Homeಮುಖಪುಟಎಲ್‌ಜಿ ಮನೆ ಮುಂದೆ ಆಪ್ ನಾಯಕರ ಧರಣಿ: ಪೊಲೀಸರಿಂದ ಹಲ್ಲೆ, ಬಂಧನ

ಎಲ್‌ಜಿ ಮನೆ ಮುಂದೆ ಆಪ್ ನಾಯಕರ ಧರಣಿ: ಪೊಲೀಸರಿಂದ ಹಲ್ಲೆ, ಬಂಧನ

ನಿನ್ನೆ ಪ್ರತಿಭಟನೆ ನಡೆಸುವ ಹೇಳಿಕೆ ನೀಡಿದ್ದ ಆಪ್ ಶಾಸಕಿ ಅತಿಶಿ, ’ಮೇಯರ್‌ಗಳಿಗೆ ಧರಣಿ ನಡೆಸಲು ಅವಕಾಶ ನೀಡಿರುವ ದೆಹಲಿ ಪೊಲೀಸರು ನಮಗೂ ಅವಕಾಶ ನೀಡುತ್ತಾರೆ’ ಎಂದು ವ್ಯಂಗ್ಯವಾಡಿದ್ದರು.

- Advertisement -
- Advertisement -

ಉತ್ತರ ದೆಹಲಿ ಪಾಲಿಕೆಯಲ್ಲಿ 2,500 ಕೋಟಿ ರೂಪಾಯಿ ಹಣದ ದುರುಪಯೋಗ ಮಾಡಲಾಗಿದೆ ಎಂದು ಆರೋಪಿಸಿದ್ದ ಆಪ್ ನಾಯಕರು, ಗೃಹ ಸಚಿವ ಅಮಿತ್ ಶಾ ಮತ್ತು ಅನಿಲ್ ಬೈಜಾಲ್ ಅವರ ನಿವಾಸದ ಹೊರಗೆ ಪ್ರತಿಭಟನೆ ನಡೆಸಲು ತಯಾರಾಗಿದ್ದರು. ಪ್ರತಿಭಟನೆಗೂ ಮುನ್ನವೇ ಆಪ್ ನಾಯಕರಾದ ರಾಘವ್ ಚಡ್ಡಾ ಮತ್ತು ಪ್ರತಿಭಟನಾ ಸ್ಥಳಕ್ಕೆ ತೆರಳಿದ್ದ ಶಾಸಕಿ ಅತಿಶಿ ಸೇರಿದಂತೆ ಹಲವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

“ಪಾಲಿಕೆಯಲ್ಲಿ 2,500 ಕೋಟಿ ರೂಪಾಯಿ ಹಣ ದುರುಪಯೋಗವಾಗಿದೆ. ಕೇಂದ್ರ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು. ನಾಳೆ ಬೆಳಗ್ಗೆ 11 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಲೆಫ್ಟಿನೆಂಟ್ ಗವರ್ನರ್ ಅವರ ಮನೆ ಮುಂದೆ ಧರಣಿ ನಡೆಸಲಾಗುವುದು.  ಸಿಬಿಐ ವಿಚಾರಣೆಗೆ ಅವರು ಒಪ್ಪಿಗೆ ನೀಡುವವರೆಗೂ ನಾವು ಅಲ್ಲಿಯೇ ಕುಳಿತುಕೊಳ್ಳುತ್ತೇವೆ” ಎಂದು ಎಎಪಿ ಶಾಸಕಿ ಅತಿಶಿ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ಕೊರೊನಾ ನಿಯಮಗಳ ಕಾರಣದಿಂದಾಗಿ ಧರಣಿ ನಡೆಸಲು ದೆಹಲಿ ಪೊಲೀಸರು ಅನುಮತಿ  ನೀಡಿರಲಿಲ್ಲ. “ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು, ಕೋವಿಡ್ ಹರಡುವುದನ್ನು ತಡೆಯಲು ಎಲ್ಲಾ ಸಾರ್ವಜನಿಕ ಸಭೆಗಳನ್ನು ನಿಷೇಧಿಸಲಾಗಿದೆ. ಇದಲ್ಲದೆ, ನವದೆಹಲಿ ಜಿಲ್ಲೆಯಲ್ಲಿ ಸಿಆರ್‌ಪಿಸಿಯ ಸೆಕ್ಷನ್ 144 ಜಾರಿಯಲ್ಲಿದೆ. ನಾವು ಎಎಪಿ ವಿನಂತಿಯನ್ನು ತಿರಸ್ಕರಿಸಿದ್ದೇವೆ” ಎಂದು ಡಿಸಿಪಿ ಐಶ್ ಸಿಂಘಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಹಣ ದುರುಪಯೋಗ ಆರೋಪ: ಅಮಿತ್ ಶಾ ಮನೆ ಎದುರು ಧರಣಿ ನಡೆಸಲಿರುವ ಆಪ್

 

ಎಎಪಿ ಶಾಸಕಿ ಅತಿಶಿ ಮತ್ತು ಪಕ್ಷದ ಕೆಲವು ಮುಖಂಡರು ಲೆಫ್ಟಿನೆಂಟ್ ಗವರ್ನರ್ ನಿವಾಸಕ್ಕೆ ಆಗಮಿಸಿದ್ದು, ಬ್ಯಾರಿಕೇಡ್‌ಗಳನ್ನು ದಾಟಲು ಅವಕಾಶವಿರಲಿಲ್ಲ. ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿ ಆಪ್ ಮುಖಂಡರು ಘೋಷಣೆಗಳನ್ನು ಕೂಗಿದರು, ಆ ನಂತರ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದಿದ್ದಾರೆ.

ಈ ವೇಳೆ “ನಾವು ಲೆಫ್ಟಿನೆಂಟ್ ಜನರಲ್‌ಗೆ ಪತ್ರ ಬರೆದು ಮಾತಾಡಲು ಅಪಾಯಿಂಟ್ಮೆಂಟ್ ಕೇಳಿದ್ದೇವು. ಆದರೆ ಸಿಗಲಿಲ್ಲ. ಲೆಫ್ಟಿನೆಂಟ್ ಜನರಲ್ ಅನಿಲ್ ಬೈಜಾಲ್ ಯಾರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ? ” ಎಂದು ಅತಿಶಿ ಪ್ರಶ್ನಿಸಿದ್ದಾರೆ.

ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಆಪ್ ನಾಯಕರ ಮೇಲೆ ಪೊಲೀಸರು ಹಲ್ಲೆ ಮಾಡಿ ಬಂಧಿಸಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ಆರೋಪಿಸಿದೆ.

ಇದನ್ನು ಓದಿ: ಕರ್ನಾಟಕದಲ್ಲಿ ಬಿಜೆಪಿ ಹೆಬ್ಬಾಗಿಲು ಪೂರ್ತಿ ತೆರೆದಿಲ್ಲ, ಕಳ್ಳಕಿಂಡಿಗಳು ಇನ್ನೂ ಮುಚ್ಚಿಲ್ಲ

ನಿನ್ನೆ ಪ್ರತಿಭಟನೆ ನಡೆಸುವ ಹೇಳಿಕೆ ನೀಡಿದ್ದ ಆಪ್ ಶಾಸಕಿ ಅತಿಶಿ, ಮೇಯರ್‌ಗಳಿಗೆ ಧರಣಿ ನಡೆಸಲು ಅವಕಾಶ ನೀಡಿರುವ ದೆಹಲಿ ಪೊಲೀಸರು ನಮಗೂ ಅವಕಾಶ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ವ್ಯಂಗ್ಯವಾಡಿದ್ದರು.

ಏಕೆಂದರೆ, ಮೂರು ಮಹಾನಗರ ಪಾಲಿಕೆಗಳ ಮೇಯರ್‌ಗಳು ಸರ್ಕಾರದಿಂದ ತಮಗೆ ಬರಬೇಕಾದ ಹಣವನ್ನು ನೀಡಬೇಕು ಎಂದು ಆಗ್ರಹಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದ ಹೊರಗೆ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

“ಬಿಜೆಪಿ ಮುಖಂಡರು ಸಿಎಂ ಮನೆಯ ಹೊರಗೆ ಹಲವಾರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇದು ಸೆಕ್ಷನ್ 144 ಉಲ್ಲಂಘನೆ ಎಂದು ಪೊಲೀಸರಿಗೆ ಅನ್ನಿಸುವುದಿಲ್ಲ ಮತ್ತು ಸಾಂಕ್ರಾಮಿಕ ಮಾರ್ಗಸೂಚಿಗಳು ಅವರಿಗೆ ಅನ್ವಯಿಸುವುದಿಲ್ಲ”ಎಂದು ರಾಘವ್ ಚಡ್ಡಾ ಹೇಳಿದ್ದಾರೆ.

ಎಲ್ಲಾ ಮೂರು ಮಹಾನಗರ ಪಾಲಿಕೆಗಳು ತಮ್ಮ ಸಿಬ್ಬಂದಿಗೆ ನಿಯಮಿತವಾಗಿ ಸಂಬಳ ನೀಡಲು ಸಾಧ್ಯವಾಗದ ಕಾರಣ ಆರ್ಥಿಕ ಕುಸಿತವನ್ನು ಎದುರಿಸುತ್ತಿವೆ. ಇದು ಪುರಸಭೆ, ಎಂಜಿನಿಯರ್‌ಗಳು, ವೈದ್ಯರು ಮತ್ತು ಇತರ ಸಿಬ್ಬಂದಿಗಳ ಪ್ರತಿಭಟನೆಗೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಆಪ್ ಸರ್ಕಾರ ಎಂಸಿಡಿ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಆಗ್ರಹಿಸಿ, ಧರಣಿ ನಡೆಸಲು ನಿರ್ಧರಿಸಿತ್ತು.


ಇದನ್ನೂ ಓದಿ: ಡಿಸೆಂಬರ್‌ 15 ರಂದು ಮತ್ತೇ ವಿಧಾನ ಪರಿಷತ್‌ ಅಧಿವೇಶನ: ’ಗೋಹತ್ಯೆ’ ಮಸೂದೆ ಅಂಗೀಕಾರಕ್ಕೆ ತಯಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...