Homeಮುಖಪುಟಗುಜರಾತ್‌ನಲ್ಲಿ ಎಎಪಿಯವರು ಕಾಂಗ್ರೆಸ್ ಮತ ಕಬಳಿಸಿದ್ದಾರೆ: ಸಿದ್ದರಾಮಯ್ಯ

ಗುಜರಾತ್‌ನಲ್ಲಿ ಎಎಪಿಯವರು ಕಾಂಗ್ರೆಸ್ ಮತ ಕಬಳಿಸಿದ್ದಾರೆ: ಸಿದ್ದರಾಮಯ್ಯ

- Advertisement -
- Advertisement -

ಗುಜರಾತ್‌ನಲ್ಲಿ ಬಿಜೆಪಿ ಗೆದ್ದಿರುವುದರಲ್ಲಿ ಆಶ್ಚರ್ಯ ಇಲ್ಲ. ಆಮ್‌ ಆದ್ಮಿ ಪಕ್ಷದವರು ಸ್ಪರ್ಧೆ ಮಾಡಿ, ಬಹುತೇಕ ಕ್ಷೇತ್ರಗಳಲ್ಲಿ ನಮ್ಮ ಮತಗಳನ್ನೇ ಕಬಳಿಸಿದ್ದಾರೆ. ಇದು ಬಿಜೆಪಿಯ ಗೆಲುವಿಗೆ ಹೆಚ್ಚು ಸಹಕಾರಿಯಾಗಿದೆ ಎಂಬುದರಲ್ಲಿ ಯಾವ ಸಂಶಯವಿಲ್ಲ. ಹಿಮಾಚಲ ಪ್ರದೇಶದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇದ್ದುದ್ದು ನಮಗೆ ಸ್ವಲ್ಪ ಮಟ್ಟಿಗೆ ಅನುಕೂಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ.

ಗುಜರಾತ್‌ ಹಾಗೂ ಹಿಮಾಚಲಪ್ರದೇಶದ ವಿಧಾನಸಭೆ ಚುನಾವಣೆ ಕುರಿತು ಪ್ರತಿಕ್ರಿಯಿಸಿರುವ ಅವರು, “ಒಂದು ರಾಜ್ಯದ ಚುನಾವಣಾ ಫಲಿತಾಂಶ ಇನ್ನೊಂದು ರಾಜ್ಯದ ಚುನಾವಣಾ ಫಲಿತಾಂಶದ ಮೇಲೆ ಯಾವ ಪ್ರಭಾವವನ್ನೂ ಬೀರಲ್ಲ. ಹಾಗೆ ಯೋಚಿಸುವುದಾದರೆ ದೆಹಲಿ ಪಾಲಿಕೆ ಚುನಾವಣೆಯ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪ್ರಭಾವ ಬೀರುತ್ತದಾ? ಆಯಾ ರಾಜ್ಯದ ಸಮಸ್ಯೆಗಳು ಮತ್ತು ಸ್ಥಳೀಯ ವಿಚಾರಗಳ ಮೇಲೆ ಫಲಿತಾಂಶ ನಿರ್ಧಾರವಾಗುತ್ತದೆ. ನಮ್ಮ ರಾಜ್ಯದಲ್ಲಿ ಅತೀ ಭ್ರಷ್ಟ ಸರ್ಕಾರವಿದೆ, ಇಲ್ಲಿ ಕಾಂಗ್ರೆಸ್‌ ಪಕ್ಷ ಸಂಘಟನಾ ದೃಷ್ಟಿಯಿಂದ ಹೆಚ್ಚು ಶಕ್ತಿಶಾಲಿಯಾಗಿದೆ. ಹಾಗಾಗಿ ಗುಜರಾತ್‌ ಚುನಾವಣಾ ಫಲಿತಾಂಶ ಇಲ್ಲಿನ ಚುನಾವಣೆಯ ಮೇಲೆ ಯಾವ ಪ್ರಭಾವ ಬೀರದು” ಎಂದು ತಿಳಿಸಿದ್ದಾರೆ.

“ಗುಜರಾತಿನಲ್ಲಿ ಬಿಜೆಪಿ ಪಕ್ಷವೇ ಆಮ್‌ ಆದ್ಮಿ ಪಕ್ಷಕ್ಕೆ ಹಣ ನೀಡಿ ಕಾಂಗ್ರೆಸ್‌ ಮತಗಳನ್ನು ಒಡೆಯುವ ತಂತ್ರ ಮಾಡಿದೆ ಎಂಬ ಸುದ್ದಿ ಇದೆ. ಇದೇ ರೀತಿ ಜೆಡಿಎಸ್‌ ಜೊತೆ ಬಿಜೆಪಿ ನಮ್ಮ ರಾಜ್ಯದಲ್ಲಿ ತಂತ್ರಗಾರಿಕೆ ಮಾಡಬಹುದು, ಆದರೆ ಇದರಿಂದ ಅವರಿಬ್ಬರಿಗೂ ಯಾವ ಲಾಭವಾಗಲ್ಲ” ಎಂದಿದ್ದಾರೆ.

“ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ. ರಾಜ್ಯ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ, ನಿಷ್ಕ್ರಿಯತೆ ಇವುಗಳು ಚುನಾವಣೆಯಲ್ಲಿ ಮುಖ್ಯವಾಗಲಿದೆ. ಲಂಚ ನೀಡದೆ ಯಾವ ಕೆಲಸಗಳು ಇಲ್ಲಿ ಆಗುತ್ತಿಲ್ಲ. 40% ಕಮಿಷನ್‌ ಸರ್ಕಾರ ಗುಜರಾತ್‌ ನಲ್ಲಿ ಇದೆ ಯಾರೂ ಹೇಳಿಲ್ಲ, ಆದರೆ ರಾಜ್ಯದ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರ ಎಂದು ಕುಖ್ಯಾತಿ ಗಳಿಸಿದೆ” ಎಂದು ಟೀಕಿಸಿದ್ದಾರೆ.

“ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಯಾವ ತಂತ್ರಗಾರಿಕೆಯೂ ಬೇಡ, ನಾವು ಸುಮ್ಮನೆ ಇದ್ದರೂ ಗೆಲ್ಲುತ್ತೇವೆ. ಈ ಬಾರಿ ಬಿಜೆಪಿಯನ್ನು ಸೋಲಿನಿಂದ ಕಾಪಾಡಲು ಯಾರಿಂದಲೂ ಸಾಧ್ಯವಿಲ್ಲ. ನರೇಂದ್ರ ಮೋದಿ ಅವರು ವಾಸ ಮಾಡುವ ದೆಹಲಿಯಲ್ಲೇ ಅವರ ಹವಾ ಇಲ್ಲ. ಇನ್ನು ಇಲ್ಲಿ ಇರೋಕೆ ಸಾಧ್ಯನಾ?” ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...