Homeಮುಖಪುಟಎಲ್‌ಜಿ ಮನೆ ಮುಂದೆ ಆಪ್ ನಾಯಕರ ಧರಣಿ: ಪೊಲೀಸರಿಂದ ಹಲ್ಲೆ, ಬಂಧನ

ಎಲ್‌ಜಿ ಮನೆ ಮುಂದೆ ಆಪ್ ನಾಯಕರ ಧರಣಿ: ಪೊಲೀಸರಿಂದ ಹಲ್ಲೆ, ಬಂಧನ

ನಿನ್ನೆ ಪ್ರತಿಭಟನೆ ನಡೆಸುವ ಹೇಳಿಕೆ ನೀಡಿದ್ದ ಆಪ್ ಶಾಸಕಿ ಅತಿಶಿ, ’ಮೇಯರ್‌ಗಳಿಗೆ ಧರಣಿ ನಡೆಸಲು ಅವಕಾಶ ನೀಡಿರುವ ದೆಹಲಿ ಪೊಲೀಸರು ನಮಗೂ ಅವಕಾಶ ನೀಡುತ್ತಾರೆ’ ಎಂದು ವ್ಯಂಗ್ಯವಾಡಿದ್ದರು.

- Advertisement -
- Advertisement -

ಉತ್ತರ ದೆಹಲಿ ಪಾಲಿಕೆಯಲ್ಲಿ 2,500 ಕೋಟಿ ರೂಪಾಯಿ ಹಣದ ದುರುಪಯೋಗ ಮಾಡಲಾಗಿದೆ ಎಂದು ಆರೋಪಿಸಿದ್ದ ಆಪ್ ನಾಯಕರು, ಗೃಹ ಸಚಿವ ಅಮಿತ್ ಶಾ ಮತ್ತು ಅನಿಲ್ ಬೈಜಾಲ್ ಅವರ ನಿವಾಸದ ಹೊರಗೆ ಪ್ರತಿಭಟನೆ ನಡೆಸಲು ತಯಾರಾಗಿದ್ದರು. ಪ್ರತಿಭಟನೆಗೂ ಮುನ್ನವೇ ಆಪ್ ನಾಯಕರಾದ ರಾಘವ್ ಚಡ್ಡಾ ಮತ್ತು ಪ್ರತಿಭಟನಾ ಸ್ಥಳಕ್ಕೆ ತೆರಳಿದ್ದ ಶಾಸಕಿ ಅತಿಶಿ ಸೇರಿದಂತೆ ಹಲವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

“ಪಾಲಿಕೆಯಲ್ಲಿ 2,500 ಕೋಟಿ ರೂಪಾಯಿ ಹಣ ದುರುಪಯೋಗವಾಗಿದೆ. ಕೇಂದ್ರ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು. ನಾಳೆ ಬೆಳಗ್ಗೆ 11 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಲೆಫ್ಟಿನೆಂಟ್ ಗವರ್ನರ್ ಅವರ ಮನೆ ಮುಂದೆ ಧರಣಿ ನಡೆಸಲಾಗುವುದು.  ಸಿಬಿಐ ವಿಚಾರಣೆಗೆ ಅವರು ಒಪ್ಪಿಗೆ ನೀಡುವವರೆಗೂ ನಾವು ಅಲ್ಲಿಯೇ ಕುಳಿತುಕೊಳ್ಳುತ್ತೇವೆ” ಎಂದು ಎಎಪಿ ಶಾಸಕಿ ಅತಿಶಿ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ಕೊರೊನಾ ನಿಯಮಗಳ ಕಾರಣದಿಂದಾಗಿ ಧರಣಿ ನಡೆಸಲು ದೆಹಲಿ ಪೊಲೀಸರು ಅನುಮತಿ  ನೀಡಿರಲಿಲ್ಲ. “ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು, ಕೋವಿಡ್ ಹರಡುವುದನ್ನು ತಡೆಯಲು ಎಲ್ಲಾ ಸಾರ್ವಜನಿಕ ಸಭೆಗಳನ್ನು ನಿಷೇಧಿಸಲಾಗಿದೆ. ಇದಲ್ಲದೆ, ನವದೆಹಲಿ ಜಿಲ್ಲೆಯಲ್ಲಿ ಸಿಆರ್‌ಪಿಸಿಯ ಸೆಕ್ಷನ್ 144 ಜಾರಿಯಲ್ಲಿದೆ. ನಾವು ಎಎಪಿ ವಿನಂತಿಯನ್ನು ತಿರಸ್ಕರಿಸಿದ್ದೇವೆ” ಎಂದು ಡಿಸಿಪಿ ಐಶ್ ಸಿಂಘಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಹಣ ದುರುಪಯೋಗ ಆರೋಪ: ಅಮಿತ್ ಶಾ ಮನೆ ಎದುರು ಧರಣಿ ನಡೆಸಲಿರುವ ಆಪ್

 

ಎಎಪಿ ಶಾಸಕಿ ಅತಿಶಿ ಮತ್ತು ಪಕ್ಷದ ಕೆಲವು ಮುಖಂಡರು ಲೆಫ್ಟಿನೆಂಟ್ ಗವರ್ನರ್ ನಿವಾಸಕ್ಕೆ ಆಗಮಿಸಿದ್ದು, ಬ್ಯಾರಿಕೇಡ್‌ಗಳನ್ನು ದಾಟಲು ಅವಕಾಶವಿರಲಿಲ್ಲ. ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿ ಆಪ್ ಮುಖಂಡರು ಘೋಷಣೆಗಳನ್ನು ಕೂಗಿದರು, ಆ ನಂತರ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದಿದ್ದಾರೆ.

ಈ ವೇಳೆ “ನಾವು ಲೆಫ್ಟಿನೆಂಟ್ ಜನರಲ್‌ಗೆ ಪತ್ರ ಬರೆದು ಮಾತಾಡಲು ಅಪಾಯಿಂಟ್ಮೆಂಟ್ ಕೇಳಿದ್ದೇವು. ಆದರೆ ಸಿಗಲಿಲ್ಲ. ಲೆಫ್ಟಿನೆಂಟ್ ಜನರಲ್ ಅನಿಲ್ ಬೈಜಾಲ್ ಯಾರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ? ” ಎಂದು ಅತಿಶಿ ಪ್ರಶ್ನಿಸಿದ್ದಾರೆ.

ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಆಪ್ ನಾಯಕರ ಮೇಲೆ ಪೊಲೀಸರು ಹಲ್ಲೆ ಮಾಡಿ ಬಂಧಿಸಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ಆರೋಪಿಸಿದೆ.

ಇದನ್ನು ಓದಿ: ಕರ್ನಾಟಕದಲ್ಲಿ ಬಿಜೆಪಿ ಹೆಬ್ಬಾಗಿಲು ಪೂರ್ತಿ ತೆರೆದಿಲ್ಲ, ಕಳ್ಳಕಿಂಡಿಗಳು ಇನ್ನೂ ಮುಚ್ಚಿಲ್ಲ

ನಿನ್ನೆ ಪ್ರತಿಭಟನೆ ನಡೆಸುವ ಹೇಳಿಕೆ ನೀಡಿದ್ದ ಆಪ್ ಶಾಸಕಿ ಅತಿಶಿ, ಮೇಯರ್‌ಗಳಿಗೆ ಧರಣಿ ನಡೆಸಲು ಅವಕಾಶ ನೀಡಿರುವ ದೆಹಲಿ ಪೊಲೀಸರು ನಮಗೂ ಅವಕಾಶ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ವ್ಯಂಗ್ಯವಾಡಿದ್ದರು.

ಏಕೆಂದರೆ, ಮೂರು ಮಹಾನಗರ ಪಾಲಿಕೆಗಳ ಮೇಯರ್‌ಗಳು ಸರ್ಕಾರದಿಂದ ತಮಗೆ ಬರಬೇಕಾದ ಹಣವನ್ನು ನೀಡಬೇಕು ಎಂದು ಆಗ್ರಹಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದ ಹೊರಗೆ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

“ಬಿಜೆಪಿ ಮುಖಂಡರು ಸಿಎಂ ಮನೆಯ ಹೊರಗೆ ಹಲವಾರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇದು ಸೆಕ್ಷನ್ 144 ಉಲ್ಲಂಘನೆ ಎಂದು ಪೊಲೀಸರಿಗೆ ಅನ್ನಿಸುವುದಿಲ್ಲ ಮತ್ತು ಸಾಂಕ್ರಾಮಿಕ ಮಾರ್ಗಸೂಚಿಗಳು ಅವರಿಗೆ ಅನ್ವಯಿಸುವುದಿಲ್ಲ”ಎಂದು ರಾಘವ್ ಚಡ್ಡಾ ಹೇಳಿದ್ದಾರೆ.

ಎಲ್ಲಾ ಮೂರು ಮಹಾನಗರ ಪಾಲಿಕೆಗಳು ತಮ್ಮ ಸಿಬ್ಬಂದಿಗೆ ನಿಯಮಿತವಾಗಿ ಸಂಬಳ ನೀಡಲು ಸಾಧ್ಯವಾಗದ ಕಾರಣ ಆರ್ಥಿಕ ಕುಸಿತವನ್ನು ಎದುರಿಸುತ್ತಿವೆ. ಇದು ಪುರಸಭೆ, ಎಂಜಿನಿಯರ್‌ಗಳು, ವೈದ್ಯರು ಮತ್ತು ಇತರ ಸಿಬ್ಬಂದಿಗಳ ಪ್ರತಿಭಟನೆಗೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಆಪ್ ಸರ್ಕಾರ ಎಂಸಿಡಿ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಆಗ್ರಹಿಸಿ, ಧರಣಿ ನಡೆಸಲು ನಿರ್ಧರಿಸಿತ್ತು.


ಇದನ್ನೂ ಓದಿ: ಡಿಸೆಂಬರ್‌ 15 ರಂದು ಮತ್ತೇ ವಿಧಾನ ಪರಿಷತ್‌ ಅಧಿವೇಶನ: ’ಗೋಹತ್ಯೆ’ ಮಸೂದೆ ಅಂಗೀಕಾರಕ್ಕೆ ತಯಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...