Homeಮುಖಪುಟಕೇಜ್ರಿವಾಲ್ ಬಂಧನದ ವಿರುದ್ಧ ಎಎಪಿಯಿಂದ ಸಹಿ ಅಭಿಯಾನ

ಕೇಜ್ರಿವಾಲ್ ಬಂಧನದ ವಿರುದ್ಧ ಎಎಪಿಯಿಂದ ಸಹಿ ಅಭಿಯಾನ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ವಿರುದ್ಧ ಆಮ್ ಆದ್ಮಿ ಪಕ್ಷ ಗುರುವಾರ ಸಹಿ ಅಭಿಯಾನವನ್ನು ಪ್ರಾರಂಭಿಸಿದೆ.

ಮಾರ್ಚ್ 21ರಂದು ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಿತ್ತು. ಮೇ 7ರವರೆಗೆ ಅವರು ತಿಹಾರ್ ಜೈಲಿನಲ್ಲಿದ್ದಾರೆ. ಜನರು ಕೇಜ್ರಿವಾಲ್‌ಗೆ ತಮ್ಮ ಸಂದೇಶಗಳನ್ನು ಬರೆಯಲು ಲಜಪತ್ ನಗರದಲ್ಲಿ ಎರಡು ಫಲಕಗಳನ್ನು ಅಳವಡಿಸಲಾಗಿದೆ.

ಎಪಿ ಜಂಗ್ಪುರ ಶಾಸಕ ಪ್ರವೀಣ್ ಕುಮಾರ್ ಈ ಬಗ್ಗೆ ಮಾತನಾಡಿದ್ದು, ದೆಹಲಿಯ ಜನರು ತಮ್ಮ ಮುಖ್ಯಮಂತ್ರಿಯನ್ನು ಪ್ರೀತಿಸುತ್ತಾರೆ ಎಂದು ಭಾರತೀಯ ಜನತಾ ಪಕ್ಷಕ್ಕೆ ತೋರಿಸಿ ಕೊಡಲು ನಗರದ ವಿವಿಧ ಭಾಗಗಳಲ್ಲಿ ಸಹಿ ಅಭಿಯಾನವನ್ನು ನಡೆಸಲಾಗುವುದು ಎಂದು ಹೇಳಿದ್ದಾರೆ. ನಾವು ಈ ಅಭಿಯಾನವನ್ನು ಇಲ್ಲಿಂದ ಪ್ರಾರಂಭಿಸಿದ್ದೇವೆ ಮತ್ತು ಅದನ್ನು ವಿವಿಧ ಪ್ರದೇಶಗಳಿಗೆ ವಿಸ್ತರಿಸುತ್ತೇವೆ. ನಾವು ಈ ಸಹಿಗಳನ್ನು ಸಂಗ್ರಹಿಸಿ ಬಿಜೆಪಿಗೆ ಕಳುಹಿಸುತ್ತೇವೆ ಮತ್ತು ದೆಹಲಿಯ ಜನರು ಕೇಜ್ರಿವಾಲ್ ಅವರನ್ನು ಎಷ್ಟು ಪ್ರೀತಿಸುತ್ತಾರೆ ಎಂಬುದನ್ನು ತೋರಿಸುತ್ತೇವೆ  ಎಂದು ಹೇಳಿದ್ದಾರೆ.

ಈ ವೇಳೆ ಎಎಪಿ ಪಕ್ಷದ ಕಾರ್ಯಕರ್ತರು ‘ಜೈಲ್ ಕಾ ಜವಾಬ್ ವೋಟ್ ಸೇ ದೇಂಗೆ’ ಮತ್ತು ‘ಅರವಿಂದ್ ಕೇಜ್ರಿವಾಲ್ ಜಿಂದಾಬಾದ್’ ಘೋಷಣೆಗಳನ್ನು ಕೂಗಿದ್ದಾರೆ. ಸಿಎಂ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿಟ್ಟ ರೀತಿಗೆ ದೆಹಲಿಯ ಜನರು ತೀವ್ರ ಕೋಪಗೊಂಡಿದ್ದಾರೆ. ಜನರು ಸರ್ವಾಧಿಕಾರ ಮತ್ತು ಕೇಜ್ರಿವಾಲ್‌ ಬಂಧನದ ವಿರುದ್ಧ ತಮ್ಮ ಮತಗಳ ಮೂಲಕ ಪ್ರತಿಕ್ರಿಯಿಸುತ್ತಾರೆ ಎಂದು ಎಎಪಿ ಪೂರ್ವ ದೆಹಲಿ ಲೋಕಸಭಾ ಅಭ್ಯರ್ಥಿ ಕುಲದೀಪ್ ಕುಮಾರ್ ಹೇಳಿದ್ದಾರೆ.

ಈಗ ರದ್ದಾದ ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಅವರು ಏಪ್ರಿಲ್ 1ರಿಂದ ತಿಹಾರ್ ಜೈಲಿನಲ್ಲಿದ್ದು, ಮೇ 7ರವರೆಗೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 2021-22ರ ಅಬಕಾರಿ ನೀತಿಯನ್ನು ರೂಪಿಸುವ ಪಿತೂರಿಯಲ್ಲಿ ಅರವಿಂದ್ ಕೇಜ್ರಿವಾಲ್ ಭಾಗಿಯಾಗಿದ್ದಾರೆ. ನಿರ್ದಿಷ್ಟ ವ್ಯಕ್ತಿಗಳಿಗೆ ಸಹಾಯ ಮಾಡಲು ಮತ್ತು ಸದರಿ ನೀತಿಯ ಮೂಲಕ ಮದ್ಯದ ಉದ್ಯಮಿಗಳಿಂದ ಕಿಕ್‌ಬ್ಯಾಕ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ಬಂಧನವಾಗುತ್ತಿದ್ದಂತೆ ಈ ಹಿಂದೆ ದೆಹಲಿ ಹೈಕೋರ್ಟ್‌ಗೆ ಕೇಜ್ರಿವಾಲ್‌ ಅವರನ್ನು ಸಿಎಂ ಹದ್ದೆಯಿಂದ ವಜಾಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಕೇಜ್ರಿವಾಲ್‌ ಅವರನ್ನು ಸಿಎಂ ಹುದ್ದೆಯಿಂದ ವಜಾಕ್ಕೆ ನಿರಾಕರಿಸಿತ್ತು. ಮುಖ್ಯಮಂತ್ರಿಯಾಗಿ ಮುಂದುವರಿಯುವುದು ಕೇಜ್ರಿವಾಲ್ ಅವರ ವೈಯಕ್ತಿಕ ಆಯ್ಕೆಯಾಗಿದೆ. ಈ ವಿಷಯದಲ್ಲಿ ನ್ಯಾಯಾಂಗದ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಮತ್ತು ರಾಜ್ಯದ ಇತರ ಅಂಗಗಳು ಈ ಸಮಸ್ಯೆಯನ್ನು ಪರಿಶೀಲಿಸಬೇಕು ಎಂದು ಕೋರ್ಟ್‌ ಹೇಳಿತ್ತು.

ಇದನ್ನು ಓದಿ: ಕೇಜ್ರಿವಾಲ್‌ ‘ಅಂಗಾಂಗ ವೈಫಲ್ಯಗೊಳಿಸಿ ನಿಧಾನವಾಗಿ ಸಾವಿಗೆ ತಳ್ಳಲು ಸಂಚು ರೂಪಿಸಲಾಗುತ್ತಿದೆ’: ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...