Homeಮುಖಪುಟಪಂಜಾಬ್‌ನಲ್ಲಿ ಅಭೂತಪೂರ್ವ ಜಯ ದಾಖಲಿಸಿದ ಆಪ್: ಕರ್ನಾಟಕದ ಮುಖಂಡರ ಪ್ರತಿಕ್ರಿಯೆ ಹೀಗಿದೆ...

ಪಂಜಾಬ್‌ನಲ್ಲಿ ಅಭೂತಪೂರ್ವ ಜಯ ದಾಖಲಿಸಿದ ಆಪ್: ಕರ್ನಾಟಕದ ಮುಖಂಡರ ಪ್ರತಿಕ್ರಿಯೆ ಹೀಗಿದೆ…

ಬಿಜೆಪಿ ಅಧಿಕಾರದಲ್ಲಿರುವ ಗುಜರಾತ್, ಹಿಮಾಚಲ ಪ್ರದೇಶ ಮತ್ತು ಕರ್ನಾಟಕದ ಚುನಾವಣೆಗಳೆ ನಮ್ಮ ಮುಂದಿನ ಗುರಿ ಎನ್ನುತ್ತಾರೆ ಆಪ್ ಮುಖಂಡರಾದ ದರ್ಶನ್ ಜೈನ್

- Advertisement -
- Advertisement -

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಜಯ ದಾಖಲಿಸಿದೆ. ಒಟ್ಟು 117 ಕ್ಷೇತ್ರಗಳಲ್ಲಿ 92 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಪಾರಮ್ಯ ಸಾಧಿಸಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಅಭ್ಯರ್ಥಿ ಭಗವಂತ್ ಮನ್ ಜೋಡಿಗೆ ಪಂಜಾಬ್ ಜನ ಕೆಂಪುಹಾಸು ಹಾಕಿ ಸ್ವಾಗತಿಸಿದ್ದಾರೆ. ದೆಹಲಿಯಂತೆಯೇ ಭಾರೀ ಬಹುಮತದೊಂದಿಗೆ ಪಂಜಾಬ್‌ನಲ್ಲಿ ಅಧಿಕ್ಕಾರಕ್ಕೇರಲು ಆಪ್ ಸಜ್ಜಾಗಿದೆ. ಈ ಗೆಲುವಿಗೆ ಕಾರಣವೇನು? ಬಳಸಿದ ತಂತ್ರಗಳು ಯಾವುವು ಎಂಬುದರ ಕುರಿತು ನಾನುಗೌರಿ.ಕಾಂ ಕರ್ನಾಟಕದ ಆಪ್ ನಾಯಕರನ್ನು ಮಾತನಾಡಿಸಿತು. ಕೇಜ್ರಿವಾಲ್‌ರವರ ಆಡಳಿತ ಮತ್ತು ಪಂಜಾಬ್ ಕಾರ್ಯಕರ್ತರ ಪರಿಶ್ರಮವೇ ಆಪ್ ಅಧಿಕ್ಕಾರಕ್ಕೇರಲು ಕಾರಣ ಎಂದು ಆಪ್ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಮತ್ತು ಆಪ್ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್‌ ಜೈನ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಕೇಜ್ರಿವಾಲ್ ಮಾದರಿಯನ್ನು ಪಂಜಾಬ್ ಜನತೆ ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ. ಪಂಜಾಬ್‌ನಲ್ಲಿ ಜನ ನಮಗೆ ವೋಟ್ ಮಾಡಿಲ್ಲ, ಬದಲಿಗೆ ಪಂಜಾಬ್‌ನಲ್ಲಿಯೂ ಬದಲಾವಣೆ ತನ್ನಿ ಎಂದು ಒಂದು ಅವಕಾಶ ನೀಡಿದ್ದಾರೆ. ಇಷ್ಟು ದಿನದವರೆಗೆ ಪ್ರಾದೇಶಿಕ ಪಕ್ಷವಾಗಿದ್ದ ಆಪ್ ಇನ್ನು ಮುಂದೆ ಅಧಿಕೃತವಾಗಿ ರಾಷ್ಟ್ರೀಯ ಪಕ್ಷವಾಗಲಿದೆ. ಇಡೀ ದೇಶದಲ್ಲಿ ನಡೆಯಬೇಕಿರುವ ರಾಜಕೀಯ ಕ್ರಾಂತಿಗೆ ಇಂದು ಆಪ್ ಮುನ್ನುಡಿ ಬರೆದಿದೆ” ಎನ್ನುತ್ತಾರೆ ಮೋಹನ್ ದಾಸರಿ.

ಮೋಹನ್ ದಾಸರಿ

ದೆಹಲಿಯಲ್ಲಿ ನಮಗೆ ತುಂಬಾ ಅಡೆತಡೆಗಳಿದ್ದವು. ಏಕೆಂದರೆ ಅದು ಪೂರ್ಣ ಪ್ರಮಾಣದ ರಾಜ್ಯವಲ್ಲ. ಕಾನೂನು ಸುವ್ಯವಸ್ಥೆ ದೆಹಲಿ ಸರ್ಕಾರದ ಕೈಯಲ್ಲಿಲ್ಲ. ಭೂಮಿ ಮತ್ತು ಸಾರ್ವಜನಿಕ ನೀತಿಗಳು ದೆಹಲಿ ವ್ಯಾಪ್ತಿಯಲ್ಲಿರಲಿಲ್ಲ. ಏನೇ ಮಾಡಲು ಹೋದರೂ ಕೇಂದ್ರ ಸರ್ಕಾರ ಅಡಚಣೆ ಮಾಡುತ್ತಿತ್ತು. ಆದರೆ ಪಂಜಾಬ್‌ನಲ್ಲಿ ಬೃಹತ್ ಬಹುಮತದಿಂದ ಗೆದ್ದಿರುವುದರಿಂದ ದೇಶಕ್ಕೆ ಮಾದರಿ ರಾಜ್ಯ ಹೇಗಿರುತ್ತದೆ ಎಂಬುದನ್ನು ತೋರಿಸುತ್ತೇವೆ ಎಂದರು.

ಕೃಷಿ ಕ್ಷೇತ್ರದಲ್ಲಿ ಯಾವ ರೀತಿಯ ಕ್ರಾಂತಿಕಾರಕ ಬದಲಾವಣೆ ತರಬಹುದು ಎಂಬುದನ್ನು ನಾವು ಸಾಧಿಸಿ ತೋರಿಸುತ್ತೇವೆ. ಅದೇ ರೀತಿಯಲ್ಲಿ ದೇಶಕ್ಕೆ ಮಾದರಿಯಾದ ಕಾನೂನು ಸುವ್ಯವಸ್ಥೆ ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಗಳನ್ನು ಬಲಪಡಿಸುತ್ತೇವೆ. ಜನರಿಗೆ ಕಾನೂನು ಸುವ್ಯವಸ್ಥೆ ಹೇಗೆ ಇರಬೇಕೆಂದು ತೋರಿಸಿಕೊಡುತ್ತೇವೆ. ಜನರಿಗಾಗಿ ಕೆಲಸ ಮಾಡುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಎರಡು ವರ್ಷದಿಂದ ನಿರಂತರವಾಗಿ ಬಿಬಿಎಂಪಿ ಚುನಾವಣೆ ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. 50ಕ್ಕೂ ಹೆಚ್ಚು ಕಚೇರಿಗಳಿದ್ದು 150ಕ್ಕೂ ಹೆಚ್ಚು ಅಭ್ಯರ್ಥಿ ಆಕಾಂಕ್ಷಿಗಳು ಕೆಲಸ ಮಾಡುತ್ತಿದ್ದಾರೆ. ಮುಂದಿನ 45 ದಿನಗಳಲ್ಲಿ ಕೇಜ್ರಿವಾಲ್ ಆಡಳಿತ ಮಾದರಿಯನ್ನು ಬೆಂಗಳೂರಿನ ಪ್ರತಿ ಮನೆಗೂ ತಲುಪಿಸುವ ಗುರಿ ಹೊಂದಿದ್ದೇವೆ. ಅದೇ ಮಾದರಿಯಲ್ಲಿ ಜಿಲ್ಲೆಗಳಲ್ಲಿಯೂ ಕೆಲಸ ನಡೆಯುತ್ತದೆ. ಪಂಜಾಬ್ ಫಲಿತಾಂಶ ಈ ಕೆಲಸಕ್ಕೆ ಮತ್ತಷ್ಟು ಹುರುಪು ತುಂಬುತ್ತದೆ. ಗೋವಾದಲ್ಲಿ ಎರಡು ಕ್ಷೇತ್ರಗಳಲ್ಲಿ ಭಾರೀ ಅಂತರದಲ್ಲಿ ಆಪ್‌ನ ಹಿರಿಯ ಕಾರ್ಯಕರ್ತರು ಗೆಲುವು ಸಾಧಿಸಿದ್ದಾರೆ. ಇದು ಕೂಡ ನಮಗೆ ಸ್ಫೂರ್ತಿ ಎಂದು ಮೋಹನ್ ದಾಸರಿ ತಿಳಿಸಿದರು.

ಪರಿಶ್ರಮಕ್ಕೆ ಸಿಕ್ಕ ಫಲ

ದರ್ಶನ್ ಜೈನ್ ಮಾತನಾಡಿ “ನಾವು ಪಂಜಾಬ್‌ನಲ್ಲಿ ಐದು ವರ್ಷ ಸತತ ಪರಿಶ್ರಮ ಹಾಕಿದ್ದೇವೆ. 2017, 2018 ಮತ್ತು 2019ರ ಈ ಮೂರು ವರ್ಷಗಳಲ್ಲಿ ಬಹಳ ಕಷ್ಟಗಳನ್ನು ಎದುರಿಸಿದ್ದೇವೆ. ಏಕೆಂದರೆ ಕಳೆದ ಚುನಾವಣೆಯಲ್ಲಿ ಆಪ್ ಸೋತಿದ್ದು ಕೆಟ್ಟ ಪರಿಣಾಮ ಬೀರಿತ್ತು. 2019ರ ಲೋಕಸಭಾ ಚುನಾವಣೆಯಲ್ಲಿಯೂ ಸಹ ಆಪ್ ನಾಲ್ಕು ಸ್ಥಾನದಿಂದ ಒಂದು ಸ್ಥಾನಕ್ಕೆ ಇಳಿದಿತ್ತು. ಎಚ್.ಎಸ್ ಫುಲ್ಕ ಎಂಬುವವರು ಆಪ್ ತ್ಯಜಿಸಿದರು. ಉಪಚುನಾವಣೆಯಲ್ಲಿ ಆಪ್‌ಗೆ ಕೇವಲ 3500 ಮತಗಳು ಮಾತ್ರ ಬಿದ್ದಿದ್ದವು. ಆದರೆ ನಾವು ಧೃತಿಗೆಡಲಿಲ್ಲ. ಕೋವಿಡ್ ಸಾಂಕ್ರಾಮಿಕ, ರೈತ ಹೋರಾಟದ ಸಂದರ್ಭದಲ್ಲಿ ಜನರ ಹೋರಾಟದೊಂದಿಗೆ ನಿಂತವು. ನಾವು ನಮ್ಮ ತಪ್ಪುಗಳಿಂದ ಪಾಠ ಕಲಿತು ಪಕ್ಷದ ಕಾರ್ಯಕರ್ತರಿಗೆ, ಯುವಜನರಿಗೆ ಮತ್ತು ಮಹಿಳೆಯರಿಗೆ ಹೆಚ್ಚು ಟಿಕೆಟ್ ನೀಡಿದ್ದೆವು. ಈ ಎಲ್ಲಾ ಕೆಲಸಗಳಿಗೆ ಇಂದಿನ ಫಲಿತಾಂಶವೇ ಪ್ರತಿಫಲವಾಗಿದೆ” ಎಂದರು.

ದರ್ಶನ್ ಜೈನ್

ದೆಹಲಿಯಲ್ಲಿನ ಆಪ್ ಸರ್ಕಾರದ ಕೆಲಸಗಳನ್ನು ಪಕ್ಕದ ರಾಜ್ಯ ಪಂಜಾಬ್‌ನ ಜನ ಸಾಕ್ಷಾತ್ ಆಗಿ ನೋಡಿದ್ದರು. ಹಾಗಾಗಿ ಜನ ಕೈಹಿಡಿದಿದ್ದಾರೆ. ಪಂಜಾಬ್‌ ಜನರ ಆಶೋತ್ತರಗಳನ್ನು ಈಡೇರಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. ಕರ್ನಾಟಕ ಆಪ್ ರಾಜ್ಯಾಧ್ಯಕ್ಷರಾದ ಪೃಥ್ವಿರೆಡ್ಡಿಯವರು ಪಂಜಾಬ್ ಮತ್ತು ಗೋವಾ ಚುನಾವಣೆಯ ಉಸ್ತುವಾರಿಯಾಗಿ ಅನುಭವ ಗಳಿಸಿದ್ದಾರೆ. ಅದೇ ರೀತಿ ಸಾಕಷ್ಟು ಅನುಭವವಿರುವ ರೋಮಿ ಭಾಟಿಯವರು ಕರ್ನಾಟಕದ ವೀಕ್ಷಕರಾಗಿದ್ದಾರೆ. ಇವರ ನೇತೃತ್ವದಲ್ಲಿ ಬಿಬಿಎಂಪಿ ಚುನಾವಣೆಗೆ ಸಜ್ಜಾಗಿದ್ದೇವೆ ಎಂದರು.

ಕರ್ನಾಟಕದಲ್ಲಿ ಇತರ ಪಕ್ಷಗಳಲ್ಲಿಯೂ ಸಹ ಒಳ್ಳೆಯ ರಾಜಕಾರಣಿಗಳಿದ್ದಾರೆ. ಜನರಿಗೆ ಒಳ್ಳೆಯ ಕೆಲಸ ಮಾಡಬೇಕೆಂಬ ಹಂಬಲವಿರುವವರು ಬೇಕಿದ್ದಾರೆ. ಆದರೆ ಸೂಕ್ತ ವೇದಿಕೆ ಸಿಗದ ಕಾರಣ ಸಾಂಪ್ರಾದಾಯಿಕ ರಾಜಕೀಯ ಪಕ್ಷಗಳನ್ನು ಸೇರಿದ್ದಾರೆ. ಅಂತವರಿಗೆ ಆಪ್‌ ಮುಕ್ತ ಆಹ್ವಾನ ನೀಡುತ್ತದೆ. ಆದರೆ ಕೋಮುವಾದಿಗಳನ್ನು ನಾವು ಸೇರಿಸಿಕೊಳ್ಳುವುದಿಲ್ಲ. ಪಂಜಾಬ್‌ನಲ್ಲಾದಂತಹ ಬದಲಾವಣೆ ಕರ್ನಾಟಕದಲ್ಲಿಯೂ ಮಾಡುತ್ತೇವೆ ಎಂದು ದರ್ಶನ್ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ನಾವು ಬಿಜೆಪಿಗೆ ದೊಡ್ಡ ಶತ್ರುಗಳು- ಆಪ್ ಬಿಜೆಪಿ ಬಿ ಟೀಮ್ ಎಂಬುದು ಶುದ್ಧ ಸುಳ್ಳು  

ಇಂದು ದೇಶದಲ್ಲಿ ಬಿಜೆಪಿಗೆ ದೊಡ್ಡ ಶತ್ರುವೆಂದರೆ ಆಮ್‌ ಆದ್ಮಿ ಪಕ್ಷವಾಗಿದೆ. ನಾವು ಬಿಜೆಪಿಯನ್ನು ವಿರೋಧಿಸುವ ಮಟ್ಟಕ್ಕೆ ಬೇರೆ ಯಾವ ಪಕ್ಷಗಳು ಸಹ ವಿರೋಧಿಸುತ್ತಿಲ್ಲ. ಅದಕ್ಕೆ ಪಂಜಾಬ್ ಫಲಿತಾಂಶವೇ ತಕ್ಕ ಉತ್ತರವಾಗಿದೆ. ಅಮಿತ್ ಶಾ, ಮೋದಿ, ರಾಹುಲ್ ಗಾಂಧಿ, ಚರಣ್‌ಜಿತ್‌ ಚನ್ನಿ ಒಂದೇ ರೀತಿ ಮಾತನಾಡಿದ್ದರು. ಬಿಜೆಪಿಯ ರಾಷ್ಟ್ರೀಯ ವಕ್ತಾರ ಮುಕುಲ್ ಶರ್ಮಾನಂತಹವರು ಇಂದು ಬೆಳಿಗ್ಗೆ ಕಾಂಗ್ರೆಸ್ ಜಯಿಸಲಿ ಎಂದು ಟ್ವೀಟ್ ಮಾಡಿದ್ದರು. ಇದರಿಂದಲೇ ಅರ್ಥ ಮಾಡಿಕೊಳ್ಳಬೇಕು ಆಪ್ ಹೇಗೆ ಬಿಜೆಪಿ ವಿರೋಧಿಯಾಗಿದೆ ಎಂದು. ನಮ್ಮ ಮುಂದಿನ ಟಾರ್ಗೆಟ್ ಗುಜರಾತ್, ಹಿಮಾಚಲ ಪ್ರದೇಶ ಮತ್ತು ಕರ್ನಾಟಕ ಆಗಿದೆ. ಈ ಮೂರು ರಾಜ್ಯಗಳಲ್ಲಿ ಬಿಜೆಪಿಯೇ ಅಧಿಕಾರದಲ್ಲಿತ್ತು, ಅವರನ್ನು ಎದುರಿಸಲು ಸಿದ್ದರಾಗಿದ್ದೇವೆ. ಇಂತಹ ಪರಿಸ್ಥಿತಿಯಲ್ಲಿ ನಾವು ಬಿಜೆಪಿಯ ಬಿ ಟೀಮ್‌ ಎಂಬುದು ಆಧಾರ ರಹಿತ ಮತ್ತು ಶುದ್ಧ ಸುಳ್ಳು ಎಂದು ದರ್ಶನ್ ಜೈನ್ ವಿವರಿಸಿದರು.

ಗೋವಾದಲ್ಲಿ ಮೊದಲ ಬಾರಿಗೆ ಕನ್ನಡದಲ್ಲಿ ಕರಪತ್ರ ಪ್ರಿಂಟ್ ಮಾಡಿದ್ದು ಆಮ್ ಆದ್ಮಿ ಪಕ್ಷ. ಆ ರೀತಿಯ ಒಳಗೊಳ್ಳುವ ರಾಜಕಾರಣಕ್ಕೆ ಫಲ ಸಿಕ್ಕಿದ್ದು, ಎರಡು ಸ್ಥಾನ ಗೆದ್ದಿದ್ದೇವೆ. ಮುಂದೆ ಕರ್ನಾಟಕಕ್ಕೂ ಬರುತ್ತೇವೆ ಎಂದರು.


ಇದನ್ನೂ ಓದಿ: ಪಂಜಾಬ್‌: ಹಾಲಿ, ಮಾಜಿ ಸಿಎಂಗಳಿಗೆಲ್ಲ ಸೋಲಿನ ರುಚಿ ತೋರಿಸಿದ ಆಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...