Homeಮುಖಪುಟಎಲ್‌ಜಿ ಮನೆ ಮುಂದೆ ಆಪ್ ನಾಯಕರ ಧರಣಿ: ಪೊಲೀಸರಿಂದ ಹಲ್ಲೆ, ಬಂಧನ

ಎಲ್‌ಜಿ ಮನೆ ಮುಂದೆ ಆಪ್ ನಾಯಕರ ಧರಣಿ: ಪೊಲೀಸರಿಂದ ಹಲ್ಲೆ, ಬಂಧನ

ನಿನ್ನೆ ಪ್ರತಿಭಟನೆ ನಡೆಸುವ ಹೇಳಿಕೆ ನೀಡಿದ್ದ ಆಪ್ ಶಾಸಕಿ ಅತಿಶಿ, ’ಮೇಯರ್‌ಗಳಿಗೆ ಧರಣಿ ನಡೆಸಲು ಅವಕಾಶ ನೀಡಿರುವ ದೆಹಲಿ ಪೊಲೀಸರು ನಮಗೂ ಅವಕಾಶ ನೀಡುತ್ತಾರೆ’ ಎಂದು ವ್ಯಂಗ್ಯವಾಡಿದ್ದರು.

- Advertisement -
- Advertisement -

ಉತ್ತರ ದೆಹಲಿ ಪಾಲಿಕೆಯಲ್ಲಿ 2,500 ಕೋಟಿ ರೂಪಾಯಿ ಹಣದ ದುರುಪಯೋಗ ಮಾಡಲಾಗಿದೆ ಎಂದು ಆರೋಪಿಸಿದ್ದ ಆಪ್ ನಾಯಕರು, ಗೃಹ ಸಚಿವ ಅಮಿತ್ ಶಾ ಮತ್ತು ಅನಿಲ್ ಬೈಜಾಲ್ ಅವರ ನಿವಾಸದ ಹೊರಗೆ ಪ್ರತಿಭಟನೆ ನಡೆಸಲು ತಯಾರಾಗಿದ್ದರು. ಪ್ರತಿಭಟನೆಗೂ ಮುನ್ನವೇ ಆಪ್ ನಾಯಕರಾದ ರಾಘವ್ ಚಡ್ಡಾ ಮತ್ತು ಪ್ರತಿಭಟನಾ ಸ್ಥಳಕ್ಕೆ ತೆರಳಿದ್ದ ಶಾಸಕಿ ಅತಿಶಿ ಸೇರಿದಂತೆ ಹಲವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

“ಪಾಲಿಕೆಯಲ್ಲಿ 2,500 ಕೋಟಿ ರೂಪಾಯಿ ಹಣ ದುರುಪಯೋಗವಾಗಿದೆ. ಕೇಂದ್ರ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು. ನಾಳೆ ಬೆಳಗ್ಗೆ 11 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಲೆಫ್ಟಿನೆಂಟ್ ಗವರ್ನರ್ ಅವರ ಮನೆ ಮುಂದೆ ಧರಣಿ ನಡೆಸಲಾಗುವುದು.  ಸಿಬಿಐ ವಿಚಾರಣೆಗೆ ಅವರು ಒಪ್ಪಿಗೆ ನೀಡುವವರೆಗೂ ನಾವು ಅಲ್ಲಿಯೇ ಕುಳಿತುಕೊಳ್ಳುತ್ತೇವೆ” ಎಂದು ಎಎಪಿ ಶಾಸಕಿ ಅತಿಶಿ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ಕೊರೊನಾ ನಿಯಮಗಳ ಕಾರಣದಿಂದಾಗಿ ಧರಣಿ ನಡೆಸಲು ದೆಹಲಿ ಪೊಲೀಸರು ಅನುಮತಿ  ನೀಡಿರಲಿಲ್ಲ. “ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು, ಕೋವಿಡ್ ಹರಡುವುದನ್ನು ತಡೆಯಲು ಎಲ್ಲಾ ಸಾರ್ವಜನಿಕ ಸಭೆಗಳನ್ನು ನಿಷೇಧಿಸಲಾಗಿದೆ. ಇದಲ್ಲದೆ, ನವದೆಹಲಿ ಜಿಲ್ಲೆಯಲ್ಲಿ ಸಿಆರ್‌ಪಿಸಿಯ ಸೆಕ್ಷನ್ 144 ಜಾರಿಯಲ್ಲಿದೆ. ನಾವು ಎಎಪಿ ವಿನಂತಿಯನ್ನು ತಿರಸ್ಕರಿಸಿದ್ದೇವೆ” ಎಂದು ಡಿಸಿಪಿ ಐಶ್ ಸಿಂಘಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಹಣ ದುರುಪಯೋಗ ಆರೋಪ: ಅಮಿತ್ ಶಾ ಮನೆ ಎದುರು ಧರಣಿ ನಡೆಸಲಿರುವ ಆಪ್

 

ಎಎಪಿ ಶಾಸಕಿ ಅತಿಶಿ ಮತ್ತು ಪಕ್ಷದ ಕೆಲವು ಮುಖಂಡರು ಲೆಫ್ಟಿನೆಂಟ್ ಗವರ್ನರ್ ನಿವಾಸಕ್ಕೆ ಆಗಮಿಸಿದ್ದು, ಬ್ಯಾರಿಕೇಡ್‌ಗಳನ್ನು ದಾಟಲು ಅವಕಾಶವಿರಲಿಲ್ಲ. ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿ ಆಪ್ ಮುಖಂಡರು ಘೋಷಣೆಗಳನ್ನು ಕೂಗಿದರು, ಆ ನಂತರ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದಿದ್ದಾರೆ.

ಈ ವೇಳೆ “ನಾವು ಲೆಫ್ಟಿನೆಂಟ್ ಜನರಲ್‌ಗೆ ಪತ್ರ ಬರೆದು ಮಾತಾಡಲು ಅಪಾಯಿಂಟ್ಮೆಂಟ್ ಕೇಳಿದ್ದೇವು. ಆದರೆ ಸಿಗಲಿಲ್ಲ. ಲೆಫ್ಟಿನೆಂಟ್ ಜನರಲ್ ಅನಿಲ್ ಬೈಜಾಲ್ ಯಾರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ? ” ಎಂದು ಅತಿಶಿ ಪ್ರಶ್ನಿಸಿದ್ದಾರೆ.

ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಆಪ್ ನಾಯಕರ ಮೇಲೆ ಪೊಲೀಸರು ಹಲ್ಲೆ ಮಾಡಿ ಬಂಧಿಸಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ಆರೋಪಿಸಿದೆ.

ಇದನ್ನು ಓದಿ: ಕರ್ನಾಟಕದಲ್ಲಿ ಬಿಜೆಪಿ ಹೆಬ್ಬಾಗಿಲು ಪೂರ್ತಿ ತೆರೆದಿಲ್ಲ, ಕಳ್ಳಕಿಂಡಿಗಳು ಇನ್ನೂ ಮುಚ್ಚಿಲ್ಲ

ನಿನ್ನೆ ಪ್ರತಿಭಟನೆ ನಡೆಸುವ ಹೇಳಿಕೆ ನೀಡಿದ್ದ ಆಪ್ ಶಾಸಕಿ ಅತಿಶಿ, ಮೇಯರ್‌ಗಳಿಗೆ ಧರಣಿ ನಡೆಸಲು ಅವಕಾಶ ನೀಡಿರುವ ದೆಹಲಿ ಪೊಲೀಸರು ನಮಗೂ ಅವಕಾಶ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ವ್ಯಂಗ್ಯವಾಡಿದ್ದರು.

ಏಕೆಂದರೆ, ಮೂರು ಮಹಾನಗರ ಪಾಲಿಕೆಗಳ ಮೇಯರ್‌ಗಳು ಸರ್ಕಾರದಿಂದ ತಮಗೆ ಬರಬೇಕಾದ ಹಣವನ್ನು ನೀಡಬೇಕು ಎಂದು ಆಗ್ರಹಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದ ಹೊರಗೆ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

“ಬಿಜೆಪಿ ಮುಖಂಡರು ಸಿಎಂ ಮನೆಯ ಹೊರಗೆ ಹಲವಾರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇದು ಸೆಕ್ಷನ್ 144 ಉಲ್ಲಂಘನೆ ಎಂದು ಪೊಲೀಸರಿಗೆ ಅನ್ನಿಸುವುದಿಲ್ಲ ಮತ್ತು ಸಾಂಕ್ರಾಮಿಕ ಮಾರ್ಗಸೂಚಿಗಳು ಅವರಿಗೆ ಅನ್ವಯಿಸುವುದಿಲ್ಲ”ಎಂದು ರಾಘವ್ ಚಡ್ಡಾ ಹೇಳಿದ್ದಾರೆ.

ಎಲ್ಲಾ ಮೂರು ಮಹಾನಗರ ಪಾಲಿಕೆಗಳು ತಮ್ಮ ಸಿಬ್ಬಂದಿಗೆ ನಿಯಮಿತವಾಗಿ ಸಂಬಳ ನೀಡಲು ಸಾಧ್ಯವಾಗದ ಕಾರಣ ಆರ್ಥಿಕ ಕುಸಿತವನ್ನು ಎದುರಿಸುತ್ತಿವೆ. ಇದು ಪುರಸಭೆ, ಎಂಜಿನಿಯರ್‌ಗಳು, ವೈದ್ಯರು ಮತ್ತು ಇತರ ಸಿಬ್ಬಂದಿಗಳ ಪ್ರತಿಭಟನೆಗೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಆಪ್ ಸರ್ಕಾರ ಎಂಸಿಡಿ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಆಗ್ರಹಿಸಿ, ಧರಣಿ ನಡೆಸಲು ನಿರ್ಧರಿಸಿತ್ತು.


ಇದನ್ನೂ ಓದಿ: ಡಿಸೆಂಬರ್‌ 15 ರಂದು ಮತ್ತೇ ವಿಧಾನ ಪರಿಷತ್‌ ಅಧಿವೇಶನ: ’ಗೋಹತ್ಯೆ’ ಮಸೂದೆ ಅಂಗೀಕಾರಕ್ಕೆ ತಯಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...