Homeಮುಖಪುಟಎಎಪಿಗೆ ರಾಜೀನಾಮೆ ನೀಡಿದ್ದ ಎಲ್ಲಾ 8 ಶಾಸಕರು ಬಿಜೆಪಿಗೆ ಸೇರ್ಪಡೆ!

ಎಎಪಿಗೆ ರಾಜೀನಾಮೆ ನೀಡಿದ್ದ ಎಲ್ಲಾ 8 ಶಾಸಕರು ಬಿಜೆಪಿಗೆ ಸೇರ್ಪಡೆ!

- Advertisement -
- Advertisement -

ಆಮ್ ಆದ್ಮಿ ಪಕ್ಷ(ಎಎಪಿ)ಕ್ಕೆ ರಾಜೀನಾಮೆ ನೀಡಿದ್ದ ದೆಹಲಿಯ ಎಂಟು ಶಾಸಕರು ಶನಿವಾರ ಬಿಜೆಪಿ ಸೇರಿದ್ದಾರೆ. ಫೆಬ್ರವರಿ 5 ರಂದು ರಾಷ್ಟ್ರ ರಾಜಧಾನಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದೇ ವೇಳೆ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿ ಸೇರಿದ್ದು ಆಡಳಿತರೂಢ ಎಎಪಿಗೆ ಭಾರಿ ಹಿನ್ನಡೆಯಾಗಲಿದೆ ಎಂದು ವಿಶ್ಲೇಷಿಸಲಾಗಿದೆ. ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ. ಎಎಪಿಗೆ ರಾಜೀನಾಮೆ

ತ್ರಿಲೋಕಪುರಿಯ ನಿರ್ಗಮಿತ ಶಾಸಕ ರೋಹಿತ್ ಕುಮಾರ್ ಮೆಹ್ರೌಲಿಯಾ, ಜನಕಪುರಿ ಕ್ಷೇತ್ರವನ್ನು ಪ್ರತಿನಿಧಿಸುವ ರಾಜೇಶ್ ರಿಷಿ, ಕಸ್ತೂರ್ಬಾ ನಗರ ಶಾಸಕ ಮದನ್ ಲಾಲ್, ಮೆಹ್ರೌಲಿ ಶಾಸಕ ನರೇಶ್ ಯಾದವ್, ಬಿಜ್ವಾಸನ್ ಶಾಸಕ ಭೂಪಿಂದರ್ ಸಿಂಗ್ ಜೂನ್, ಪಾಲಂ ಶಾಸಕ ಭಾವನಾ ಗೌರ್, ಆದರ್ಶ ನಗರ ಶಾಸಕ ಪವನ್ ಶರ್ಮಾ ಮತ್ತು ಮದೀಪುರ ಶಾಸಕ ಗಿರೀಶ್ ಸೋನಿ ಶನಿವಾರ ಬಿಜೆಪಿ ಸೇರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಜೆಪಿಯ ದೆಹಲಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ್ ಮತ್ತು ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಪಾಂಡ ಅವರ ಸಮ್ಮುಖದಲ್ಲಿ ಎಂಟು ಶಾಸಕರು ಬಿಜೆಪಿಗೆ ಸೇರಿದ್ದಾರೆ. ಮೆಹ್ರೌಲಿ ಶಾಸಕ ನರೇಶ್ ಯಾದವ್ ಹೊರತುಪಡಿಸಿ, ರಾಜೀನಾಮೆ ನೀಡಿದ ಯಾವುದೇ ಶಾಸಕರಿಗೆ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಆಮ್ ಆದ್ಮಿ ಪಕ್ಷ ಟಿಕೆಟ್ ನೀಡಿರಲಿಲ್ಲ. ಎಎಪಿಗೆ ರಾಜೀನಾಮೆ

ಶಾಸಕರು “ಆಪ್ಡಾ [ವಿಪತ್ತು]” ದಿಂದ ತಮ್ಮನ್ನು ಮುಕ್ತಗೊಳಿಸಿಕೊಂಡಿದ್ದರಿಂದ ಇದು ಐತಿಹಾಸಿಕ ದಿನವಾಗಿದೆ. ಚುನಾವಣೆಯ ನಂತರ ದೆಹಲಿಯೂ ಅದರಿಂದ ಮುಕ್ತವಾಗುತ್ತದೆ ಎಂದು ಅವರು ಆಶಿಸಿದ್ದಾರೆ ಎಂದು ಪಾಂಡ ಇದೇ ವೇಳೆ ಹೇಳಿದ್ದಾರೆ.

ಮೆಹ್ರೌಲಿ ಶಾಸಕ ನರೇಶ್ ಯಾದವ್ ಅವರು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ ಅವರಿಗೆ ಶುಕ್ರವಾರ ಬರೆದ ರಾಜೀನಾಮೆ ಪತ್ರದಲ್ಲಿ,  “ಪಕ್ಷದಲ್ಲಿ ಭ್ರಷ್ಟಾಚಾರ ನುಸುಳಿದೆ” ಎಂದು ಆರೋಪಿಸಿದ್ದಾರೆ. “ದಲಿತ ಮತ್ತು ವಾಲ್ಮೀಕಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಪಡೆಯಲು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ನೇತೃತ್ವದ ಭ್ರಷ್ಟಾಚಾರದ ವಿರುದ್ಧದ ಚಳವಳಿಯ ಸಮಯದಲ್ಲಿ ತಾನು ಆಮ್ ಆದ್ಮಿ ಪಕ್ಷಕ್ಕೆ ಸೇರಿದ್ದೇನೆ” ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಪಕ್ಷವು ಈ ಸಮುದಾಯಗಳನ್ನು ಉನ್ನತೀಕರಿಸುವುದಾಗಿ ಭರವಸೆ ನೀಡಿತ್ತು ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಆದಾಗ್ಯೂ, ಗುತ್ತಿಗೆ ಆಧಾರಿತ ಕಾರ್ಮಿಕರನ್ನು ರದ್ದುಗೊಳಿಸುವುದು ಮತ್ತು ತಾತ್ಕಾಲಿಕ ಕಾರ್ಮಿಕರನ್ನು ಶಾಶ್ವತವಾಗಿ ಸೇರಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳುವುದು ಸೇರಿದಂತೆ ಹಲವಾರು ವಿಷಯಗಳನ್ನು ಪರಿಹರಿಸುವಲ್ಲಿ ಪಕ್ಷವೂ ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ.

ಜನಕಪುರಿ ಕ್ಷೇತ್ರವನ್ನು ಪ್ರತಿನಿಧಿಸುವ ರಾಜೇಶ್ ರಿಷಿ ತಮ್ಮ ರಾಜೀನಾಮೆ ಪತ್ರದಲ್ಲಿ, ಎಎಪಿ ತನ್ನ ಮೂಲ ಮೌಲ್ಯಗಳಿಂದ ದೂರ ಸರಿದಿದೆ ಎಂದು ಹೇಳಿಕೊಂಡಿದ್ದಾರೆ. “ಪಕ್ಷವು ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಕೊಳಚೆ ಗುಂಡಿಯಾಗಿ ಮಾರ್ಪಟ್ಟಿದೆ. ಅದು ಸ್ಥಾಪಿಸಲಾದ ಭ್ರಷ್ಟಾಚಾರ-ಮುಕ್ತ ಮತ್ತು ಪಾರದರ್ಶಕ ಸರ್ಕಾರದ ತತ್ವಗಳಿಗೆ ದ್ರೋಹ ಬಗೆದಿದೆ” ಎಂದು ಅವರು ಟೀಕಿಸಿದ್ದಾರೆ.

ಶಾಸಕರಾದ ಲಾಲ್ ಮತ್ತು ಗೌರ್ ತಮ್ಮ ಪತ್ರಗಳಲ್ಲಿ ಕೇಜ್ರಿವಾಲ್ ಮತ್ತು ಪಕ್ಷದ ಮೇಲಿನ ನಂಬಿಕೆಯನ್ನು ಕಳೆದುಕೊಂಡಿರುವುದರಿಂದ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಎಲ್ಲಾ ಶಾಸಕರು ತಮ್ಮ ರಾಜೀನಾಮೆ ಪತ್ರಗಳನ್ನು ವಿಧಾನಸಭಾ ಸ್ಪೀಕರ್‌ಗೆ ಸಲ್ಲಿಸಿದ್ದು, ಅವರು ಸದನದ ಸದಸ್ಯತ್ವವನ್ನು ತ್ಯಜಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

2020 ರಲ್ಲಿ ನಡೆದ ಕಳೆದ ರಾಜ್ಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು 70 ವಿಧಾನಸಭಾ ಸ್ಥಾನಗಳಲ್ಲಿ 62 ಸ್ಥಾನಗಳನ್ನು ಗೆದ್ದಿದೆ.

ಇದನ್ನೂಓದಿ:  Union Budget 2025 | ರಾಜ್ಯಕ್ಕೆ ಚೊಂಬು ಕೊಡುವ ಅಭಿಯಾನ ಕೇಂದ್ರ ಮುಂದುವರೆಸಿದೆ – ಸಿಎಂ ಅಸಮಾಧಾನ.

Union Budget 2025 | ರಾಜ್ಯಕ್ಕೆ ಚೊಂಬು ಕೊಡುವ ಅಭಿಯಾನ ಕೇಂದ್ರ ಮುಂದುವರೆಸಿದೆ – ಸಿಎಂ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...