Homeಮುಖಪುಟಪಂಜಾಬ್‌ನಲ್ಲಿ ಅಭೂತಪೂರ್ವ ಜಯ ದಾಖಲಿಸಿದ ಆಪ್: ಕರ್ನಾಟಕದ ಮುಖಂಡರ ಪ್ರತಿಕ್ರಿಯೆ ಹೀಗಿದೆ...

ಪಂಜಾಬ್‌ನಲ್ಲಿ ಅಭೂತಪೂರ್ವ ಜಯ ದಾಖಲಿಸಿದ ಆಪ್: ಕರ್ನಾಟಕದ ಮುಖಂಡರ ಪ್ರತಿಕ್ರಿಯೆ ಹೀಗಿದೆ…

ಬಿಜೆಪಿ ಅಧಿಕಾರದಲ್ಲಿರುವ ಗುಜರಾತ್, ಹಿಮಾಚಲ ಪ್ರದೇಶ ಮತ್ತು ಕರ್ನಾಟಕದ ಚುನಾವಣೆಗಳೆ ನಮ್ಮ ಮುಂದಿನ ಗುರಿ ಎನ್ನುತ್ತಾರೆ ಆಪ್ ಮುಖಂಡರಾದ ದರ್ಶನ್ ಜೈನ್

- Advertisement -
- Advertisement -

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಜಯ ದಾಖಲಿಸಿದೆ. ಒಟ್ಟು 117 ಕ್ಷೇತ್ರಗಳಲ್ಲಿ 92 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಪಾರಮ್ಯ ಸಾಧಿಸಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಅಭ್ಯರ್ಥಿ ಭಗವಂತ್ ಮನ್ ಜೋಡಿಗೆ ಪಂಜಾಬ್ ಜನ ಕೆಂಪುಹಾಸು ಹಾಕಿ ಸ್ವಾಗತಿಸಿದ್ದಾರೆ. ದೆಹಲಿಯಂತೆಯೇ ಭಾರೀ ಬಹುಮತದೊಂದಿಗೆ ಪಂಜಾಬ್‌ನಲ್ಲಿ ಅಧಿಕ್ಕಾರಕ್ಕೇರಲು ಆಪ್ ಸಜ್ಜಾಗಿದೆ. ಈ ಗೆಲುವಿಗೆ ಕಾರಣವೇನು? ಬಳಸಿದ ತಂತ್ರಗಳು ಯಾವುವು ಎಂಬುದರ ಕುರಿತು ನಾನುಗೌರಿ.ಕಾಂ ಕರ್ನಾಟಕದ ಆಪ್ ನಾಯಕರನ್ನು ಮಾತನಾಡಿಸಿತು. ಕೇಜ್ರಿವಾಲ್‌ರವರ ಆಡಳಿತ ಮತ್ತು ಪಂಜಾಬ್ ಕಾರ್ಯಕರ್ತರ ಪರಿಶ್ರಮವೇ ಆಪ್ ಅಧಿಕ್ಕಾರಕ್ಕೇರಲು ಕಾರಣ ಎಂದು ಆಪ್ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಮತ್ತು ಆಪ್ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್‌ ಜೈನ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಕೇಜ್ರಿವಾಲ್ ಮಾದರಿಯನ್ನು ಪಂಜಾಬ್ ಜನತೆ ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ. ಪಂಜಾಬ್‌ನಲ್ಲಿ ಜನ ನಮಗೆ ವೋಟ್ ಮಾಡಿಲ್ಲ, ಬದಲಿಗೆ ಪಂಜಾಬ್‌ನಲ್ಲಿಯೂ ಬದಲಾವಣೆ ತನ್ನಿ ಎಂದು ಒಂದು ಅವಕಾಶ ನೀಡಿದ್ದಾರೆ. ಇಷ್ಟು ದಿನದವರೆಗೆ ಪ್ರಾದೇಶಿಕ ಪಕ್ಷವಾಗಿದ್ದ ಆಪ್ ಇನ್ನು ಮುಂದೆ ಅಧಿಕೃತವಾಗಿ ರಾಷ್ಟ್ರೀಯ ಪಕ್ಷವಾಗಲಿದೆ. ಇಡೀ ದೇಶದಲ್ಲಿ ನಡೆಯಬೇಕಿರುವ ರಾಜಕೀಯ ಕ್ರಾಂತಿಗೆ ಇಂದು ಆಪ್ ಮುನ್ನುಡಿ ಬರೆದಿದೆ” ಎನ್ನುತ್ತಾರೆ ಮೋಹನ್ ದಾಸರಿ.

ಮೋಹನ್ ದಾಸರಿ

ದೆಹಲಿಯಲ್ಲಿ ನಮಗೆ ತುಂಬಾ ಅಡೆತಡೆಗಳಿದ್ದವು. ಏಕೆಂದರೆ ಅದು ಪೂರ್ಣ ಪ್ರಮಾಣದ ರಾಜ್ಯವಲ್ಲ. ಕಾನೂನು ಸುವ್ಯವಸ್ಥೆ ದೆಹಲಿ ಸರ್ಕಾರದ ಕೈಯಲ್ಲಿಲ್ಲ. ಭೂಮಿ ಮತ್ತು ಸಾರ್ವಜನಿಕ ನೀತಿಗಳು ದೆಹಲಿ ವ್ಯಾಪ್ತಿಯಲ್ಲಿರಲಿಲ್ಲ. ಏನೇ ಮಾಡಲು ಹೋದರೂ ಕೇಂದ್ರ ಸರ್ಕಾರ ಅಡಚಣೆ ಮಾಡುತ್ತಿತ್ತು. ಆದರೆ ಪಂಜಾಬ್‌ನಲ್ಲಿ ಬೃಹತ್ ಬಹುಮತದಿಂದ ಗೆದ್ದಿರುವುದರಿಂದ ದೇಶಕ್ಕೆ ಮಾದರಿ ರಾಜ್ಯ ಹೇಗಿರುತ್ತದೆ ಎಂಬುದನ್ನು ತೋರಿಸುತ್ತೇವೆ ಎಂದರು.

ಕೃಷಿ ಕ್ಷೇತ್ರದಲ್ಲಿ ಯಾವ ರೀತಿಯ ಕ್ರಾಂತಿಕಾರಕ ಬದಲಾವಣೆ ತರಬಹುದು ಎಂಬುದನ್ನು ನಾವು ಸಾಧಿಸಿ ತೋರಿಸುತ್ತೇವೆ. ಅದೇ ರೀತಿಯಲ್ಲಿ ದೇಶಕ್ಕೆ ಮಾದರಿಯಾದ ಕಾನೂನು ಸುವ್ಯವಸ್ಥೆ ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಗಳನ್ನು ಬಲಪಡಿಸುತ್ತೇವೆ. ಜನರಿಗೆ ಕಾನೂನು ಸುವ್ಯವಸ್ಥೆ ಹೇಗೆ ಇರಬೇಕೆಂದು ತೋರಿಸಿಕೊಡುತ್ತೇವೆ. ಜನರಿಗಾಗಿ ಕೆಲಸ ಮಾಡುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಎರಡು ವರ್ಷದಿಂದ ನಿರಂತರವಾಗಿ ಬಿಬಿಎಂಪಿ ಚುನಾವಣೆ ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. 50ಕ್ಕೂ ಹೆಚ್ಚು ಕಚೇರಿಗಳಿದ್ದು 150ಕ್ಕೂ ಹೆಚ್ಚು ಅಭ್ಯರ್ಥಿ ಆಕಾಂಕ್ಷಿಗಳು ಕೆಲಸ ಮಾಡುತ್ತಿದ್ದಾರೆ. ಮುಂದಿನ 45 ದಿನಗಳಲ್ಲಿ ಕೇಜ್ರಿವಾಲ್ ಆಡಳಿತ ಮಾದರಿಯನ್ನು ಬೆಂಗಳೂರಿನ ಪ್ರತಿ ಮನೆಗೂ ತಲುಪಿಸುವ ಗುರಿ ಹೊಂದಿದ್ದೇವೆ. ಅದೇ ಮಾದರಿಯಲ್ಲಿ ಜಿಲ್ಲೆಗಳಲ್ಲಿಯೂ ಕೆಲಸ ನಡೆಯುತ್ತದೆ. ಪಂಜಾಬ್ ಫಲಿತಾಂಶ ಈ ಕೆಲಸಕ್ಕೆ ಮತ್ತಷ್ಟು ಹುರುಪು ತುಂಬುತ್ತದೆ. ಗೋವಾದಲ್ಲಿ ಎರಡು ಕ್ಷೇತ್ರಗಳಲ್ಲಿ ಭಾರೀ ಅಂತರದಲ್ಲಿ ಆಪ್‌ನ ಹಿರಿಯ ಕಾರ್ಯಕರ್ತರು ಗೆಲುವು ಸಾಧಿಸಿದ್ದಾರೆ. ಇದು ಕೂಡ ನಮಗೆ ಸ್ಫೂರ್ತಿ ಎಂದು ಮೋಹನ್ ದಾಸರಿ ತಿಳಿಸಿದರು.

ಪರಿಶ್ರಮಕ್ಕೆ ಸಿಕ್ಕ ಫಲ

ದರ್ಶನ್ ಜೈನ್ ಮಾತನಾಡಿ “ನಾವು ಪಂಜಾಬ್‌ನಲ್ಲಿ ಐದು ವರ್ಷ ಸತತ ಪರಿಶ್ರಮ ಹಾಕಿದ್ದೇವೆ. 2017, 2018 ಮತ್ತು 2019ರ ಈ ಮೂರು ವರ್ಷಗಳಲ್ಲಿ ಬಹಳ ಕಷ್ಟಗಳನ್ನು ಎದುರಿಸಿದ್ದೇವೆ. ಏಕೆಂದರೆ ಕಳೆದ ಚುನಾವಣೆಯಲ್ಲಿ ಆಪ್ ಸೋತಿದ್ದು ಕೆಟ್ಟ ಪರಿಣಾಮ ಬೀರಿತ್ತು. 2019ರ ಲೋಕಸಭಾ ಚುನಾವಣೆಯಲ್ಲಿಯೂ ಸಹ ಆಪ್ ನಾಲ್ಕು ಸ್ಥಾನದಿಂದ ಒಂದು ಸ್ಥಾನಕ್ಕೆ ಇಳಿದಿತ್ತು. ಎಚ್.ಎಸ್ ಫುಲ್ಕ ಎಂಬುವವರು ಆಪ್ ತ್ಯಜಿಸಿದರು. ಉಪಚುನಾವಣೆಯಲ್ಲಿ ಆಪ್‌ಗೆ ಕೇವಲ 3500 ಮತಗಳು ಮಾತ್ರ ಬಿದ್ದಿದ್ದವು. ಆದರೆ ನಾವು ಧೃತಿಗೆಡಲಿಲ್ಲ. ಕೋವಿಡ್ ಸಾಂಕ್ರಾಮಿಕ, ರೈತ ಹೋರಾಟದ ಸಂದರ್ಭದಲ್ಲಿ ಜನರ ಹೋರಾಟದೊಂದಿಗೆ ನಿಂತವು. ನಾವು ನಮ್ಮ ತಪ್ಪುಗಳಿಂದ ಪಾಠ ಕಲಿತು ಪಕ್ಷದ ಕಾರ್ಯಕರ್ತರಿಗೆ, ಯುವಜನರಿಗೆ ಮತ್ತು ಮಹಿಳೆಯರಿಗೆ ಹೆಚ್ಚು ಟಿಕೆಟ್ ನೀಡಿದ್ದೆವು. ಈ ಎಲ್ಲಾ ಕೆಲಸಗಳಿಗೆ ಇಂದಿನ ಫಲಿತಾಂಶವೇ ಪ್ರತಿಫಲವಾಗಿದೆ” ಎಂದರು.

ದರ್ಶನ್ ಜೈನ್

ದೆಹಲಿಯಲ್ಲಿನ ಆಪ್ ಸರ್ಕಾರದ ಕೆಲಸಗಳನ್ನು ಪಕ್ಕದ ರಾಜ್ಯ ಪಂಜಾಬ್‌ನ ಜನ ಸಾಕ್ಷಾತ್ ಆಗಿ ನೋಡಿದ್ದರು. ಹಾಗಾಗಿ ಜನ ಕೈಹಿಡಿದಿದ್ದಾರೆ. ಪಂಜಾಬ್‌ ಜನರ ಆಶೋತ್ತರಗಳನ್ನು ಈಡೇರಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. ಕರ್ನಾಟಕ ಆಪ್ ರಾಜ್ಯಾಧ್ಯಕ್ಷರಾದ ಪೃಥ್ವಿರೆಡ್ಡಿಯವರು ಪಂಜಾಬ್ ಮತ್ತು ಗೋವಾ ಚುನಾವಣೆಯ ಉಸ್ತುವಾರಿಯಾಗಿ ಅನುಭವ ಗಳಿಸಿದ್ದಾರೆ. ಅದೇ ರೀತಿ ಸಾಕಷ್ಟು ಅನುಭವವಿರುವ ರೋಮಿ ಭಾಟಿಯವರು ಕರ್ನಾಟಕದ ವೀಕ್ಷಕರಾಗಿದ್ದಾರೆ. ಇವರ ನೇತೃತ್ವದಲ್ಲಿ ಬಿಬಿಎಂಪಿ ಚುನಾವಣೆಗೆ ಸಜ್ಜಾಗಿದ್ದೇವೆ ಎಂದರು.

ಕರ್ನಾಟಕದಲ್ಲಿ ಇತರ ಪಕ್ಷಗಳಲ್ಲಿಯೂ ಸಹ ಒಳ್ಳೆಯ ರಾಜಕಾರಣಿಗಳಿದ್ದಾರೆ. ಜನರಿಗೆ ಒಳ್ಳೆಯ ಕೆಲಸ ಮಾಡಬೇಕೆಂಬ ಹಂಬಲವಿರುವವರು ಬೇಕಿದ್ದಾರೆ. ಆದರೆ ಸೂಕ್ತ ವೇದಿಕೆ ಸಿಗದ ಕಾರಣ ಸಾಂಪ್ರಾದಾಯಿಕ ರಾಜಕೀಯ ಪಕ್ಷಗಳನ್ನು ಸೇರಿದ್ದಾರೆ. ಅಂತವರಿಗೆ ಆಪ್‌ ಮುಕ್ತ ಆಹ್ವಾನ ನೀಡುತ್ತದೆ. ಆದರೆ ಕೋಮುವಾದಿಗಳನ್ನು ನಾವು ಸೇರಿಸಿಕೊಳ್ಳುವುದಿಲ್ಲ. ಪಂಜಾಬ್‌ನಲ್ಲಾದಂತಹ ಬದಲಾವಣೆ ಕರ್ನಾಟಕದಲ್ಲಿಯೂ ಮಾಡುತ್ತೇವೆ ಎಂದು ದರ್ಶನ್ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ನಾವು ಬಿಜೆಪಿಗೆ ದೊಡ್ಡ ಶತ್ರುಗಳು- ಆಪ್ ಬಿಜೆಪಿ ಬಿ ಟೀಮ್ ಎಂಬುದು ಶುದ್ಧ ಸುಳ್ಳು  

ಇಂದು ದೇಶದಲ್ಲಿ ಬಿಜೆಪಿಗೆ ದೊಡ್ಡ ಶತ್ರುವೆಂದರೆ ಆಮ್‌ ಆದ್ಮಿ ಪಕ್ಷವಾಗಿದೆ. ನಾವು ಬಿಜೆಪಿಯನ್ನು ವಿರೋಧಿಸುವ ಮಟ್ಟಕ್ಕೆ ಬೇರೆ ಯಾವ ಪಕ್ಷಗಳು ಸಹ ವಿರೋಧಿಸುತ್ತಿಲ್ಲ. ಅದಕ್ಕೆ ಪಂಜಾಬ್ ಫಲಿತಾಂಶವೇ ತಕ್ಕ ಉತ್ತರವಾಗಿದೆ. ಅಮಿತ್ ಶಾ, ಮೋದಿ, ರಾಹುಲ್ ಗಾಂಧಿ, ಚರಣ್‌ಜಿತ್‌ ಚನ್ನಿ ಒಂದೇ ರೀತಿ ಮಾತನಾಡಿದ್ದರು. ಬಿಜೆಪಿಯ ರಾಷ್ಟ್ರೀಯ ವಕ್ತಾರ ಮುಕುಲ್ ಶರ್ಮಾನಂತಹವರು ಇಂದು ಬೆಳಿಗ್ಗೆ ಕಾಂಗ್ರೆಸ್ ಜಯಿಸಲಿ ಎಂದು ಟ್ವೀಟ್ ಮಾಡಿದ್ದರು. ಇದರಿಂದಲೇ ಅರ್ಥ ಮಾಡಿಕೊಳ್ಳಬೇಕು ಆಪ್ ಹೇಗೆ ಬಿಜೆಪಿ ವಿರೋಧಿಯಾಗಿದೆ ಎಂದು. ನಮ್ಮ ಮುಂದಿನ ಟಾರ್ಗೆಟ್ ಗುಜರಾತ್, ಹಿಮಾಚಲ ಪ್ರದೇಶ ಮತ್ತು ಕರ್ನಾಟಕ ಆಗಿದೆ. ಈ ಮೂರು ರಾಜ್ಯಗಳಲ್ಲಿ ಬಿಜೆಪಿಯೇ ಅಧಿಕಾರದಲ್ಲಿತ್ತು, ಅವರನ್ನು ಎದುರಿಸಲು ಸಿದ್ದರಾಗಿದ್ದೇವೆ. ಇಂತಹ ಪರಿಸ್ಥಿತಿಯಲ್ಲಿ ನಾವು ಬಿಜೆಪಿಯ ಬಿ ಟೀಮ್‌ ಎಂಬುದು ಆಧಾರ ರಹಿತ ಮತ್ತು ಶುದ್ಧ ಸುಳ್ಳು ಎಂದು ದರ್ಶನ್ ಜೈನ್ ವಿವರಿಸಿದರು.

ಗೋವಾದಲ್ಲಿ ಮೊದಲ ಬಾರಿಗೆ ಕನ್ನಡದಲ್ಲಿ ಕರಪತ್ರ ಪ್ರಿಂಟ್ ಮಾಡಿದ್ದು ಆಮ್ ಆದ್ಮಿ ಪಕ್ಷ. ಆ ರೀತಿಯ ಒಳಗೊಳ್ಳುವ ರಾಜಕಾರಣಕ್ಕೆ ಫಲ ಸಿಕ್ಕಿದ್ದು, ಎರಡು ಸ್ಥಾನ ಗೆದ್ದಿದ್ದೇವೆ. ಮುಂದೆ ಕರ್ನಾಟಕಕ್ಕೂ ಬರುತ್ತೇವೆ ಎಂದರು.


ಇದನ್ನೂ ಓದಿ: ಪಂಜಾಬ್‌: ಹಾಲಿ, ಮಾಜಿ ಸಿಎಂಗಳಿಗೆಲ್ಲ ಸೋಲಿನ ರುಚಿ ತೋರಿಸಿದ ಆಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....