Homeಮುಖಪುಟಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಎಎಪಿ ರ್‍ಯಾಲಿ; ‘ನಾಳೆ ನಿಮ್ಮ ಸರದಿ’ ಎಂದು ಎಚ್ಚರಿಸಿದ ಕೇಜ್ರೀವಾಲ್

ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಎಎಪಿ ರ್‍ಯಾಲಿ; ‘ನಾಳೆ ನಿಮ್ಮ ಸರದಿ’ ಎಂದು ಎಚ್ಚರಿಸಿದ ಕೇಜ್ರೀವಾಲ್

- Advertisement -
- Advertisement -

ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸಿ, ದೆಹಲಿ ಸರ್ಕಾರವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸುಗ್ರೀವಾಜ್ಞೆಯನ್ನು ವಿರೋಧಿಸಿ ಇಂದು ದೆಹಲಿಯ ರಾಮ್‌ ಲೀಲಾ ಮೈದಾನದಲ್ಲಿ ಆಮ್‌ ಆದ್ಮಿ ಪಕ್ಷ (ಎಎಪಿ) ರ್‍ಯಾಲಿಯನ್ನು ನಡೆಸಿತು.

ರ್‍ಯಾಲಿಯಲ್ಲಿ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್, “ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲೂ ಇದು ಸಂಭವಿಸಬಹುದು” ಎಂದು ಎಚ್ಚರಿಸಿದರು.

“ಸುಗ್ರೀವಾಜ್ಞೆ ಏನು ಹೇಳುತ್ತದೆ? ಮೋದಿಜಿಯವರ ಸುಗ್ರೀವಾಜ್ಞೆಯು ದೆಹಲಿಯಲ್ಲಿ ಪ್ರಜಾಪ್ರಭುತ್ವ ಇರುವುದಿಲ್ಲ ಎಂದು ಹೇಳುತ್ತದೆ. ಸರ್ವಾಧಿಕಾರವಿದೆ. ಜನರು ಇಲ್ಲಿ ಸರ್ವೋಚ್ಚ ಅಲ್ಲ, ಇಲ್ಲಿ ಲೆಫ್ಟನೆಟ್‌ ಜನರಲ್‌ ಸರ್ವೋಚ್ಚರಾಗಿದ್ದಾರೆ” ಎಂದು ಟೀಕಿಸಿದ್ದಾರೆ.

“ಜನರು ಯಾರನ್ನು ಆರಿಸುತ್ತಾರೆ ಎಂಬುದು ಮುಖ್ಯವಲ್ಲ, ನಾನು ದೆಹಲಿಯನ್ನು ನಡೆಸುತ್ತೇನೆ ಎನ್ನುತ್ತಾರೆ ಮೋದಿ. ಇದು ದೆಹಲಿಗೆ ಮಾತ್ರ ಸೀಮಿತವಾಗುತ್ತದೆ ಎಂದು ಭಾವಿಸಬೇಡಿ. ದೇಶದ ಇತರ ಭಾಗಗಳಲ್ಲೂ ಇದೇ ರೀತಿಯ ಸುಗ್ರೀವಾಜ್ಞೆಯನ್ನು ತರಲು ಅವರು ಯೋಜಿಸುತ್ತಿದ್ದಾರೆ ಎಂದು ನಾನು ಕೇಳಿದ್ದೇನೆ. ದೆಹಲಿಗೆ ಬಂದಂತಹ ಸುಗ್ರೀವಾಜ್ಞೆ ಸರ್ವಾಧಿಕಾರದ ಘೋಷಣೆಯಂತಿದೆ. ಮಹಾರಾಷ್ಟ್ರ, ರಾಜಸ್ಥಾನ, ಪಂಜಾಬ್, ಮಧ್ಯಪ್ರದೇಶದಲ್ಲಿ ಇದನ್ನು ತರಲಾಗುತ್ತದೆ” ಎಂದು ಭವಿಷ್ಯ ನುಡಿದಿದ್ದಾರೆ.

“ಕೇಂದ್ರ ಸರ್ಕಾರ ತಂದಿರುವ ಸುಗ್ರೀವಾಜ್ಞೆಯು ಚುನಾಯಿತ ಸರ್ಕಾರವನ್ನು ದುರ್ಬಲಗೊಳಿಸುತ್ತದೆ” ಎಂದು ಎಚ್ಚರಿಸಿದ್ದಾರೆ.

ರಾಜ್ಯಸಭೆಯಲ್ಲಿ ಸುಗ್ರೀವಾಜ್ಞೆಯನ್ನು ಸೋಲಿಸಬೇಕೆಂದು ಬೆಂಬಲವನ್ನು ಕೋರಿ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಿಗೆ ಕೇಜ್ರಿವಾಲ್ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಈ ರ್‍ಯಾಲಿ ನಡೆದಿದೆ.

ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್, ಆಪ್ ಸಂಸದರಾದ ಸಂಜಯ್ ಸಿಂಗ್, ಸಂದೀಪ್ ಪಾಠಕ್, ಸುಶೀಲ್ ಗುಪ್ತಾ, ಶಾಸಕರಾದ ಗೋಪಾಲ್ ರೈ, ಸೌರಭ್ ಭಾರದ್ವಾಜ್, ದುರ್ಗೇಶ್ ಪಾಠಕ್ ಮತ್ತು ಮಾಜಿ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಹಾಜರಿದ್ದರು.

2012ರಲ್ಲಿ ರಾಮಲೀಲಾ ಮೈದಾನದಲ್ಲಿ ಎಎಪಿ ಹುಟ್ಟಿದ್ದನ್ನು ಸ್ಮರಿಸಿದ ಕೇಜ್ರಿವಾಲ್, “ಹನ್ನೆರಡು ವರ್ಷಗಳ ಹಿಂದೆ ಭ್ರಷ್ಟಾಚಾರದ ವಿರುದ್ಧ ಇಲ್ಲಿ ಒಟ್ಟುಗೂಡಿದ್ದೆವು. ಇದೊಂದು ಪವಿತ್ರ ವೇದಿಕೆ. ಇಂದು ನಾವು ಸರ್ವಾಧಿಕಾರಿಯನ್ನು ದೇಶದಿಂದ ಕಿತ್ತೊಗೆಯಲು ಒಟ್ಟುಗೂಡಿದ್ದೇವೆ. ಆ ಸಮಯದಲ್ಲಿ ನಮ್ಮ ಚಳವಳಿ ಯಶಸ್ವಿಯಾಗಿತ್ತು. ಇದು ಸರ್ವಾಧಿಕಾರವನ್ನು ಕೊನೆಗೊಳಿಸಿ ಪ್ರಜಾಪ್ರಭುತ್ವವನ್ನು ಮರಳಿ ತರುವ ಆಂದೋಲನವಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ನಮ್ಮ ವಕೀಲ ಅಭಿಷೇಕ್ ಮನು ಸಿಂಘ್ವಿ, ನಮಗಾಗಿ, ನಿಮಗಾಗಿ ವಾದಿಸಿ ಗೆದ್ದಿದ್ದಕ್ಕಾಗಿ ನಾನು ಧನ್ಯವಾದ ಹೇಳುತ್ತೇನೆ” ಎಂದಿದ್ದಾರೆ.

“ನಾನು ಸುಪ್ರೀಂ ಕೋರ್ಟ್ ಅನ್ನು ಗೌರವಿಸುವುದಿಲ್ಲ ಎಂದು ಪ್ರಧಾನಿ ಹೇಳುತ್ತಾರೆ. ಪ್ರಧಾನಿಯೊಬ್ಬರು ಈ ರೀತಿ ನಡೆದುಕೊಳ್ಳುತ್ತಿರುವುದು ಇದೇ ಮೊದಲು. ದೇಶದ ಜನತೆ ಬೆಚ್ಚಿಬಿದ್ದಿದ್ದಾರೆ. ತಮ್ಮ ಪ್ರಧಾನಿ ತುಂಬಾ ದುರಹಂಕಾರಿ ಎಂಬುದನ್ನು ಅವರು ಒಪ್ಪಲ್ಲ. ಪ್ರಜಾಪ್ರಭುತ್ವವೇ ಸರ್ವೋಚ್ಚ ಎಂದು ಸುಪ್ರೀಕೋರ್ಟ್ ಹೇಳಿದೆ. ಜನರ ಇಚ್ಛೆಯೇ ಸರ್ವಶ್ರೇಷ್ಠ. ಚುನಾಯಿತ ಸರ್ಕಾರಕ್ಕೆ ಯಾವುದೇ ಪಕ್ಷ ಭೇದವಿಲ್ಲದೇ ಕೆಲಸ ಮಾಡುವ ಹಕ್ಕು ಇರಬೇಕು. ನಾನು ಕೇಳಲು ಬಯಸುತ್ತೇನೆ, ಸುಪ್ರೀಂಕೋರ್ಟ್‌ನಿಂದ ತಪ್ಪಾಗಿದೆಯೇ? ಪ್ರಧಾನಿ ಆದೇಶಕ್ಕೆ ಬದ್ಧರಾಗಬೇಕೇ?” ಎಂದು ಪ್ರಶ್ನಿಸಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದೇನು?

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಸರ್ಕಾರದ ಪರವಾಗಿ ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟಿಸಿತ್ತು. ದೆಹಲಿ ಸರ್ಕಾರದ ಎಲ್ಲ ನಿರ್ಧಾರಗಳಲ್ಲಿಯೂ ಕೇಂದ್ರ ಸರ್ಕಾರ ಮೂಗು ತೂರಿಸುವಂತಿಲ್ಲ ಎಂದು ಸೂಚಿಸಿತ್ತು.

ಕೇಂದ್ರದಿಂದ ನೇಮಕವಾಗುವ ಲೆಫ್ಟಿನೆಂಟ್ ಗವರ್ನರ್‌ಗೆ ಖಡಕ್ ಸೂಚನೆಗಳನ್ನು ನೀಡಿರುವ ಸರ್ವೋಚ್ಚ ನ್ಯಾಯಾಲಯ, “ದೆಹಲಿ ಸರ್ಕಾರವು ಸೇವೆಗಳ ಮೇಲೆ ನಿಯಂತ್ರಣ ಹೊಂದಿರಬೇಕು, ಲೆಫ್ಟಿನೆಂಟ್ ಗವರ್ನರ್ ಸರ್ಕಾರದ ನಿಯಂತ್ರಣಕ್ಕೆ ಬದ್ಧರಾಗಿರಬೇಕು” ಎಂದು ನಿರ್ದೇಶಿಸಿದೆ.

ಎಎಪಿ ಮತ್ತು ಕೇಂದ್ರ ಸರ್ಕಾರದ ನಡುವೆ ಅಧಿಕಾರದ ತಿಕ್ಕಾಟ ನಡೆಯುತ್ತಿರುವಾಗ ಈ ತೀರ್ಪು ಹೊರಬಿದ್ದಿದೆ. “ಜನರ ಇಚ್ಛೆಯನ್ನು ಪ್ರತಿನಿಧಿಸಿ ಕಾನೂನು ರೂಪಿಸುವ ಅಧಿಕಾರವನ್ನು ದೆಹಲಿ ವಿಧಾನಸಭೆಗೆ ನೀಡಲಾಗಿದೆ” ಎಂದು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಸರ್ವಾನುಮತದ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.

“ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಆಡಳಿತದ ನಿಜವಾದ ಅಧಿಕಾರವು ಚುನಾಯಿತ ಸರ್ಕಾರದ ತೋಳಿನ ಮೇಲೆ ನಿಂತಿರಬೇಕು” ಎಂದು ಪೀಠವು ಅಭಿಪ್ರಾಯಪಟ್ಟಿದೆ. ಕೇಂದ್ರ ಮತ್ತು ರಾಜ್ಯಗಳೆರಡೂ ಸೇರಿ ಕಾನೂನು ರಚಿಸಬಹುದಾದ ವಿಷಯಗಳಲ್ಲಿ ಕೇಂದ್ರ ಸರ್ಕಾರವು ದೆಹಲಿ ಚುನಾಯಿತ ಸರ್ಕಾರದೊಂದಿಗೆ ಚರ್ಚಿಸಬಹುದು. ‘ಸದರಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಮೀರಲಾಗಿಲ್ಲ ಎಂದು ಖಚಿತಪಡಿಸಿಕೊಳ್ಳಲಷ್ಟೇ ಇದು ಸೀಮಿತವಾಗಿರುತ್ತದೆ’ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

ಆಡಳಿತ ಸೇವೆಗಳ ಮೇಲೆ ದೆಹಲಿ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಒಪ್ಪದ ನ್ಯಾಯಾಧೀಶರು, “ಸಾರ್ವಜನಿಕ ಸುವ್ಯವಸ್ಥೆ, ಪೊಲೀಸ್ ಮತ್ತು ಭೂಮಿ ವಿಷಯಗಳನ್ನಷ್ಟೇ ಅದರ (ದೆಹಲಿ) ಅಧಿಕಾರ ವ್ಯಾಪ್ತಿಯಿಂದ ಹೊರಗಿಡಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಸಾಗರದ ದಲಿತ ವಿದ್ಯಾರ್ಥಿನಿ ಪ್ರಕರಣ; ವಸತಿ ಶಾಲೆ ಮುಖ್ಯಸ್ಥನ ವಿರುದ್ಧ ‘ಪೋಕ್ಸೋ’, ‘ಅಟ್ರಾಸಿಟಿ’ ಕೇಸ್‌ ದಾಖಲು

“ಅಧಿಕಾರಿಗಳು ಮಂತ್ರಿಗಳಿಗೆ ವರದಿ ಮಾಡುವುದನ್ನು ನಿಲ್ಲಿಸಿದರೆ ಅಥವಾ ಅವರ ನಿರ್ದೇಶನಗಳನ್ನು ಪಾಲಿಸದಿದ್ದರೆ, ಸಾಮೂಹಿಕ ಜವಾಬ್ದಾರಿಯ ತತ್ವದಲ್ಲಿ ಪರಿಣಾಮ ಕಂಡುಬರುತ್ತದೆ” ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಆದೇಶಿಸಿದ್ದಾರೆ.

ರಾಷ್ಟ್ರದ ರಾಜಧಾನಿಯಲ್ಲಿ ಅಧಿಕಾರಶಾಹಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳ ಮೇಲೆ ಆಡಳಿತಾತ್ಮಕ ನಿಯಂತ್ರಣವನ್ನು ಯಾರು ಹೊಂದಿದ್ದಾರೆ ಎಂಬ ಪ್ರಶ್ನೆ ಕೋರ್ಟ್ ಮುಂದಿತ್ತು. ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಈ ಪ್ರಕರಣವನ್ನು ಆಲಿಸಿತ್ತು.

ದೆಹಲಿ ಸರ್ಕಾರದಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್ ಗವರ್ನರ್, ಆಡಳಿತ ಸೇವೆಗಳ ವಿಚಾರದಲ್ಲಿ ಚುನಾಯಿತ ಸರ್ಕಾರದ ನಿರ್ಧಾರಕ್ಕೆ ಬದ್ಧರಾಗಿರುತ್ತಾರೆ ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮಂತ್ರಿಮಂಡಲದ ಸಹಾಯ ಮತ್ತು ಸಲಹೆಗೂ ಲೆಫ್ಟಿನೆಂಟ್ ಗವರ್ನರ್ ಬದ್ಧರಾಗಿರುತ್ತಾರೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...