Homeಮುಖಪುಟಸ್ಲಂ ತೆರವು ಕಾರ್ಯಾಚರಣೆ; 'ಘರ್ ಬಚಾವೋ, ಬಿಜೆಪಿ ಹಟಾವೋ' ಅಭಿಯಾನ ಆರಂಭಿಸಿದ ಎಎಪಿ

ಸ್ಲಂ ತೆರವು ಕಾರ್ಯಾಚರಣೆ; ‘ಘರ್ ಬಚಾವೋ, ಬಿಜೆಪಿ ಹಟಾವೋ’ ಅಭಿಯಾನ ಆರಂಭಿಸಿದ ಎಎಪಿ

- Advertisement -
- Advertisement -

ರಾಷ್ಟ್ರ ರಾಜಧಾನಿಯ ಸ್ಲಂ ಕ್ಲಸ್ಟರ್‌ಗಳಿಗೆ ಭೇಟಿ ನೀಡಿದ ಎಎಪಿ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್, ‘ಕೊಳೆಗೇರಿ ನಿವಾಸಿಗಳನ್ನು ಒಕ್ಕಲೆಬ್ಬಿಸಲು ಬಿಜೆಪಿ ಪಿತೂರಿ ನಡೆಸುತ್ತಿದೆ’ ಎಂದು ಭಾನುವಾರ ಆರೋಪಿಸಿದ್ದಾರೆ.

ದೆಹಲಿಯ ಕೊಳೆಗೇರಿ ನಿವಾಸಿಗಳನ್ನು ನಿರಾಶ್ರಿತರನ್ನಾಗಿ ಮಾಡುವ ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಎಎಪಿಯ ‘ಘರ್ ಬಚಾವೋ, ಬಿಜೆಪಿ ಹಟಾವೋ’ ಅಭಿಯಾನವನ್ನು ಪ್ರಾರಂಭಿಸಿದೆ.
ಅತಿಶಿ ಅವರು ಬಿ ಆರ್ ಕ್ಯಾಂಪ್ ಕೊಳೆಗೇರಿಗೆ ಭೇಟಿ ನೀಡಿದಾಗ ಅವರ ಸಂಪುಟ ಸಹೋದ್ಯೋಗಿ ಭಾರದ್ವಾಜ್ ಅವರು ದಕ್ಷಿಣ ದೆಹಲಿಯ ಸಫ್ದರ್‌ಜಂಗ್ ಫ್ಲೈಯಿಂಗ್ ಕ್ಲಬ್ ಬಳಿಯ ಕೊಳೆಗೇರಿ ನಿವಾಸಿಗಳನ್ನು ಭೇಟಿ ಮಾಡಿದರು.

‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೆಹಲಿಯ ಕೊಳಚೆ ಪ್ರದೇಶಗಳನ್ನು ನೆಲಸಮ ಮಾಡಲು ಮತ್ತು ಅದರ ನಿವಾಸಿಗಳನ್ನು ಅವರ ಮನೆಗಳಿಂದ 40 ರಿಂದ 50 ಕಿಮೀ ದೂರಕ್ಕೆ ಸ್ಥಳಾಂತರಿಸಲು ಪಿತೂರಿ ನಡೆಸುತ್ತಿದೆ. ಎಎಪಿ ಮತ್ತು (ದೆಹಲಿ) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ (ಸ್ಲಂ ನಿವಾಸಿಗಳು) ನಿಂತಿದ್ದಾರೆ’ ಎಂದು ಅತಿಶಿ ಹೇಳಿದರು.

ಬಿಆರ್‌ ಕ್ಯಾಂಪ್‌ನ ಜನರಿಗೆ ಈಗಿರುವ ಮನೆಗಳಲ್ಲೇ ಫ್ಲಾಟ್‌ಗಳು ಸಿಗುವುದಿಲ್ಲವೋ ಅಲ್ಲಿಯವರೆಗೆ ಒಂದೇ ಒಂದು ಮನೆಯನ್ನು ಡಿಡಿಎ ಮುಟ್ಟಲು ಬಿಡುವುದಿಲ್ಲ ಎಂದು ಸಚಿವರು ಹೇಳಿದರು.

‘ನಾವು ಬುಲ್ಡೋಜರ್‌ಗಳ ಮುಂದೆ ನಿಲ್ಲಬೇಕೇ ಅಥವಾ ನ್ಯಾಯಾಲಯದಿಂದ ಆದೇಶವನ್ನು ಪಡೆಯಬೇಕೇ, ಆಮ್ ಆದ್ಮಿ ಪಕ್ಷವು ಬಿಆರ್ ಕ್ಯಾಂಪ್‌ನ ಸ್ಲಂಗಳಲ್ಲಿ ವಾಸಿಸುವ ಜನರನ್ನು ನಿರಾಶ್ರಿತರಾಗಲು ಬಿಡುವುದಿಲ್ಲ. ಸ್ಲಂ ನಿವಾಸಿಗಳ ಬಗ್ಗೆ ಬಿಜೆಪಿ ನಾಚಿಕೆಪಡುತ್ತದೆ, ಅದಕ್ಕಾಗಿಯೇ ಅವರು ಬುಲ್ಡೋಜರ್ ಬಳಸುತ್ತಿದ್ದಾರೆ’ ಎಂದು ಅವರು ವಾಗ್ದಾಳಿ ನಡೆಸಿದರು.

ಬಿಜೆಪಿ ನೇತೃತ್ವದ ಡಿಡಿಎ, ಸ್ಲಂ ನಿವಾಸಿಗಳನ್ನು ನರೇಲಾ ಮತ್ತು ಕಾಕ್ರೋಲಾದಲ್ಲಿ 50 ಕಿ.ಮೀ ದೂರಕ್ಕೆ ಸ್ಥಳಾಂತರಿಸಲು ಒತ್ತಾಯಿಸುತ್ತಿದೆ. ಅವರ ಉದ್ಯೋಗಗಳು ಮತ್ತು ಅವರ ಮಕ್ಕಳ ಶಾಲೆಗಳಿಂದ ಅವರನ್ನು ಮೈಲುಗಳಷ್ಟು ದೂರ ತಳ್ಳುತ್ತಿದೆ ಎಂದು ಅವರು ಹೇಳಿದರು.

ಇದೇ ರೀತಿಯ ಮಾತನಾಡಿದ ಭಾರದ್ವಾಜ್, ಇಲ್ಲಿನ ನಿವಾಸಿಗಳು ಚಾಲಕರು, ಸೇವಕರು, ಅಡುಗೆ ಸೇರಿದಂತೆ ಇತ್ಯಾದಿ ಕೆಲಸಗಳನ್ನು ಮಾಡುತ್ತಾ ದೆಹಲಿಯ ಜೆಜೆ ಕ್ಲಸ್ಟರ್‌ಗಳಲ್ಲಿ ತಮ್ಮ ಕುಟುಂಬಗಳೊಂದಿಗೆ ವಾಸಿಸುತ್ತಿದ್ದಾರೆ ಎಂದು ಹೇಳಿದರು.

‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಈ ಜನರನ್ನು (ಸ್ಲಂ ನಿವಾಸಿಗಳನ್ನು) ಅವರ ಮನೆಗಳಿಂದ ಹೊರಹಾಕಲು ಅವರ ವಿರುದ್ಧ ಪಿತೂರಿ ನಡೆಸುತ್ತಿದೆ. ಕಾನೂನಿನ ಪ್ರಕಾರ, ಅಧಿಕಾರಿಗಳು ಅವರಿಗೆ ಸರಿಯಾದ ಮನೆಗಳನ್ನು ನೀಡದೆ, ಪಟ್ಟಿ ಮಾಡಲಾದ ಕ್ಲಸ್ಟರ್ ಅನ್ನು ಕೆಡವಲು ಸಾಧ್ಯವಿಲ್ಲ. ಬಿಜೆಪಿ ಮಾಡುತ್ತಿರುವುದು ಕಾನೂನುಬಾಹಿರ ಮತ್ತು ಅಮಾನವೀಯ’ ಎಂದು ಆರೋಪಿಸಿದರು.

ಕಾನೂನಿನ ಪ್ರಕಾರ ಕೊಳೆಗೇರಿ ನಿವಾಸಿಗಳಿಗೆ ಇನ್-ಸಿಟು ಹೌಸ್ ಒದಗಿಸುವವರೆಗೆ ದೆಹಲಿಯಲ್ಲಿ ಯಾವುದೇ ಜೆಜೆ ಕ್ಲಸ್ಟರ್ ಅನ್ನು ಕೆಡವಲು ಆದೇಶ ನೀಡದಂತೆ ಭಾರದ್ವಾಜ್ ಅವರು ನ್ಯಾಯಾಂಗವನ್ನು ಒತ್ತಾಯಿಸಿದರು. ತಮ್ಮ ಕಳವಳವನ್ನು ವ್ಯಕ್ತಪಡಿಸಿದ ಸಚಿವರು, ಸಫ್ದರ್‌ಜಂಗ್ ಫ್ಲೈಯಿಂಗ್ ಕ್ಲಬ್‌ನ ಸ್ಲಂ ಕ್ಲಸ್ಟರ್‌ ಜನಗಳಿಗೆ ನೋಟಿಸ್ ನೀಡಿರುವ ರೈಲ್ವೇ, ಜನರು ತಾವಾಗಿಯೇ ಸ್ಥಳಾಂತರಿಸಬೇಕು ಎಂದು ಹೇಳಿದೆ. ಆದರೆಮ ಅವರ ಪುನರ್ವಸತಿ ಜವಾಬ್ದಾರಿ ಕೇಂದ್ರ ಸರ್ಕಾರದ್ದಾಗಿದೆ’ ಎಂದರು.

‘ಸುಂದರ್ ನರ್ಸರಿ, ತುಘಲಕಾಬಾದ್, ಮೆಹ್ರೌಲಿ, ವಸಂತ್ ವಿಹಾರ್ ಮತ್ತು ಪ್ರಿಯಾಂಕಾ ಕಾಲೋನಿಯಲ್ಲಿ ಕೇಂದ್ರ ಸರ್ಕಾರದ ಏಜೆನ್ಸಿಗಳು ಅಸಂಖ್ಯಾತ ಜನರನ್ನು ನಿರಾಶ್ರಿತರನ್ನಾಗಿ ಮಾಡಿದೆ’ ಎಂದು ಭಾರದ್ವಾಜ್ ಹೇಳಿದರು.

ಕಳೆದ ಕೆಲವು ತಿಂಗಳುಗಳಿಂದ ಬಿಜೆಪಿ ಆಡಳಿತದಲ್ಲಿರುವ ಕೇಂದ್ರ ಸರ್ಕಾರದ ಸಂಸ್ಥೆಗಳಾದ ಎಎಸ್ಐ, ರೈಲ್ವೇ, ಡಿಡಿಎ, ಭೂ ಮತ್ತು ಅಭಿವೃದ್ಧಿ ಸಂಸ್ಥೆಗಳು ತಮ್ಮ ಸ್ವಾಮ್ಯದ ಜಮೀನುಗಳಲ್ಲಿರುವ ಜೆಜೆ ಕ್ಲಸ್ಟರ್‌ಗಳನ್ನು ಕೆಡವಲು ‘ಸಂಚು’ ನಡೆಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಆರೋಪಿಸಿದರು.

‘ಈ ಜನರು ತಮ್ಮ ಚಿಕ್ಕ ಮಕ್ಕಳೊಂದಿಗೆ ಇಲ್ಲಿ ವಾಸಿಸುತ್ತಿದ್ದಾರೆ, ಆ ಮಕ್ಕಳು ಹತ್ತಿರದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿತ್ತಾರೆ. ಆ ಮಹಿಳೆಯರು ಹತ್ತಿರದ ಮನೆಗಳಲ್ಲಿ ಕೆಲಸ ಮಾಡುತ್ತಾರೆ, ಪುರುಷರು ಹತ್ತಿರದ ಮಾರುಕಟ್ಟೆಗಳಲ್ಲಿ ಕೆಲಸ ಮಾಡುತ್ತಾರೆ. ಈ ಜನರು ಈಗ ಎಲ್ಲಿಗೆ ಹೋಗುತ್ತಾರೆ’ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ; ಐದು ವರ್ಷಗಳಲ್ಲಿ ಕಾಂಗ್ರೆಸ್ ತೊರೆದ ಪ್ರಮುಖ ನಾಯಕರು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...