- Advertisement -
- Advertisement -
ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ನಿವಾಸದ ನಿವಾಸದ ಹೊರಗೆ ವಿದ್ಯುತ್ ತೆರಿಗೆ ವಿರುದ್ಧ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ನೀರಿನ ಫಿರಂಗಿಗಳನ್ನು ಬಳಸಿದ್ದರೆ.
ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ಚಂಢೀಗಢರ ಸಿಎಂ ನಿವಾಸದ ಮುಂದೆ ಜಮಾಯಿಸಿದ ಪ್ರತಿಭಟಾಕಾರರು ಮುಖ್ಯಮಂತ್ರಿಗಳ ವಿರುದ್ಧ ಘೋಷಣೆ ಕೂಗಿ ವಿದ್ಯುತ್ ತೆರಿಗೆ ಹೆಚ್ಚಳವನ್ನು ವಿರೊಧಿಸಿದ್ದಾರೆ.
ವಿದ್ಯುತ್ ತೆರಿಗೆ ಹೆಚ್ಚಳದ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಿರೋಮಣಿ ಅಕಾಲಿ ದಳ ಸಹ ಪ್ರತಿಭಟನೆ ನಡೆಸಿತ್ತು. ಈಗ ವಿರೋಧ ಪಕ್ಷ ಎಎಪಿ ತನ್ನ ಬಲ ಪ್ರದರ್ಶನ ಮಾಡಿದೆ.