Homeಮುಖಪುಟಅಬಕಾರಿ ನೀತಿ ಹಗರಣದ ಸಾಕ್ಷಿಯಿಂದ 60 ಕೋಟಿ ಪಡೆದ ಬಗ್ಗೆ ಉತ್ತರಿಸಿ: ಬಿಜೆಪಿಗೆ ಎಎಪಿ ಆಗ್ರಹ

ಅಬಕಾರಿ ನೀತಿ ಹಗರಣದ ಸಾಕ್ಷಿಯಿಂದ 60 ಕೋಟಿ ಪಡೆದ ಬಗ್ಗೆ ಉತ್ತರಿಸಿ: ಬಿಜೆಪಿಗೆ ಎಎಪಿ ಆಗ್ರಹ

- Advertisement -
- Advertisement -

ಆಮ್ ಆದ್ಮಿ ಪಕ್ಷದ ದೆಹಲಿ ಅಬಕಾರಿ ನೀತಿ ಪ್ರಕರಣದ ಪ್ರಮುಖ ಸಾಕ್ಷಿಗಳಲ್ಲಿ ಒಬ್ಬರಾದ ಶರತ್ ಚಂದ್ರ ರೆಡ್ಡಿಯಿಂದ ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ 60 ಕೋಟಿ ರೂ. ಹಣವನ್ನು ಪಡೆದಿದೆ ಎಂದು ಆರೋಪಿಸಿದ ಒಂದು ದಿನದ ನಂತರ, ರೆಡ್ಡಿ ಮತ್ತು ಬಿಜೆಪಿ ನಡುವಿನ ಸಂಬಂಧದ ಬಗ್ಗೆ ದೆಹಲಿ ಸಚಿವ ಸೌರಭ್ ಭಾರದ್ವಾಜ್ ಭಾನುವಾರ ಪ್ರಶ್ನೆಗಳನ್ನು ಕೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಭಾರದ್ವಾಜ್, ‘ಅರಬಿಂದೋ ಫಾರ್ಮಾ’ ಎಂಬ ಪ್ರಸಿದ್ಧ ಔಷಧ ಕಂಪನಿಯ ಮಾಲಕ ರೆಡ್ಡಿಯಿಂದ ಬಿಜೆಪಿ ಏಕೆ ಹಣ ಪಡೆದಿದೆ ಎಂಬ ಬಗ್ಗೆ ಮೌನ ವಹಿಸಿದೆ ಎಂದು ಆರೋಪಿಸಿದ್ದಾರೆ.

ನಿನ್ನೆ ಎಎಪಿ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಬಾಂಡ್‌ ಕುರಿತ ದಾಖಲೆಗಳನ್ನು ತೋರಿಸಿದ್ದು, ಇದರಲ್ಲಿ ಬಾಂಡ್ ಖರೀದಿಸಿದವರ ಹೆಸರು, ಮುಖಬೆಲೆಗಳು, ಖರೀದಿಸಿದ ದಿನಾಂಕ ಮತ್ತು ಇತರ ವಿವರಗಳಿವೆ ಮತ್ತು ರೆಡ್ಡಿ ಅವರ ಮೂರು ಕಂಪನಿಗಳು ಬಿಜೆಪಿಗೆ ಸುಮಾರು 60 ಕೋಟಿ ಹಣವನ್ನು ನೀಡಿವೆ ಎಂದು ಹೇಳಿಕೊಂಡಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಈ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರ ಕೋರಿ ಎಎಪಿ ಪಕ್ಷ ಪತ್ರ ಬರೆದಿದೆ ಎಂದು ಭಾರದ್ವಾಜ್ ಹೇಳಿದ್ದಾರೆ.

ನಾವು ಪ್ರಕರಣದಲ್ಲಿ ಮೂರು ಪ್ರಮುಖ ಪ್ರಶ್ನೆಗಳನ್ನು ಎತ್ತಲು ಬಯಸುತ್ತೇವೆ ರೆಡ್ಡಿ ಮತ್ತು ಬಿಜೆಪಿ ನಡುವಿನ ಸಂಬಂಧವೇನು? ಬಿಜೆಪಿ ಪಕ್ಷದಿಂದ ಯಾರು ಅವರನ್ನು ಭೇಟಿ ಮಾಡಿದರು ಮತ್ತು ಅವರ ಭೇಟಿ ವೇಳೆ ಏನು ಸಂಭಾಷಣೆ ನಡೆಸಿದ್ದಾರೆ? ಸಿಬಿಐ ಮತ್ತು ಇಡಿಗೆ ರೆಡ್ಡಿಯಿಂದ ಹಣ ಪಡೆದ ಬಗ್ಗೆ ಏಕೆ ಮಾಹಿತಿ ನೀಡಲಿಲ್ಲ? ಎಂದು ಭಾರದ್ವಾಜ್  ಪ್ರಶ್ನಿಸಿದ್ದಾರೆ.

ರೆಡ್ಡಿ ಅವರನ್ನು ಅಬಕಾರಿ ಹಗರಣದ ಕಿಂಗ್‌ಪಿನ್ ಮತ್ತು ಅತಿದೊಡ್ಡ ಫಲಾನುಭವಿ ಎಂದು ಇಡಿ ಕರೆದಿದೆ ಎಂದು ಭಾರದ್ವಾಜ್ ಈ ಹಿಂದೆ ಹೇಳಿದ್ದರು ಮತ್ತು ಪಕ್ಷದ ನಾಯಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವು ರೆಡ್ಡಿ ಹೇಳಿಕೆಯನ್ನು ಆಧರಿಸಿದೆ ಎಂದು ಹೇಳಿದ್ದರು.

ಎಎಪಿ ಪ್ರಕಾರ, ಈಗ ರದ್ದಾದ ದೆಹಲಿ ಮದ್ಯ ನೀತಿಯ ಅಡಿಯಲ್ಲಿ ರೆಡ್ಡಿ ದೆಹಲಿಯ ಕೆಲವು ವಲಯಗಳಲ್ಲಿ ಕೆಲವು ಮದ್ಯದ ಅಂಗಡಿಗಳನ್ನು ಪಡೆದಿದ್ದರು ಮತ್ತು ಅವರನ್ನು ನವೆಂಬರ್ 9, 2022ರಂದು ವಿಚಾರಣೆಗೆ ಕರೆಯಲಾಯಿತು. ಮರುದಿನ ಅವರನ್ನು ಇಡಿ ಬಂಧಿಸಿತ್ತು. ಬಳಿಕ ಅವರು ತಮ್ಮ ಹೇಳಿಕೆಯನ್ನು ಬದಲಾಯಿಸಲು ಪ್ರಾರಂಭಿಸಿದರು, ಅವರಿಗೆ ಜಾಮೀನು ಸಿಕ್ಕಿತು ಎಂದು ಭಾರದ್ವಾಜ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಎಎಪಿಯ ಜಾಸ್ಮಿನ್ ಶಾ ಮಾತನಾಡಿ, ಈ ಪ್ರಕರಣದಲ್ಲಿ ರೆಡ್ಡಿಯನ್ನು ಆರು ತಿಂಗಳ ಕಾಲ ಜೈಲಿನಲ್ಲಿ ಇರಿಸಲಾಯಿತು, ನಂತರ ಅವರು ತಮ್ಮ ಹೇಳಿಕೆಯನ್ನು ಬದಲಾಯಿಸಿದರು. ಅವರು ಬಿಜೆಪಿ ಒತ್ತಡದಲ್ಲಿ ಹೇಳಿಕೆ ಬದಲಾಯಿಸಿದ್ದು ಮಾತ್ರವಲ್ಲದೆ ಅವರಿಂದ ಕೋಟಿಗಟ್ಟಲೆ ಹಣವನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಭಾರತೀಯ ಚುನಾವಣಾ ಆಯೋಗವು ಗುರುವಾರ ತನ್ನ ವೆಬ್‌ಸೈಟ್‌ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ ಇತ್ತೀಚಿನ ವಿವರಗಳೊಂದಿಗೆ ಚುನಾವಣಾ ಬಾಂಡ್ ಡೇಟಾವನ್ನು ಅಪ್‌ಲೋಡ್ ಮಾಡಿದೆ. ಇತ್ತೀಚಿನ ದಾನಿಗಳ ಪಟ್ಟಿಯು ಬಾಂಡ್‌ ಖರೀದಿದಾರರ ಹೆಸರು, ಅದರ ಮುಖಬೆಲೆ, ನಿರ್ದಿಷ್ಟ ಸಂಖ್ಯೆ, ಸ್ವೀಕರಿಸಿದವರ ಪಟ್ಟಿಯ ಜೊತೆಗೆ ಅದನ್ನು ಎನ್‌ಕ್ಯಾಶ್ ಮಾಡಿದ ಪಕ್ಷದ ಹೆಸರನ್ನು ಹೊಂದಿತ್ತು.

ಇದನ್ನು ಓದಿ: ಕೇಜ್ರಿವಾಲ್‌ ಬಂಧನ ವಿರೋಧಿಸಿ ಮಾ.31ರಂದು ರಾಮಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ ಒಕ್ಕೂಟದಿಂದ ಬೃಹತ್‌ ರ್‍ಯಾಲಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...