Homeಮುಖಪುಟಪಂಜಾಬ್‌ನಲ್ಲಿ ಅಭೂತಪೂರ್ವ ಜಯ ದಾಖಲಿಸಿದ ಆಪ್: ಕರ್ನಾಟಕದ ಮುಖಂಡರ ಪ್ರತಿಕ್ರಿಯೆ ಹೀಗಿದೆ...

ಪಂಜಾಬ್‌ನಲ್ಲಿ ಅಭೂತಪೂರ್ವ ಜಯ ದಾಖಲಿಸಿದ ಆಪ್: ಕರ್ನಾಟಕದ ಮುಖಂಡರ ಪ್ರತಿಕ್ರಿಯೆ ಹೀಗಿದೆ…

ಬಿಜೆಪಿ ಅಧಿಕಾರದಲ್ಲಿರುವ ಗುಜರಾತ್, ಹಿಮಾಚಲ ಪ್ರದೇಶ ಮತ್ತು ಕರ್ನಾಟಕದ ಚುನಾವಣೆಗಳೆ ನಮ್ಮ ಮುಂದಿನ ಗುರಿ ಎನ್ನುತ್ತಾರೆ ಆಪ್ ಮುಖಂಡರಾದ ದರ್ಶನ್ ಜೈನ್

- Advertisement -
- Advertisement -

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಜಯ ದಾಖಲಿಸಿದೆ. ಒಟ್ಟು 117 ಕ್ಷೇತ್ರಗಳಲ್ಲಿ 92 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಪಾರಮ್ಯ ಸಾಧಿಸಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಅಭ್ಯರ್ಥಿ ಭಗವಂತ್ ಮನ್ ಜೋಡಿಗೆ ಪಂಜಾಬ್ ಜನ ಕೆಂಪುಹಾಸು ಹಾಕಿ ಸ್ವಾಗತಿಸಿದ್ದಾರೆ. ದೆಹಲಿಯಂತೆಯೇ ಭಾರೀ ಬಹುಮತದೊಂದಿಗೆ ಪಂಜಾಬ್‌ನಲ್ಲಿ ಅಧಿಕ್ಕಾರಕ್ಕೇರಲು ಆಪ್ ಸಜ್ಜಾಗಿದೆ. ಈ ಗೆಲುವಿಗೆ ಕಾರಣವೇನು? ಬಳಸಿದ ತಂತ್ರಗಳು ಯಾವುವು ಎಂಬುದರ ಕುರಿತು ನಾನುಗೌರಿ.ಕಾಂ ಕರ್ನಾಟಕದ ಆಪ್ ನಾಯಕರನ್ನು ಮಾತನಾಡಿಸಿತು. ಕೇಜ್ರಿವಾಲ್‌ರವರ ಆಡಳಿತ ಮತ್ತು ಪಂಜಾಬ್ ಕಾರ್ಯಕರ್ತರ ಪರಿಶ್ರಮವೇ ಆಪ್ ಅಧಿಕ್ಕಾರಕ್ಕೇರಲು ಕಾರಣ ಎಂದು ಆಪ್ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಮತ್ತು ಆಪ್ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್‌ ಜೈನ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಕೇಜ್ರಿವಾಲ್ ಮಾದರಿಯನ್ನು ಪಂಜಾಬ್ ಜನತೆ ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ. ಪಂಜಾಬ್‌ನಲ್ಲಿ ಜನ ನಮಗೆ ವೋಟ್ ಮಾಡಿಲ್ಲ, ಬದಲಿಗೆ ಪಂಜಾಬ್‌ನಲ್ಲಿಯೂ ಬದಲಾವಣೆ ತನ್ನಿ ಎಂದು ಒಂದು ಅವಕಾಶ ನೀಡಿದ್ದಾರೆ. ಇಷ್ಟು ದಿನದವರೆಗೆ ಪ್ರಾದೇಶಿಕ ಪಕ್ಷವಾಗಿದ್ದ ಆಪ್ ಇನ್ನು ಮುಂದೆ ಅಧಿಕೃತವಾಗಿ ರಾಷ್ಟ್ರೀಯ ಪಕ್ಷವಾಗಲಿದೆ. ಇಡೀ ದೇಶದಲ್ಲಿ ನಡೆಯಬೇಕಿರುವ ರಾಜಕೀಯ ಕ್ರಾಂತಿಗೆ ಇಂದು ಆಪ್ ಮುನ್ನುಡಿ ಬರೆದಿದೆ” ಎನ್ನುತ್ತಾರೆ ಮೋಹನ್ ದಾಸರಿ.

ಮೋಹನ್ ದಾಸರಿ

ದೆಹಲಿಯಲ್ಲಿ ನಮಗೆ ತುಂಬಾ ಅಡೆತಡೆಗಳಿದ್ದವು. ಏಕೆಂದರೆ ಅದು ಪೂರ್ಣ ಪ್ರಮಾಣದ ರಾಜ್ಯವಲ್ಲ. ಕಾನೂನು ಸುವ್ಯವಸ್ಥೆ ದೆಹಲಿ ಸರ್ಕಾರದ ಕೈಯಲ್ಲಿಲ್ಲ. ಭೂಮಿ ಮತ್ತು ಸಾರ್ವಜನಿಕ ನೀತಿಗಳು ದೆಹಲಿ ವ್ಯಾಪ್ತಿಯಲ್ಲಿರಲಿಲ್ಲ. ಏನೇ ಮಾಡಲು ಹೋದರೂ ಕೇಂದ್ರ ಸರ್ಕಾರ ಅಡಚಣೆ ಮಾಡುತ್ತಿತ್ತು. ಆದರೆ ಪಂಜಾಬ್‌ನಲ್ಲಿ ಬೃಹತ್ ಬಹುಮತದಿಂದ ಗೆದ್ದಿರುವುದರಿಂದ ದೇಶಕ್ಕೆ ಮಾದರಿ ರಾಜ್ಯ ಹೇಗಿರುತ್ತದೆ ಎಂಬುದನ್ನು ತೋರಿಸುತ್ತೇವೆ ಎಂದರು.

ಕೃಷಿ ಕ್ಷೇತ್ರದಲ್ಲಿ ಯಾವ ರೀತಿಯ ಕ್ರಾಂತಿಕಾರಕ ಬದಲಾವಣೆ ತರಬಹುದು ಎಂಬುದನ್ನು ನಾವು ಸಾಧಿಸಿ ತೋರಿಸುತ್ತೇವೆ. ಅದೇ ರೀತಿಯಲ್ಲಿ ದೇಶಕ್ಕೆ ಮಾದರಿಯಾದ ಕಾನೂನು ಸುವ್ಯವಸ್ಥೆ ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಗಳನ್ನು ಬಲಪಡಿಸುತ್ತೇವೆ. ಜನರಿಗೆ ಕಾನೂನು ಸುವ್ಯವಸ್ಥೆ ಹೇಗೆ ಇರಬೇಕೆಂದು ತೋರಿಸಿಕೊಡುತ್ತೇವೆ. ಜನರಿಗಾಗಿ ಕೆಲಸ ಮಾಡುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಎರಡು ವರ್ಷದಿಂದ ನಿರಂತರವಾಗಿ ಬಿಬಿಎಂಪಿ ಚುನಾವಣೆ ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. 50ಕ್ಕೂ ಹೆಚ್ಚು ಕಚೇರಿಗಳಿದ್ದು 150ಕ್ಕೂ ಹೆಚ್ಚು ಅಭ್ಯರ್ಥಿ ಆಕಾಂಕ್ಷಿಗಳು ಕೆಲಸ ಮಾಡುತ್ತಿದ್ದಾರೆ. ಮುಂದಿನ 45 ದಿನಗಳಲ್ಲಿ ಕೇಜ್ರಿವಾಲ್ ಆಡಳಿತ ಮಾದರಿಯನ್ನು ಬೆಂಗಳೂರಿನ ಪ್ರತಿ ಮನೆಗೂ ತಲುಪಿಸುವ ಗುರಿ ಹೊಂದಿದ್ದೇವೆ. ಅದೇ ಮಾದರಿಯಲ್ಲಿ ಜಿಲ್ಲೆಗಳಲ್ಲಿಯೂ ಕೆಲಸ ನಡೆಯುತ್ತದೆ. ಪಂಜಾಬ್ ಫಲಿತಾಂಶ ಈ ಕೆಲಸಕ್ಕೆ ಮತ್ತಷ್ಟು ಹುರುಪು ತುಂಬುತ್ತದೆ. ಗೋವಾದಲ್ಲಿ ಎರಡು ಕ್ಷೇತ್ರಗಳಲ್ಲಿ ಭಾರೀ ಅಂತರದಲ್ಲಿ ಆಪ್‌ನ ಹಿರಿಯ ಕಾರ್ಯಕರ್ತರು ಗೆಲುವು ಸಾಧಿಸಿದ್ದಾರೆ. ಇದು ಕೂಡ ನಮಗೆ ಸ್ಫೂರ್ತಿ ಎಂದು ಮೋಹನ್ ದಾಸರಿ ತಿಳಿಸಿದರು.

ಪರಿಶ್ರಮಕ್ಕೆ ಸಿಕ್ಕ ಫಲ

ದರ್ಶನ್ ಜೈನ್ ಮಾತನಾಡಿ “ನಾವು ಪಂಜಾಬ್‌ನಲ್ಲಿ ಐದು ವರ್ಷ ಸತತ ಪರಿಶ್ರಮ ಹಾಕಿದ್ದೇವೆ. 2017, 2018 ಮತ್ತು 2019ರ ಈ ಮೂರು ವರ್ಷಗಳಲ್ಲಿ ಬಹಳ ಕಷ್ಟಗಳನ್ನು ಎದುರಿಸಿದ್ದೇವೆ. ಏಕೆಂದರೆ ಕಳೆದ ಚುನಾವಣೆಯಲ್ಲಿ ಆಪ್ ಸೋತಿದ್ದು ಕೆಟ್ಟ ಪರಿಣಾಮ ಬೀರಿತ್ತು. 2019ರ ಲೋಕಸಭಾ ಚುನಾವಣೆಯಲ್ಲಿಯೂ ಸಹ ಆಪ್ ನಾಲ್ಕು ಸ್ಥಾನದಿಂದ ಒಂದು ಸ್ಥಾನಕ್ಕೆ ಇಳಿದಿತ್ತು. ಎಚ್.ಎಸ್ ಫುಲ್ಕ ಎಂಬುವವರು ಆಪ್ ತ್ಯಜಿಸಿದರು. ಉಪಚುನಾವಣೆಯಲ್ಲಿ ಆಪ್‌ಗೆ ಕೇವಲ 3500 ಮತಗಳು ಮಾತ್ರ ಬಿದ್ದಿದ್ದವು. ಆದರೆ ನಾವು ಧೃತಿಗೆಡಲಿಲ್ಲ. ಕೋವಿಡ್ ಸಾಂಕ್ರಾಮಿಕ, ರೈತ ಹೋರಾಟದ ಸಂದರ್ಭದಲ್ಲಿ ಜನರ ಹೋರಾಟದೊಂದಿಗೆ ನಿಂತವು. ನಾವು ನಮ್ಮ ತಪ್ಪುಗಳಿಂದ ಪಾಠ ಕಲಿತು ಪಕ್ಷದ ಕಾರ್ಯಕರ್ತರಿಗೆ, ಯುವಜನರಿಗೆ ಮತ್ತು ಮಹಿಳೆಯರಿಗೆ ಹೆಚ್ಚು ಟಿಕೆಟ್ ನೀಡಿದ್ದೆವು. ಈ ಎಲ್ಲಾ ಕೆಲಸಗಳಿಗೆ ಇಂದಿನ ಫಲಿತಾಂಶವೇ ಪ್ರತಿಫಲವಾಗಿದೆ” ಎಂದರು.

ದರ್ಶನ್ ಜೈನ್

ದೆಹಲಿಯಲ್ಲಿನ ಆಪ್ ಸರ್ಕಾರದ ಕೆಲಸಗಳನ್ನು ಪಕ್ಕದ ರಾಜ್ಯ ಪಂಜಾಬ್‌ನ ಜನ ಸಾಕ್ಷಾತ್ ಆಗಿ ನೋಡಿದ್ದರು. ಹಾಗಾಗಿ ಜನ ಕೈಹಿಡಿದಿದ್ದಾರೆ. ಪಂಜಾಬ್‌ ಜನರ ಆಶೋತ್ತರಗಳನ್ನು ಈಡೇರಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. ಕರ್ನಾಟಕ ಆಪ್ ರಾಜ್ಯಾಧ್ಯಕ್ಷರಾದ ಪೃಥ್ವಿರೆಡ್ಡಿಯವರು ಪಂಜಾಬ್ ಮತ್ತು ಗೋವಾ ಚುನಾವಣೆಯ ಉಸ್ತುವಾರಿಯಾಗಿ ಅನುಭವ ಗಳಿಸಿದ್ದಾರೆ. ಅದೇ ರೀತಿ ಸಾಕಷ್ಟು ಅನುಭವವಿರುವ ರೋಮಿ ಭಾಟಿಯವರು ಕರ್ನಾಟಕದ ವೀಕ್ಷಕರಾಗಿದ್ದಾರೆ. ಇವರ ನೇತೃತ್ವದಲ್ಲಿ ಬಿಬಿಎಂಪಿ ಚುನಾವಣೆಗೆ ಸಜ್ಜಾಗಿದ್ದೇವೆ ಎಂದರು.

ಕರ್ನಾಟಕದಲ್ಲಿ ಇತರ ಪಕ್ಷಗಳಲ್ಲಿಯೂ ಸಹ ಒಳ್ಳೆಯ ರಾಜಕಾರಣಿಗಳಿದ್ದಾರೆ. ಜನರಿಗೆ ಒಳ್ಳೆಯ ಕೆಲಸ ಮಾಡಬೇಕೆಂಬ ಹಂಬಲವಿರುವವರು ಬೇಕಿದ್ದಾರೆ. ಆದರೆ ಸೂಕ್ತ ವೇದಿಕೆ ಸಿಗದ ಕಾರಣ ಸಾಂಪ್ರಾದಾಯಿಕ ರಾಜಕೀಯ ಪಕ್ಷಗಳನ್ನು ಸೇರಿದ್ದಾರೆ. ಅಂತವರಿಗೆ ಆಪ್‌ ಮುಕ್ತ ಆಹ್ವಾನ ನೀಡುತ್ತದೆ. ಆದರೆ ಕೋಮುವಾದಿಗಳನ್ನು ನಾವು ಸೇರಿಸಿಕೊಳ್ಳುವುದಿಲ್ಲ. ಪಂಜಾಬ್‌ನಲ್ಲಾದಂತಹ ಬದಲಾವಣೆ ಕರ್ನಾಟಕದಲ್ಲಿಯೂ ಮಾಡುತ್ತೇವೆ ಎಂದು ದರ್ಶನ್ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ನಾವು ಬಿಜೆಪಿಗೆ ದೊಡ್ಡ ಶತ್ರುಗಳು- ಆಪ್ ಬಿಜೆಪಿ ಬಿ ಟೀಮ್ ಎಂಬುದು ಶುದ್ಧ ಸುಳ್ಳು  

ಇಂದು ದೇಶದಲ್ಲಿ ಬಿಜೆಪಿಗೆ ದೊಡ್ಡ ಶತ್ರುವೆಂದರೆ ಆಮ್‌ ಆದ್ಮಿ ಪಕ್ಷವಾಗಿದೆ. ನಾವು ಬಿಜೆಪಿಯನ್ನು ವಿರೋಧಿಸುವ ಮಟ್ಟಕ್ಕೆ ಬೇರೆ ಯಾವ ಪಕ್ಷಗಳು ಸಹ ವಿರೋಧಿಸುತ್ತಿಲ್ಲ. ಅದಕ್ಕೆ ಪಂಜಾಬ್ ಫಲಿತಾಂಶವೇ ತಕ್ಕ ಉತ್ತರವಾಗಿದೆ. ಅಮಿತ್ ಶಾ, ಮೋದಿ, ರಾಹುಲ್ ಗಾಂಧಿ, ಚರಣ್‌ಜಿತ್‌ ಚನ್ನಿ ಒಂದೇ ರೀತಿ ಮಾತನಾಡಿದ್ದರು. ಬಿಜೆಪಿಯ ರಾಷ್ಟ್ರೀಯ ವಕ್ತಾರ ಮುಕುಲ್ ಶರ್ಮಾನಂತಹವರು ಇಂದು ಬೆಳಿಗ್ಗೆ ಕಾಂಗ್ರೆಸ್ ಜಯಿಸಲಿ ಎಂದು ಟ್ವೀಟ್ ಮಾಡಿದ್ದರು. ಇದರಿಂದಲೇ ಅರ್ಥ ಮಾಡಿಕೊಳ್ಳಬೇಕು ಆಪ್ ಹೇಗೆ ಬಿಜೆಪಿ ವಿರೋಧಿಯಾಗಿದೆ ಎಂದು. ನಮ್ಮ ಮುಂದಿನ ಟಾರ್ಗೆಟ್ ಗುಜರಾತ್, ಹಿಮಾಚಲ ಪ್ರದೇಶ ಮತ್ತು ಕರ್ನಾಟಕ ಆಗಿದೆ. ಈ ಮೂರು ರಾಜ್ಯಗಳಲ್ಲಿ ಬಿಜೆಪಿಯೇ ಅಧಿಕಾರದಲ್ಲಿತ್ತು, ಅವರನ್ನು ಎದುರಿಸಲು ಸಿದ್ದರಾಗಿದ್ದೇವೆ. ಇಂತಹ ಪರಿಸ್ಥಿತಿಯಲ್ಲಿ ನಾವು ಬಿಜೆಪಿಯ ಬಿ ಟೀಮ್‌ ಎಂಬುದು ಆಧಾರ ರಹಿತ ಮತ್ತು ಶುದ್ಧ ಸುಳ್ಳು ಎಂದು ದರ್ಶನ್ ಜೈನ್ ವಿವರಿಸಿದರು.

ಗೋವಾದಲ್ಲಿ ಮೊದಲ ಬಾರಿಗೆ ಕನ್ನಡದಲ್ಲಿ ಕರಪತ್ರ ಪ್ರಿಂಟ್ ಮಾಡಿದ್ದು ಆಮ್ ಆದ್ಮಿ ಪಕ್ಷ. ಆ ರೀತಿಯ ಒಳಗೊಳ್ಳುವ ರಾಜಕಾರಣಕ್ಕೆ ಫಲ ಸಿಕ್ಕಿದ್ದು, ಎರಡು ಸ್ಥಾನ ಗೆದ್ದಿದ್ದೇವೆ. ಮುಂದೆ ಕರ್ನಾಟಕಕ್ಕೂ ಬರುತ್ತೇವೆ ಎಂದರು.


ಇದನ್ನೂ ಓದಿ: ಪಂಜಾಬ್‌: ಹಾಲಿ, ಮಾಜಿ ಸಿಎಂಗಳಿಗೆಲ್ಲ ಸೋಲಿನ ರುಚಿ ತೋರಿಸಿದ ಆಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...