Homeಮುಖಪುಟ3 ರಾಜ್ಯಗಳಲ್ಲಿ ಒಂದೇ ಒಂದು ಖಾತೆ ತೆರೆಯದ ಎಎಪಿ: ನೋಟಾಗಿಂತಲೂ ಅಲ್ಪ ಮತ

3 ರಾಜ್ಯಗಳಲ್ಲಿ ಒಂದೇ ಒಂದು ಖಾತೆ ತೆರೆಯದ ಎಎಪಿ: ನೋಟಾಗಿಂತಲೂ ಅಲ್ಪ ಮತ

- Advertisement -
- Advertisement -

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ನಿನ್ನೆ ಪ್ರಕಟವಾಗಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಬಿಜೆಪಿ ಬಹುಮತ ಪಡೆದುಕೊಂಡಿದೆ. ಕಾಂಗ್ರೆಸ್‌ ತೆಲಂಗಾಣದಲ್ಲಿ ಮಾತ್ರ ಬಹುಮತ ಪಡೆಯುವ ಮೂಲಕ  ಕಳಪೆ ಫಲಿತಾಂಶವನ್ನು ಪಡೆದುಕೊಂಡಿದೆ. ಈ ಬಗ್ಗೆ ಕಾಂಗ್ರೆಸ್‌ ವಿರುದ್ಧ ಪ್ರತಿಪಕ್ಷಗಳು ಟೀಕಿಸುತ್ತಿದೆ. ಅದರಲ್ಲು INDIA ಮೈತ್ರಿ ಪಕ್ಷಗಳು ಕೂಡ ಕಾಂಗ್ರೆಸ್‌ ವಿರುದ್ಧ ವಾಗ್ಧಾಳಿ ನಡೆಸಿದೆ.

ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದ ಆಮ್ ಆದ್ಮಿ ಪಕ್ಷದ ನಾಯಕರು ಕಾಂಗ್ರೆಸ್‌ ಪಕ್ಷವನ್ನು ಟೀಕಿಸಿದ್ದಾರೆ ಜೊತೆಗೆ ಎಎಪಿ ಪಕ್ಷವನ್ನು ಉತ್ತರ ಭಾರತದ ಅತಿದೊಡ್ಡ ವಿರೋಧ ಪಕ್ಷ ಎಂದು ಕರೆದಿದ್ದಾರೆ.

ಎಎಪಿಯ ಜಾಸ್ಮಿನ್ ಶಾ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್‌ನ್ನು ಮಾಡಿದ್ದು,  ಆಮ್ ಆದ್ಮಿ ಪಕ್ಷವು ಉತ್ತರ ಭಾರತದ  2 ರಾಜ್ಯಗಳಾದ ಪಂಜಾಬ್‌ ಮತ್ತು ದೆಹಲಿಯಲ್ಲಿ ಸರ್ಕಾರಗಳನ್ನು ಹೊಂದಿದೆ. ಆದ್ದರಿಂದ ಉತ್ತರ ಭಾರತದ ಅತಿದೊಡ್ಡ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ ಎಂದು ಹೇಳಿದ್ದಾರೆ.

ಆದರೆ ಈ ಪ್ರತಿಪಾದನೆಯನ್ನು ಮಾಡುವಾಗ ಈ ವಿಧಾನಸಭಾ ಚುನಾವಣೆಗಳಲ್ಲಿ ಎಎಪಿಯ ಸ್ವಂತ ಸಾಧನೆ ಇನ್ನಷ್ಟು ಕಳಪೆಯಾಗಿದೆ ಎಂಬುವುದನ್ನು ಅವರು ಉಲ್ಲೇಖಿಸಿಲ್ಲ. ಎಎಪಿ ಪಕ್ಷವು  ಮೂರು ರಾಜ್ಯಗಳಲ್ಲಿ ಒಂದೂ ಸ್ಥಾನವನ್ನು ಕೂಡ ಗೆದುಕೊಂಡಿಲ್ಲ ಮತ್ತು ನೋಟಾ  ಆಯ್ಕೆಗಿಂತ ಕಡಿಮೆ ಮತಗಳನ್ನು ಪಡೆದಿದೆ.

ಮೂರು ರಾಜ್ಯಗಳಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ನಾವು ಬಿಜೆಪಿಯನ್ನು ಅಭಿನಂದಿಸುತ್ತೇವೆ. ಅದು ತನ್ನ ಭರವಸೆಯನ್ನು ಈಡೇರಿಸುತ್ತದೆ ಮತ್ತು ಮುಖ್ಯಮಂತ್ರಿ ಲಾಡ್ಲಿ ಬೆಹ್ನಾ ಆವಾಸ್ ಯೋಜನೆಯಡಿಯಲ್ಲಿ ಮನೆಗಳನ್ನು ನೀಡುತ್ತದೆ ಎಂದು ನಾವು ಪ್ರಾಮಾಣಿಕವಾಗಿ ಭಾವಿಸುತ್ತೇವೆ. ಬಿಜೆಪಿ ಭರವಸೆಯಂತೆ 450 ರೂ.ಗೆ ಎಲ್‌ಪಿಜಿ ನೀಡುತ್ತದೆ ಎಂದು ನಾವು ಭಾವಿಸುತ್ತೇವೆ. ಇಡೀ ರಾಷ್ಟ್ರಕ್ಕೆ ಅಗ್ಗದ ಎಲ್‌ಪಿಜಿ ಒದಗಿಸಬೇಕು ಮತ್ತು ಮೂರು ರಾಜ್ಯಗಳಿಗೆ ಸೀಮಿತವಾಗಿರದೆ ಎಲ್ಲಾ ರಾಜ್ಯಗಳಿಗೂ ಅದೇ ದರದಲ್ಲಿ ಎಲ್‌ಪಿಜಿ  ಸಿಲಿಂಡರ್‌ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಪಕ್ಷಗಳ ಮೈತ್ರಿ ಉಳಿದುಕೊಂಡು ಮುಂದುವರಿದರೆ ಕಾಂಗ್ರೆಸ್ 2024 ರಲ್ಲಿ ಸೀಟ್‌ ಹಂಚಿಕೆ ವಿಚಾರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಎಎಪಿ ಹೇಳಿದೆ. ಆದರೆ ಮೂರು ರಾಜ್ಯಗಳಲ್ಲಿ ಎಎಪಿ ಪಡೆದಿರುವ ಅತ್ಯಂತ ಕಡಿಮೆ ಮತಗಳ ಪಾಲನ್ನು ಉಲ್ಲೇಖಿಸಿಲ್ಲ, ತಮ್ಮ ಕಳಪೆ ಪ್ರದರ್ಶನವನ್ನು ಅವಲೋಕನ ನಡೆಸಿಲ್ಲ. ಪಕ್ಷವು ರಚನೆಯ ಹಂತದಲ್ಲಿ ನಮ್ಮ ಸಂದೇಶ ಎಲ್ಲರಿಗೂ ತಲುಪುತ್ತದೆ ಎಂದು ಖಚಿತಪಡಿಸಿಕೊಳ್ಳಲು ಈ ರಾಜ್ಯಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ ಎಂದು ಮಾತ್ರ ಹೇಳಿಕೊಂಡಿದೆ.

ಇದನ್ನು ಓದಿ: ಯುದ್ಧ ಪುನರಾರಂಭ: ಇಸ್ರೇಲ್‌ನಲ್ಲಿ ಭುಗಿಲೆದ್ಧ ಆಂತರಿಕ ಪ್ರತಿಭಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...