Homeಮುಖಪುಟಎಎಪಿಗೆ ರಾಜೀನಾಮೆ ನೀಡಿದ್ದ ಎಲ್ಲಾ 8 ಶಾಸಕರು ಬಿಜೆಪಿಗೆ ಸೇರ್ಪಡೆ!

ಎಎಪಿಗೆ ರಾಜೀನಾಮೆ ನೀಡಿದ್ದ ಎಲ್ಲಾ 8 ಶಾಸಕರು ಬಿಜೆಪಿಗೆ ಸೇರ್ಪಡೆ!

- Advertisement -
- Advertisement -

ಆಮ್ ಆದ್ಮಿ ಪಕ್ಷ(ಎಎಪಿ)ಕ್ಕೆ ರಾಜೀನಾಮೆ ನೀಡಿದ್ದ ದೆಹಲಿಯ ಎಂಟು ಶಾಸಕರು ಶನಿವಾರ ಬಿಜೆಪಿ ಸೇರಿದ್ದಾರೆ. ಫೆಬ್ರವರಿ 5 ರಂದು ರಾಷ್ಟ್ರ ರಾಜಧಾನಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದೇ ವೇಳೆ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿ ಸೇರಿದ್ದು ಆಡಳಿತರೂಢ ಎಎಪಿಗೆ ಭಾರಿ ಹಿನ್ನಡೆಯಾಗಲಿದೆ ಎಂದು ವಿಶ್ಲೇಷಿಸಲಾಗಿದೆ. ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ. ಎಎಪಿಗೆ ರಾಜೀನಾಮೆ

ತ್ರಿಲೋಕಪುರಿಯ ನಿರ್ಗಮಿತ ಶಾಸಕ ರೋಹಿತ್ ಕುಮಾರ್ ಮೆಹ್ರೌಲಿಯಾ, ಜನಕಪುರಿ ಕ್ಷೇತ್ರವನ್ನು ಪ್ರತಿನಿಧಿಸುವ ರಾಜೇಶ್ ರಿಷಿ, ಕಸ್ತೂರ್ಬಾ ನಗರ ಶಾಸಕ ಮದನ್ ಲಾಲ್, ಮೆಹ್ರೌಲಿ ಶಾಸಕ ನರೇಶ್ ಯಾದವ್, ಬಿಜ್ವಾಸನ್ ಶಾಸಕ ಭೂಪಿಂದರ್ ಸಿಂಗ್ ಜೂನ್, ಪಾಲಂ ಶಾಸಕ ಭಾವನಾ ಗೌರ್, ಆದರ್ಶ ನಗರ ಶಾಸಕ ಪವನ್ ಶರ್ಮಾ ಮತ್ತು ಮದೀಪುರ ಶಾಸಕ ಗಿರೀಶ್ ಸೋನಿ ಶನಿವಾರ ಬಿಜೆಪಿ ಸೇರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಜೆಪಿಯ ದೆಹಲಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ್ ಮತ್ತು ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಪಾಂಡ ಅವರ ಸಮ್ಮುಖದಲ್ಲಿ ಎಂಟು ಶಾಸಕರು ಬಿಜೆಪಿಗೆ ಸೇರಿದ್ದಾರೆ. ಮೆಹ್ರೌಲಿ ಶಾಸಕ ನರೇಶ್ ಯಾದವ್ ಹೊರತುಪಡಿಸಿ, ರಾಜೀನಾಮೆ ನೀಡಿದ ಯಾವುದೇ ಶಾಸಕರಿಗೆ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಆಮ್ ಆದ್ಮಿ ಪಕ್ಷ ಟಿಕೆಟ್ ನೀಡಿರಲಿಲ್ಲ. ಎಎಪಿಗೆ ರಾಜೀನಾಮೆ

ಶಾಸಕರು “ಆಪ್ಡಾ [ವಿಪತ್ತು]” ದಿಂದ ತಮ್ಮನ್ನು ಮುಕ್ತಗೊಳಿಸಿಕೊಂಡಿದ್ದರಿಂದ ಇದು ಐತಿಹಾಸಿಕ ದಿನವಾಗಿದೆ. ಚುನಾವಣೆಯ ನಂತರ ದೆಹಲಿಯೂ ಅದರಿಂದ ಮುಕ್ತವಾಗುತ್ತದೆ ಎಂದು ಅವರು ಆಶಿಸಿದ್ದಾರೆ ಎಂದು ಪಾಂಡ ಇದೇ ವೇಳೆ ಹೇಳಿದ್ದಾರೆ.

ಮೆಹ್ರೌಲಿ ಶಾಸಕ ನರೇಶ್ ಯಾದವ್ ಅವರು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ ಅವರಿಗೆ ಶುಕ್ರವಾರ ಬರೆದ ರಾಜೀನಾಮೆ ಪತ್ರದಲ್ಲಿ,  “ಪಕ್ಷದಲ್ಲಿ ಭ್ರಷ್ಟಾಚಾರ ನುಸುಳಿದೆ” ಎಂದು ಆರೋಪಿಸಿದ್ದಾರೆ. “ದಲಿತ ಮತ್ತು ವಾಲ್ಮೀಕಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಪಡೆಯಲು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ನೇತೃತ್ವದ ಭ್ರಷ್ಟಾಚಾರದ ವಿರುದ್ಧದ ಚಳವಳಿಯ ಸಮಯದಲ್ಲಿ ತಾನು ಆಮ್ ಆದ್ಮಿ ಪಕ್ಷಕ್ಕೆ ಸೇರಿದ್ದೇನೆ” ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಪಕ್ಷವು ಈ ಸಮುದಾಯಗಳನ್ನು ಉನ್ನತೀಕರಿಸುವುದಾಗಿ ಭರವಸೆ ನೀಡಿತ್ತು ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಆದಾಗ್ಯೂ, ಗುತ್ತಿಗೆ ಆಧಾರಿತ ಕಾರ್ಮಿಕರನ್ನು ರದ್ದುಗೊಳಿಸುವುದು ಮತ್ತು ತಾತ್ಕಾಲಿಕ ಕಾರ್ಮಿಕರನ್ನು ಶಾಶ್ವತವಾಗಿ ಸೇರಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳುವುದು ಸೇರಿದಂತೆ ಹಲವಾರು ವಿಷಯಗಳನ್ನು ಪರಿಹರಿಸುವಲ್ಲಿ ಪಕ್ಷವೂ ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ.

ಜನಕಪುರಿ ಕ್ಷೇತ್ರವನ್ನು ಪ್ರತಿನಿಧಿಸುವ ರಾಜೇಶ್ ರಿಷಿ ತಮ್ಮ ರಾಜೀನಾಮೆ ಪತ್ರದಲ್ಲಿ, ಎಎಪಿ ತನ್ನ ಮೂಲ ಮೌಲ್ಯಗಳಿಂದ ದೂರ ಸರಿದಿದೆ ಎಂದು ಹೇಳಿಕೊಂಡಿದ್ದಾರೆ. “ಪಕ್ಷವು ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಕೊಳಚೆ ಗುಂಡಿಯಾಗಿ ಮಾರ್ಪಟ್ಟಿದೆ. ಅದು ಸ್ಥಾಪಿಸಲಾದ ಭ್ರಷ್ಟಾಚಾರ-ಮುಕ್ತ ಮತ್ತು ಪಾರದರ್ಶಕ ಸರ್ಕಾರದ ತತ್ವಗಳಿಗೆ ದ್ರೋಹ ಬಗೆದಿದೆ” ಎಂದು ಅವರು ಟೀಕಿಸಿದ್ದಾರೆ.

ಶಾಸಕರಾದ ಲಾಲ್ ಮತ್ತು ಗೌರ್ ತಮ್ಮ ಪತ್ರಗಳಲ್ಲಿ ಕೇಜ್ರಿವಾಲ್ ಮತ್ತು ಪಕ್ಷದ ಮೇಲಿನ ನಂಬಿಕೆಯನ್ನು ಕಳೆದುಕೊಂಡಿರುವುದರಿಂದ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಎಲ್ಲಾ ಶಾಸಕರು ತಮ್ಮ ರಾಜೀನಾಮೆ ಪತ್ರಗಳನ್ನು ವಿಧಾನಸಭಾ ಸ್ಪೀಕರ್‌ಗೆ ಸಲ್ಲಿಸಿದ್ದು, ಅವರು ಸದನದ ಸದಸ್ಯತ್ವವನ್ನು ತ್ಯಜಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

2020 ರಲ್ಲಿ ನಡೆದ ಕಳೆದ ರಾಜ್ಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು 70 ವಿಧಾನಸಭಾ ಸ್ಥಾನಗಳಲ್ಲಿ 62 ಸ್ಥಾನಗಳನ್ನು ಗೆದ್ದಿದೆ.

ಇದನ್ನೂಓದಿ:  Union Budget 2025 | ರಾಜ್ಯಕ್ಕೆ ಚೊಂಬು ಕೊಡುವ ಅಭಿಯಾನ ಕೇಂದ್ರ ಮುಂದುವರೆಸಿದೆ – ಸಿಎಂ ಅಸಮಾಧಾನ.

Union Budget 2025 | ರಾಜ್ಯಕ್ಕೆ ಚೊಂಬು ಕೊಡುವ ಅಭಿಯಾನ ಕೇಂದ್ರ ಮುಂದುವರೆಸಿದೆ – ಸಿಎಂ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಚಳವಳಿ ಎಲ್ಲ ಶೋಷಿತರನ್ನೂ ಒಳಗೊಂಡಿದೆ; ನಮ್ಮಲ್ಲಿ ಹೊಲೆ-ಮಾದಿಗ ಎಂಬ ಬೇಧವಿಲ್ಲ: ದಸಂಸ ಸಂಚಾಲಕ ಹೆಣ್ಣೂರು ಶ್ರೀನಿವಾಸ್

"ದಲಿತ ಚಳವಳಿ ಯಾವುದೇ ಒಂದು ಜಾತಿಯ ಪರವಾಗಿಲ್ಲ.. ಪೌರ ಕಾರ್ಮಿಕನ ಮಗನನ್ನ ರಾಜ್ಯ ಸಂಚಾಲಕನನ್ನಾಗಿ ಮಾಡಿದೆ. ನಮ್ಮಲ್ಲಿ ಹೊಲೆಯ-ಮಾದಿಗ ಎಂಬ ಬೇಧವಿಲ್ಲ. ಈ ಚಳವಳಿ ಎಲ್ಲ ಶೋಷಿತ ಸಮುದಾಯಗಳನ್ನೂ ಒಳಗೊಂಡಿದೆ" ಎಂದು ಕರ್ನಾಟಕ...

ಚಳಿಗಾಲದ ಅಧಿವೇಶನ: ಸಂಸತ್ತಿನ ಹೊರಗೆ ‘ವಾಯು ಮಾಲಿನ್ಯದ ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳಿಂದ ಪ್ರತಿಭಟನೆ

2025 ರ ಸಂಸತ್ತಿನ ಚಳಿಗಾಲದ ಅಧಿವೇಶನವು ನಾಲ್ಕನೇ ದಿನಕ್ಕೆ ಕಾಲಿಡುತ್ತಿದ್ದಂತೆ, ದೆಹಲಿ-ಎನ್‌ಸಿಆರ್ ಮತ್ತು ಉತ್ತರ ಭಾರತದಾದ್ಯಂತ ಹದಗೆಡುತ್ತಿರುವ ವಾಯು ಮಾಲಿನ್ಯದ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿ ಕಾಂಗ್ರೆಸ್ ಸಂಸದರು ಗುರುವಾರ ಲೋಕಸಭೆಯಲ್ಲಿ ಮುಂದೂಡಿಕೆ...

ಭೀಮಾ ಕೋರೆಗಾಂವ್ ಪ್ರಕರಣ: ದೆಹಲಿ ವಿವಿ ಪ್ರಾಧ್ಯಾಪಕ ಹನಿ ಬಾಬುಗೆ ಜಾಮೀನು

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 2020 ರಲ್ಲಿ ಬಂಧಿಸಲ್ಪಟ್ಟು ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪ ಎದುರಿಸುತ್ತಿರುವ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಖ್ಯಾತ ಶಿಕ್ಷಣ ತಜ್ಞ ಡಾ....

ಕೇಂದ್ರ ಸರ್ಕಾರ ಗಣ್ಯರು ನಮ್ಮನ್ನು ಭೇಟಿ ಮಾಡುವುದನ್ನು ನಿರಾಕರಿಸುತ್ತದೆ: ಪುಟಿನ್ ಭಾರತ ಭೇಟಿಗೂ ಮುನ್ನ ರಾಹುಲ್ ಗಾಂಧಿ ಆರೋಪ

ವಿದೇಶಿ ನಾಯಕರು ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡುವುದು ಬಹಳ ಹಿಂದಿನಿಂದಲೂ ನಡೆದು ಬಂದಿರುವ ಸಂಪ್ರದಾಯವಾಗಿದೆ, ಆದರೆ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವಾಲಯ ಈ ನಿಯಮವನ್ನು ಪಾಲಿಸುತ್ತಿಲ್ಲ ಎಂದು ರಾಹುಲ್ ಗಾಂಧಿ...

ಪ್ರತಿಭಟನೆಗಿದ್ದ ಏಕೈಕ ಜಾಗ ‘ಬೆಂಗಳೂರಿನ ಫ್ರೀಡಂ ಪಾರ್ಕ್’ ತಾತ್ಕಾಲಿಕ ಬಂದ್, ಹೋರಾಟಗಾರರ ಪರದಾಟ

ಕರ್ನಾಟಕದ ಎಲ್ಲೆಡೆಯಿಂದ ರಾಜಧಾನಿ ಬೆಂಗಳೂರಿಗೆ ಬಂದು ಹೋರಾಟಗಾರರು ಹೋರಾಟ ಮಾಡುವ ಏಕೈಕ ಜಾಗ ಫ್ರೀಡಂ ಪಾರ್ಕ್. ಅಂಥಾ ಫ್ರೀಡಂ ಪಾರ್ಕ್‌ ಅನ್ನು ಈಗ ಬಂದ್ ಮಾಡಲಾಗಿದೆ. ಅಭಿವೃದ್ಧಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ತಾತ್ಕಾಲಿಕವಾಗಿ...

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ದಿನಗಳ ಭಾರತ ಭೇಟಿ: ದೆಹಲಿಯಲ್ಲಿ ಬಹುಹಂತದ ಭದ್ರತಾ ವ್ಯವಸ್ಥೆ ಜಾರಿ

ನವದೆಹಲಿ: ಎರಡು ದಿನಗಳ ಭಾರತ ಭೇಟಿಗಾಗಿ ಇಂದು ಸಂಜೆ ದೆಹಲಿಗೆ ಆಗಮಿಸುತ್ತಿರುವ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಗುರುವಾರ ಬಹು ಹಂತದ ಭದ್ರತಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಕಟ್ಟೆಚ್ಚರ...

ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ಸಿದ್ಧತೆ: ಇಂದು ಸಚಿವರೊಂದಿಗೆ ಸಭೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ 

ಬೆಳಗಾವಿ ಚಳಿಗಾಲ ಅಧಿವೇಶನ ಡಿಸೆಂಬರ್ 8ರಿಂದ ಆರಂಭವಾಗಲಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ತಂತ್ರರೂಪಿಸಿವೆ, ಈ ತಂತ್ರಗಳಿಗೆ ಸರಿಯಾದ ಉತ್ತರ ನೀಡುವ ಮತ್ತು ಸರ್ಕಾರದ ನಿಲುವುಗಳನ್ನು ಸ್ಪಷ್ಟಪಡೆಸುವ ಕುರಿತು ಚರ್ಚಿಸುವ ಸಲುವಾಗಿ...

ಇಂಡಿಗೋ ಏರ್ ಲೈನ್ಸ್, ಮುಗಿಯದ ಸಂಕಷ್ಟ: ಬೆಂಗಳೂರಿನಲ್ಲಿ 73 ವಿಮಾನ, ಸೇರಿ ಹಲವು ವಿಮಾನ ನಿಲ್ದಾಣಗಳಲ್ಲಿ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋ ಸಿಬ್ಬಂದಿ ಕೊರತೆ ಸೇರಿದಂತೆ ಹಲವು ಸಮಸ್ಯೆಗಳಿಂದಾಗಿ ಕಾರ್ಯಾಚರಣೆಯಲ್ಲಿ ಬಹುದೊಡ್ಡ ಅಡಚಣೆಗಳನ್ನು ಎದುರಿಸಿದ್ದರಿಂದ ಡಿಸೆಂಬರ್ 3ರಿಂದ, ವಿವಿಧ ವಿಮಾನ ನಿಲ್ದಾಣಗಳಲ್ಲಿ 200ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ...

ಪುನರ್ವಸತಿ ಕೇಂದ್ರದಲ್ಲಿ ದಲಿತ ಯುವಕ ಸಾವು ಪ್ರಕರಣ; ನಾಲ್ವರು ಪೊಲೀಸರು ಅಮಾನತು

ಬೆಂಗಳೂರು ಪೊಲೀಸರ ಕಸ್ಟಡಿಯಲ್ಲಿ 22 ವರ್ಷದ ದಲಿತ ಯುವಕನಿಗೆ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಮಂಗಳವಾರ ಇನ್ಸ್‌ಪೆಕ್ಟರ್ ಮತ್ತು ಇತರ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ. ನಂತರ, ಪುನರ್ವಸತಿ ಕೇಂದ್ರದಲ್ಲಿ ಅವರ...

ಉತ್ತರ ಪ್ರದೇಶ| ಮುಜಫರ್‌ನಗರದ ಮಸೀದಿ-ದೇವಸ್ಥಾನಗಳ 55 ಕ್ಕೂ ಹೆಚ್ಚು ಧ್ವನಿವರ್ಧಕ ತೆರವು

ಉತ್ತರ ಪ್ರದೇಶದ ಮುಜಫರ್‌ನಗರದ ಪೊಲೀಸರು, ನಗರದಲ್ಲಿ ಹೆಚ್ಚಿನ ಶಬ್ದ ಮಾಡುತ್ತಿದ್ದ ಧ್ವನಿವರ್ಧಕಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ, ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಧ್ವನಿ ಮಿತಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ವಿವಿಧ ಮಸೀದಿಗಳಿಂದ 55 ಕ್ಕೂ...