HomeUncategorizedಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ವಿರುದ್ಧ ಆಪ್ ಪ್ರತಿಭಟನೆ

ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ವಿರುದ್ಧ ಆಪ್ ಪ್ರತಿಭಟನೆ

- Advertisement -
- Advertisement -

ನವದೆಹಲಿ: ಅಂಬೇಡ್ಕರ್ ಕುರಿತು ಅಮಿತ್ ಶಾ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಮತ್ತು ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷ (ಎಎಪಿ)ವು  ಬಿಜೆಪಿ ಪ್ರಧಾನ ಕಚೇರಿಯ ಹೊರಗೆ ಬುಧವಾರ ಪ್ರತಿಭಟನೆ ನಡೆಸಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅವರು, ಅಮಿತ್ ಶಾ ಅವರ ಹೇಳಿಕೆ  ಡಾ.ಬಿ.ಆರ್.ಅಂಬೇಡ್ಕರ್ ಗೆ ಅವಮಾನ ಮಾಡಿದಂತೆ ಎಂದು ಹೇಳಿದ್ದಾರೆ.

ಅಂಬೇಡ್ಕರ್, ಅಂಬೇಡ್ಕರ್ ಎಂದು ಪಠಿಸುವುದು ನಮಗೆ ಏನೂ ಸಹಾಯ ಮಾಡುವುದಿಲ್ಲ; ದೇವರನ್ನು ಸ್ತುತಿಸುವುದೇ ಉತ್ತಮ. ಇದರಿಂದ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂದು ಅಮಿತ್ ಶಾ ಅವರು ಡಾ. ಅಂಬೇಡ್ಕರ್ ಅವರ ಕುರಿತು ಲೇವಡಿ ಮಾಡಿದ್ದರು. ಈ ದೇಶದ ಬಡವರು, ತುಳಿತಕ್ಕೊಳಗಾದವರಿಗೆ, ಅಂಚಿನಲ್ಲಿರುವವರಿಗೆ ಮತ್ತು ಹಿಂದುಳಿದವರಿಗ ಡಾ. ಅಂಬೇಡ್ಕರ್ ದೇವರಿಗಿಂತ ಕಡಿಮೆಯಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಜನ ಸಾವಿನ ನಂತರ ಸ್ವರ್ಗವನ್ನು ತಲುಪುತ್ತಾರೆಯೇ ಎಂದು ನಾವು ಹೇಳಲು ಸಾಧ್ಯವಿಲ್ಲ, ಆದರೆ ಭೂಮಿಯ ಮೇಲೆ, ಲಕ್ಷಾಂತರ ಹಿಂದುಳಿದ ಜನರು ತಮ್ಮ ಘನತೆ ಮತ್ತು ಹಕ್ಕುಗಳಿಗೆ ಸಂವಿಧಾನವನ್ನು ನೀಡಿದ ಡಾ. ಅಂಬೇಡ್ಕರ್ ಅವರಿಗೆ ಋಣಿಯಾಗಿದ್ದಾರೆ. ಅಮಿತ್ ಶಾ ಅವರ ಹೇಳಿಕೆಯು ಲಕ್ಷಾಂತರ ಭಾರತೀಯ ಜನರ ಭಾವನೆಗಳನ್ನು ತೀವ್ರವಾಗಿ ಘಾಸಿಗೊಳಿಸಿದೆ ಎಂದು ಅವರು ತಿಳಿಸಿದ್ದಾರೆ.

ಅಮಿತ್ ಶಾ ಅವರನ್ನು ಪ್ರಧಾನಿ ಮೋದಿ ಸಮರ್ಥಿಸಿಕೊಂಡ ರೀತಿ ನೋಡಿದರೆ ಇದು ಸ್ವಯಂಪ್ರೇರಿತ ಹೇಳಿಕೆಯಲ್ಲ ಎಂದು ತೋರುತ್ತದೆ. ಸಂಸತ್ತಿನಲ್ಲಿ ಡಾ. ಅಂಬೇಡ್ಕರ್ ಅವರನ್ನು ಅವಮಾನಿಸಲು ಬಿಜೆಪಿ ನಡೆಸಿದ ವ್ಯವಸ್ಥಿತ ತಂತ್ರವಾಗಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ನಾವು ಇದನ್ನು ಬಲವಾಗಿ ಖಂಡಿಸುತ್ತೇವೆ ಎಂದು ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ಈಗ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಅದು ಡಾ. ಅಂಬೇಡ್ಕರ್ ಅವರು ನಮಗೆ ನೀಡಿದ ಸಂವಿಧಾನದ ವಿರುದ್ಧವಾಗಿದ್ದಾರೆ.  ಡಾ. ಅಂಬೇಡ್ಕರ್ ಜೊತೆ ನಿಲ್ಲುತ್ತಾರೆಯೇ ಅಥವಾ ಬಿಜೆಪಿಯೊಂದಿಗೆ ನಿಲ್ಲುತ್ತಾರೆಯೇ? ಎಂಬುದನ್ನು ಬಿಜೆಪಿ ಬೆಂಬಲಿಗರು ಈಗ ಆಯ್ಕೆ ಮಾಡಬೇಕು. ಅವರು ಎರಡನ್ನೂ ಬೆಂಬಲಿಸಲು ಸಾಧ್ಯವಿಲ್ಲ. ಬಿಜೆಪಿಯ ನಾಯಕತ್ವವು ಡಾ. ಅಂಬೇಡ್ಕರ್ ಬಗ್ಗೆ ತಮ್ಮ ತಿರಸ್ಕಾರವನ್ನು ತೋರಿಸಿದೆ ಮತ್ತು ನಾವು ಗೃಹ ಸಚಿವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸುತ್ತೇವೆ. ಯಾವುದೇ ಕ್ರಮವು ಅಮಿತ್ ಶಾ ಮಾಡಿದ ಹಾನಿಯನ್ನು  ಸಂಪೂರ್ಣವಾಗಿ ತೊಡೆದುಹಾಕಲು ಸಾಧ್ಯವಿಲ್ಲ. ಆದರೆ ಶಾರ ಇಂತಹ ಅಗೌರವವನ್ನು ನಾವ ಸಹಿಸುವುದಿಲ್ಲ ಎಂಬ ಸಂದೇಶವನ್ನು ಕಳುಹಿಸುವುದು ಅತ್ಯಗತ್ಯ ಎಂದು ಅವರು ಹೇಳಿದರು.

ಬಿಜೆಪಿಯ ಉನ್ನತ ನಾಯಕತ್ವವು ಡಾ. ಅಂಬೇಡ್ಕರ್ ಅವರನ್ನು ಹೇಗೆ ಅವಮಾನಿಸಿದೆ ಎಂಬುದನ್ನು ನಾವು ಪ್ರತಿ ಮನೆಗೂ ಕೊಂಡೊಯ್ಯುತ್ತೇವೆ. ದೆಹಲಿ ಮತ್ತು ದೇಶದಾದ್ಯಂತ, ಬಿಜೆಪಿಯು ನಮ್ಮ ಸಂವಿಧಾನ ಶಿಲ್ಪಿಯನ್ನು ಹೇಗೆ ಅಗೌರವಗೊಳಿಸುತ್ತಿದೆ ಎಂಬುದರ ಬಗ್ಗೆ ಜನತೆ ತಿಳಿದುಕೊಳ್ಳಬೇಕಿದೆ ಎಂದು ಎಎಪಿಯ ಮಾಜಿ ಮುಖ್ಯಮಂತ್ರಿ ಪ್ರತಿಪಾದಿಸಿದರು.

ಏತನ್ಮಧ್ಯೆ, ಹಿರಿಯ ಆಪ್ ನಾಯಕ ಮನೀಶ್ ಸಿಸೋಡಿಯಾ ಮಾತನಾಡಿ, “ಡಾ. ಅಂಬೇಡ್ಕರ್ ಅವರ ಬಗ್ಗೆ ಹೆಚ್ಚುತ್ತಿರುವ ಗೌರವದಿಂದ ಗೃಹ ಸಚಿವ ಅಮಿತ್ ಶಾ ಸಿಟ್ಟಿಗೆದ್ದಿದ್ದಾರೆ. ಇಂದು ಇಡೀ ರಾಷ್ಟ್ರವು ‘ಅಂಬೇಡ್ಕರ್, ಅಂಬೇಡ್ಕರ್’ ಎಂದು ಜಪಿಸುತ್ತಿದೆ ಎಂದು ಅವರು ಹೇಳಿದರು.

ಸಂಸದ ಸಂಜಯ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಡಾ. ಸಂದೀಪ್ ಪಾಠಕ್, ಮುಖ್ಯಮಂತ್ರಿ ಅತಿಶಿ ಮತ್ತು ಕ್ಯಾಬಿನೆಟ್ ಸಚಿವ ಸೌರಭ್ ಭಾರದ್ವಾಜ್ ಸೇರಿದಂತೆ ಹಲವು ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ….ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ : ಮಂಡ್ಯದಲ್ಲಿ ಕುರಿ, ಕೋಳಿ ಸಂಗ್ರಹಕ್ಕೆ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...