು ಮಾಡಿದ್ದ ಶಿಪಾರಸ್ಸುಗಳನ್ನು ಮೋದಿ ಸರ್ಕಾರ ವಾಪಸ್ ಕಳಿಸಿತ್ತು .

ಆದರೆ 2019 ರ ಆಗಸ್ಟ್ ನಲ್ಲಿ ಮೋದಿ ಸರ್ಕಾರವೇ ಕೊಲಿಜಿಯಂ ಗೆ ವಿಶೇಷ ಮನವಿ ಮಾಡಿ ಜಸ್ಟಿಸ್ ವಿಕ್ರಂ ನಾಥರನ್ನು ಗುಜರಾತಿನ ಮುಖ್ಯ ನ್ಯಾಯಾಧೀಶರನ್ನಾಗಿಸಿಕೊಂಡಿತು…!!

ಒಂದು ಗಿಳಿಪಾಠ : ಭಾರತದ ನ್ಯಾಯಾಂಗವು ಒಂದು ಸ್ವತಂತ್ರ ಸಂಸ್ಥೆಯಾಗಿದೆ.


ಓದಿ: ರಸ್ತೆಯಲ್ಲಿ ಕೊರೊನಾ ಸೋಂಕಿತರ ಶವ; ಗುಜರಾತ್‌ ಮಾಡೆಲ್ ಧ್ವಂಸ ಮಾಡಿ: ಜಿಗ್ನೇಶ್‌ ಮೇವಾನಿ ಆಕ್ರೋಶ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...