Homeಮುಖಪುಟಎಎಪಿಯಿಂದ ಅರ್ಚಕರಿಗೆ ಭತ್ಯೆ ಏರಿಕೆ ಭರವಸೆ; 17 ತಿಂಗಳ ವೇತನ ಬಿಡುಗಡೆಗೆ ಇಮಾಮ್‌ಗಳ ಒತ್ತಾಯ

ಎಎಪಿಯಿಂದ ಅರ್ಚಕರಿಗೆ ಭತ್ಯೆ ಏರಿಕೆ ಭರವಸೆ; 17 ತಿಂಗಳ ವೇತನ ಬಿಡುಗಡೆಗೆ ಇಮಾಮ್‌ಗಳ ಒತ್ತಾಯ

- Advertisement -
- Advertisement -

ಹೊಸದಿಲ್ಲಿ: ಅಖಿಲ ಭಾರತ ಇಮಾಮ್ ಅಸೋಸಿಯೇಷನ್ ​​ಸೋಮವಾರ ಬಾಕಿ ವೇತನ ಬಿಡುಗಡೆಗಾಗಿ ಒತ್ತಾಯಿಸಿ, ತಮ್ಮ ಕುಂದುಕೊರತೆಗಳನ್ನು ಪರಿಹರಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಹೊರಗೆ ಇಮಾಮ್‌ಗಳ ಗುಂಪು ಜಮಾಯಿಸಿ ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿತು.

ಮಾಧ್ಯಮಗಳೊಂದಿಗೆ ಮಾತನಾಡಿದ ಮೌಲಾನಾ ಮಹ್ಫೂಜ್ ರೆಹಮಾನ್, “ನಾವು ಗುರುವಾರ ಬಂದಿದ್ದೇವು ಮತ್ತು ಶನಿವಾರದಂದು ಕೇಜ್ರಿವಾಲ್ ಅವರನ್ನು ಭೇಟಿಯಾಗಬಹುದೆಂದು ಭರವಸೆ ನೀಡಲಾಗಿತ್ತು. ಆದರೆ ಆ ಭೇಟಿ ಇಂದಿಗೂ ಕಾರ್ಯರೂಪಕ್ಕೆ ಬಂದಿಲ್ಲ. ಇದು ಈಗ ನಮ್ಮ ಮೂರನೇ ಪ್ರಯತ್ನ. ಇಂದು ಅವರನ್ನು ಭೇಟಿ ಮಾಡಲು ನಮಗೆ ಅವಕಾಶ ನೀಡದಿದ್ದರೆ, ನಾವು ಧರಣಿ ನಡೆಸುತ್ತೇವೆ ಮತ್ತು ಕಳೆದ 17 ತಿಂಗಳಿನಿಂದ ಬಾಕಿಯಿರುವ ನಮ್ಮ ಸಂಬಳ ಬಿಡುಗಡೆಯಾಗುವವರೆಗೆ ಬಿಡುವುದಿಲ್ಲ ಎಂದಿದ್ದಾರೆ.

ಇಮಾಮ್‌ಗಳು ತಮ್ಮ ಎರಡು ಪ್ರಮುಖ ಸಮಸ್ಯೆಗಳನ್ನು ಇಲ್ಲಿ ಉಲ್ಲೇಖಿಸಿದ್ದಾರೆ. ಅದರಲ್ಲಿ ವಕ್ಫ್ ಬೋರ್ಡ್‌ನಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಯನ್ನು ಭರ್ತಿ ಮಾಡುವುದು ಒಂದು ಬೇಡಿಕೆಯಾಗಿದೆ. ನಮ್ಮ ಬೇಡಿಕೆ ಕುರಿತು ಕೇಜ್ರಿವಾಲ್ ಅಥವಾ ಅವರ ಕಚೇರಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಾವು ರಾಜಕೀಯಕ್ಕಾಗಿ ಈ ಬೇಡಿಕೆಯನ್ನು ಇಡುತ್ತಿಲ್ಲ, ನಮಗೆ ನಿಜವಾದ ಕಾಳಜಿ ಇದೆ. ಸಿಇಒ ಇಲ್ಲದೆ ಇರುವ ಕಾರಣ ಹಣ ಬಿಡುಗಡೆಯಾದರೂ ನಮಗೆ ಸಂಬಳ ಸಿಗುವುದಿಲ್ಲ. ಸಿಇಒ ಅವರನ್ನು ತಕ್ಷಣವೇ ನೇಮಕಾತಿ ಮಾಡಬೇಕೆಂದು ಮೌಲಾನಾ ಮಹಫೂಜ್ ರೆಹಮಾನ್ ಹೇಳಿದ್ದಾರೆ.

ಮತ್ತೊಬ್ಬ ಮೌಲಾನಾ ಗಯ್ಯೂರ್ ಹಸನ್ ಮಾತನಾಡಿ, ಕಳೆದ 17 ತಿಂಗಳಿಂದ ನಮಗೆ ವೇತನ ನೀಡಿಲ್ಲ. ಹಲವು ಬಾರಿ ಭೇಟಿ ನೀಡಿ ಮನವಿ ಮಾಡಿದರೂ ಯಾವುದೇ ಪರಿಹಾರ ಸಿಕ್ಕಿಲ್ಲ. ನಾವು ಈಗ ಪ್ರತಿಭಟನೆಯನ್ನು ಪ್ರಾರಂಭಿಸಲು ನಿರ್ಧರಿಸಿದ್ದೇವೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.

1988ರಿಂದ ದೆಹಲಿ ವಕ್ಫ್ ಬೋರ್ಡ್ ಅಡಿಯಲ್ಲಿ ಇಮಾಮ್ ಆಗಿ ಸೇವೆ ಸಲ್ಲಿಸಿದ ಮುಫ್ತಿ ನರಜುಲ್ ಹಕ್ ಕಾಸ್ಮಿ ಮಾತನಾಡಿ, “ನಮ್ಮ ಬೇಡಿಕೆಗಳನ್ನು ಈಗ ಪರಿಹರಿಸದಿದ್ದರೆ, ಚುನಾವಣಾ ಅಧಿಸೂಚನೆ ಹೊರಡಿಸಿದ ನಂತರ ಪರಿಹಾರಕ್ಕೆ ಅವಕಾಶವಿಲ್ಲ. ಬಿಡುಗಡೆಯಾದ ಹಣವಿದ್ದರೂ ಕಾರ್ಯನಿರ್ವಹಣಾ ಸಿಇಒ ಇಲ್ಲದೆ ವೇತನ ನೀಡಲು ಸಾಧ್ಯವಿಲ್ಲ. ಸಿಇಒ ನೇಮಕ ಕಡ್ಡಾಯವಾಗಿದೆ ಎಂದಿದ್ದಾರೆ.

ತಮ್ಮ ಸಂಬಳ ತೀರಾ ಕಡಿಮೆ, ಕೇವಲ 18,000 ರೂ. ಮತ್ತು ಅದು ಕೂಡ 17 ತಿಂಗಳಿಂದ ಪಾವತಿಸಿಲ್ಲ ಹಲವಾರು ಇಮಾಮ್‌ಗಳು ಮಾಹಿತಿ ನೀಡಿದ್ದಾರೆ.

ಇದಕ್ಕೂ ಮೊದಲು, ಇಮಾಮ್ ಗಳ ತಂಡವು ದೆಹಲಿ ಮುಖ್ಯಮಂತ್ರಿ ಅತಿಶಿ ಅವರನ್ನು ಭೇಟಿಯಾಗಿ ಸಮಸ್ಯೆಗಳ ಬಗ್ಗೆ ಚರ್ಚಿಸಿತ್ತು. ಆದರೆ ಅವರಿಂದ ಯಾವುದೇ ನಿರ್ದಿಷ್ಟ ಪರಿಹಾರಗಳನ್ನು ನೀಡಲಾಗಿಲ್ಲ ಎಂದು ದೂರಿದ್ದಾರೆ.

ತಮ್ಮ ಬೇಡಿಕೆಗಳನ್ನು ತ್ವರಿತವಾಗಿ ಈಡೇರಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸಲು ಸಿದ್ಧ ಎಂದು ಇಮಾಮ್‌ಗಳು ಸ್ಪಷ್ಟಪಡಿಸಿದ್ದಾರೆ.

ರೈತ ಮುಖಂಡ ದಲ್ಲೆವಾಲ್‌ರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...