Homeಮುಖಪುಟಪಂಜಾಬ್‌ನಲ್ಲಿ ಅಭೂತಪೂರ್ವ ಜಯ ದಾಖಲಿಸಿದ ಆಪ್: ಕರ್ನಾಟಕದ ಮುಖಂಡರ ಪ್ರತಿಕ್ರಿಯೆ ಹೀಗಿದೆ...

ಪಂಜಾಬ್‌ನಲ್ಲಿ ಅಭೂತಪೂರ್ವ ಜಯ ದಾಖಲಿಸಿದ ಆಪ್: ಕರ್ನಾಟಕದ ಮುಖಂಡರ ಪ್ರತಿಕ್ರಿಯೆ ಹೀಗಿದೆ…

ಬಿಜೆಪಿ ಅಧಿಕಾರದಲ್ಲಿರುವ ಗುಜರಾತ್, ಹಿಮಾಚಲ ಪ್ರದೇಶ ಮತ್ತು ಕರ್ನಾಟಕದ ಚುನಾವಣೆಗಳೆ ನಮ್ಮ ಮುಂದಿನ ಗುರಿ ಎನ್ನುತ್ತಾರೆ ಆಪ್ ಮುಖಂಡರಾದ ದರ್ಶನ್ ಜೈನ್

- Advertisement -
- Advertisement -

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಜಯ ದಾಖಲಿಸಿದೆ. ಒಟ್ಟು 117 ಕ್ಷೇತ್ರಗಳಲ್ಲಿ 92 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಪಾರಮ್ಯ ಸಾಧಿಸಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಅಭ್ಯರ್ಥಿ ಭಗವಂತ್ ಮನ್ ಜೋಡಿಗೆ ಪಂಜಾಬ್ ಜನ ಕೆಂಪುಹಾಸು ಹಾಕಿ ಸ್ವಾಗತಿಸಿದ್ದಾರೆ. ದೆಹಲಿಯಂತೆಯೇ ಭಾರೀ ಬಹುಮತದೊಂದಿಗೆ ಪಂಜಾಬ್‌ನಲ್ಲಿ ಅಧಿಕ್ಕಾರಕ್ಕೇರಲು ಆಪ್ ಸಜ್ಜಾಗಿದೆ. ಈ ಗೆಲುವಿಗೆ ಕಾರಣವೇನು? ಬಳಸಿದ ತಂತ್ರಗಳು ಯಾವುವು ಎಂಬುದರ ಕುರಿತು ನಾನುಗೌರಿ.ಕಾಂ ಕರ್ನಾಟಕದ ಆಪ್ ನಾಯಕರನ್ನು ಮಾತನಾಡಿಸಿತು. ಕೇಜ್ರಿವಾಲ್‌ರವರ ಆಡಳಿತ ಮತ್ತು ಪಂಜಾಬ್ ಕಾರ್ಯಕರ್ತರ ಪರಿಶ್ರಮವೇ ಆಪ್ ಅಧಿಕ್ಕಾರಕ್ಕೇರಲು ಕಾರಣ ಎಂದು ಆಪ್ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಮತ್ತು ಆಪ್ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್‌ ಜೈನ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಕೇಜ್ರಿವಾಲ್ ಮಾದರಿಯನ್ನು ಪಂಜಾಬ್ ಜನತೆ ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ. ಪಂಜಾಬ್‌ನಲ್ಲಿ ಜನ ನಮಗೆ ವೋಟ್ ಮಾಡಿಲ್ಲ, ಬದಲಿಗೆ ಪಂಜಾಬ್‌ನಲ್ಲಿಯೂ ಬದಲಾವಣೆ ತನ್ನಿ ಎಂದು ಒಂದು ಅವಕಾಶ ನೀಡಿದ್ದಾರೆ. ಇಷ್ಟು ದಿನದವರೆಗೆ ಪ್ರಾದೇಶಿಕ ಪಕ್ಷವಾಗಿದ್ದ ಆಪ್ ಇನ್ನು ಮುಂದೆ ಅಧಿಕೃತವಾಗಿ ರಾಷ್ಟ್ರೀಯ ಪಕ್ಷವಾಗಲಿದೆ. ಇಡೀ ದೇಶದಲ್ಲಿ ನಡೆಯಬೇಕಿರುವ ರಾಜಕೀಯ ಕ್ರಾಂತಿಗೆ ಇಂದು ಆಪ್ ಮುನ್ನುಡಿ ಬರೆದಿದೆ” ಎನ್ನುತ್ತಾರೆ ಮೋಹನ್ ದಾಸರಿ.

ಮೋಹನ್ ದಾಸರಿ

ದೆಹಲಿಯಲ್ಲಿ ನಮಗೆ ತುಂಬಾ ಅಡೆತಡೆಗಳಿದ್ದವು. ಏಕೆಂದರೆ ಅದು ಪೂರ್ಣ ಪ್ರಮಾಣದ ರಾಜ್ಯವಲ್ಲ. ಕಾನೂನು ಸುವ್ಯವಸ್ಥೆ ದೆಹಲಿ ಸರ್ಕಾರದ ಕೈಯಲ್ಲಿಲ್ಲ. ಭೂಮಿ ಮತ್ತು ಸಾರ್ವಜನಿಕ ನೀತಿಗಳು ದೆಹಲಿ ವ್ಯಾಪ್ತಿಯಲ್ಲಿರಲಿಲ್ಲ. ಏನೇ ಮಾಡಲು ಹೋದರೂ ಕೇಂದ್ರ ಸರ್ಕಾರ ಅಡಚಣೆ ಮಾಡುತ್ತಿತ್ತು. ಆದರೆ ಪಂಜಾಬ್‌ನಲ್ಲಿ ಬೃಹತ್ ಬಹುಮತದಿಂದ ಗೆದ್ದಿರುವುದರಿಂದ ದೇಶಕ್ಕೆ ಮಾದರಿ ರಾಜ್ಯ ಹೇಗಿರುತ್ತದೆ ಎಂಬುದನ್ನು ತೋರಿಸುತ್ತೇವೆ ಎಂದರು.

ಕೃಷಿ ಕ್ಷೇತ್ರದಲ್ಲಿ ಯಾವ ರೀತಿಯ ಕ್ರಾಂತಿಕಾರಕ ಬದಲಾವಣೆ ತರಬಹುದು ಎಂಬುದನ್ನು ನಾವು ಸಾಧಿಸಿ ತೋರಿಸುತ್ತೇವೆ. ಅದೇ ರೀತಿಯಲ್ಲಿ ದೇಶಕ್ಕೆ ಮಾದರಿಯಾದ ಕಾನೂನು ಸುವ್ಯವಸ್ಥೆ ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಗಳನ್ನು ಬಲಪಡಿಸುತ್ತೇವೆ. ಜನರಿಗೆ ಕಾನೂನು ಸುವ್ಯವಸ್ಥೆ ಹೇಗೆ ಇರಬೇಕೆಂದು ತೋರಿಸಿಕೊಡುತ್ತೇವೆ. ಜನರಿಗಾಗಿ ಕೆಲಸ ಮಾಡುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಎರಡು ವರ್ಷದಿಂದ ನಿರಂತರವಾಗಿ ಬಿಬಿಎಂಪಿ ಚುನಾವಣೆ ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. 50ಕ್ಕೂ ಹೆಚ್ಚು ಕಚೇರಿಗಳಿದ್ದು 150ಕ್ಕೂ ಹೆಚ್ಚು ಅಭ್ಯರ್ಥಿ ಆಕಾಂಕ್ಷಿಗಳು ಕೆಲಸ ಮಾಡುತ್ತಿದ್ದಾರೆ. ಮುಂದಿನ 45 ದಿನಗಳಲ್ಲಿ ಕೇಜ್ರಿವಾಲ್ ಆಡಳಿತ ಮಾದರಿಯನ್ನು ಬೆಂಗಳೂರಿನ ಪ್ರತಿ ಮನೆಗೂ ತಲುಪಿಸುವ ಗುರಿ ಹೊಂದಿದ್ದೇವೆ. ಅದೇ ಮಾದರಿಯಲ್ಲಿ ಜಿಲ್ಲೆಗಳಲ್ಲಿಯೂ ಕೆಲಸ ನಡೆಯುತ್ತದೆ. ಪಂಜಾಬ್ ಫಲಿತಾಂಶ ಈ ಕೆಲಸಕ್ಕೆ ಮತ್ತಷ್ಟು ಹುರುಪು ತುಂಬುತ್ತದೆ. ಗೋವಾದಲ್ಲಿ ಎರಡು ಕ್ಷೇತ್ರಗಳಲ್ಲಿ ಭಾರೀ ಅಂತರದಲ್ಲಿ ಆಪ್‌ನ ಹಿರಿಯ ಕಾರ್ಯಕರ್ತರು ಗೆಲುವು ಸಾಧಿಸಿದ್ದಾರೆ. ಇದು ಕೂಡ ನಮಗೆ ಸ್ಫೂರ್ತಿ ಎಂದು ಮೋಹನ್ ದಾಸರಿ ತಿಳಿಸಿದರು.

ಪರಿಶ್ರಮಕ್ಕೆ ಸಿಕ್ಕ ಫಲ

ದರ್ಶನ್ ಜೈನ್ ಮಾತನಾಡಿ “ನಾವು ಪಂಜಾಬ್‌ನಲ್ಲಿ ಐದು ವರ್ಷ ಸತತ ಪರಿಶ್ರಮ ಹಾಕಿದ್ದೇವೆ. 2017, 2018 ಮತ್ತು 2019ರ ಈ ಮೂರು ವರ್ಷಗಳಲ್ಲಿ ಬಹಳ ಕಷ್ಟಗಳನ್ನು ಎದುರಿಸಿದ್ದೇವೆ. ಏಕೆಂದರೆ ಕಳೆದ ಚುನಾವಣೆಯಲ್ಲಿ ಆಪ್ ಸೋತಿದ್ದು ಕೆಟ್ಟ ಪರಿಣಾಮ ಬೀರಿತ್ತು. 2019ರ ಲೋಕಸಭಾ ಚುನಾವಣೆಯಲ್ಲಿಯೂ ಸಹ ಆಪ್ ನಾಲ್ಕು ಸ್ಥಾನದಿಂದ ಒಂದು ಸ್ಥಾನಕ್ಕೆ ಇಳಿದಿತ್ತು. ಎಚ್.ಎಸ್ ಫುಲ್ಕ ಎಂಬುವವರು ಆಪ್ ತ್ಯಜಿಸಿದರು. ಉಪಚುನಾವಣೆಯಲ್ಲಿ ಆಪ್‌ಗೆ ಕೇವಲ 3500 ಮತಗಳು ಮಾತ್ರ ಬಿದ್ದಿದ್ದವು. ಆದರೆ ನಾವು ಧೃತಿಗೆಡಲಿಲ್ಲ. ಕೋವಿಡ್ ಸಾಂಕ್ರಾಮಿಕ, ರೈತ ಹೋರಾಟದ ಸಂದರ್ಭದಲ್ಲಿ ಜನರ ಹೋರಾಟದೊಂದಿಗೆ ನಿಂತವು. ನಾವು ನಮ್ಮ ತಪ್ಪುಗಳಿಂದ ಪಾಠ ಕಲಿತು ಪಕ್ಷದ ಕಾರ್ಯಕರ್ತರಿಗೆ, ಯುವಜನರಿಗೆ ಮತ್ತು ಮಹಿಳೆಯರಿಗೆ ಹೆಚ್ಚು ಟಿಕೆಟ್ ನೀಡಿದ್ದೆವು. ಈ ಎಲ್ಲಾ ಕೆಲಸಗಳಿಗೆ ಇಂದಿನ ಫಲಿತಾಂಶವೇ ಪ್ರತಿಫಲವಾಗಿದೆ” ಎಂದರು.

ದರ್ಶನ್ ಜೈನ್

ದೆಹಲಿಯಲ್ಲಿನ ಆಪ್ ಸರ್ಕಾರದ ಕೆಲಸಗಳನ್ನು ಪಕ್ಕದ ರಾಜ್ಯ ಪಂಜಾಬ್‌ನ ಜನ ಸಾಕ್ಷಾತ್ ಆಗಿ ನೋಡಿದ್ದರು. ಹಾಗಾಗಿ ಜನ ಕೈಹಿಡಿದಿದ್ದಾರೆ. ಪಂಜಾಬ್‌ ಜನರ ಆಶೋತ್ತರಗಳನ್ನು ಈಡೇರಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. ಕರ್ನಾಟಕ ಆಪ್ ರಾಜ್ಯಾಧ್ಯಕ್ಷರಾದ ಪೃಥ್ವಿರೆಡ್ಡಿಯವರು ಪಂಜಾಬ್ ಮತ್ತು ಗೋವಾ ಚುನಾವಣೆಯ ಉಸ್ತುವಾರಿಯಾಗಿ ಅನುಭವ ಗಳಿಸಿದ್ದಾರೆ. ಅದೇ ರೀತಿ ಸಾಕಷ್ಟು ಅನುಭವವಿರುವ ರೋಮಿ ಭಾಟಿಯವರು ಕರ್ನಾಟಕದ ವೀಕ್ಷಕರಾಗಿದ್ದಾರೆ. ಇವರ ನೇತೃತ್ವದಲ್ಲಿ ಬಿಬಿಎಂಪಿ ಚುನಾವಣೆಗೆ ಸಜ್ಜಾಗಿದ್ದೇವೆ ಎಂದರು.

ಕರ್ನಾಟಕದಲ್ಲಿ ಇತರ ಪಕ್ಷಗಳಲ್ಲಿಯೂ ಸಹ ಒಳ್ಳೆಯ ರಾಜಕಾರಣಿಗಳಿದ್ದಾರೆ. ಜನರಿಗೆ ಒಳ್ಳೆಯ ಕೆಲಸ ಮಾಡಬೇಕೆಂಬ ಹಂಬಲವಿರುವವರು ಬೇಕಿದ್ದಾರೆ. ಆದರೆ ಸೂಕ್ತ ವೇದಿಕೆ ಸಿಗದ ಕಾರಣ ಸಾಂಪ್ರಾದಾಯಿಕ ರಾಜಕೀಯ ಪಕ್ಷಗಳನ್ನು ಸೇರಿದ್ದಾರೆ. ಅಂತವರಿಗೆ ಆಪ್‌ ಮುಕ್ತ ಆಹ್ವಾನ ನೀಡುತ್ತದೆ. ಆದರೆ ಕೋಮುವಾದಿಗಳನ್ನು ನಾವು ಸೇರಿಸಿಕೊಳ್ಳುವುದಿಲ್ಲ. ಪಂಜಾಬ್‌ನಲ್ಲಾದಂತಹ ಬದಲಾವಣೆ ಕರ್ನಾಟಕದಲ್ಲಿಯೂ ಮಾಡುತ್ತೇವೆ ಎಂದು ದರ್ಶನ್ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ನಾವು ಬಿಜೆಪಿಗೆ ದೊಡ್ಡ ಶತ್ರುಗಳು- ಆಪ್ ಬಿಜೆಪಿ ಬಿ ಟೀಮ್ ಎಂಬುದು ಶುದ್ಧ ಸುಳ್ಳು  

ಇಂದು ದೇಶದಲ್ಲಿ ಬಿಜೆಪಿಗೆ ದೊಡ್ಡ ಶತ್ರುವೆಂದರೆ ಆಮ್‌ ಆದ್ಮಿ ಪಕ್ಷವಾಗಿದೆ. ನಾವು ಬಿಜೆಪಿಯನ್ನು ವಿರೋಧಿಸುವ ಮಟ್ಟಕ್ಕೆ ಬೇರೆ ಯಾವ ಪಕ್ಷಗಳು ಸಹ ವಿರೋಧಿಸುತ್ತಿಲ್ಲ. ಅದಕ್ಕೆ ಪಂಜಾಬ್ ಫಲಿತಾಂಶವೇ ತಕ್ಕ ಉತ್ತರವಾಗಿದೆ. ಅಮಿತ್ ಶಾ, ಮೋದಿ, ರಾಹುಲ್ ಗಾಂಧಿ, ಚರಣ್‌ಜಿತ್‌ ಚನ್ನಿ ಒಂದೇ ರೀತಿ ಮಾತನಾಡಿದ್ದರು. ಬಿಜೆಪಿಯ ರಾಷ್ಟ್ರೀಯ ವಕ್ತಾರ ಮುಕುಲ್ ಶರ್ಮಾನಂತಹವರು ಇಂದು ಬೆಳಿಗ್ಗೆ ಕಾಂಗ್ರೆಸ್ ಜಯಿಸಲಿ ಎಂದು ಟ್ವೀಟ್ ಮಾಡಿದ್ದರು. ಇದರಿಂದಲೇ ಅರ್ಥ ಮಾಡಿಕೊಳ್ಳಬೇಕು ಆಪ್ ಹೇಗೆ ಬಿಜೆಪಿ ವಿರೋಧಿಯಾಗಿದೆ ಎಂದು. ನಮ್ಮ ಮುಂದಿನ ಟಾರ್ಗೆಟ್ ಗುಜರಾತ್, ಹಿಮಾಚಲ ಪ್ರದೇಶ ಮತ್ತು ಕರ್ನಾಟಕ ಆಗಿದೆ. ಈ ಮೂರು ರಾಜ್ಯಗಳಲ್ಲಿ ಬಿಜೆಪಿಯೇ ಅಧಿಕಾರದಲ್ಲಿತ್ತು, ಅವರನ್ನು ಎದುರಿಸಲು ಸಿದ್ದರಾಗಿದ್ದೇವೆ. ಇಂತಹ ಪರಿಸ್ಥಿತಿಯಲ್ಲಿ ನಾವು ಬಿಜೆಪಿಯ ಬಿ ಟೀಮ್‌ ಎಂಬುದು ಆಧಾರ ರಹಿತ ಮತ್ತು ಶುದ್ಧ ಸುಳ್ಳು ಎಂದು ದರ್ಶನ್ ಜೈನ್ ವಿವರಿಸಿದರು.

ಗೋವಾದಲ್ಲಿ ಮೊದಲ ಬಾರಿಗೆ ಕನ್ನಡದಲ್ಲಿ ಕರಪತ್ರ ಪ್ರಿಂಟ್ ಮಾಡಿದ್ದು ಆಮ್ ಆದ್ಮಿ ಪಕ್ಷ. ಆ ರೀತಿಯ ಒಳಗೊಳ್ಳುವ ರಾಜಕಾರಣಕ್ಕೆ ಫಲ ಸಿಕ್ಕಿದ್ದು, ಎರಡು ಸ್ಥಾನ ಗೆದ್ದಿದ್ದೇವೆ. ಮುಂದೆ ಕರ್ನಾಟಕಕ್ಕೂ ಬರುತ್ತೇವೆ ಎಂದರು.


ಇದನ್ನೂ ಓದಿ: ಪಂಜಾಬ್‌: ಹಾಲಿ, ಮಾಜಿ ಸಿಎಂಗಳಿಗೆಲ್ಲ ಸೋಲಿನ ರುಚಿ ತೋರಿಸಿದ ಆಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...