Homeಮುಖಪುಟಲಡಾಖ್‌ ಘರ್ಷಣೆ ಕುರಿತ ಸರ್ವಪಕ್ಷ ಸಭೆಗೆ AAP, RJDಗೆ ಆಹ್ವಾನವಿಲ್ಲ: ಹೊಸ ವಿವಾದ

ಲಡಾಖ್‌ ಘರ್ಷಣೆ ಕುರಿತ ಸರ್ವಪಕ್ಷ ಸಭೆಗೆ AAP, RJDಗೆ ಆಹ್ವಾನವಿಲ್ಲ: ಹೊಸ ವಿವಾದ

- Advertisement -
- Advertisement -

ಲಡಾಖ್‌ನಲ್ಲಿ ನಡೆಯುತ್ತಿರುವ ಭಾರತ-ಚೀನಾ ಸಂಘರ್ಷದ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಕರೆದಿರುವ ಸರ್ವಪಕ್ಷ ಸಭೆ ಗೆ ಸೋನಿಯಾ ಗಾಂಧಿ ಮತ್ತು ಮಮತಾ ಬ್ಯಾನರ್ಜಿ ಭಾಗವಹಿಸಲಿದ್ದಾರೆ. ಆದರೆ ಎರಡು ಪ್ರಮುಖ ಪಕ್ಷಗಳಾದ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಲಾಲು ಯಾದವ್ ಅವರ ಆರ್‌ಜೆಡಿಗೆ ಆಹ್ವಾನ ನೀಡದಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಿನ್ನೆ ಸಂಜೆ ಪಕ್ಷದ ಎಲ್ಲ ಅಧ್ಯಕ್ಷರಿಗೂ ಫೋನ್ ಕರೆ ಮಾಡಿ ಅವರನ್ನು ಸಭೆಗೆ ಆಹ್ವಾನಿಸಿದ್ದಾರೆ.

‌ಆದರೆ ತಮ್ಮ ಪಕ್ಷವನ್ನು ಏಕೆ ಆಹ್ವಾನಿಸಿಲ್ಲ ಎಂದು ಆರ್‌ಜೆಡಿಯ ತೇಜಶ್ವಿ ಯಾದವ್ ಟ್ವೀಟ್‌ ಮಾಡಿ ಪ್ರಶ್ನಿಸಿದ್ದಾರೆ. “ಪ್ರೀತಿಯ ರಕ್ಷಣಾ ಸಚಿವರೆ ಮತ್ತು ಪ್ರಧಾನಿ ಮಂತ್ರಿ ಕಚೇರಿ, ಗಾಲ್ವನ್‌ ಕಣಿವೆ ಕುರಿತು ನಡೆಯುತ್ತಿರುವ ಸರ್ವಪಕ್ಷ ಸಭೆಗೆ ಆಹ್ವಾನಿಸುವುದರ ಮಾನದಂಡಗಳನ್ನು ಅಂದರೆ ಸಭೆಗೆ ಒಳಗೊಳ್ಳುವ ಅಥವಾ ಹೊರಗಿಡುವ ಕುರಿತು ತಿಳಿಸಬೇಕೆಂದು ಮನವಿ. ಏಕೆಂದರೆ ನಮ್ಮ ಪಕ್ಷ ಆರ್‌ಜೆಡಿಗೆ ಇದುವರೆಗೂ ಯಾವುದೇ ಆಹ್ವಾನ ಬಂದಿಲ್ಲ” ಎಂದು ತಿಳಿಸಿದ್ದಾರೆ.

ಎಎಪಿ ಮತ್ತು ಆರ್‌ಜೆಡಿಯನ್ನು ಸರ್ವಪಕ್ಷ ಸಭೆಯಿಂದ ಹೊರಗಿಡಲಾಗಿರುವ ಕುರಿತು “ಸಂಸತ್ತಿನಲ್ಲಿ ಕನಿಷ್ಠ ಐದು ಸದಸ್ಯರನ್ನು ಹೊಂದಿರುವ ಪಕ್ಷಗಳನ್ನು ಮಾತ್ರ ಆಹ್ವಾನಿಸಲಾಗಿದೆ” ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಇದಕ್ಕೆ ಉತ್ತರಿಸಿರುವ ಪಕ್ಷದ ನಾಯಕ ಮನೋಜ್ ಕುಮಾರ್ ಜಾ “ಆರ್‌ಜೆಡಿಗೆ ಐದು ಸ್ಥಾನಗಳಿವೆ. ಯಾರಿಗಾದರೂ ಸಂದೇಹವಿದ್ದರೆ ರಾಜ್ಯಸಭೆಯ ವೆಬ್‌ಸೈಟ್‌ ಪರಿಶೀಲಿಸಿ. ಹಾಗಾಗಿ ಆರ್‌ಜೆಡಿಯನ್ನು ಇಂದಿನ ಸಭೆಯ ಪಟ್ಟಿಗೆ ಸೇರಿಸಿಕೊಳ್ಳಬೇಕು” ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ಸರ್ವಪಕ್ಷ ಸಭೆ ಎಂದರೆ ನಮ್ಮ ಅಭಿಪ್ರಾಯಗಳನ್ನು ಮುಂದಿಡಲು ನಮಗೆಲ್ಲರಿಗೂ ಅವಕಾಶ ನೀಡಬೇಕು ಎಂದು ಜಾ ತಿಳಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರ ಆಮ್‌ ಆದ್ಮಿ ಪಕ್ಷವು ಸಂಸತ್ತಿನಲ್ಲಿ ನಾಲ್ವರು ಸಂಸದರನ್ನು ಒಳಗೊಂಡಿದೆ. ಈ ಕುರಿತು ಅಸಮಾಧಾನಗೊಂಡ ಎಎಪಿ ನಾಯಕ ಸಂಜಯ್ ಸಿಂಗ್ “ಕೇಂದ್ರದಲ್ಲಿ ವಿಚಿತ್ರವಾದ ಅಹಂಕಾರವುಳ್ಳ ಸರ್ಕಾರವಿದೆ. ಎಎಪಿಗೆ ದೆಹಲಿಯಲ್ಲಿ ಸರ್ಕಾರವಿದೆ ಮತ್ತು ಪಂಜಾಬ್‌ನಲ್ಲಿ ಮುಖ್ಯ ವಿರೋಧ ಪಕ್ಷವಾಗಿದೆ. ಆದರೂ ಒಂದು ಪ್ರಮುಖ ವಿಷಯದ ಬಗ್ಗೆ ಎಎಪಿಯ ಅಭಿಪ್ರಾಯಗಳು ಅಗತ್ಯವಿಲ್ಲವೇ? ಸಭೆಯಲ್ಲಿ ಪ್ರಧಾನಿ ಏನು ಹೇಳುತ್ತಾರೆಂದು ದೇಶ ಕಾಯುತ್ತಿದೆ” ಎಂದು ತಿಳಿಸಿದ್ದಾರೆ.

ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಸೋಮವಾರ ಚೀನಾ ಜೊತೆ ಮುಖಾಮುಖಿಯಾಗಿ ಇದರಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದಾರೆ. ಈ ಕುರಿತು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಸರ್ಕಾರವನ್ನು ಪ್ರಶ್ನಿಸುತ್ತಿದ್ದು ಗಡಿಯಲ್ಲಿ ಏನಾಗುತ್ತಿದೆ ಎಂಬುದರ ಕುರಿತು ಸರ್ಕಾರ ಮಾಹಿತಿ ಕೊಡಬೇಕೆಂದು ಒತ್ತಾಯಿಸಿವೆ.

ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಕೇಂದ್ರದ ನಿಲುವಿನಿಂದ ಅಸಮಾಧಾನಗೊಂಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸರ್ವಪಕ್ಷ ಸಭೆ ಸರಿಯಾದ ನಿರ್ಧಾರ ಮತ್ತು ಅವರ ಪಕ್ಷ ತೃಣಮೂಲ ಕಾಂಗ್ರೆಸ್ ಬಿಕ್ಕಟ್ಟಿನ ಸಮಯದಲ್ಲಿ ದೇಶದ ಪರವಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ. ಮಮತಾ ಬ್ಯಾನರ್ಜಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರ ಪಕ್ಷದ ಮುಖಂಡರು ತಿಳಿಸಿದ್ದಾರೆ.

ಶಿವಸೇನೆಯ ಉದ್ಧವ್ ಠಾಕ್ರೆ, ಎನ್‌ಸಿಪಿಯ ಶರದ್ ಪವಾರ್, ವೈಎಸ್‌ಆರ್ ಕಾಂಗ್ರೆಸ್‌ನ ಜಗನ್ ಮೋಹನ್ ರೆಡ್ಡಿ, ಜೆಡಿಯುನ ನಿತೀಶ್ ಕುಮಾರ್, ಡಿಎಂಕೆಯ ಎಂಕೆ ಸ್ಟಾಲಿನ್, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಮತ್ತು ಸಿಪಿಎಂನ ಸೀತಾರಾಮ್ ಯೆಚೂರಿ ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.


ಇದನ್ನೂ ಓದಿ: ಮಣಿಪುರದ ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಕಾಂಗ್ರೆಸ್‌ಗೆ ಮತ್ತೆ ಅಧಿಕಾರದ ಸಾಧ್ಯತೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...