Homeಮುಖಪುಟಸ್ಲಂ ತೆರವು ಕಾರ್ಯಾಚರಣೆ; 'ಘರ್ ಬಚಾವೋ, ಬಿಜೆಪಿ ಹಟಾವೋ' ಅಭಿಯಾನ ಆರಂಭಿಸಿದ ಎಎಪಿ

ಸ್ಲಂ ತೆರವು ಕಾರ್ಯಾಚರಣೆ; ‘ಘರ್ ಬಚಾವೋ, ಬಿಜೆಪಿ ಹಟಾವೋ’ ಅಭಿಯಾನ ಆರಂಭಿಸಿದ ಎಎಪಿ

- Advertisement -
- Advertisement -

ರಾಷ್ಟ್ರ ರಾಜಧಾನಿಯ ಸ್ಲಂ ಕ್ಲಸ್ಟರ್‌ಗಳಿಗೆ ಭೇಟಿ ನೀಡಿದ ಎಎಪಿ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್, ‘ಕೊಳೆಗೇರಿ ನಿವಾಸಿಗಳನ್ನು ಒಕ್ಕಲೆಬ್ಬಿಸಲು ಬಿಜೆಪಿ ಪಿತೂರಿ ನಡೆಸುತ್ತಿದೆ’ ಎಂದು ಭಾನುವಾರ ಆರೋಪಿಸಿದ್ದಾರೆ.

ದೆಹಲಿಯ ಕೊಳೆಗೇರಿ ನಿವಾಸಿಗಳನ್ನು ನಿರಾಶ್ರಿತರನ್ನಾಗಿ ಮಾಡುವ ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಎಎಪಿಯ ‘ಘರ್ ಬಚಾವೋ, ಬಿಜೆಪಿ ಹಟಾವೋ’ ಅಭಿಯಾನವನ್ನು ಪ್ರಾರಂಭಿಸಿದೆ.
ಅತಿಶಿ ಅವರು ಬಿ ಆರ್ ಕ್ಯಾಂಪ್ ಕೊಳೆಗೇರಿಗೆ ಭೇಟಿ ನೀಡಿದಾಗ ಅವರ ಸಂಪುಟ ಸಹೋದ್ಯೋಗಿ ಭಾರದ್ವಾಜ್ ಅವರು ದಕ್ಷಿಣ ದೆಹಲಿಯ ಸಫ್ದರ್‌ಜಂಗ್ ಫ್ಲೈಯಿಂಗ್ ಕ್ಲಬ್ ಬಳಿಯ ಕೊಳೆಗೇರಿ ನಿವಾಸಿಗಳನ್ನು ಭೇಟಿ ಮಾಡಿದರು.

‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೆಹಲಿಯ ಕೊಳಚೆ ಪ್ರದೇಶಗಳನ್ನು ನೆಲಸಮ ಮಾಡಲು ಮತ್ತು ಅದರ ನಿವಾಸಿಗಳನ್ನು ಅವರ ಮನೆಗಳಿಂದ 40 ರಿಂದ 50 ಕಿಮೀ ದೂರಕ್ಕೆ ಸ್ಥಳಾಂತರಿಸಲು ಪಿತೂರಿ ನಡೆಸುತ್ತಿದೆ. ಎಎಪಿ ಮತ್ತು (ದೆಹಲಿ) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ (ಸ್ಲಂ ನಿವಾಸಿಗಳು) ನಿಂತಿದ್ದಾರೆ’ ಎಂದು ಅತಿಶಿ ಹೇಳಿದರು.

ಬಿಆರ್‌ ಕ್ಯಾಂಪ್‌ನ ಜನರಿಗೆ ಈಗಿರುವ ಮನೆಗಳಲ್ಲೇ ಫ್ಲಾಟ್‌ಗಳು ಸಿಗುವುದಿಲ್ಲವೋ ಅಲ್ಲಿಯವರೆಗೆ ಒಂದೇ ಒಂದು ಮನೆಯನ್ನು ಡಿಡಿಎ ಮುಟ್ಟಲು ಬಿಡುವುದಿಲ್ಲ ಎಂದು ಸಚಿವರು ಹೇಳಿದರು.

‘ನಾವು ಬುಲ್ಡೋಜರ್‌ಗಳ ಮುಂದೆ ನಿಲ್ಲಬೇಕೇ ಅಥವಾ ನ್ಯಾಯಾಲಯದಿಂದ ಆದೇಶವನ್ನು ಪಡೆಯಬೇಕೇ, ಆಮ್ ಆದ್ಮಿ ಪಕ್ಷವು ಬಿಆರ್ ಕ್ಯಾಂಪ್‌ನ ಸ್ಲಂಗಳಲ್ಲಿ ವಾಸಿಸುವ ಜನರನ್ನು ನಿರಾಶ್ರಿತರಾಗಲು ಬಿಡುವುದಿಲ್ಲ. ಸ್ಲಂ ನಿವಾಸಿಗಳ ಬಗ್ಗೆ ಬಿಜೆಪಿ ನಾಚಿಕೆಪಡುತ್ತದೆ, ಅದಕ್ಕಾಗಿಯೇ ಅವರು ಬುಲ್ಡೋಜರ್ ಬಳಸುತ್ತಿದ್ದಾರೆ’ ಎಂದು ಅವರು ವಾಗ್ದಾಳಿ ನಡೆಸಿದರು.

ಬಿಜೆಪಿ ನೇತೃತ್ವದ ಡಿಡಿಎ, ಸ್ಲಂ ನಿವಾಸಿಗಳನ್ನು ನರೇಲಾ ಮತ್ತು ಕಾಕ್ರೋಲಾದಲ್ಲಿ 50 ಕಿ.ಮೀ ದೂರಕ್ಕೆ ಸ್ಥಳಾಂತರಿಸಲು ಒತ್ತಾಯಿಸುತ್ತಿದೆ. ಅವರ ಉದ್ಯೋಗಗಳು ಮತ್ತು ಅವರ ಮಕ್ಕಳ ಶಾಲೆಗಳಿಂದ ಅವರನ್ನು ಮೈಲುಗಳಷ್ಟು ದೂರ ತಳ್ಳುತ್ತಿದೆ ಎಂದು ಅವರು ಹೇಳಿದರು.

ಇದೇ ರೀತಿಯ ಮಾತನಾಡಿದ ಭಾರದ್ವಾಜ್, ಇಲ್ಲಿನ ನಿವಾಸಿಗಳು ಚಾಲಕರು, ಸೇವಕರು, ಅಡುಗೆ ಸೇರಿದಂತೆ ಇತ್ಯಾದಿ ಕೆಲಸಗಳನ್ನು ಮಾಡುತ್ತಾ ದೆಹಲಿಯ ಜೆಜೆ ಕ್ಲಸ್ಟರ್‌ಗಳಲ್ಲಿ ತಮ್ಮ ಕುಟುಂಬಗಳೊಂದಿಗೆ ವಾಸಿಸುತ್ತಿದ್ದಾರೆ ಎಂದು ಹೇಳಿದರು.

‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಈ ಜನರನ್ನು (ಸ್ಲಂ ನಿವಾಸಿಗಳನ್ನು) ಅವರ ಮನೆಗಳಿಂದ ಹೊರಹಾಕಲು ಅವರ ವಿರುದ್ಧ ಪಿತೂರಿ ನಡೆಸುತ್ತಿದೆ. ಕಾನೂನಿನ ಪ್ರಕಾರ, ಅಧಿಕಾರಿಗಳು ಅವರಿಗೆ ಸರಿಯಾದ ಮನೆಗಳನ್ನು ನೀಡದೆ, ಪಟ್ಟಿ ಮಾಡಲಾದ ಕ್ಲಸ್ಟರ್ ಅನ್ನು ಕೆಡವಲು ಸಾಧ್ಯವಿಲ್ಲ. ಬಿಜೆಪಿ ಮಾಡುತ್ತಿರುವುದು ಕಾನೂನುಬಾಹಿರ ಮತ್ತು ಅಮಾನವೀಯ’ ಎಂದು ಆರೋಪಿಸಿದರು.

ಕಾನೂನಿನ ಪ್ರಕಾರ ಕೊಳೆಗೇರಿ ನಿವಾಸಿಗಳಿಗೆ ಇನ್-ಸಿಟು ಹೌಸ್ ಒದಗಿಸುವವರೆಗೆ ದೆಹಲಿಯಲ್ಲಿ ಯಾವುದೇ ಜೆಜೆ ಕ್ಲಸ್ಟರ್ ಅನ್ನು ಕೆಡವಲು ಆದೇಶ ನೀಡದಂತೆ ಭಾರದ್ವಾಜ್ ಅವರು ನ್ಯಾಯಾಂಗವನ್ನು ಒತ್ತಾಯಿಸಿದರು. ತಮ್ಮ ಕಳವಳವನ್ನು ವ್ಯಕ್ತಪಡಿಸಿದ ಸಚಿವರು, ಸಫ್ದರ್‌ಜಂಗ್ ಫ್ಲೈಯಿಂಗ್ ಕ್ಲಬ್‌ನ ಸ್ಲಂ ಕ್ಲಸ್ಟರ್‌ ಜನಗಳಿಗೆ ನೋಟಿಸ್ ನೀಡಿರುವ ರೈಲ್ವೇ, ಜನರು ತಾವಾಗಿಯೇ ಸ್ಥಳಾಂತರಿಸಬೇಕು ಎಂದು ಹೇಳಿದೆ. ಆದರೆಮ ಅವರ ಪುನರ್ವಸತಿ ಜವಾಬ್ದಾರಿ ಕೇಂದ್ರ ಸರ್ಕಾರದ್ದಾಗಿದೆ’ ಎಂದರು.

‘ಸುಂದರ್ ನರ್ಸರಿ, ತುಘಲಕಾಬಾದ್, ಮೆಹ್ರೌಲಿ, ವಸಂತ್ ವಿಹಾರ್ ಮತ್ತು ಪ್ರಿಯಾಂಕಾ ಕಾಲೋನಿಯಲ್ಲಿ ಕೇಂದ್ರ ಸರ್ಕಾರದ ಏಜೆನ್ಸಿಗಳು ಅಸಂಖ್ಯಾತ ಜನರನ್ನು ನಿರಾಶ್ರಿತರನ್ನಾಗಿ ಮಾಡಿದೆ’ ಎಂದು ಭಾರದ್ವಾಜ್ ಹೇಳಿದರು.

ಕಳೆದ ಕೆಲವು ತಿಂಗಳುಗಳಿಂದ ಬಿಜೆಪಿ ಆಡಳಿತದಲ್ಲಿರುವ ಕೇಂದ್ರ ಸರ್ಕಾರದ ಸಂಸ್ಥೆಗಳಾದ ಎಎಸ್ಐ, ರೈಲ್ವೇ, ಡಿಡಿಎ, ಭೂ ಮತ್ತು ಅಭಿವೃದ್ಧಿ ಸಂಸ್ಥೆಗಳು ತಮ್ಮ ಸ್ವಾಮ್ಯದ ಜಮೀನುಗಳಲ್ಲಿರುವ ಜೆಜೆ ಕ್ಲಸ್ಟರ್‌ಗಳನ್ನು ಕೆಡವಲು ‘ಸಂಚು’ ನಡೆಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಆರೋಪಿಸಿದರು.

‘ಈ ಜನರು ತಮ್ಮ ಚಿಕ್ಕ ಮಕ್ಕಳೊಂದಿಗೆ ಇಲ್ಲಿ ವಾಸಿಸುತ್ತಿದ್ದಾರೆ, ಆ ಮಕ್ಕಳು ಹತ್ತಿರದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿತ್ತಾರೆ. ಆ ಮಹಿಳೆಯರು ಹತ್ತಿರದ ಮನೆಗಳಲ್ಲಿ ಕೆಲಸ ಮಾಡುತ್ತಾರೆ, ಪುರುಷರು ಹತ್ತಿರದ ಮಾರುಕಟ್ಟೆಗಳಲ್ಲಿ ಕೆಲಸ ಮಾಡುತ್ತಾರೆ. ಈ ಜನರು ಈಗ ಎಲ್ಲಿಗೆ ಹೋಗುತ್ತಾರೆ’ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ; ಐದು ವರ್ಷಗಳಲ್ಲಿ ಕಾಂಗ್ರೆಸ್ ತೊರೆದ ಪ್ರಮುಖ ನಾಯಕರು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...