HomeUncategorizedಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ವಿರುದ್ಧ ಆಪ್ ಪ್ರತಿಭಟನೆ

ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ವಿರುದ್ಧ ಆಪ್ ಪ್ರತಿಭಟನೆ

- Advertisement -
- Advertisement -

ನವದೆಹಲಿ: ಅಂಬೇಡ್ಕರ್ ಕುರಿತು ಅಮಿತ್ ಶಾ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಮತ್ತು ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷ (ಎಎಪಿ)ವು  ಬಿಜೆಪಿ ಪ್ರಧಾನ ಕಚೇರಿಯ ಹೊರಗೆ ಬುಧವಾರ ಪ್ರತಿಭಟನೆ ನಡೆಸಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅವರು, ಅಮಿತ್ ಶಾ ಅವರ ಹೇಳಿಕೆ  ಡಾ.ಬಿ.ಆರ್.ಅಂಬೇಡ್ಕರ್ ಗೆ ಅವಮಾನ ಮಾಡಿದಂತೆ ಎಂದು ಹೇಳಿದ್ದಾರೆ.

ಅಂಬೇಡ್ಕರ್, ಅಂಬೇಡ್ಕರ್ ಎಂದು ಪಠಿಸುವುದು ನಮಗೆ ಏನೂ ಸಹಾಯ ಮಾಡುವುದಿಲ್ಲ; ದೇವರನ್ನು ಸ್ತುತಿಸುವುದೇ ಉತ್ತಮ. ಇದರಿಂದ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂದು ಅಮಿತ್ ಶಾ ಅವರು ಡಾ. ಅಂಬೇಡ್ಕರ್ ಅವರ ಕುರಿತು ಲೇವಡಿ ಮಾಡಿದ್ದರು. ಈ ದೇಶದ ಬಡವರು, ತುಳಿತಕ್ಕೊಳಗಾದವರಿಗೆ, ಅಂಚಿನಲ್ಲಿರುವವರಿಗೆ ಮತ್ತು ಹಿಂದುಳಿದವರಿಗ ಡಾ. ಅಂಬೇಡ್ಕರ್ ದೇವರಿಗಿಂತ ಕಡಿಮೆಯಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಜನ ಸಾವಿನ ನಂತರ ಸ್ವರ್ಗವನ್ನು ತಲುಪುತ್ತಾರೆಯೇ ಎಂದು ನಾವು ಹೇಳಲು ಸಾಧ್ಯವಿಲ್ಲ, ಆದರೆ ಭೂಮಿಯ ಮೇಲೆ, ಲಕ್ಷಾಂತರ ಹಿಂದುಳಿದ ಜನರು ತಮ್ಮ ಘನತೆ ಮತ್ತು ಹಕ್ಕುಗಳಿಗೆ ಸಂವಿಧಾನವನ್ನು ನೀಡಿದ ಡಾ. ಅಂಬೇಡ್ಕರ್ ಅವರಿಗೆ ಋಣಿಯಾಗಿದ್ದಾರೆ. ಅಮಿತ್ ಶಾ ಅವರ ಹೇಳಿಕೆಯು ಲಕ್ಷಾಂತರ ಭಾರತೀಯ ಜನರ ಭಾವನೆಗಳನ್ನು ತೀವ್ರವಾಗಿ ಘಾಸಿಗೊಳಿಸಿದೆ ಎಂದು ಅವರು ತಿಳಿಸಿದ್ದಾರೆ.

ಅಮಿತ್ ಶಾ ಅವರನ್ನು ಪ್ರಧಾನಿ ಮೋದಿ ಸಮರ್ಥಿಸಿಕೊಂಡ ರೀತಿ ನೋಡಿದರೆ ಇದು ಸ್ವಯಂಪ್ರೇರಿತ ಹೇಳಿಕೆಯಲ್ಲ ಎಂದು ತೋರುತ್ತದೆ. ಸಂಸತ್ತಿನಲ್ಲಿ ಡಾ. ಅಂಬೇಡ್ಕರ್ ಅವರನ್ನು ಅವಮಾನಿಸಲು ಬಿಜೆಪಿ ನಡೆಸಿದ ವ್ಯವಸ್ಥಿತ ತಂತ್ರವಾಗಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ನಾವು ಇದನ್ನು ಬಲವಾಗಿ ಖಂಡಿಸುತ್ತೇವೆ ಎಂದು ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ಈಗ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಅದು ಡಾ. ಅಂಬೇಡ್ಕರ್ ಅವರು ನಮಗೆ ನೀಡಿದ ಸಂವಿಧಾನದ ವಿರುದ್ಧವಾಗಿದ್ದಾರೆ.  ಡಾ. ಅಂಬೇಡ್ಕರ್ ಜೊತೆ ನಿಲ್ಲುತ್ತಾರೆಯೇ ಅಥವಾ ಬಿಜೆಪಿಯೊಂದಿಗೆ ನಿಲ್ಲುತ್ತಾರೆಯೇ? ಎಂಬುದನ್ನು ಬಿಜೆಪಿ ಬೆಂಬಲಿಗರು ಈಗ ಆಯ್ಕೆ ಮಾಡಬೇಕು. ಅವರು ಎರಡನ್ನೂ ಬೆಂಬಲಿಸಲು ಸಾಧ್ಯವಿಲ್ಲ. ಬಿಜೆಪಿಯ ನಾಯಕತ್ವವು ಡಾ. ಅಂಬೇಡ್ಕರ್ ಬಗ್ಗೆ ತಮ್ಮ ತಿರಸ್ಕಾರವನ್ನು ತೋರಿಸಿದೆ ಮತ್ತು ನಾವು ಗೃಹ ಸಚಿವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸುತ್ತೇವೆ. ಯಾವುದೇ ಕ್ರಮವು ಅಮಿತ್ ಶಾ ಮಾಡಿದ ಹಾನಿಯನ್ನು  ಸಂಪೂರ್ಣವಾಗಿ ತೊಡೆದುಹಾಕಲು ಸಾಧ್ಯವಿಲ್ಲ. ಆದರೆ ಶಾರ ಇಂತಹ ಅಗೌರವವನ್ನು ನಾವ ಸಹಿಸುವುದಿಲ್ಲ ಎಂಬ ಸಂದೇಶವನ್ನು ಕಳುಹಿಸುವುದು ಅತ್ಯಗತ್ಯ ಎಂದು ಅವರು ಹೇಳಿದರು.

ಬಿಜೆಪಿಯ ಉನ್ನತ ನಾಯಕತ್ವವು ಡಾ. ಅಂಬೇಡ್ಕರ್ ಅವರನ್ನು ಹೇಗೆ ಅವಮಾನಿಸಿದೆ ಎಂಬುದನ್ನು ನಾವು ಪ್ರತಿ ಮನೆಗೂ ಕೊಂಡೊಯ್ಯುತ್ತೇವೆ. ದೆಹಲಿ ಮತ್ತು ದೇಶದಾದ್ಯಂತ, ಬಿಜೆಪಿಯು ನಮ್ಮ ಸಂವಿಧಾನ ಶಿಲ್ಪಿಯನ್ನು ಹೇಗೆ ಅಗೌರವಗೊಳಿಸುತ್ತಿದೆ ಎಂಬುದರ ಬಗ್ಗೆ ಜನತೆ ತಿಳಿದುಕೊಳ್ಳಬೇಕಿದೆ ಎಂದು ಎಎಪಿಯ ಮಾಜಿ ಮುಖ್ಯಮಂತ್ರಿ ಪ್ರತಿಪಾದಿಸಿದರು.

ಏತನ್ಮಧ್ಯೆ, ಹಿರಿಯ ಆಪ್ ನಾಯಕ ಮನೀಶ್ ಸಿಸೋಡಿಯಾ ಮಾತನಾಡಿ, “ಡಾ. ಅಂಬೇಡ್ಕರ್ ಅವರ ಬಗ್ಗೆ ಹೆಚ್ಚುತ್ತಿರುವ ಗೌರವದಿಂದ ಗೃಹ ಸಚಿವ ಅಮಿತ್ ಶಾ ಸಿಟ್ಟಿಗೆದ್ದಿದ್ದಾರೆ. ಇಂದು ಇಡೀ ರಾಷ್ಟ್ರವು ‘ಅಂಬೇಡ್ಕರ್, ಅಂಬೇಡ್ಕರ್’ ಎಂದು ಜಪಿಸುತ್ತಿದೆ ಎಂದು ಅವರು ಹೇಳಿದರು.

ಸಂಸದ ಸಂಜಯ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಡಾ. ಸಂದೀಪ್ ಪಾಠಕ್, ಮುಖ್ಯಮಂತ್ರಿ ಅತಿಶಿ ಮತ್ತು ಕ್ಯಾಬಿನೆಟ್ ಸಚಿವ ಸೌರಭ್ ಭಾರದ್ವಾಜ್ ಸೇರಿದಂತೆ ಹಲವು ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ….ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ : ಮಂಡ್ಯದಲ್ಲಿ ಕುರಿ, ಕೋಳಿ ಸಂಗ್ರಹಕ್ಕೆ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...