Homeಮುಖಪುಟ‘ಜೈಲ್‌ ಕಾ ಜವಾಬ್‌ ವೋಟ್‌ ಸೇ’: ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ

‘ಜೈಲ್‌ ಕಾ ಜವಾಬ್‌ ವೋಟ್‌ ಸೇ’: ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ, ಎಎಪಿ ನಾಯಕ ಅರವಿಂದ ಕೇಜ್ರಿವಾಲ್‌ ಅವರ ಬಂಧನವನ್ನು ಖಂಡಿಸಿ ಎಎಪಿ ಕಾರ್ಯಕರ್ತರು ಇಂದು ದೆಹಲಿಯ ಲಕ್ಷ್ಮಿ ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಆಮ್ ಆದ್ಮಿ ಪಕ್ಷದ ‘ಜೈಲ್‌ ಕಾ ಜವಾಬ್‌ ವೋಟ್‌ ಸೇ’ ಅಭಿಯಾನದ ಭಾಗವಾಗಿ ಪೂರ್ವ ದೆಹಲಿ ಪ್ರದೇಶದ ಫುಟ್ ಓವರ್ ಬ್ರಿಡ್ಜ್ ಬಳಿ ಪ್ರತಿಭಟನೆ ನಡೆಸಲಾಗಿದೆ. ಪೂರ್ವ ದೆಹಲಿ ಕ್ಷೇತ್ರದ ಎಎಪಿ ಅಭ್ಯರ್ಥಿ ಕುಲದೀಪ್‌ ಕುಮಾರ್‌ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಅಭಿಯಾನದಲ್ಲಿ ಭಿತ್ತಿಪತ್ರಗಳನ್ನು ಹಿಡಿದು ‘ಜೈಲ್‌ ಕಾ ಜವಾಬ್‌ ವೋಟ್‌ ಸೇ’ ಎಂದು ಎಎಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದ್ದಾರೆ.

ಬಿಜೆಪಿ ತೋರಿದ ಸರ್ವಾಧಿಕಾರ ಮತ್ತು ಕೇಜ್ರಿವಾಲ್ ಬಂಧನಕ್ಕೆ ತಕ್ಕ ಉತ್ತರ ನೀಡಲು ದೆಹಲಿಯ ಜನತೆ ಸಿದ್ಧರಾಗಿದ್ದಾರೆ ಎಂದು ಪೂರ್ವ ದೆಹಲಿ ಲೋಕಸಭಾ ಚುನಾವಣಾ ಅಭ್ಯರ್ಥಿ ಕುಲದೀಪ್ ಕುಮಾರ್ ಹೇಳಿದ್ದಾರೆ. ಸುನೀತಾ ಕೇಜ್ರಿವಾಲ್ ಇಂದು ಕುಲದೀಪ್ ಕುಮಾರ್ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದಾರೆ.

ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಜಾರಿ ನಿರ್ದೇಶನಾಲಯ (ಇಡಿ) ಈಗ ರದ್ದುಗೊಡಿರುವ ‘ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ವರ್ಗಾವಣೆ’ ಪ್ರಕರಣದಲ್ಲಿ ಬಂಧಿಸಿತ್ತು. ದೆಹಲಿ ನ್ಯಾಯಾಲಯ ಮೇ 7ರವರೆಗೆ ಅವರಿಗೆ ನ್ಯಾಯಾಂಗ ಬಂಧನವನ್ನು ವಿಧಿಸಿದೆ. ಅರವಿಂದ್‌ ಕೇಜ್ರಿವಾಲ್‌ ಅವರನ್ನು ಚುನಾವಣಾ ಪ್ರಚಾರ ಮಾಡದಂತೆ ತಡೆಯುವ ಉದ್ದೇಶದಿಂದ ಬಿಜೆಪಿಯ ಪಿತೂರಿಯ ಭಾಗವಾಗಿ ಕೇಜ್ರಿವಾಲ್‌ನ್ನು ಬಂಧಿಸಲಾಗಿದೆ ಎಂದು ಎಎಪಿ ಈ ಮೊದಲು ಆರೋಪಿಸಿತ್ತು. ಇದೀಗ ಸುನೀತಾ ಕೇಜ್ರಿವಾಲ್ ದೆಹಲಿ ಮತ್ತು ಇತರ ರಾಜ್ಯಗಳಲ್ಲಿ ಎಎಪಿ ಪರವಾಗಿ ಲೋಕಸಭಾ ಚುನಾವಣೆಯ ಪ್ರಚಾರವನ್ನು ಮುನ್ನಡೆಸಲಿದ್ದಾರೆ.

ಕೇಜ್ರಿವಾಲ್‌ ಬಂಧನವನ್ನು ಖಂಡಿಸಿ ಈ ಮೊದಲು ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಮೈತ್ರಕೂಟದ ಮೆಗಾ ರ್ಯಾಲಿ ನಡೆದಿತ್ತು. ರ್ಯಾಲಿಯಲ್ಲಿ ಸೋನಿಯಾ ಗಾಂಧಿ, ಸುನಿತಾ ಕೇಜ್ರಿವಾಲ್‌ ಮತ್ತು ಬಂಧಿತ ಜಾರ್ಖಾಂಡ್ ಮಾಜಿ ಸಿಎಂ ಹೇಮಂತ್ ಸೋರೆನ್ ಅವರ ಪತ್ನಿ ಕಲ್ಪನಾ ಸೋರೆನ್ ಅವರು ಭಾಗವಹಿಸಿದ್ದರು. ಇದಲ್ಲದೆ ಆಮ್ ಆದ್ಮಿ ಪಕ್ಷವು (ಎಎಪಿ) ಇಂದು ಜಂತರ್ ಮಂತರ್‌ನಲ್ಲಿ ‘ಉಪವಾಸ ದಿವಸ’ ಪ್ರತಿಭಟನೆ ನಡೆಸಿತ್ತು. ಏಕಕಾಲದಲ್ಲಿ ಭಾರತದ 25 ರಾಜ್ಯಗಳಲ್ಲಿ ಮತ್ತು ನ್ಯೂಯಾರ್ಕ್, ಬೋಸ್ಟನ್, ಟೊರೊಂಟೊ, ವಾಷಿಂಗ್ಟನ್ ಡಿಸಿ, ಮೆಲ್ಬೋರ್ನ್ ಮತ್ತು ಲಂಡನ್ ಸೇರಿದಂತೆ ಪ್ರಮುಖ ಅಂತರಾಷ್ಟ್ರೀಯ ಕೇಂದ್ರಗಳಲ್ಲಿ ಎಎಪಿ ಬೆಂಬಲಿಗರು ಸಾಮೂಹಿಕ ಉಪವಾಸದ ಮೂಲಕ ಕೇಜ್ರಿವಾಲ್‌ಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದರು.

ಇದನ್ನು ಓದಿ: 27 ಪ್ರಕರಣಗಳು: ಪ್ರಧಾನಿ ಮೋದಿ ವಿರುದ್ಧದ ದೂರುಗಳಿಗೆ ಸಂಬಂಧಿಸಿ ಚುನಾವಣಾ ಆಯೋಗ ಏನು ಮಾಡಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...