Homeಚಳವಳಿರೈತರನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ, ನೀವು ಉಪವಾಸ ಕೈಗೊಳ್ಳಿ: ಅರವಿಂದ್ ಕೇಜ್ರಿವಾಲ್ ಕರೆ

ರೈತರನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ, ನೀವು ಉಪವಾಸ ಕೈಗೊಳ್ಳಿ: ಅರವಿಂದ್ ಕೇಜ್ರಿವಾಲ್ ಕರೆ

"ಈ ದೇಶದ ರೈತರನ್ನು ರಾಷ್ಟ್ರ ವಿರೋಧಿ ಎಂದು ಕರೆಯುವ ಧೈರ್ಯ ಮಾಡಬೇಡಿ" ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಕಳೆದ 18 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವ ರೈತರು ನಾಳೆಯಿಂದ ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿದ್ದು, ಇದಕ್ಕೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ನಾಯಕರು ಸಾಥ್ ನೀಡಲಿದ್ದಾರೆ.

ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ಸೋಮವಾರ (ಡಿ.14) ರೈತರೊಂದಿಗೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

“ರೈತರ ಪ್ರತಿಭಟನೆಯನ್ನು ಬೆಂಬಲಿಸಿ ನಾಳೆ ಒಂದು ದಿನದ ಉಪವಾಸವನ್ನು ನಡೆಸುತ್ತೇನೆ. ಎಎಪಿ ಸ್ವಯಂಸೇವಕರಿಗೆ ಉಪವಾಸ ಸತ್ಯಾಗ್ರಹದಲ್ಲಿ ಸೇರಿಕೊಳ್ಳಲು ನಾನು ಮನವಿ ಮಾಡುತ್ತೇನೆ. ಕೃಷಿ ಕಾನೂನುಗಳನ್ನು ವಿರೋಧಿಸುವ ರೈತರ ಎಲ್ಲಾ ಬೇಡಿಕೆಗಳನ್ನು ಕೇಂದ್ರವು ಅಹಂಕಾರ ಬಿಟ್ಟು ತಕ್ಷಣವೇ ಸ್ವೀಕರಿಸಬೇಕು. ಮತ್ತು ಎಂಎಸ್‌ಪಿ (ಕನಿಷ್ಠ ಬೆಂಬಲ ಬೆಲೆ) ಖಾತರಿಪಡಿಸುವ ಮಸೂದೆಯನ್ನು ಜಾರಿಗೆ ತರಬೇಕು’ ಎಂದು ಕೇಜ್ರಿವಾಲ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಡಿ.14 ರಿಂದ ಉಪವಾಸ ಸತ್ಯಾಗ್ರಹ ಆರಂಭಿಸಲಿರುವ ದೆಹಲಿಯ ಹೋರಾಟನಿರತ ರೈತರು

ಕೃಷಿ ಮಸೂದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು, ಅವರಿಗೆ ಬೆಂಬಲ ನೀಡುತ್ತಿರುವ ಗಾಯಕರು, ಕ್ರೀಡಾಪಟುಗಳು, ಮಾಜಿ ಸೈನಿಕರನ್ನು ರಾಷ್ಟ್ರದ್ರೋಹಿಗಳು ಎನ್ನುವವರ ವಿರುದ್ಧ ಆಪ್ ಮುಖಂಡ ಅರವಿಂದ್ ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ದೇಶ ಸೇವೆ ಮಾಡಿದ ಮಾಜಿ ಸೈನಿಕರು, ವೈದ್ಯರು, ದೇಶಕ್ಕಾಗಿ ಪ್ರಶಸ್ತಿಗಳನ್ನು ತಂದ ಆಟಗಾರರು, ಗಾಯಕರು ಅವರು ದೇಶ ವಿರೋಧಿಗಳೇ..? ನಾನು ಬಿಜೆಪಿ ಮುಖಂಡರಿಗೆ ಎಚ್ಚರಿಕೆ ನೀಡಲು ಬಯಸುತ್ತೇನೆ, ಈ ದೇಶದ ರೈತರನ್ನು ರಾಷ್ಟ್ರ ವಿರೋಧಿ ಎಂದು ಕರೆಯುವ ಧೈರ್ಯ ಮಾಡಬೇಡಿ” ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಎಚ್ಚರಿಕೆ ನೀಡಿದ್ದಾರೆ.

ದೆಹಲಿ-ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಮೂಲಭೂತ ವ್ಯವಸ್ಥೆಗಳನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿದ್ದರು. ಪ್ರತಿಭಟನಾ ಸ್ಥಳಕ್ಕೂ ಭೇಟಿ ನೀಡಿದ್ದರು. ನಂತರ ಭಾರತ್ ಬಂದ್‌ಗೆ ಬೆಂಬಲಿಸಲು ಹೊರಟ್ಟಿದ್ದ ಅವರನ್ನು ಗೃಹ ಬಂಧನದಲ್ಲಿ ಇಡಲಾಗಿತ್ತು.

ಆಪ್‌ ಪಕ್ಷವು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿ, “ಸಿಂಘು ಗಡಿಯಲ್ಲಿ ಹೋರಾಟ ನಿರತ ರೈತರನ್ನು ಭೇಟಿ ಮಾಡಿದ ನಂತರ ಮಾನ್ಯ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರವರನ್ನು ದೆಹಲಿ ಪೊಲೀಸರು ಗೃಹ ಬಂಧನದಲ್ಲಿಟ್ಟಿದ್ದಾರೆ. ಯಾರೂ ಅವರ ಮನೆ ಪ್ರವೇಶಿಸಲು ಅನುಮತಿ ನೀಡುತ್ತಿಲ್ಲ” ಎಂದು ಟ್ವೀಟ್ ಮಾಡಿ ಆರೋಪಿಸಿತ್ತು. ಆದರೆ, ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಆಪ್ ಆರೋಪಗಳನ್ನು ನಿರಾಕರಿಸಿತ್ತು.


ಇದನ್ನೂ ಓದಿ: ಅತ್ತ ರೈತರ ಪ್ರತಿಭಟನೆ, ಇತ್ತ ಪ್ರಧಾನಿಯಿಂದ ಕೃಷಿ ಕಾಯ್ದೆಗಳ ಗುಣಗಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...