Homeಮುಖಪುಟಪಂಜಾಬ್‌ನಲ್ಲಿ ಅಭೂತಪೂರ್ವ ಜಯ ದಾಖಲಿಸಿದ ಆಪ್: ಕರ್ನಾಟಕದ ಮುಖಂಡರ ಪ್ರತಿಕ್ರಿಯೆ ಹೀಗಿದೆ...

ಪಂಜಾಬ್‌ನಲ್ಲಿ ಅಭೂತಪೂರ್ವ ಜಯ ದಾಖಲಿಸಿದ ಆಪ್: ಕರ್ನಾಟಕದ ಮುಖಂಡರ ಪ್ರತಿಕ್ರಿಯೆ ಹೀಗಿದೆ…

ಬಿಜೆಪಿ ಅಧಿಕಾರದಲ್ಲಿರುವ ಗುಜರಾತ್, ಹಿಮಾಚಲ ಪ್ರದೇಶ ಮತ್ತು ಕರ್ನಾಟಕದ ಚುನಾವಣೆಗಳೆ ನಮ್ಮ ಮುಂದಿನ ಗುರಿ ಎನ್ನುತ್ತಾರೆ ಆಪ್ ಮುಖಂಡರಾದ ದರ್ಶನ್ ಜೈನ್

- Advertisement -
- Advertisement -

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಜಯ ದಾಖಲಿಸಿದೆ. ಒಟ್ಟು 117 ಕ್ಷೇತ್ರಗಳಲ್ಲಿ 92 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಪಾರಮ್ಯ ಸಾಧಿಸಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಅಭ್ಯರ್ಥಿ ಭಗವಂತ್ ಮನ್ ಜೋಡಿಗೆ ಪಂಜಾಬ್ ಜನ ಕೆಂಪುಹಾಸು ಹಾಕಿ ಸ್ವಾಗತಿಸಿದ್ದಾರೆ. ದೆಹಲಿಯಂತೆಯೇ ಭಾರೀ ಬಹುಮತದೊಂದಿಗೆ ಪಂಜಾಬ್‌ನಲ್ಲಿ ಅಧಿಕ್ಕಾರಕ್ಕೇರಲು ಆಪ್ ಸಜ್ಜಾಗಿದೆ. ಈ ಗೆಲುವಿಗೆ ಕಾರಣವೇನು? ಬಳಸಿದ ತಂತ್ರಗಳು ಯಾವುವು ಎಂಬುದರ ಕುರಿತು ನಾನುಗೌರಿ.ಕಾಂ ಕರ್ನಾಟಕದ ಆಪ್ ನಾಯಕರನ್ನು ಮಾತನಾಡಿಸಿತು. ಕೇಜ್ರಿವಾಲ್‌ರವರ ಆಡಳಿತ ಮತ್ತು ಪಂಜಾಬ್ ಕಾರ್ಯಕರ್ತರ ಪರಿಶ್ರಮವೇ ಆಪ್ ಅಧಿಕ್ಕಾರಕ್ಕೇರಲು ಕಾರಣ ಎಂದು ಆಪ್ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಮತ್ತು ಆಪ್ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್‌ ಜೈನ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಕೇಜ್ರಿವಾಲ್ ಮಾದರಿಯನ್ನು ಪಂಜಾಬ್ ಜನತೆ ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ. ಪಂಜಾಬ್‌ನಲ್ಲಿ ಜನ ನಮಗೆ ವೋಟ್ ಮಾಡಿಲ್ಲ, ಬದಲಿಗೆ ಪಂಜಾಬ್‌ನಲ್ಲಿಯೂ ಬದಲಾವಣೆ ತನ್ನಿ ಎಂದು ಒಂದು ಅವಕಾಶ ನೀಡಿದ್ದಾರೆ. ಇಷ್ಟು ದಿನದವರೆಗೆ ಪ್ರಾದೇಶಿಕ ಪಕ್ಷವಾಗಿದ್ದ ಆಪ್ ಇನ್ನು ಮುಂದೆ ಅಧಿಕೃತವಾಗಿ ರಾಷ್ಟ್ರೀಯ ಪಕ್ಷವಾಗಲಿದೆ. ಇಡೀ ದೇಶದಲ್ಲಿ ನಡೆಯಬೇಕಿರುವ ರಾಜಕೀಯ ಕ್ರಾಂತಿಗೆ ಇಂದು ಆಪ್ ಮುನ್ನುಡಿ ಬರೆದಿದೆ” ಎನ್ನುತ್ತಾರೆ ಮೋಹನ್ ದಾಸರಿ.

ಮೋಹನ್ ದಾಸರಿ

ದೆಹಲಿಯಲ್ಲಿ ನಮಗೆ ತುಂಬಾ ಅಡೆತಡೆಗಳಿದ್ದವು. ಏಕೆಂದರೆ ಅದು ಪೂರ್ಣ ಪ್ರಮಾಣದ ರಾಜ್ಯವಲ್ಲ. ಕಾನೂನು ಸುವ್ಯವಸ್ಥೆ ದೆಹಲಿ ಸರ್ಕಾರದ ಕೈಯಲ್ಲಿಲ್ಲ. ಭೂಮಿ ಮತ್ತು ಸಾರ್ವಜನಿಕ ನೀತಿಗಳು ದೆಹಲಿ ವ್ಯಾಪ್ತಿಯಲ್ಲಿರಲಿಲ್ಲ. ಏನೇ ಮಾಡಲು ಹೋದರೂ ಕೇಂದ್ರ ಸರ್ಕಾರ ಅಡಚಣೆ ಮಾಡುತ್ತಿತ್ತು. ಆದರೆ ಪಂಜಾಬ್‌ನಲ್ಲಿ ಬೃಹತ್ ಬಹುಮತದಿಂದ ಗೆದ್ದಿರುವುದರಿಂದ ದೇಶಕ್ಕೆ ಮಾದರಿ ರಾಜ್ಯ ಹೇಗಿರುತ್ತದೆ ಎಂಬುದನ್ನು ತೋರಿಸುತ್ತೇವೆ ಎಂದರು.

ಕೃಷಿ ಕ್ಷೇತ್ರದಲ್ಲಿ ಯಾವ ರೀತಿಯ ಕ್ರಾಂತಿಕಾರಕ ಬದಲಾವಣೆ ತರಬಹುದು ಎಂಬುದನ್ನು ನಾವು ಸಾಧಿಸಿ ತೋರಿಸುತ್ತೇವೆ. ಅದೇ ರೀತಿಯಲ್ಲಿ ದೇಶಕ್ಕೆ ಮಾದರಿಯಾದ ಕಾನೂನು ಸುವ್ಯವಸ್ಥೆ ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಗಳನ್ನು ಬಲಪಡಿಸುತ್ತೇವೆ. ಜನರಿಗೆ ಕಾನೂನು ಸುವ್ಯವಸ್ಥೆ ಹೇಗೆ ಇರಬೇಕೆಂದು ತೋರಿಸಿಕೊಡುತ್ತೇವೆ. ಜನರಿಗಾಗಿ ಕೆಲಸ ಮಾಡುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಎರಡು ವರ್ಷದಿಂದ ನಿರಂತರವಾಗಿ ಬಿಬಿಎಂಪಿ ಚುನಾವಣೆ ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. 50ಕ್ಕೂ ಹೆಚ್ಚು ಕಚೇರಿಗಳಿದ್ದು 150ಕ್ಕೂ ಹೆಚ್ಚು ಅಭ್ಯರ್ಥಿ ಆಕಾಂಕ್ಷಿಗಳು ಕೆಲಸ ಮಾಡುತ್ತಿದ್ದಾರೆ. ಮುಂದಿನ 45 ದಿನಗಳಲ್ಲಿ ಕೇಜ್ರಿವಾಲ್ ಆಡಳಿತ ಮಾದರಿಯನ್ನು ಬೆಂಗಳೂರಿನ ಪ್ರತಿ ಮನೆಗೂ ತಲುಪಿಸುವ ಗುರಿ ಹೊಂದಿದ್ದೇವೆ. ಅದೇ ಮಾದರಿಯಲ್ಲಿ ಜಿಲ್ಲೆಗಳಲ್ಲಿಯೂ ಕೆಲಸ ನಡೆಯುತ್ತದೆ. ಪಂಜಾಬ್ ಫಲಿತಾಂಶ ಈ ಕೆಲಸಕ್ಕೆ ಮತ್ತಷ್ಟು ಹುರುಪು ತುಂಬುತ್ತದೆ. ಗೋವಾದಲ್ಲಿ ಎರಡು ಕ್ಷೇತ್ರಗಳಲ್ಲಿ ಭಾರೀ ಅಂತರದಲ್ಲಿ ಆಪ್‌ನ ಹಿರಿಯ ಕಾರ್ಯಕರ್ತರು ಗೆಲುವು ಸಾಧಿಸಿದ್ದಾರೆ. ಇದು ಕೂಡ ನಮಗೆ ಸ್ಫೂರ್ತಿ ಎಂದು ಮೋಹನ್ ದಾಸರಿ ತಿಳಿಸಿದರು.

ಪರಿಶ್ರಮಕ್ಕೆ ಸಿಕ್ಕ ಫಲ

ದರ್ಶನ್ ಜೈನ್ ಮಾತನಾಡಿ “ನಾವು ಪಂಜಾಬ್‌ನಲ್ಲಿ ಐದು ವರ್ಷ ಸತತ ಪರಿಶ್ರಮ ಹಾಕಿದ್ದೇವೆ. 2017, 2018 ಮತ್ತು 2019ರ ಈ ಮೂರು ವರ್ಷಗಳಲ್ಲಿ ಬಹಳ ಕಷ್ಟಗಳನ್ನು ಎದುರಿಸಿದ್ದೇವೆ. ಏಕೆಂದರೆ ಕಳೆದ ಚುನಾವಣೆಯಲ್ಲಿ ಆಪ್ ಸೋತಿದ್ದು ಕೆಟ್ಟ ಪರಿಣಾಮ ಬೀರಿತ್ತು. 2019ರ ಲೋಕಸಭಾ ಚುನಾವಣೆಯಲ್ಲಿಯೂ ಸಹ ಆಪ್ ನಾಲ್ಕು ಸ್ಥಾನದಿಂದ ಒಂದು ಸ್ಥಾನಕ್ಕೆ ಇಳಿದಿತ್ತು. ಎಚ್.ಎಸ್ ಫುಲ್ಕ ಎಂಬುವವರು ಆಪ್ ತ್ಯಜಿಸಿದರು. ಉಪಚುನಾವಣೆಯಲ್ಲಿ ಆಪ್‌ಗೆ ಕೇವಲ 3500 ಮತಗಳು ಮಾತ್ರ ಬಿದ್ದಿದ್ದವು. ಆದರೆ ನಾವು ಧೃತಿಗೆಡಲಿಲ್ಲ. ಕೋವಿಡ್ ಸಾಂಕ್ರಾಮಿಕ, ರೈತ ಹೋರಾಟದ ಸಂದರ್ಭದಲ್ಲಿ ಜನರ ಹೋರಾಟದೊಂದಿಗೆ ನಿಂತವು. ನಾವು ನಮ್ಮ ತಪ್ಪುಗಳಿಂದ ಪಾಠ ಕಲಿತು ಪಕ್ಷದ ಕಾರ್ಯಕರ್ತರಿಗೆ, ಯುವಜನರಿಗೆ ಮತ್ತು ಮಹಿಳೆಯರಿಗೆ ಹೆಚ್ಚು ಟಿಕೆಟ್ ನೀಡಿದ್ದೆವು. ಈ ಎಲ್ಲಾ ಕೆಲಸಗಳಿಗೆ ಇಂದಿನ ಫಲಿತಾಂಶವೇ ಪ್ರತಿಫಲವಾಗಿದೆ” ಎಂದರು.

ದರ್ಶನ್ ಜೈನ್

ದೆಹಲಿಯಲ್ಲಿನ ಆಪ್ ಸರ್ಕಾರದ ಕೆಲಸಗಳನ್ನು ಪಕ್ಕದ ರಾಜ್ಯ ಪಂಜಾಬ್‌ನ ಜನ ಸಾಕ್ಷಾತ್ ಆಗಿ ನೋಡಿದ್ದರು. ಹಾಗಾಗಿ ಜನ ಕೈಹಿಡಿದಿದ್ದಾರೆ. ಪಂಜಾಬ್‌ ಜನರ ಆಶೋತ್ತರಗಳನ್ನು ಈಡೇರಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. ಕರ್ನಾಟಕ ಆಪ್ ರಾಜ್ಯಾಧ್ಯಕ್ಷರಾದ ಪೃಥ್ವಿರೆಡ್ಡಿಯವರು ಪಂಜಾಬ್ ಮತ್ತು ಗೋವಾ ಚುನಾವಣೆಯ ಉಸ್ತುವಾರಿಯಾಗಿ ಅನುಭವ ಗಳಿಸಿದ್ದಾರೆ. ಅದೇ ರೀತಿ ಸಾಕಷ್ಟು ಅನುಭವವಿರುವ ರೋಮಿ ಭಾಟಿಯವರು ಕರ್ನಾಟಕದ ವೀಕ್ಷಕರಾಗಿದ್ದಾರೆ. ಇವರ ನೇತೃತ್ವದಲ್ಲಿ ಬಿಬಿಎಂಪಿ ಚುನಾವಣೆಗೆ ಸಜ್ಜಾಗಿದ್ದೇವೆ ಎಂದರು.

ಕರ್ನಾಟಕದಲ್ಲಿ ಇತರ ಪಕ್ಷಗಳಲ್ಲಿಯೂ ಸಹ ಒಳ್ಳೆಯ ರಾಜಕಾರಣಿಗಳಿದ್ದಾರೆ. ಜನರಿಗೆ ಒಳ್ಳೆಯ ಕೆಲಸ ಮಾಡಬೇಕೆಂಬ ಹಂಬಲವಿರುವವರು ಬೇಕಿದ್ದಾರೆ. ಆದರೆ ಸೂಕ್ತ ವೇದಿಕೆ ಸಿಗದ ಕಾರಣ ಸಾಂಪ್ರಾದಾಯಿಕ ರಾಜಕೀಯ ಪಕ್ಷಗಳನ್ನು ಸೇರಿದ್ದಾರೆ. ಅಂತವರಿಗೆ ಆಪ್‌ ಮುಕ್ತ ಆಹ್ವಾನ ನೀಡುತ್ತದೆ. ಆದರೆ ಕೋಮುವಾದಿಗಳನ್ನು ನಾವು ಸೇರಿಸಿಕೊಳ್ಳುವುದಿಲ್ಲ. ಪಂಜಾಬ್‌ನಲ್ಲಾದಂತಹ ಬದಲಾವಣೆ ಕರ್ನಾಟಕದಲ್ಲಿಯೂ ಮಾಡುತ್ತೇವೆ ಎಂದು ದರ್ಶನ್ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ನಾವು ಬಿಜೆಪಿಗೆ ದೊಡ್ಡ ಶತ್ರುಗಳು- ಆಪ್ ಬಿಜೆಪಿ ಬಿ ಟೀಮ್ ಎಂಬುದು ಶುದ್ಧ ಸುಳ್ಳು  

ಇಂದು ದೇಶದಲ್ಲಿ ಬಿಜೆಪಿಗೆ ದೊಡ್ಡ ಶತ್ರುವೆಂದರೆ ಆಮ್‌ ಆದ್ಮಿ ಪಕ್ಷವಾಗಿದೆ. ನಾವು ಬಿಜೆಪಿಯನ್ನು ವಿರೋಧಿಸುವ ಮಟ್ಟಕ್ಕೆ ಬೇರೆ ಯಾವ ಪಕ್ಷಗಳು ಸಹ ವಿರೋಧಿಸುತ್ತಿಲ್ಲ. ಅದಕ್ಕೆ ಪಂಜಾಬ್ ಫಲಿತಾಂಶವೇ ತಕ್ಕ ಉತ್ತರವಾಗಿದೆ. ಅಮಿತ್ ಶಾ, ಮೋದಿ, ರಾಹುಲ್ ಗಾಂಧಿ, ಚರಣ್‌ಜಿತ್‌ ಚನ್ನಿ ಒಂದೇ ರೀತಿ ಮಾತನಾಡಿದ್ದರು. ಬಿಜೆಪಿಯ ರಾಷ್ಟ್ರೀಯ ವಕ್ತಾರ ಮುಕುಲ್ ಶರ್ಮಾನಂತಹವರು ಇಂದು ಬೆಳಿಗ್ಗೆ ಕಾಂಗ್ರೆಸ್ ಜಯಿಸಲಿ ಎಂದು ಟ್ವೀಟ್ ಮಾಡಿದ್ದರು. ಇದರಿಂದಲೇ ಅರ್ಥ ಮಾಡಿಕೊಳ್ಳಬೇಕು ಆಪ್ ಹೇಗೆ ಬಿಜೆಪಿ ವಿರೋಧಿಯಾಗಿದೆ ಎಂದು. ನಮ್ಮ ಮುಂದಿನ ಟಾರ್ಗೆಟ್ ಗುಜರಾತ್, ಹಿಮಾಚಲ ಪ್ರದೇಶ ಮತ್ತು ಕರ್ನಾಟಕ ಆಗಿದೆ. ಈ ಮೂರು ರಾಜ್ಯಗಳಲ್ಲಿ ಬಿಜೆಪಿಯೇ ಅಧಿಕಾರದಲ್ಲಿತ್ತು, ಅವರನ್ನು ಎದುರಿಸಲು ಸಿದ್ದರಾಗಿದ್ದೇವೆ. ಇಂತಹ ಪರಿಸ್ಥಿತಿಯಲ್ಲಿ ನಾವು ಬಿಜೆಪಿಯ ಬಿ ಟೀಮ್‌ ಎಂಬುದು ಆಧಾರ ರಹಿತ ಮತ್ತು ಶುದ್ಧ ಸುಳ್ಳು ಎಂದು ದರ್ಶನ್ ಜೈನ್ ವಿವರಿಸಿದರು.

ಗೋವಾದಲ್ಲಿ ಮೊದಲ ಬಾರಿಗೆ ಕನ್ನಡದಲ್ಲಿ ಕರಪತ್ರ ಪ್ರಿಂಟ್ ಮಾಡಿದ್ದು ಆಮ್ ಆದ್ಮಿ ಪಕ್ಷ. ಆ ರೀತಿಯ ಒಳಗೊಳ್ಳುವ ರಾಜಕಾರಣಕ್ಕೆ ಫಲ ಸಿಕ್ಕಿದ್ದು, ಎರಡು ಸ್ಥಾನ ಗೆದ್ದಿದ್ದೇವೆ. ಮುಂದೆ ಕರ್ನಾಟಕಕ್ಕೂ ಬರುತ್ತೇವೆ ಎಂದರು.


ಇದನ್ನೂ ಓದಿ: ಪಂಜಾಬ್‌: ಹಾಲಿ, ಮಾಜಿ ಸಿಎಂಗಳಿಗೆಲ್ಲ ಸೋಲಿನ ರುಚಿ ತೋರಿಸಿದ ಆಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....