Homeಮುಖಪುಟಅಬಕಾರಿ ನೀತಿ ಹಗರಣದ ಸಾಕ್ಷಿಯಿಂದ 60 ಕೋಟಿ ಪಡೆದ ಬಗ್ಗೆ ಉತ್ತರಿಸಿ: ಬಿಜೆಪಿಗೆ ಎಎಪಿ ಆಗ್ರಹ

ಅಬಕಾರಿ ನೀತಿ ಹಗರಣದ ಸಾಕ್ಷಿಯಿಂದ 60 ಕೋಟಿ ಪಡೆದ ಬಗ್ಗೆ ಉತ್ತರಿಸಿ: ಬಿಜೆಪಿಗೆ ಎಎಪಿ ಆಗ್ರಹ

- Advertisement -
- Advertisement -

ಆಮ್ ಆದ್ಮಿ ಪಕ್ಷದ ದೆಹಲಿ ಅಬಕಾರಿ ನೀತಿ ಪ್ರಕರಣದ ಪ್ರಮುಖ ಸಾಕ್ಷಿಗಳಲ್ಲಿ ಒಬ್ಬರಾದ ಶರತ್ ಚಂದ್ರ ರೆಡ್ಡಿಯಿಂದ ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ 60 ಕೋಟಿ ರೂ. ಹಣವನ್ನು ಪಡೆದಿದೆ ಎಂದು ಆರೋಪಿಸಿದ ಒಂದು ದಿನದ ನಂತರ, ರೆಡ್ಡಿ ಮತ್ತು ಬಿಜೆಪಿ ನಡುವಿನ ಸಂಬಂಧದ ಬಗ್ಗೆ ದೆಹಲಿ ಸಚಿವ ಸೌರಭ್ ಭಾರದ್ವಾಜ್ ಭಾನುವಾರ ಪ್ರಶ್ನೆಗಳನ್ನು ಕೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಭಾರದ್ವಾಜ್, ‘ಅರಬಿಂದೋ ಫಾರ್ಮಾ’ ಎಂಬ ಪ್ರಸಿದ್ಧ ಔಷಧ ಕಂಪನಿಯ ಮಾಲಕ ರೆಡ್ಡಿಯಿಂದ ಬಿಜೆಪಿ ಏಕೆ ಹಣ ಪಡೆದಿದೆ ಎಂಬ ಬಗ್ಗೆ ಮೌನ ವಹಿಸಿದೆ ಎಂದು ಆರೋಪಿಸಿದ್ದಾರೆ.

ನಿನ್ನೆ ಎಎಪಿ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಬಾಂಡ್‌ ಕುರಿತ ದಾಖಲೆಗಳನ್ನು ತೋರಿಸಿದ್ದು, ಇದರಲ್ಲಿ ಬಾಂಡ್ ಖರೀದಿಸಿದವರ ಹೆಸರು, ಮುಖಬೆಲೆಗಳು, ಖರೀದಿಸಿದ ದಿನಾಂಕ ಮತ್ತು ಇತರ ವಿವರಗಳಿವೆ ಮತ್ತು ರೆಡ್ಡಿ ಅವರ ಮೂರು ಕಂಪನಿಗಳು ಬಿಜೆಪಿಗೆ ಸುಮಾರು 60 ಕೋಟಿ ಹಣವನ್ನು ನೀಡಿವೆ ಎಂದು ಹೇಳಿಕೊಂಡಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಈ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರ ಕೋರಿ ಎಎಪಿ ಪಕ್ಷ ಪತ್ರ ಬರೆದಿದೆ ಎಂದು ಭಾರದ್ವಾಜ್ ಹೇಳಿದ್ದಾರೆ.

ನಾವು ಪ್ರಕರಣದಲ್ಲಿ ಮೂರು ಪ್ರಮುಖ ಪ್ರಶ್ನೆಗಳನ್ನು ಎತ್ತಲು ಬಯಸುತ್ತೇವೆ ರೆಡ್ಡಿ ಮತ್ತು ಬಿಜೆಪಿ ನಡುವಿನ ಸಂಬಂಧವೇನು? ಬಿಜೆಪಿ ಪಕ್ಷದಿಂದ ಯಾರು ಅವರನ್ನು ಭೇಟಿ ಮಾಡಿದರು ಮತ್ತು ಅವರ ಭೇಟಿ ವೇಳೆ ಏನು ಸಂಭಾಷಣೆ ನಡೆಸಿದ್ದಾರೆ? ಸಿಬಿಐ ಮತ್ತು ಇಡಿಗೆ ರೆಡ್ಡಿಯಿಂದ ಹಣ ಪಡೆದ ಬಗ್ಗೆ ಏಕೆ ಮಾಹಿತಿ ನೀಡಲಿಲ್ಲ? ಎಂದು ಭಾರದ್ವಾಜ್  ಪ್ರಶ್ನಿಸಿದ್ದಾರೆ.

ರೆಡ್ಡಿ ಅವರನ್ನು ಅಬಕಾರಿ ಹಗರಣದ ಕಿಂಗ್‌ಪಿನ್ ಮತ್ತು ಅತಿದೊಡ್ಡ ಫಲಾನುಭವಿ ಎಂದು ಇಡಿ ಕರೆದಿದೆ ಎಂದು ಭಾರದ್ವಾಜ್ ಈ ಹಿಂದೆ ಹೇಳಿದ್ದರು ಮತ್ತು ಪಕ್ಷದ ನಾಯಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವು ರೆಡ್ಡಿ ಹೇಳಿಕೆಯನ್ನು ಆಧರಿಸಿದೆ ಎಂದು ಹೇಳಿದ್ದರು.

ಎಎಪಿ ಪ್ರಕಾರ, ಈಗ ರದ್ದಾದ ದೆಹಲಿ ಮದ್ಯ ನೀತಿಯ ಅಡಿಯಲ್ಲಿ ರೆಡ್ಡಿ ದೆಹಲಿಯ ಕೆಲವು ವಲಯಗಳಲ್ಲಿ ಕೆಲವು ಮದ್ಯದ ಅಂಗಡಿಗಳನ್ನು ಪಡೆದಿದ್ದರು ಮತ್ತು ಅವರನ್ನು ನವೆಂಬರ್ 9, 2022ರಂದು ವಿಚಾರಣೆಗೆ ಕರೆಯಲಾಯಿತು. ಮರುದಿನ ಅವರನ್ನು ಇಡಿ ಬಂಧಿಸಿತ್ತು. ಬಳಿಕ ಅವರು ತಮ್ಮ ಹೇಳಿಕೆಯನ್ನು ಬದಲಾಯಿಸಲು ಪ್ರಾರಂಭಿಸಿದರು, ಅವರಿಗೆ ಜಾಮೀನು ಸಿಕ್ಕಿತು ಎಂದು ಭಾರದ್ವಾಜ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಎಎಪಿಯ ಜಾಸ್ಮಿನ್ ಶಾ ಮಾತನಾಡಿ, ಈ ಪ್ರಕರಣದಲ್ಲಿ ರೆಡ್ಡಿಯನ್ನು ಆರು ತಿಂಗಳ ಕಾಲ ಜೈಲಿನಲ್ಲಿ ಇರಿಸಲಾಯಿತು, ನಂತರ ಅವರು ತಮ್ಮ ಹೇಳಿಕೆಯನ್ನು ಬದಲಾಯಿಸಿದರು. ಅವರು ಬಿಜೆಪಿ ಒತ್ತಡದಲ್ಲಿ ಹೇಳಿಕೆ ಬದಲಾಯಿಸಿದ್ದು ಮಾತ್ರವಲ್ಲದೆ ಅವರಿಂದ ಕೋಟಿಗಟ್ಟಲೆ ಹಣವನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಭಾರತೀಯ ಚುನಾವಣಾ ಆಯೋಗವು ಗುರುವಾರ ತನ್ನ ವೆಬ್‌ಸೈಟ್‌ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ ಇತ್ತೀಚಿನ ವಿವರಗಳೊಂದಿಗೆ ಚುನಾವಣಾ ಬಾಂಡ್ ಡೇಟಾವನ್ನು ಅಪ್‌ಲೋಡ್ ಮಾಡಿದೆ. ಇತ್ತೀಚಿನ ದಾನಿಗಳ ಪಟ್ಟಿಯು ಬಾಂಡ್‌ ಖರೀದಿದಾರರ ಹೆಸರು, ಅದರ ಮುಖಬೆಲೆ, ನಿರ್ದಿಷ್ಟ ಸಂಖ್ಯೆ, ಸ್ವೀಕರಿಸಿದವರ ಪಟ್ಟಿಯ ಜೊತೆಗೆ ಅದನ್ನು ಎನ್‌ಕ್ಯಾಶ್ ಮಾಡಿದ ಪಕ್ಷದ ಹೆಸರನ್ನು ಹೊಂದಿತ್ತು.

ಇದನ್ನು ಓದಿ: ಕೇಜ್ರಿವಾಲ್‌ ಬಂಧನ ವಿರೋಧಿಸಿ ಮಾ.31ರಂದು ರಾಮಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ ಒಕ್ಕೂಟದಿಂದ ಬೃಹತ್‌ ರ್‍ಯಾಲಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...