Homeಮುಖಪುಟಗುಜರಾತ್‌ನಲ್ಲಿ ಎಎಪಿಯವರು ಕಾಂಗ್ರೆಸ್ ಮತ ಕಬಳಿಸಿದ್ದಾರೆ: ಸಿದ್ದರಾಮಯ್ಯ

ಗುಜರಾತ್‌ನಲ್ಲಿ ಎಎಪಿಯವರು ಕಾಂಗ್ರೆಸ್ ಮತ ಕಬಳಿಸಿದ್ದಾರೆ: ಸಿದ್ದರಾಮಯ್ಯ

- Advertisement -
- Advertisement -

ಗುಜರಾತ್‌ನಲ್ಲಿ ಬಿಜೆಪಿ ಗೆದ್ದಿರುವುದರಲ್ಲಿ ಆಶ್ಚರ್ಯ ಇಲ್ಲ. ಆಮ್‌ ಆದ್ಮಿ ಪಕ್ಷದವರು ಸ್ಪರ್ಧೆ ಮಾಡಿ, ಬಹುತೇಕ ಕ್ಷೇತ್ರಗಳಲ್ಲಿ ನಮ್ಮ ಮತಗಳನ್ನೇ ಕಬಳಿಸಿದ್ದಾರೆ. ಇದು ಬಿಜೆಪಿಯ ಗೆಲುವಿಗೆ ಹೆಚ್ಚು ಸಹಕಾರಿಯಾಗಿದೆ ಎಂಬುದರಲ್ಲಿ ಯಾವ ಸಂಶಯವಿಲ್ಲ. ಹಿಮಾಚಲ ಪ್ರದೇಶದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇದ್ದುದ್ದು ನಮಗೆ ಸ್ವಲ್ಪ ಮಟ್ಟಿಗೆ ಅನುಕೂಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ.

ಗುಜರಾತ್‌ ಹಾಗೂ ಹಿಮಾಚಲಪ್ರದೇಶದ ವಿಧಾನಸಭೆ ಚುನಾವಣೆ ಕುರಿತು ಪ್ರತಿಕ್ರಿಯಿಸಿರುವ ಅವರು, “ಒಂದು ರಾಜ್ಯದ ಚುನಾವಣಾ ಫಲಿತಾಂಶ ಇನ್ನೊಂದು ರಾಜ್ಯದ ಚುನಾವಣಾ ಫಲಿತಾಂಶದ ಮೇಲೆ ಯಾವ ಪ್ರಭಾವವನ್ನೂ ಬೀರಲ್ಲ. ಹಾಗೆ ಯೋಚಿಸುವುದಾದರೆ ದೆಹಲಿ ಪಾಲಿಕೆ ಚುನಾವಣೆಯ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪ್ರಭಾವ ಬೀರುತ್ತದಾ? ಆಯಾ ರಾಜ್ಯದ ಸಮಸ್ಯೆಗಳು ಮತ್ತು ಸ್ಥಳೀಯ ವಿಚಾರಗಳ ಮೇಲೆ ಫಲಿತಾಂಶ ನಿರ್ಧಾರವಾಗುತ್ತದೆ. ನಮ್ಮ ರಾಜ್ಯದಲ್ಲಿ ಅತೀ ಭ್ರಷ್ಟ ಸರ್ಕಾರವಿದೆ, ಇಲ್ಲಿ ಕಾಂಗ್ರೆಸ್‌ ಪಕ್ಷ ಸಂಘಟನಾ ದೃಷ್ಟಿಯಿಂದ ಹೆಚ್ಚು ಶಕ್ತಿಶಾಲಿಯಾಗಿದೆ. ಹಾಗಾಗಿ ಗುಜರಾತ್‌ ಚುನಾವಣಾ ಫಲಿತಾಂಶ ಇಲ್ಲಿನ ಚುನಾವಣೆಯ ಮೇಲೆ ಯಾವ ಪ್ರಭಾವ ಬೀರದು” ಎಂದು ತಿಳಿಸಿದ್ದಾರೆ.

“ಗುಜರಾತಿನಲ್ಲಿ ಬಿಜೆಪಿ ಪಕ್ಷವೇ ಆಮ್‌ ಆದ್ಮಿ ಪಕ್ಷಕ್ಕೆ ಹಣ ನೀಡಿ ಕಾಂಗ್ರೆಸ್‌ ಮತಗಳನ್ನು ಒಡೆಯುವ ತಂತ್ರ ಮಾಡಿದೆ ಎಂಬ ಸುದ್ದಿ ಇದೆ. ಇದೇ ರೀತಿ ಜೆಡಿಎಸ್‌ ಜೊತೆ ಬಿಜೆಪಿ ನಮ್ಮ ರಾಜ್ಯದಲ್ಲಿ ತಂತ್ರಗಾರಿಕೆ ಮಾಡಬಹುದು, ಆದರೆ ಇದರಿಂದ ಅವರಿಬ್ಬರಿಗೂ ಯಾವ ಲಾಭವಾಗಲ್ಲ” ಎಂದಿದ್ದಾರೆ.

“ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ. ರಾಜ್ಯ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ, ನಿಷ್ಕ್ರಿಯತೆ ಇವುಗಳು ಚುನಾವಣೆಯಲ್ಲಿ ಮುಖ್ಯವಾಗಲಿದೆ. ಲಂಚ ನೀಡದೆ ಯಾವ ಕೆಲಸಗಳು ಇಲ್ಲಿ ಆಗುತ್ತಿಲ್ಲ. 40% ಕಮಿಷನ್‌ ಸರ್ಕಾರ ಗುಜರಾತ್‌ ನಲ್ಲಿ ಇದೆ ಯಾರೂ ಹೇಳಿಲ್ಲ, ಆದರೆ ರಾಜ್ಯದ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರ ಎಂದು ಕುಖ್ಯಾತಿ ಗಳಿಸಿದೆ” ಎಂದು ಟೀಕಿಸಿದ್ದಾರೆ.

“ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಯಾವ ತಂತ್ರಗಾರಿಕೆಯೂ ಬೇಡ, ನಾವು ಸುಮ್ಮನೆ ಇದ್ದರೂ ಗೆಲ್ಲುತ್ತೇವೆ. ಈ ಬಾರಿ ಬಿಜೆಪಿಯನ್ನು ಸೋಲಿನಿಂದ ಕಾಪಾಡಲು ಯಾರಿಂದಲೂ ಸಾಧ್ಯವಿಲ್ಲ. ನರೇಂದ್ರ ಮೋದಿ ಅವರು ವಾಸ ಮಾಡುವ ದೆಹಲಿಯಲ್ಲೇ ಅವರ ಹವಾ ಇಲ್ಲ. ಇನ್ನು ಇಲ್ಲಿ ಇರೋಕೆ ಸಾಧ್ಯನಾ?” ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...