Homeಮುಖಪುಟಗುಜರಾತ್‌ನಲ್ಲಿ ಎಎಪಿಯವರು ಕಾಂಗ್ರೆಸ್ ಮತ ಕಬಳಿಸಿದ್ದಾರೆ: ಸಿದ್ದರಾಮಯ್ಯ

ಗುಜರಾತ್‌ನಲ್ಲಿ ಎಎಪಿಯವರು ಕಾಂಗ್ರೆಸ್ ಮತ ಕಬಳಿಸಿದ್ದಾರೆ: ಸಿದ್ದರಾಮಯ್ಯ

- Advertisement -
- Advertisement -

ಗುಜರಾತ್‌ನಲ್ಲಿ ಬಿಜೆಪಿ ಗೆದ್ದಿರುವುದರಲ್ಲಿ ಆಶ್ಚರ್ಯ ಇಲ್ಲ. ಆಮ್‌ ಆದ್ಮಿ ಪಕ್ಷದವರು ಸ್ಪರ್ಧೆ ಮಾಡಿ, ಬಹುತೇಕ ಕ್ಷೇತ್ರಗಳಲ್ಲಿ ನಮ್ಮ ಮತಗಳನ್ನೇ ಕಬಳಿಸಿದ್ದಾರೆ. ಇದು ಬಿಜೆಪಿಯ ಗೆಲುವಿಗೆ ಹೆಚ್ಚು ಸಹಕಾರಿಯಾಗಿದೆ ಎಂಬುದರಲ್ಲಿ ಯಾವ ಸಂಶಯವಿಲ್ಲ. ಹಿಮಾಚಲ ಪ್ರದೇಶದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇದ್ದುದ್ದು ನಮಗೆ ಸ್ವಲ್ಪ ಮಟ್ಟಿಗೆ ಅನುಕೂಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ.

ಗುಜರಾತ್‌ ಹಾಗೂ ಹಿಮಾಚಲಪ್ರದೇಶದ ವಿಧಾನಸಭೆ ಚುನಾವಣೆ ಕುರಿತು ಪ್ರತಿಕ್ರಿಯಿಸಿರುವ ಅವರು, “ಒಂದು ರಾಜ್ಯದ ಚುನಾವಣಾ ಫಲಿತಾಂಶ ಇನ್ನೊಂದು ರಾಜ್ಯದ ಚುನಾವಣಾ ಫಲಿತಾಂಶದ ಮೇಲೆ ಯಾವ ಪ್ರಭಾವವನ್ನೂ ಬೀರಲ್ಲ. ಹಾಗೆ ಯೋಚಿಸುವುದಾದರೆ ದೆಹಲಿ ಪಾಲಿಕೆ ಚುನಾವಣೆಯ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪ್ರಭಾವ ಬೀರುತ್ತದಾ? ಆಯಾ ರಾಜ್ಯದ ಸಮಸ್ಯೆಗಳು ಮತ್ತು ಸ್ಥಳೀಯ ವಿಚಾರಗಳ ಮೇಲೆ ಫಲಿತಾಂಶ ನಿರ್ಧಾರವಾಗುತ್ತದೆ. ನಮ್ಮ ರಾಜ್ಯದಲ್ಲಿ ಅತೀ ಭ್ರಷ್ಟ ಸರ್ಕಾರವಿದೆ, ಇಲ್ಲಿ ಕಾಂಗ್ರೆಸ್‌ ಪಕ್ಷ ಸಂಘಟನಾ ದೃಷ್ಟಿಯಿಂದ ಹೆಚ್ಚು ಶಕ್ತಿಶಾಲಿಯಾಗಿದೆ. ಹಾಗಾಗಿ ಗುಜರಾತ್‌ ಚುನಾವಣಾ ಫಲಿತಾಂಶ ಇಲ್ಲಿನ ಚುನಾವಣೆಯ ಮೇಲೆ ಯಾವ ಪ್ರಭಾವ ಬೀರದು” ಎಂದು ತಿಳಿಸಿದ್ದಾರೆ.

“ಗುಜರಾತಿನಲ್ಲಿ ಬಿಜೆಪಿ ಪಕ್ಷವೇ ಆಮ್‌ ಆದ್ಮಿ ಪಕ್ಷಕ್ಕೆ ಹಣ ನೀಡಿ ಕಾಂಗ್ರೆಸ್‌ ಮತಗಳನ್ನು ಒಡೆಯುವ ತಂತ್ರ ಮಾಡಿದೆ ಎಂಬ ಸುದ್ದಿ ಇದೆ. ಇದೇ ರೀತಿ ಜೆಡಿಎಸ್‌ ಜೊತೆ ಬಿಜೆಪಿ ನಮ್ಮ ರಾಜ್ಯದಲ್ಲಿ ತಂತ್ರಗಾರಿಕೆ ಮಾಡಬಹುದು, ಆದರೆ ಇದರಿಂದ ಅವರಿಬ್ಬರಿಗೂ ಯಾವ ಲಾಭವಾಗಲ್ಲ” ಎಂದಿದ್ದಾರೆ.

“ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ. ರಾಜ್ಯ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ, ನಿಷ್ಕ್ರಿಯತೆ ಇವುಗಳು ಚುನಾವಣೆಯಲ್ಲಿ ಮುಖ್ಯವಾಗಲಿದೆ. ಲಂಚ ನೀಡದೆ ಯಾವ ಕೆಲಸಗಳು ಇಲ್ಲಿ ಆಗುತ್ತಿಲ್ಲ. 40% ಕಮಿಷನ್‌ ಸರ್ಕಾರ ಗುಜರಾತ್‌ ನಲ್ಲಿ ಇದೆ ಯಾರೂ ಹೇಳಿಲ್ಲ, ಆದರೆ ರಾಜ್ಯದ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರ ಎಂದು ಕುಖ್ಯಾತಿ ಗಳಿಸಿದೆ” ಎಂದು ಟೀಕಿಸಿದ್ದಾರೆ.

“ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಯಾವ ತಂತ್ರಗಾರಿಕೆಯೂ ಬೇಡ, ನಾವು ಸುಮ್ಮನೆ ಇದ್ದರೂ ಗೆಲ್ಲುತ್ತೇವೆ. ಈ ಬಾರಿ ಬಿಜೆಪಿಯನ್ನು ಸೋಲಿನಿಂದ ಕಾಪಾಡಲು ಯಾರಿಂದಲೂ ಸಾಧ್ಯವಿಲ್ಲ. ನರೇಂದ್ರ ಮೋದಿ ಅವರು ವಾಸ ಮಾಡುವ ದೆಹಲಿಯಲ್ಲೇ ಅವರ ಹವಾ ಇಲ್ಲ. ಇನ್ನು ಇಲ್ಲಿ ಇರೋಕೆ ಸಾಧ್ಯನಾ?” ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...