Homeಮುಖಪುಟಕೇಜ್ರಿವಾಲ್ ದೇಹದಲ್ಲಿ 300 ದಾಟಿದ ಸಕ್ಕರೆ ಮಟ್ಟ: ತಿಹಾರ್ ಜೈಲಿನ ಹೊರಗೆ 'ಇನ್ಸುಲಿನ್' ಹಿಡಿದು ಪ್ರತಿಭಟಿಸಿದ...

ಕೇಜ್ರಿವಾಲ್ ದೇಹದಲ್ಲಿ 300 ದಾಟಿದ ಸಕ್ಕರೆ ಮಟ್ಟ: ತಿಹಾರ್ ಜೈಲಿನ ಹೊರಗೆ ‘ಇನ್ಸುಲಿನ್’ ಹಿಡಿದು ಪ್ರತಿಭಟಿಸಿದ ಎಎಪಿ ನಾಯಕರು

- Advertisement -
- Advertisement -

ಜೈಲಿನಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಕ್ಕರೆ ಮಟ್ಟವು 300 ದಾಟಿದೆ ಎಂದು ದೆಹಲಿ ಸಚಿವೆ ಅತಿಶಿ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ತಿಹಾರ್ ಜೈಲಿನ ಹೊರಗೆ ಇನ್ಸುಲಿನ್ ಚುಚ್ಚುಮದ್ದನ್ನು ಹಿಡಿದು ಪ್ರತಿಭಟನೆ ನಡೆಸಿದರು. ‘ದೆಹಲಿ ಅಬಕಾರಿ ನೀತಿ ಹಗರಣದ ಮನಿ ಲಾಂಡ್ರಿಂಗ್ ಪ್ರಕರಣ’ದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ತಿಂಗಳು ಬಂಧಿಸಲಾಗಿದೆ.

ಪ್ರತಿಭಟನಾ ನಿರತ ಕಾರ್ಯಕರ್ತರು, ಅರವಿಂದ್ ಕೇಜ್ರಿವಾಲ್ ಅವರ ವೈದ್ಯಕೀಯ ಸ್ಥಿತಿಯ ಗಂಭೀರ ಸ್ವರೂಪವನ್ನು ಒತ್ತಿಹೇಳುವ ಮೂಲಕ, ಇನ್ಸುಲಿನ್ ನೀಡುವುದನ್ನು ಖಚಿತಪಡಿಸಿಕೊಳ್ಳಲು ತಿಹಾರ್ ಜೈಲು ಆಡಳಿತವನ್ನು ಒತ್ತಾಯಿಸಿದರು.

ತಿಹಾರ್ ಜೈಲು ಆಡಳಿತವು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ವರದಿಯನ್ನು ಸಲ್ಲಿಸಿದ ನಂತರ ಪ್ರತಿಭಟನೆ ನಡೆಸಲಾಯಿತು. ಏಪ್ರಿಲ್ 10 ಮತ್ತು ಏಪ್ರಿಲ್ 15 ರಂದು ಮೌಖಿಕ ಮಧುಮೇಹ ನಿವಾರಕ ಔಷಧಗಳನ್ನು ಸಲಹೆ ಮಾಡಿದ ಔಷಧಿ ತಜ್ಞರು, ಮುಖ್ಯಮಂತ್ರಿಯವರ ಆರೋಗ್ಯವನ್ನು ಪರಿಶೀಲಿಸಿದ್ದಾರೆ. ಅವರ ಚಿಕಿತ್ಸೆಯ ಸಮಯದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಯಾವುದೇ ಸಮಯದಲ್ಲಿ ಇನ್ಸುಲಿನ್ ನೀಡುವುದನ್ನು ನಿರಾಕರಿಸಲಾಯಿತು ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ ಸರ್ಕಾರವು ಈಗ ರದ್ದುಗೊಳಿಸಿರುವ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಅವರನ್ನು ಏಪ್ರಿಲ್ 1 ರಿಂದ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

“ಕಳೆದ 20 ದಿನಗಳಿಂದ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿದ್ದಾರೆ. ಅವರು 30 ವರ್ಷಗಳಿಂದ ಮಧುಮೇಹಿಗಳಾಗಿದ್ದು, ಅವರ ಸಕ್ಕರೆ ಮಟ್ಟವು 300 ದಾಟಿದೆ. ನೀವು ಪ್ರಪಂಚದ ಯಾವುದೇ ವೈದ್ಯರನ್ನು ಕೇಳಿದರೆ, ಅವರು 300 ಕ್ಕಿಂತ ಹೆಚ್ಚಿನ ಸಕ್ಕರೆ ಮಟ್ಟವನ್ನು ಇನ್ಸುಲಿನ್ ಇಲ್ಲದೆ ನಿಯಂತ್ರಿಸಲಾಗುವುದಿಲ್ಲ ಎಂದು ಹೇಳುತ್ತಾರೆ. ಆದರೆ, ಬಿಜೆಪಿ ನಿರ್ದೇಶನದ ಮೇರೆಗೆ ತಿಹಾರ್ ಆಡಳಿತವು ಇನ್ಸುಲಿನ್ ಅನ್ನು ನಿರಾಕರಿಸಿದೆ. ಇಂತಹ ಕ್ರೌರ್ಯ ಬ್ರಿಟಿಷರ ಕಾಲದಲ್ಲೂ ನಡೆಯಲಿಲ್ಲ; 300 ಕ್ಕಿಂತ ಹೆಚ್ಚು ಸಕ್ಕರೆ ಇರುವ ಮಧುಮೇಹಿಗಳಿಗೆ ಇನ್ಸುಲಿನ್ ನಿರಾಕರಿಸುತ್ತಿರುವ ಬಿಜೆಪಿಯಿಂದ ಇದು ಯಾವ ರೀತಿಯ ಕ್ರೌರ್ಯ” ಎಂದು ಅತಿಶಿ ಪ್ರತಿಭಟನೆಯ ಸಂದರ್ಭದಲ್ಲಿ ಸುದ್ದಿಗಾರರ ಮುಂದೆ ಪ್ರಶ್ನಿಸಿದರು.

ನಂತರ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಅರವಿಂದ್ ಕೇಜ್ರಿವಾಲ್ ಅವರ ಸಕ್ಕರೆ ಮಟ್ಟವು 300 ದಾಟಿದೆ. ಆದರೆ, ಬಿಜೆಪಿಯು ಅಂತಹ ಕೀಳು ಮಟ್ಟದ ರಾಜಕೀಯಕ್ಕೆ ಇಳಿದಿದೆ. ಅದರ ಸೂಚನೆಯ ಮೇರೆಗೆ ತಿಹಾರ್ ಆಡಳಿತವು ಅವನಿಗೆ ಇನ್ಸುಲಿನ್ ನೀಡಲು ಸಿದ್ಧವಾಗಿಲ್ಲ. ತಿಹಾರ್ ಆಡಳಿತವು ಕೇಜ್ರಿವಾಲ್ ಅವರಿಗೆ ಇನ್ಸುಲಿನ್ ನೀಡಲು ಸಾಧ್ಯವಾಗದಿದ್ದಾಗ, ದೆಹಲಿಯ ಜನರು ತಮ್ಮ ಮುಖ್ಯಮಂತ್ರಿಗೆ ಇನ್ಸುಲಿನ್ ನೀಡಲು ಮುಂದಾದರು. ಆದರೆ ಪೊಲೀಸ್ ಅಧಿಕಾರಿಗಳು ಅದನ್ನು ತೆಗೆದುಕೊಳ್ಳಲು ನಿರಾಕರಿಸಿದರು. ಇದು ಕೇಜ್ರಿವಾಲ್ ಅವರನ್ನು ಕೊಲ್ಲುವ ಸಂಚು ಅಲ್ಲದಿದ್ದರೆ, ಅದು ಏನು” ಎಂದು ಆಕ್ರೋಶ ಹೊರಹಾಕಿದರು.

ದೆಹಲಿಯ ಮತ್ತೊಬ್ಬ ಕ್ಯಾಬಿನೆಟ್ ಸಚಿವ ಸೌರಭ್ ಭಾರದ್ವಾಜ್ ಮಾತನಾಡಿ, ‘ಜೈಲಿನಲ್ಲಿರುವ ಮಧುಮೇಹಿಗಳಿಗೆ ಸಾಕಷ್ಟು ವೈದ್ಯಕೀಯ ಸೌಲಭ್ಯಗಳ ಹಿಂದಿನ ನಿಲುವಿಗೆ ವಿರುದ್ಧವಾಗಿ ತಿಹಾರ್ ಅಧಿಕಾರಿಗಳು ಈಗ ಎಐಐಎಂಎಸ್‌ನಿಂದ ಮಧುಮೇಹ ತಜ್ಞರನ್ನು ಕೋರಿದ್ದಾರೆ’ ಎಂದು ಭಾನುವಾರ ಆರೋಪಿಸಿದ್ದಾರೆ.

“ನಿನ್ನೆ (ಏಪ್ರಿಲ್ 20), ಡೈರೆಕ್ಟರ್ ಜನರಲ್ (ಜೈಲುಗಳು) ಏಮ್ಸ್‌ಗೆ ಪತ್ರ ಬರೆದು, ಮಧುಮೇಹ ತಜ್ಞರನ್ನು ತಿಹಾರ್‌ಗೆ ನಿಯೋಜಿಸುವಂತೆ ಕೇಳಿಕೊಂಡರು. ಕೇಜ್ರಿವಾಲ್ ಸುಮಾರು 20 ದಿನಗಳಿಂದ ತಿಹಾರ್‌ನಲ್ಲಿ ದಾಖಲಾಗಿದ್ದಾರೆ ಮತ್ತು ಅವರು ಇದೀಗ ಮಧುಮೇಹ ತಜ್ಞರನ್ನು ಕೇಳುತ್ತಿದ್ದಾರೆ” ಎಂದು ಸೌರಭ್ ಭಾರದ್ವಾಜ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

“ಒಂದೆಡೆ, ತಿಹಾರ್ ಆಡಳಿತವು ಅವರಿಗೆ ವೈದ್ಯಕೀಯ ಸೌಲಭ್ಯಗಳಿವೆ ಎಂದು ಹೇಳುತ್ತದೆ ಮತ್ತು ನಂತರ ಅವರು ಮಧುಮೇಹಶಾಸ್ತ್ರಜ್ಞರನ್ನು ಕೇಳಲು ಆಮ್ಸ್‌ಗೆ ಪತ್ರ ಬರೆಯುತ್ತಿದ್ದಾರೆ” ಎಂದು ಸೌರಭ್ ಭಾರದ್ವಾಜ್ ಹೇಳಿದರು.

ಜೈಲು ಅಧಿಕಾರಿಗಳು ಹೇಳಿದ್ದೇನು?

ಸೌರಭ್ ಭಾರದ್ವಾಜ್ ಅವರ ಆರೋಪಕ್ಕೆ ತಿಹಾರ್ ಆಡಳಿತ ಪ್ರತಿಕ್ರಿಯಿಸಿದ್ದು, ಏಮ್ಸ್‌ನ ಸೂಕ್ತ ಹಿರಿಯ ತಜ್ಞರು ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಸಮಾಲೋಚನೆ ನೀಡಿದ್ದಾರೆ ಎಂದು ಹೇಳಿದ್ದಾರೆ.

“40 ನಿಮಿಷಗಳ ವಿವರವಾದ ಸಮಾಲೋಚನೆಯ ನಂತರ, ಯಾವುದೇ ಗಂಭೀರ ಅನಾರೋಗ್ಯ ಇಲ್ಲ” ಎಂದು ಕೇಜ್ರಿವಾಲ್ ಅವರಿಗೆ ಭರವಸೆ ನೀಡಲಾಯಿತು. ಶಿಫಾರಸು ಮಾಡಲಾದ ಔಷಧಿಗಳನ್ನು ಮುಂದುವರಿಸಲು ಸಲಹೆ ನೀಡಲಾಯಿತು, ಅದನ್ನು ನಿಯಮಿತವಾಗಿ ಮೌಲ್ಯಮಾಪನ ಮಾಡಲಾಗುತ್ತದೆ ಮತ್ತು ಪರಿಶೀಲಿಸಲಾಗುತ್ತದೆ” ಎಂದು ಜೈಲು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ; ಬಿಜೆಪಿ ಇನ್ನು ಮುಂದೆ ರಾಜಕೀಯ ಪಕ್ಷವಲ್ಲ, ನರೇಂದ್ರ ಮೋದಿಯನ್ನು ಆರಾಧಿಸುವ ‘ಪಂಥ’: ಪಿ ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...