Homeಮುಖಪುಟಲಡಾಖ್‌ ಘರ್ಷಣೆ ಕುರಿತ ಸರ್ವಪಕ್ಷ ಸಭೆಗೆ AAP, RJDಗೆ ಆಹ್ವಾನವಿಲ್ಲ: ಹೊಸ ವಿವಾದ

ಲಡಾಖ್‌ ಘರ್ಷಣೆ ಕುರಿತ ಸರ್ವಪಕ್ಷ ಸಭೆಗೆ AAP, RJDಗೆ ಆಹ್ವಾನವಿಲ್ಲ: ಹೊಸ ವಿವಾದ

- Advertisement -
- Advertisement -

ಲಡಾಖ್‌ನಲ್ಲಿ ನಡೆಯುತ್ತಿರುವ ಭಾರತ-ಚೀನಾ ಸಂಘರ್ಷದ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಕರೆದಿರುವ ಸರ್ವಪಕ್ಷ ಸಭೆ ಗೆ ಸೋನಿಯಾ ಗಾಂಧಿ ಮತ್ತು ಮಮತಾ ಬ್ಯಾನರ್ಜಿ ಭಾಗವಹಿಸಲಿದ್ದಾರೆ. ಆದರೆ ಎರಡು ಪ್ರಮುಖ ಪಕ್ಷಗಳಾದ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಲಾಲು ಯಾದವ್ ಅವರ ಆರ್‌ಜೆಡಿಗೆ ಆಹ್ವಾನ ನೀಡದಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಿನ್ನೆ ಸಂಜೆ ಪಕ್ಷದ ಎಲ್ಲ ಅಧ್ಯಕ್ಷರಿಗೂ ಫೋನ್ ಕರೆ ಮಾಡಿ ಅವರನ್ನು ಸಭೆಗೆ ಆಹ್ವಾನಿಸಿದ್ದಾರೆ.

‌ಆದರೆ ತಮ್ಮ ಪಕ್ಷವನ್ನು ಏಕೆ ಆಹ್ವಾನಿಸಿಲ್ಲ ಎಂದು ಆರ್‌ಜೆಡಿಯ ತೇಜಶ್ವಿ ಯಾದವ್ ಟ್ವೀಟ್‌ ಮಾಡಿ ಪ್ರಶ್ನಿಸಿದ್ದಾರೆ. “ಪ್ರೀತಿಯ ರಕ್ಷಣಾ ಸಚಿವರೆ ಮತ್ತು ಪ್ರಧಾನಿ ಮಂತ್ರಿ ಕಚೇರಿ, ಗಾಲ್ವನ್‌ ಕಣಿವೆ ಕುರಿತು ನಡೆಯುತ್ತಿರುವ ಸರ್ವಪಕ್ಷ ಸಭೆಗೆ ಆಹ್ವಾನಿಸುವುದರ ಮಾನದಂಡಗಳನ್ನು ಅಂದರೆ ಸಭೆಗೆ ಒಳಗೊಳ್ಳುವ ಅಥವಾ ಹೊರಗಿಡುವ ಕುರಿತು ತಿಳಿಸಬೇಕೆಂದು ಮನವಿ. ಏಕೆಂದರೆ ನಮ್ಮ ಪಕ್ಷ ಆರ್‌ಜೆಡಿಗೆ ಇದುವರೆಗೂ ಯಾವುದೇ ಆಹ್ವಾನ ಬಂದಿಲ್ಲ” ಎಂದು ತಿಳಿಸಿದ್ದಾರೆ.

ಎಎಪಿ ಮತ್ತು ಆರ್‌ಜೆಡಿಯನ್ನು ಸರ್ವಪಕ್ಷ ಸಭೆಯಿಂದ ಹೊರಗಿಡಲಾಗಿರುವ ಕುರಿತು “ಸಂಸತ್ತಿನಲ್ಲಿ ಕನಿಷ್ಠ ಐದು ಸದಸ್ಯರನ್ನು ಹೊಂದಿರುವ ಪಕ್ಷಗಳನ್ನು ಮಾತ್ರ ಆಹ್ವಾನಿಸಲಾಗಿದೆ” ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಇದಕ್ಕೆ ಉತ್ತರಿಸಿರುವ ಪಕ್ಷದ ನಾಯಕ ಮನೋಜ್ ಕುಮಾರ್ ಜಾ “ಆರ್‌ಜೆಡಿಗೆ ಐದು ಸ್ಥಾನಗಳಿವೆ. ಯಾರಿಗಾದರೂ ಸಂದೇಹವಿದ್ದರೆ ರಾಜ್ಯಸಭೆಯ ವೆಬ್‌ಸೈಟ್‌ ಪರಿಶೀಲಿಸಿ. ಹಾಗಾಗಿ ಆರ್‌ಜೆಡಿಯನ್ನು ಇಂದಿನ ಸಭೆಯ ಪಟ್ಟಿಗೆ ಸೇರಿಸಿಕೊಳ್ಳಬೇಕು” ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ಸರ್ವಪಕ್ಷ ಸಭೆ ಎಂದರೆ ನಮ್ಮ ಅಭಿಪ್ರಾಯಗಳನ್ನು ಮುಂದಿಡಲು ನಮಗೆಲ್ಲರಿಗೂ ಅವಕಾಶ ನೀಡಬೇಕು ಎಂದು ಜಾ ತಿಳಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರ ಆಮ್‌ ಆದ್ಮಿ ಪಕ್ಷವು ಸಂಸತ್ತಿನಲ್ಲಿ ನಾಲ್ವರು ಸಂಸದರನ್ನು ಒಳಗೊಂಡಿದೆ. ಈ ಕುರಿತು ಅಸಮಾಧಾನಗೊಂಡ ಎಎಪಿ ನಾಯಕ ಸಂಜಯ್ ಸಿಂಗ್ “ಕೇಂದ್ರದಲ್ಲಿ ವಿಚಿತ್ರವಾದ ಅಹಂಕಾರವುಳ್ಳ ಸರ್ಕಾರವಿದೆ. ಎಎಪಿಗೆ ದೆಹಲಿಯಲ್ಲಿ ಸರ್ಕಾರವಿದೆ ಮತ್ತು ಪಂಜಾಬ್‌ನಲ್ಲಿ ಮುಖ್ಯ ವಿರೋಧ ಪಕ್ಷವಾಗಿದೆ. ಆದರೂ ಒಂದು ಪ್ರಮುಖ ವಿಷಯದ ಬಗ್ಗೆ ಎಎಪಿಯ ಅಭಿಪ್ರಾಯಗಳು ಅಗತ್ಯವಿಲ್ಲವೇ? ಸಭೆಯಲ್ಲಿ ಪ್ರಧಾನಿ ಏನು ಹೇಳುತ್ತಾರೆಂದು ದೇಶ ಕಾಯುತ್ತಿದೆ” ಎಂದು ತಿಳಿಸಿದ್ದಾರೆ.

ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಸೋಮವಾರ ಚೀನಾ ಜೊತೆ ಮುಖಾಮುಖಿಯಾಗಿ ಇದರಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದಾರೆ. ಈ ಕುರಿತು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಸರ್ಕಾರವನ್ನು ಪ್ರಶ್ನಿಸುತ್ತಿದ್ದು ಗಡಿಯಲ್ಲಿ ಏನಾಗುತ್ತಿದೆ ಎಂಬುದರ ಕುರಿತು ಸರ್ಕಾರ ಮಾಹಿತಿ ಕೊಡಬೇಕೆಂದು ಒತ್ತಾಯಿಸಿವೆ.

ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಕೇಂದ್ರದ ನಿಲುವಿನಿಂದ ಅಸಮಾಧಾನಗೊಂಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸರ್ವಪಕ್ಷ ಸಭೆ ಸರಿಯಾದ ನಿರ್ಧಾರ ಮತ್ತು ಅವರ ಪಕ್ಷ ತೃಣಮೂಲ ಕಾಂಗ್ರೆಸ್ ಬಿಕ್ಕಟ್ಟಿನ ಸಮಯದಲ್ಲಿ ದೇಶದ ಪರವಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ. ಮಮತಾ ಬ್ಯಾನರ್ಜಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರ ಪಕ್ಷದ ಮುಖಂಡರು ತಿಳಿಸಿದ್ದಾರೆ.

ಶಿವಸೇನೆಯ ಉದ್ಧವ್ ಠಾಕ್ರೆ, ಎನ್‌ಸಿಪಿಯ ಶರದ್ ಪವಾರ್, ವೈಎಸ್‌ಆರ್ ಕಾಂಗ್ರೆಸ್‌ನ ಜಗನ್ ಮೋಹನ್ ರೆಡ್ಡಿ, ಜೆಡಿಯುನ ನಿತೀಶ್ ಕುಮಾರ್, ಡಿಎಂಕೆಯ ಎಂಕೆ ಸ್ಟಾಲಿನ್, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಮತ್ತು ಸಿಪಿಎಂನ ಸೀತಾರಾಮ್ ಯೆಚೂರಿ ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.


ಇದನ್ನೂ ಓದಿ: ಮಣಿಪುರದ ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಕಾಂಗ್ರೆಸ್‌ಗೆ ಮತ್ತೆ ಅಧಿಕಾರದ ಸಾಧ್ಯತೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...