Homeಮುಖಪುಟಲಡಾಖ್‌ ಘರ್ಷಣೆ ಕುರಿತ ಸರ್ವಪಕ್ಷ ಸಭೆಗೆ AAP, RJDಗೆ ಆಹ್ವಾನವಿಲ್ಲ: ಹೊಸ ವಿವಾದ

ಲಡಾಖ್‌ ಘರ್ಷಣೆ ಕುರಿತ ಸರ್ವಪಕ್ಷ ಸಭೆಗೆ AAP, RJDಗೆ ಆಹ್ವಾನವಿಲ್ಲ: ಹೊಸ ವಿವಾದ

- Advertisement -
- Advertisement -

ಲಡಾಖ್‌ನಲ್ಲಿ ನಡೆಯುತ್ತಿರುವ ಭಾರತ-ಚೀನಾ ಸಂಘರ್ಷದ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಕರೆದಿರುವ ಸರ್ವಪಕ್ಷ ಸಭೆ ಗೆ ಸೋನಿಯಾ ಗಾಂಧಿ ಮತ್ತು ಮಮತಾ ಬ್ಯಾನರ್ಜಿ ಭಾಗವಹಿಸಲಿದ್ದಾರೆ. ಆದರೆ ಎರಡು ಪ್ರಮುಖ ಪಕ್ಷಗಳಾದ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಲಾಲು ಯಾದವ್ ಅವರ ಆರ್‌ಜೆಡಿಗೆ ಆಹ್ವಾನ ನೀಡದಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಿನ್ನೆ ಸಂಜೆ ಪಕ್ಷದ ಎಲ್ಲ ಅಧ್ಯಕ್ಷರಿಗೂ ಫೋನ್ ಕರೆ ಮಾಡಿ ಅವರನ್ನು ಸಭೆಗೆ ಆಹ್ವಾನಿಸಿದ್ದಾರೆ.

‌ಆದರೆ ತಮ್ಮ ಪಕ್ಷವನ್ನು ಏಕೆ ಆಹ್ವಾನಿಸಿಲ್ಲ ಎಂದು ಆರ್‌ಜೆಡಿಯ ತೇಜಶ್ವಿ ಯಾದವ್ ಟ್ವೀಟ್‌ ಮಾಡಿ ಪ್ರಶ್ನಿಸಿದ್ದಾರೆ. “ಪ್ರೀತಿಯ ರಕ್ಷಣಾ ಸಚಿವರೆ ಮತ್ತು ಪ್ರಧಾನಿ ಮಂತ್ರಿ ಕಚೇರಿ, ಗಾಲ್ವನ್‌ ಕಣಿವೆ ಕುರಿತು ನಡೆಯುತ್ತಿರುವ ಸರ್ವಪಕ್ಷ ಸಭೆಗೆ ಆಹ್ವಾನಿಸುವುದರ ಮಾನದಂಡಗಳನ್ನು ಅಂದರೆ ಸಭೆಗೆ ಒಳಗೊಳ್ಳುವ ಅಥವಾ ಹೊರಗಿಡುವ ಕುರಿತು ತಿಳಿಸಬೇಕೆಂದು ಮನವಿ. ಏಕೆಂದರೆ ನಮ್ಮ ಪಕ್ಷ ಆರ್‌ಜೆಡಿಗೆ ಇದುವರೆಗೂ ಯಾವುದೇ ಆಹ್ವಾನ ಬಂದಿಲ್ಲ” ಎಂದು ತಿಳಿಸಿದ್ದಾರೆ.

ಎಎಪಿ ಮತ್ತು ಆರ್‌ಜೆಡಿಯನ್ನು ಸರ್ವಪಕ್ಷ ಸಭೆಯಿಂದ ಹೊರಗಿಡಲಾಗಿರುವ ಕುರಿತು “ಸಂಸತ್ತಿನಲ್ಲಿ ಕನಿಷ್ಠ ಐದು ಸದಸ್ಯರನ್ನು ಹೊಂದಿರುವ ಪಕ್ಷಗಳನ್ನು ಮಾತ್ರ ಆಹ್ವಾನಿಸಲಾಗಿದೆ” ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಇದಕ್ಕೆ ಉತ್ತರಿಸಿರುವ ಪಕ್ಷದ ನಾಯಕ ಮನೋಜ್ ಕುಮಾರ್ ಜಾ “ಆರ್‌ಜೆಡಿಗೆ ಐದು ಸ್ಥಾನಗಳಿವೆ. ಯಾರಿಗಾದರೂ ಸಂದೇಹವಿದ್ದರೆ ರಾಜ್ಯಸಭೆಯ ವೆಬ್‌ಸೈಟ್‌ ಪರಿಶೀಲಿಸಿ. ಹಾಗಾಗಿ ಆರ್‌ಜೆಡಿಯನ್ನು ಇಂದಿನ ಸಭೆಯ ಪಟ್ಟಿಗೆ ಸೇರಿಸಿಕೊಳ್ಳಬೇಕು” ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ಸರ್ವಪಕ್ಷ ಸಭೆ ಎಂದರೆ ನಮ್ಮ ಅಭಿಪ್ರಾಯಗಳನ್ನು ಮುಂದಿಡಲು ನಮಗೆಲ್ಲರಿಗೂ ಅವಕಾಶ ನೀಡಬೇಕು ಎಂದು ಜಾ ತಿಳಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರ ಆಮ್‌ ಆದ್ಮಿ ಪಕ್ಷವು ಸಂಸತ್ತಿನಲ್ಲಿ ನಾಲ್ವರು ಸಂಸದರನ್ನು ಒಳಗೊಂಡಿದೆ. ಈ ಕುರಿತು ಅಸಮಾಧಾನಗೊಂಡ ಎಎಪಿ ನಾಯಕ ಸಂಜಯ್ ಸಿಂಗ್ “ಕೇಂದ್ರದಲ್ಲಿ ವಿಚಿತ್ರವಾದ ಅಹಂಕಾರವುಳ್ಳ ಸರ್ಕಾರವಿದೆ. ಎಎಪಿಗೆ ದೆಹಲಿಯಲ್ಲಿ ಸರ್ಕಾರವಿದೆ ಮತ್ತು ಪಂಜಾಬ್‌ನಲ್ಲಿ ಮುಖ್ಯ ವಿರೋಧ ಪಕ್ಷವಾಗಿದೆ. ಆದರೂ ಒಂದು ಪ್ರಮುಖ ವಿಷಯದ ಬಗ್ಗೆ ಎಎಪಿಯ ಅಭಿಪ್ರಾಯಗಳು ಅಗತ್ಯವಿಲ್ಲವೇ? ಸಭೆಯಲ್ಲಿ ಪ್ರಧಾನಿ ಏನು ಹೇಳುತ್ತಾರೆಂದು ದೇಶ ಕಾಯುತ್ತಿದೆ” ಎಂದು ತಿಳಿಸಿದ್ದಾರೆ.

ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಸೋಮವಾರ ಚೀನಾ ಜೊತೆ ಮುಖಾಮುಖಿಯಾಗಿ ಇದರಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದಾರೆ. ಈ ಕುರಿತು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಸರ್ಕಾರವನ್ನು ಪ್ರಶ್ನಿಸುತ್ತಿದ್ದು ಗಡಿಯಲ್ಲಿ ಏನಾಗುತ್ತಿದೆ ಎಂಬುದರ ಕುರಿತು ಸರ್ಕಾರ ಮಾಹಿತಿ ಕೊಡಬೇಕೆಂದು ಒತ್ತಾಯಿಸಿವೆ.

ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಕೇಂದ್ರದ ನಿಲುವಿನಿಂದ ಅಸಮಾಧಾನಗೊಂಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸರ್ವಪಕ್ಷ ಸಭೆ ಸರಿಯಾದ ನಿರ್ಧಾರ ಮತ್ತು ಅವರ ಪಕ್ಷ ತೃಣಮೂಲ ಕಾಂಗ್ರೆಸ್ ಬಿಕ್ಕಟ್ಟಿನ ಸಮಯದಲ್ಲಿ ದೇಶದ ಪರವಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ. ಮಮತಾ ಬ್ಯಾನರ್ಜಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರ ಪಕ್ಷದ ಮುಖಂಡರು ತಿಳಿಸಿದ್ದಾರೆ.

ಶಿವಸೇನೆಯ ಉದ್ಧವ್ ಠಾಕ್ರೆ, ಎನ್‌ಸಿಪಿಯ ಶರದ್ ಪವಾರ್, ವೈಎಸ್‌ಆರ್ ಕಾಂಗ್ರೆಸ್‌ನ ಜಗನ್ ಮೋಹನ್ ರೆಡ್ಡಿ, ಜೆಡಿಯುನ ನಿತೀಶ್ ಕುಮಾರ್, ಡಿಎಂಕೆಯ ಎಂಕೆ ಸ್ಟಾಲಿನ್, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಮತ್ತು ಸಿಪಿಎಂನ ಸೀತಾರಾಮ್ ಯೆಚೂರಿ ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.


ಇದನ್ನೂ ಓದಿ: ಮಣಿಪುರದ ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಕಾಂಗ್ರೆಸ್‌ಗೆ ಮತ್ತೆ ಅಧಿಕಾರದ ಸಾಧ್ಯತೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...