Homeಮುಖಪುಟಪಂಜಾಬ್‌ನಲ್ಲಿ ಅಭೂತಪೂರ್ವ ಜಯ ದಾಖಲಿಸಿದ ಆಪ್: ಕರ್ನಾಟಕದ ಮುಖಂಡರ ಪ್ರತಿಕ್ರಿಯೆ ಹೀಗಿದೆ...

ಪಂಜಾಬ್‌ನಲ್ಲಿ ಅಭೂತಪೂರ್ವ ಜಯ ದಾಖಲಿಸಿದ ಆಪ್: ಕರ್ನಾಟಕದ ಮುಖಂಡರ ಪ್ರತಿಕ್ರಿಯೆ ಹೀಗಿದೆ…

ಬಿಜೆಪಿ ಅಧಿಕಾರದಲ್ಲಿರುವ ಗುಜರಾತ್, ಹಿಮಾಚಲ ಪ್ರದೇಶ ಮತ್ತು ಕರ್ನಾಟಕದ ಚುನಾವಣೆಗಳೆ ನಮ್ಮ ಮುಂದಿನ ಗುರಿ ಎನ್ನುತ್ತಾರೆ ಆಪ್ ಮುಖಂಡರಾದ ದರ್ಶನ್ ಜೈನ್

- Advertisement -
- Advertisement -

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಜಯ ದಾಖಲಿಸಿದೆ. ಒಟ್ಟು 117 ಕ್ಷೇತ್ರಗಳಲ್ಲಿ 92 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಪಾರಮ್ಯ ಸಾಧಿಸಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಅಭ್ಯರ್ಥಿ ಭಗವಂತ್ ಮನ್ ಜೋಡಿಗೆ ಪಂಜಾಬ್ ಜನ ಕೆಂಪುಹಾಸು ಹಾಕಿ ಸ್ವಾಗತಿಸಿದ್ದಾರೆ. ದೆಹಲಿಯಂತೆಯೇ ಭಾರೀ ಬಹುಮತದೊಂದಿಗೆ ಪಂಜಾಬ್‌ನಲ್ಲಿ ಅಧಿಕ್ಕಾರಕ್ಕೇರಲು ಆಪ್ ಸಜ್ಜಾಗಿದೆ. ಈ ಗೆಲುವಿಗೆ ಕಾರಣವೇನು? ಬಳಸಿದ ತಂತ್ರಗಳು ಯಾವುವು ಎಂಬುದರ ಕುರಿತು ನಾನುಗೌರಿ.ಕಾಂ ಕರ್ನಾಟಕದ ಆಪ್ ನಾಯಕರನ್ನು ಮಾತನಾಡಿಸಿತು. ಕೇಜ್ರಿವಾಲ್‌ರವರ ಆಡಳಿತ ಮತ್ತು ಪಂಜಾಬ್ ಕಾರ್ಯಕರ್ತರ ಪರಿಶ್ರಮವೇ ಆಪ್ ಅಧಿಕ್ಕಾರಕ್ಕೇರಲು ಕಾರಣ ಎಂದು ಆಪ್ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಮತ್ತು ಆಪ್ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್‌ ಜೈನ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಕೇಜ್ರಿವಾಲ್ ಮಾದರಿಯನ್ನು ಪಂಜಾಬ್ ಜನತೆ ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ. ಪಂಜಾಬ್‌ನಲ್ಲಿ ಜನ ನಮಗೆ ವೋಟ್ ಮಾಡಿಲ್ಲ, ಬದಲಿಗೆ ಪಂಜಾಬ್‌ನಲ್ಲಿಯೂ ಬದಲಾವಣೆ ತನ್ನಿ ಎಂದು ಒಂದು ಅವಕಾಶ ನೀಡಿದ್ದಾರೆ. ಇಷ್ಟು ದಿನದವರೆಗೆ ಪ್ರಾದೇಶಿಕ ಪಕ್ಷವಾಗಿದ್ದ ಆಪ್ ಇನ್ನು ಮುಂದೆ ಅಧಿಕೃತವಾಗಿ ರಾಷ್ಟ್ರೀಯ ಪಕ್ಷವಾಗಲಿದೆ. ಇಡೀ ದೇಶದಲ್ಲಿ ನಡೆಯಬೇಕಿರುವ ರಾಜಕೀಯ ಕ್ರಾಂತಿಗೆ ಇಂದು ಆಪ್ ಮುನ್ನುಡಿ ಬರೆದಿದೆ” ಎನ್ನುತ್ತಾರೆ ಮೋಹನ್ ದಾಸರಿ.

ಮೋಹನ್ ದಾಸರಿ

ದೆಹಲಿಯಲ್ಲಿ ನಮಗೆ ತುಂಬಾ ಅಡೆತಡೆಗಳಿದ್ದವು. ಏಕೆಂದರೆ ಅದು ಪೂರ್ಣ ಪ್ರಮಾಣದ ರಾಜ್ಯವಲ್ಲ. ಕಾನೂನು ಸುವ್ಯವಸ್ಥೆ ದೆಹಲಿ ಸರ್ಕಾರದ ಕೈಯಲ್ಲಿಲ್ಲ. ಭೂಮಿ ಮತ್ತು ಸಾರ್ವಜನಿಕ ನೀತಿಗಳು ದೆಹಲಿ ವ್ಯಾಪ್ತಿಯಲ್ಲಿರಲಿಲ್ಲ. ಏನೇ ಮಾಡಲು ಹೋದರೂ ಕೇಂದ್ರ ಸರ್ಕಾರ ಅಡಚಣೆ ಮಾಡುತ್ತಿತ್ತು. ಆದರೆ ಪಂಜಾಬ್‌ನಲ್ಲಿ ಬೃಹತ್ ಬಹುಮತದಿಂದ ಗೆದ್ದಿರುವುದರಿಂದ ದೇಶಕ್ಕೆ ಮಾದರಿ ರಾಜ್ಯ ಹೇಗಿರುತ್ತದೆ ಎಂಬುದನ್ನು ತೋರಿಸುತ್ತೇವೆ ಎಂದರು.

ಕೃಷಿ ಕ್ಷೇತ್ರದಲ್ಲಿ ಯಾವ ರೀತಿಯ ಕ್ರಾಂತಿಕಾರಕ ಬದಲಾವಣೆ ತರಬಹುದು ಎಂಬುದನ್ನು ನಾವು ಸಾಧಿಸಿ ತೋರಿಸುತ್ತೇವೆ. ಅದೇ ರೀತಿಯಲ್ಲಿ ದೇಶಕ್ಕೆ ಮಾದರಿಯಾದ ಕಾನೂನು ಸುವ್ಯವಸ್ಥೆ ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಗಳನ್ನು ಬಲಪಡಿಸುತ್ತೇವೆ. ಜನರಿಗೆ ಕಾನೂನು ಸುವ್ಯವಸ್ಥೆ ಹೇಗೆ ಇರಬೇಕೆಂದು ತೋರಿಸಿಕೊಡುತ್ತೇವೆ. ಜನರಿಗಾಗಿ ಕೆಲಸ ಮಾಡುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಎರಡು ವರ್ಷದಿಂದ ನಿರಂತರವಾಗಿ ಬಿಬಿಎಂಪಿ ಚುನಾವಣೆ ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. 50ಕ್ಕೂ ಹೆಚ್ಚು ಕಚೇರಿಗಳಿದ್ದು 150ಕ್ಕೂ ಹೆಚ್ಚು ಅಭ್ಯರ್ಥಿ ಆಕಾಂಕ್ಷಿಗಳು ಕೆಲಸ ಮಾಡುತ್ತಿದ್ದಾರೆ. ಮುಂದಿನ 45 ದಿನಗಳಲ್ಲಿ ಕೇಜ್ರಿವಾಲ್ ಆಡಳಿತ ಮಾದರಿಯನ್ನು ಬೆಂಗಳೂರಿನ ಪ್ರತಿ ಮನೆಗೂ ತಲುಪಿಸುವ ಗುರಿ ಹೊಂದಿದ್ದೇವೆ. ಅದೇ ಮಾದರಿಯಲ್ಲಿ ಜಿಲ್ಲೆಗಳಲ್ಲಿಯೂ ಕೆಲಸ ನಡೆಯುತ್ತದೆ. ಪಂಜಾಬ್ ಫಲಿತಾಂಶ ಈ ಕೆಲಸಕ್ಕೆ ಮತ್ತಷ್ಟು ಹುರುಪು ತುಂಬುತ್ತದೆ. ಗೋವಾದಲ್ಲಿ ಎರಡು ಕ್ಷೇತ್ರಗಳಲ್ಲಿ ಭಾರೀ ಅಂತರದಲ್ಲಿ ಆಪ್‌ನ ಹಿರಿಯ ಕಾರ್ಯಕರ್ತರು ಗೆಲುವು ಸಾಧಿಸಿದ್ದಾರೆ. ಇದು ಕೂಡ ನಮಗೆ ಸ್ಫೂರ್ತಿ ಎಂದು ಮೋಹನ್ ದಾಸರಿ ತಿಳಿಸಿದರು.

ಪರಿಶ್ರಮಕ್ಕೆ ಸಿಕ್ಕ ಫಲ

ದರ್ಶನ್ ಜೈನ್ ಮಾತನಾಡಿ “ನಾವು ಪಂಜಾಬ್‌ನಲ್ಲಿ ಐದು ವರ್ಷ ಸತತ ಪರಿಶ್ರಮ ಹಾಕಿದ್ದೇವೆ. 2017, 2018 ಮತ್ತು 2019ರ ಈ ಮೂರು ವರ್ಷಗಳಲ್ಲಿ ಬಹಳ ಕಷ್ಟಗಳನ್ನು ಎದುರಿಸಿದ್ದೇವೆ. ಏಕೆಂದರೆ ಕಳೆದ ಚುನಾವಣೆಯಲ್ಲಿ ಆಪ್ ಸೋತಿದ್ದು ಕೆಟ್ಟ ಪರಿಣಾಮ ಬೀರಿತ್ತು. 2019ರ ಲೋಕಸಭಾ ಚುನಾವಣೆಯಲ್ಲಿಯೂ ಸಹ ಆಪ್ ನಾಲ್ಕು ಸ್ಥಾನದಿಂದ ಒಂದು ಸ್ಥಾನಕ್ಕೆ ಇಳಿದಿತ್ತು. ಎಚ್.ಎಸ್ ಫುಲ್ಕ ಎಂಬುವವರು ಆಪ್ ತ್ಯಜಿಸಿದರು. ಉಪಚುನಾವಣೆಯಲ್ಲಿ ಆಪ್‌ಗೆ ಕೇವಲ 3500 ಮತಗಳು ಮಾತ್ರ ಬಿದ್ದಿದ್ದವು. ಆದರೆ ನಾವು ಧೃತಿಗೆಡಲಿಲ್ಲ. ಕೋವಿಡ್ ಸಾಂಕ್ರಾಮಿಕ, ರೈತ ಹೋರಾಟದ ಸಂದರ್ಭದಲ್ಲಿ ಜನರ ಹೋರಾಟದೊಂದಿಗೆ ನಿಂತವು. ನಾವು ನಮ್ಮ ತಪ್ಪುಗಳಿಂದ ಪಾಠ ಕಲಿತು ಪಕ್ಷದ ಕಾರ್ಯಕರ್ತರಿಗೆ, ಯುವಜನರಿಗೆ ಮತ್ತು ಮಹಿಳೆಯರಿಗೆ ಹೆಚ್ಚು ಟಿಕೆಟ್ ನೀಡಿದ್ದೆವು. ಈ ಎಲ್ಲಾ ಕೆಲಸಗಳಿಗೆ ಇಂದಿನ ಫಲಿತಾಂಶವೇ ಪ್ರತಿಫಲವಾಗಿದೆ” ಎಂದರು.

ದರ್ಶನ್ ಜೈನ್

ದೆಹಲಿಯಲ್ಲಿನ ಆಪ್ ಸರ್ಕಾರದ ಕೆಲಸಗಳನ್ನು ಪಕ್ಕದ ರಾಜ್ಯ ಪಂಜಾಬ್‌ನ ಜನ ಸಾಕ್ಷಾತ್ ಆಗಿ ನೋಡಿದ್ದರು. ಹಾಗಾಗಿ ಜನ ಕೈಹಿಡಿದಿದ್ದಾರೆ. ಪಂಜಾಬ್‌ ಜನರ ಆಶೋತ್ತರಗಳನ್ನು ಈಡೇರಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. ಕರ್ನಾಟಕ ಆಪ್ ರಾಜ್ಯಾಧ್ಯಕ್ಷರಾದ ಪೃಥ್ವಿರೆಡ್ಡಿಯವರು ಪಂಜಾಬ್ ಮತ್ತು ಗೋವಾ ಚುನಾವಣೆಯ ಉಸ್ತುವಾರಿಯಾಗಿ ಅನುಭವ ಗಳಿಸಿದ್ದಾರೆ. ಅದೇ ರೀತಿ ಸಾಕಷ್ಟು ಅನುಭವವಿರುವ ರೋಮಿ ಭಾಟಿಯವರು ಕರ್ನಾಟಕದ ವೀಕ್ಷಕರಾಗಿದ್ದಾರೆ. ಇವರ ನೇತೃತ್ವದಲ್ಲಿ ಬಿಬಿಎಂಪಿ ಚುನಾವಣೆಗೆ ಸಜ್ಜಾಗಿದ್ದೇವೆ ಎಂದರು.

ಕರ್ನಾಟಕದಲ್ಲಿ ಇತರ ಪಕ್ಷಗಳಲ್ಲಿಯೂ ಸಹ ಒಳ್ಳೆಯ ರಾಜಕಾರಣಿಗಳಿದ್ದಾರೆ. ಜನರಿಗೆ ಒಳ್ಳೆಯ ಕೆಲಸ ಮಾಡಬೇಕೆಂಬ ಹಂಬಲವಿರುವವರು ಬೇಕಿದ್ದಾರೆ. ಆದರೆ ಸೂಕ್ತ ವೇದಿಕೆ ಸಿಗದ ಕಾರಣ ಸಾಂಪ್ರಾದಾಯಿಕ ರಾಜಕೀಯ ಪಕ್ಷಗಳನ್ನು ಸೇರಿದ್ದಾರೆ. ಅಂತವರಿಗೆ ಆಪ್‌ ಮುಕ್ತ ಆಹ್ವಾನ ನೀಡುತ್ತದೆ. ಆದರೆ ಕೋಮುವಾದಿಗಳನ್ನು ನಾವು ಸೇರಿಸಿಕೊಳ್ಳುವುದಿಲ್ಲ. ಪಂಜಾಬ್‌ನಲ್ಲಾದಂತಹ ಬದಲಾವಣೆ ಕರ್ನಾಟಕದಲ್ಲಿಯೂ ಮಾಡುತ್ತೇವೆ ಎಂದು ದರ್ಶನ್ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ನಾವು ಬಿಜೆಪಿಗೆ ದೊಡ್ಡ ಶತ್ರುಗಳು- ಆಪ್ ಬಿಜೆಪಿ ಬಿ ಟೀಮ್ ಎಂಬುದು ಶುದ್ಧ ಸುಳ್ಳು  

ಇಂದು ದೇಶದಲ್ಲಿ ಬಿಜೆಪಿಗೆ ದೊಡ್ಡ ಶತ್ರುವೆಂದರೆ ಆಮ್‌ ಆದ್ಮಿ ಪಕ್ಷವಾಗಿದೆ. ನಾವು ಬಿಜೆಪಿಯನ್ನು ವಿರೋಧಿಸುವ ಮಟ್ಟಕ್ಕೆ ಬೇರೆ ಯಾವ ಪಕ್ಷಗಳು ಸಹ ವಿರೋಧಿಸುತ್ತಿಲ್ಲ. ಅದಕ್ಕೆ ಪಂಜಾಬ್ ಫಲಿತಾಂಶವೇ ತಕ್ಕ ಉತ್ತರವಾಗಿದೆ. ಅಮಿತ್ ಶಾ, ಮೋದಿ, ರಾಹುಲ್ ಗಾಂಧಿ, ಚರಣ್‌ಜಿತ್‌ ಚನ್ನಿ ಒಂದೇ ರೀತಿ ಮಾತನಾಡಿದ್ದರು. ಬಿಜೆಪಿಯ ರಾಷ್ಟ್ರೀಯ ವಕ್ತಾರ ಮುಕುಲ್ ಶರ್ಮಾನಂತಹವರು ಇಂದು ಬೆಳಿಗ್ಗೆ ಕಾಂಗ್ರೆಸ್ ಜಯಿಸಲಿ ಎಂದು ಟ್ವೀಟ್ ಮಾಡಿದ್ದರು. ಇದರಿಂದಲೇ ಅರ್ಥ ಮಾಡಿಕೊಳ್ಳಬೇಕು ಆಪ್ ಹೇಗೆ ಬಿಜೆಪಿ ವಿರೋಧಿಯಾಗಿದೆ ಎಂದು. ನಮ್ಮ ಮುಂದಿನ ಟಾರ್ಗೆಟ್ ಗುಜರಾತ್, ಹಿಮಾಚಲ ಪ್ರದೇಶ ಮತ್ತು ಕರ್ನಾಟಕ ಆಗಿದೆ. ಈ ಮೂರು ರಾಜ್ಯಗಳಲ್ಲಿ ಬಿಜೆಪಿಯೇ ಅಧಿಕಾರದಲ್ಲಿತ್ತು, ಅವರನ್ನು ಎದುರಿಸಲು ಸಿದ್ದರಾಗಿದ್ದೇವೆ. ಇಂತಹ ಪರಿಸ್ಥಿತಿಯಲ್ಲಿ ನಾವು ಬಿಜೆಪಿಯ ಬಿ ಟೀಮ್‌ ಎಂಬುದು ಆಧಾರ ರಹಿತ ಮತ್ತು ಶುದ್ಧ ಸುಳ್ಳು ಎಂದು ದರ್ಶನ್ ಜೈನ್ ವಿವರಿಸಿದರು.

ಗೋವಾದಲ್ಲಿ ಮೊದಲ ಬಾರಿಗೆ ಕನ್ನಡದಲ್ಲಿ ಕರಪತ್ರ ಪ್ರಿಂಟ್ ಮಾಡಿದ್ದು ಆಮ್ ಆದ್ಮಿ ಪಕ್ಷ. ಆ ರೀತಿಯ ಒಳಗೊಳ್ಳುವ ರಾಜಕಾರಣಕ್ಕೆ ಫಲ ಸಿಕ್ಕಿದ್ದು, ಎರಡು ಸ್ಥಾನ ಗೆದ್ದಿದ್ದೇವೆ. ಮುಂದೆ ಕರ್ನಾಟಕಕ್ಕೂ ಬರುತ್ತೇವೆ ಎಂದರು.


ಇದನ್ನೂ ಓದಿ: ಪಂಜಾಬ್‌: ಹಾಲಿ, ಮಾಜಿ ಸಿಎಂಗಳಿಗೆಲ್ಲ ಸೋಲಿನ ರುಚಿ ತೋರಿಸಿದ ಆಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...