Homeಮುಖಪುಟಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಆಪ್‌ನಿಂದ ’ಬೈಕ್ ತಳ್ಳು’ ಪ್ರತಿಭಟನೆ

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಆಪ್‌ನಿಂದ ’ಬೈಕ್ ತಳ್ಳು’ ಪ್ರತಿಭಟನೆ

ಪ್ರಗತಿ ಸಾಧಿಸಿ ಮುಂದಕ್ಕೆ ಹೋಗುತ್ತಿದ್ದ ದೇಶವನ್ನು  ಮೋದಿ- ಅಂಬಾನಿ, ಮೋದಿ-ಅದಾನಿ ಜೋಡಿ ಹಿಂದಕ್ಕೆ ತಳ್ಳುತ್ತಿದೆ ಎಂದು ಆಮ್‌ಆದ್ಮಿ ಆರೋಪಿಸಿದೆ

- Advertisement -
- Advertisement -

ರಾಜ್ಯ ಸರ್ಕಾರವೂ ಜನರ ನೆರವಿಗೆ ನಿಲ್ಲದೆ ತನ್ನ ಪಾಲಿನ ತೆರಿಗೆ ಹೆಚ್ಚಳ ಮಾಡಿ ಗಾಯದ ಮೇಲೆ ಬರೆ ಎಳೆದಿದೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು, ಈ ಕೂಡಲೇ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ತೆರಿಗೆ ಇಳಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ “ಬೈಕ್ ತಳ್ಳು” ಎಂಬ ವಿನೂತನ ಪ್ರತಿಭಟನೆ ನಡೆಸಿದರು.

ಪಕ್ಷದ ಬೆಂಗಳೂರು ನಗರ ಅಧ್ಯಕ್ಷ, ಮೋಹನ್ ದಾಸರಿ ಮಾತನಾಡಿ, ’ಮನೆಮುರುಕ ಕೇಂದ್ರದ ಬಿಜೆಪಿ ಹಾಗೂ ರಾಜ್ಯ ಸರ್ಕಾರದ ನಿರ್ಧಾರಗಳಿಂದ ಯಾರ ಮನೆಯೂ ಉದ್ದಾರವಾಗಿಲ್ಲ, ಎಲ್ಲಾ ಹಂತದಲ್ಲೂ ಜನ ಸಾಮಾನ್ಯರ ಕತ್ತು ಹಿಸುಕಿ ಕೊಲ್ಲಲಾಗುತ್ತಿದೆ. ಭಾರತದ ಇತಿಹಾಸದಲ್ಲೇ ಅತ್ಯಂತ ಹೆಚ್ಚಿನ ಬೆಲೆಗೆ ಪೆಟ್ರೋಲ್ ಬೆಲೆ ಹೆಚ್ಚಳ ಮಾಡಿ ಜನರನ್ನು ದೋಚಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ದೆಹಲಿ V/s ಉತ್ತರ ಪ್ರದೇಶ: ಸರ್ಕಾರಿ ಶಾಲೆಗಳ ವಾಸ್ತವತೆ ಬಿಚ್ಚಿಡಲು ಆಪ್ ಅಭಿಯಾನ

’ಕಳೆದ ವರ್ಷ ಇದೇ ಹೊತ್ತಿನಲ್ಲಿ ಕಚ್ಚಾತೈಲದ ಬೆಲೆ 62 ಡಾಲರ್ ಇತ್ತು, ಈಗ 40 ಡಾಲರ್‌ಗೆ ಇಳಿದಿದೆ ಆದರೂ ಪೆಟ್ರೋಲ್ ಬೆಲೆ ಮಾತ್ರ 86 ರೂಪಾಯಿಗಿಂತ ಹೆಚ್ಚಿದೆ. ಪ್ರಗತಿ ಸಾಧಿಸಿ ಮುಂದಕ್ಕೆ ಹೋಗುತ್ತಿದ್ದ ದೇಶವನ್ನು  ಮೋದಿ- ಅಂಬಾನಿ-ಅದಾನಿ ಜೋಡಿ ಹಿಂದಕ್ಕೆ ತಳ್ಳುತ್ತಿದೆ’ ಎಂದು ಮೋಹನ್ ದಾಸರಿ ಕಿಡಿಕಾರಿದರು.

’ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಪೆಟ್ರೋಲ್‌ ಅನ್ನು 40 ರೂಪಾಯಿಗೆ ನೀಡಬಹುದು ಎಂದು ಬಹಿರಂಗವಾಗಿಯೇ ಹೇಳಿದ್ದಾರೆ. ಅಲ್ಲದೇ ಕಚ್ಚಾ ತೈಲವನ್ನು ಸಂಸ್ಕರಿಸಲು ಕೇವಲ 30 ರೂಪಾಯಿ ಖರ್ಚಾಗುತ್ತದೆ ಎಂದಿದ್ದಾರೆ. ಆದರೂ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮಾಡಿರುವ ಸರ್ಕಾರಕ್ಕೂ ಕಳ್ಳನಿಗೂ ಏನು ವ್ಯತ್ಯಾ”

 

 

 

ಎಂದು ಕಟುವಾಗಿ ಪ್ರಶ್ನಿಸಿದರು.

 

ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ ಪ್ರತಿಭಟನಾಕಾರರು, ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಕಣ್ಣು, ಕಿವಿ ಏನೂ ಕೇಳಿಸದ ಕಾರಣ ನಮ್ಮ ಪ್ರತಿಭಟನೆ ಅವರಿಗೆ ಕೇಳಿಸುವುದಿಲ್ಲ. ಹಾಗಾಗಿ ನಾವು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಜ್ಯದ ಪಾಲಿನ ತೆರಿಗೆಯನ್ನಾದರೂ ಕಡಿಮೆ ಮಾಡಿ ಎಂದು ಆಗ್ರಹಿಸುತ್ತಿದ್ದೇವೆ ಎಂದರು.


ಇದನ್ನು ಓದಿ: ದೆಹಲಿ V/s ಉತ್ತರ ಪ್ರದೇಶ: ಮಾದರಿ ಶಾಲೆ ಚರ್ಚೆಗೆ ಬಾರದ ಉತ್ತರ ಪ್ರದೇಶ ಸಚಿವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...