HomeಮುಖಪುಟAAP ರಾಷ್ಟ್ರೀಯ ಪಕ್ಷವಾಗಲು ಇನ್ನೊಂದು ಹೆಜ್ಜೆ ಬಾಕಿ: ಅರವಿಂದ್ ಕೇಜ್ರಿವಾಲ್

AAP ರಾಷ್ಟ್ರೀಯ ಪಕ್ಷವಾಗಲು ಇನ್ನೊಂದು ಹೆಜ್ಜೆ ಬಾಕಿ: ಅರವಿಂದ್ ಕೇಜ್ರಿವಾಲ್

ರಾಷ್ಟ್ರೀಯ ಪಕ್ಷ ಎಂದು ಗುರುತಿಸಿಕೊಳ್ಳಲು ಇರುವ ಮಾನದಂಡಗಳೇನು ಎಂಬುದನ್ನು ತಿಳಿಯೋಣ

- Advertisement -
- Advertisement -

ಪಕ್ಷದ ಕಾರ್ಯಕರ್ತರ ಪರಿಶ್ರಮಕ್ಕೆ ಅಭಿನಂದನೆ ಸಲ್ಲಿಸಿರುವ ದೆಹಲಿ ಮುಖ್ಯಮಂತ್ರಿ ಮತ್ತು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ AAP ರಾಷ್ಟ್ರೀಯ ಪಕ್ಷವಾಗಲು ಇನ್ನೊಂದು ಹೆಜ್ಜೆ ಬಾಕಿ ಇದೆ ಎಂದಿದ್ದಾರೆ.

ಗೋವಾದಲ್ಲಿ ಆಪ್ ಪಕ್ಷವನ್ನು ರಾಜ್ಯ ಪಕ್ಷ ಎಂದು ಚುನಾವಣಾ ಆಯೋಗ ಗುರುತಿಸಿರುವುದನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಅವರು, “ಪಂಜಾಬ್ ನಂತರ ಗೋವಾದಲ್ಲಿಯೂ ಆಪ್ ಅನ್ನು ರಾಜ್ಯ ಪಕ್ಷ ಎಂದು ಗುರುತಿಸಲಾಗಿದೆ. ಇನ್ನೊಂದು ರಾಜ್ಯದಲ್ಲಿ ನಾವು ಗುರುತಿಸಲ್ಪಟ್ಟರೆ ಅಧಿಕೃತವಾಗಿ ರಾಷ್ಟ್ರೀಯ ಪಕ್ಷ ಎಂದು ಘೋಷಿಸಲಾಗುತ್ತದೆ. ಇದಕ್ಕಾಗಿ ಕೆಲಸ ಮಾಡುತ್ತಿರುವ ಕಾರ್ಯಕರ್ತರಿಗೆ ಅಭಿನಂದನೆಗಳು. ಆಪ್ ಸಿದ್ದಾಂತದಲ್ಲಿ ನಂಬಿಕೆಯಿಂದ ಜನರಿಗೆ ಧನ್ಯವಾದಗಳು” ಎಂದಿದ್ದಾರೆ.

ರಾಷ್ಟ್ರೀಯ ಪಕ್ಷ ಎಂದು ಗುರುತಿಸಿಕೊಳ್ಳಲು ಇರುವ ಮಾನದಂಡಗಳು

ನಮ್ಮ ದೇಶದ ಯಾವುದೇ ಪಕ್ಷವು ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯಲು ಈ ಕೆಳಗಿನ ಮೂರು ಮಾನದಂಡಗಳನ್ನು ಹೊಂದಿರಬೇಕಾಗುತ್ತದೆ.

  1. ಕನಿಷ್ಟ ನಾಲ್ಕು ರಾಜ್ಯಗಳ ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ತಲಾ 6% ಗಿಂತ ಹೆಚ್ಚಿನ ಮತಪ್ರಮಾಣ ಪಡೆಯದಿರಬೇಕು. ಜೊತೆಗೆ ಇತ್ತೀಚಿನ ನಾಲ್ಕು ಲೋಕಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸಿರಬೇಕು.
  2. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಗಳಲ್ಲಿ ಕನಿಷ್ಟ 2% ರಷ್ಟು ಸೀಟುಗಳನ್ನು ಗೆದ್ದಿರಬೇಕು. ಕನಿಷ್ಟ ಮೂರು ರಾಜ್ಯಗಳಲ್ಲಿ ಲೋಕಸಭಾ ಸ್ಥಾನಗಳಿರಬೇಕು
  3. ರಾಜ್ಯ ಪಕ್ಷ ಎಂದು ಕನಿಷ್ಟ ನಾಲ್ಕು ರಾಜ್ಯಗಳಲ್ಲಿ ಮಾನ್ಯತೆ ಪಡೆದಿರಬೇಕು

ಈ ಮಾನದಂಡಗಳ ಅನ್ವಯ ಆಪ್ ಸದ್ಯಕ್ಕೆ ದೆಹಲಿ, ಪಂಜಾಬ್ ಮತ್ತು ಗೋವಾ ರಾಜ್ಯಗಳಲ್ಲಿ ರಾಜ್ಯಪಕ್ಷದ ಮಾನ್ಯತೆ ಪಡೆದಿದೆ. ಇನ್ನೊಂದು ರಾಜ್ಯದಲ್ಲಿ ಪಡೆದಲ್ಲಿ ಅದು ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯುತ್ತದೆ.

2012ರ ಭ್ರಷ್ಟಾಚಾರ ವಿರೋಧಿ ಚಳವಳಿ (ಜನ ಲೋಕಪಾಲ್ ಮಸೂದೆ ಜಾರಿಗಾಗಿ ನಡೆದ ಹೋರಾಟ) ಯ ಸಂದರ್ಭದಲ್ಲಿ ಹುಟ್ಟಿದ ಆಪ್ 2013ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಿ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತು. ಆ ಮೂಲಕ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಕಾಂಗ್ರೆಸ್ ಜೊತೆಗೂಡಿ ಅಧಿಕಾರ ಹಿಡಿದ ಅದು ಕೇವಲ 49 ದಿನಗಳಲ್ಲಿ ಸರ್ಕಾರ ವಿಸರ್ಜಿಸಿತು.

ಆನಂತರ 2015ರಲ್ಲಿ ಪ್ರಚಂಡ ಬಹುಮತದೊಂದಿಗೆ ಅಧಿಕಾರ ಹಿಡಿಯಿತು. ನಂತರ 2020ರಲ್ಲಿಯೂ ಮರಳಿ ಅಧಿಕಾರದಲ್ಲಿದೆ. ಆನಂತರ 2022 ಪಂಜಾಬ್‌ನಲ್ಲಿಯೂ ಭಾರೀ ಬಹುಮತದೊಂದಿಗೆ ಸರ್ಕಾರ ರಚಿಸಿದೆ. ಗೋವಾದಲ್ಲಿ ಎರಡು ವಿಧಾನ ಸಭಾ ಕ್ಷೇತ್ರಗಳಲ್ಲಿ ಜಯಗಳಿಸಿರುವ ಅದು ಮುಂಬರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗಳ ಮೇಲೆ ಕಣ್ಣಿಟ್ಟಿದೆ.

ಇದನ್ನೂ ಓದಿ; ಬಿಹಾರ: ನಿತೀಶ್-ತೇಜಸ್ವಿ ನಡುವೆ ಒಪ್ಪಂದ; ಹೊಸ ಸರ್ಕಾರದಲ್ಲಿ ಯಾರಿಗೆ ಯಾವ ಸ್ಥಾನ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...