Homeಚಳವಳಿಪ್ರತಿಭಟನಾ ನಿರತ ರೈತರಿಗೆ ಆಹಾರ-ನೀರು ಒದಗಿಸಿದ ಆಪ್: ಹೋರಾಟಕ್ಕೆ ಬೆಂಬಲ

ಪ್ರತಿಭಟನಾ ನಿರತ ರೈತರಿಗೆ ಆಹಾರ-ನೀರು ಒದಗಿಸಿದ ಆಪ್: ಹೋರಾಟಕ್ಕೆ ಬೆಂಬಲ

ಕೇಂದ್ರದ “ಷರತ್ತುಬದ್ಧ” ಸಂವಾದ ಪ್ರಸ್ತಾಪವನ್ನು ಪ್ರತಿಭಟನಾ ನಿರತ ರೈತ ಸಂಘಟನೆಗಳು ತಿರಸ್ಕರಿಸಿವೆ.

- Advertisement -
- Advertisement -

’ದೆಹಲಿ ಚಲೋ’ ಪ್ರತಿಭಟನಾ ನಿರತ ರೈತರಿಗೆ ಆಮ್ ಆದ್ಮಿ ಪಕ್ಷ ಬೆಂಬಲ ನೀಡಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿರ್ದೇಶನದಂತೆ ರೈತರಿಗೆ ಆಹಾರ, ನೀರು, ವಿದ್ಯುತ್ ವ್ಯವಸ್ಥೆ ಮಾಡಿದೆ.

“ದೆಹಲಿಯಲ್ಲಿ ರೈತರು ಎಲ್ಲೆಲ್ಲಿ ಪ್ರತಿಭಟನೆ ಮಾಡಲು ಬಯಸುತ್ತಾರೋ ಅವರಿಗೆ ಅನುಮತಿ ನೀಡಬೇಕು. ದೆಹಲಿ ಸಿಎಂ ನಿರ್ದೇಶನದಂತೆ, ಎಎಪಿ ಸರ್ಕಾರ ಪ್ರತಿಭಟನಾಕಾರ ರೈತರಿಗೆ ಬೆಂಬಲ ನೀಡಲಿದೆ. ನಾವು ಅವರಿಗೆ ಶೆಡ್‌ಗಳು, ನೀರು, ವಿದ್ಯುತ್ ಇತ್ಯಾದಿಗಳನ್ನು ವ್ಯವಸ್ಥೆ ಮಾಡುತ್ತೇವೆ. ನಾವು ರೈತರ ಪರವಾಗಿ ನಿಲ್ಲುತ್ತೇವೆ” ಎಂದು ಪಕ್ಷದ ರಾಷ್ಟ್ರೀಯ ವಕ್ತಾರ ರಾಘವ್ ಚಾಡ್ಡಾ ಹೇಳಿದ್ದಾರೆ.

ಇದನ್ನೂ ಓದಿ: ನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳ ವಿರುದ್ಧ 32 ರೈತ ಸಂಘಟನೆಗಳು ನೇತೃತ್ವದಲ್ಲಿ ನಡೆಸುತ್ತಿರುವ ಪ್ರತಿಭಟನೆಯು ಇಂದಿಗೆ ಆರನೇ ದಿನಕ್ಕೆ ಕಾಲಿಟ್ಟಿದ್ದು, ರಾಜಧಾನಿಯ ಎಲ್ಲಾ ಪ್ರವೇಶ ದ್ವಾರಗಳನ್ನು ನಿರ್ಬಂಧಿಸಿ, ಬಂದ್ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ದೆಹಲಿಯಲ್ಲಿ ಎಲ್ಲಾ ಪ್ರವೇಶ ದ್ವಾರಗಳನ್ನು ನಿರ್ಬಂಧಿಸಿ ಪ್ರತಿಭಟನೆ ಮಾಡುವ ಎಚ್ಚರಿಕೆ ಹಿನ್ನೆಲೆ, ಇಂದು ಪ್ರತಿಭಟನೆ ತೀವ್ರಗೊಳ್ಳುವ ಲಕ್ಷಣಗಳಿವೆ. ಕೇಂದ್ರದ “ಷರತ್ತುಬದ್ಧ” ಸಂವಾದ ಪ್ರಸ್ತಾಪವನ್ನು ಪ್ರತಿಭಟನಾ ನಿರತ ರೈತ ಸಂಘಟನೆಗಳು ತಿರಸ್ಕರಿಸಿವೆ. ಸರ್ಕಾರ ಡಿಸೆಂಬರ್ 03 ರಂದು ರೈತ ಮುಖಂಡರನ್ನು ಮಾತುಕತೆಗೆ ಕರೆದಿದೆ.

ಕೃಷಿಯನ್ನು ಕಾರ್ಪೊರೇಟ್ ಕುಳಗಳ ವಶವನ್ನಾಗಿ ಮಾಡುವ ಈ ರೈತ ವಿರೋಧಿ ಕಾಯ್ದೆಗಳನ್ನು ಸರ್ಕಾರ ವಾಪಸ್ ಪಡೆದುಕೊಳ್ಳುವವರೆಗೂ ಹೋರಾಟ ನಡೆಸುತ್ತೇವೆ. ನಮ್ಮ ಬಳಿ 3-4 ತಿಂಗಳಿಗಾಗುವಷ್ಟು ರೇಷನ್ ಇದೆ. ಹಾಗಾಗಿ ಪ್ರತಿಭಟನೆ ಅನಿರ್ದಿಷ್ಠಾವಧಿ ನಡೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್‌ನ ಅಧ್ಯಕ್ಷ ಸುರ್ಜಿತ್ ಪೌಲ್ ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಭಟನೆ ರಾಜಕೀಯ ಎಂದು ನಾನು ಎಂದಿಗೂ ಆರೋಪಿಸಿಲ್ಲ ಎಂದು ತಮ್ಮನ್ನು ಸಮರ್ಥಿಸಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನಿನ್ನೆಯ ತಮ್ಮ ಮನ್ ಕಿ ಬಾತ್ ಭಾಷಣದಲ್ಲಿ ಕೃಷಿ ಸುಧಾರಣೆಗಳು ರೈತರನ್ನು ವಿವಿಧ ಸಂಕೋಲೆಗಳಿಂದ ಮುಕ್ತಗೊಳಿಸುತ್ತವೆ ಮತ್ತು ಅವರಿಗೆ ಹೊಸ ಹಕ್ಕುಗಳು ಮತ್ತು ಅವಕಾಶಗಳನ್ನು ನೀಡುತ್ತವೆ ಎಂದು ಮತ್ತೆ ಪುನರುಚ್ಚರಿಸಿದ್ದಾರೆ.


ಇದನ್ನೂ ಓದಿ: ದೆಹಲಿ ಬಂದ್ ಮಾಡುವುದಾಗಿ ರೈತರ ಎಚ್ಚರಿಕೆ: ತಡರಾತ್ರಿ BJP ಸಭೆ ನಡೆಸಿದ ಅಮಿತ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...