Homeಚಳವಳಿಪ್ರತಿಭಟನಾ ನಿರತ ರೈತರಿಗೆ ಆಹಾರ-ನೀರು ಒದಗಿಸಿದ ಆಪ್: ಹೋರಾಟಕ್ಕೆ ಬೆಂಬಲ

ಪ್ರತಿಭಟನಾ ನಿರತ ರೈತರಿಗೆ ಆಹಾರ-ನೀರು ಒದಗಿಸಿದ ಆಪ್: ಹೋರಾಟಕ್ಕೆ ಬೆಂಬಲ

ಕೇಂದ್ರದ “ಷರತ್ತುಬದ್ಧ” ಸಂವಾದ ಪ್ರಸ್ತಾಪವನ್ನು ಪ್ರತಿಭಟನಾ ನಿರತ ರೈತ ಸಂಘಟನೆಗಳು ತಿರಸ್ಕರಿಸಿವೆ.

- Advertisement -
- Advertisement -

’ದೆಹಲಿ ಚಲೋ’ ಪ್ರತಿಭಟನಾ ನಿರತ ರೈತರಿಗೆ ಆಮ್ ಆದ್ಮಿ ಪಕ್ಷ ಬೆಂಬಲ ನೀಡಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿರ್ದೇಶನದಂತೆ ರೈತರಿಗೆ ಆಹಾರ, ನೀರು, ವಿದ್ಯುತ್ ವ್ಯವಸ್ಥೆ ಮಾಡಿದೆ.

“ದೆಹಲಿಯಲ್ಲಿ ರೈತರು ಎಲ್ಲೆಲ್ಲಿ ಪ್ರತಿಭಟನೆ ಮಾಡಲು ಬಯಸುತ್ತಾರೋ ಅವರಿಗೆ ಅನುಮತಿ ನೀಡಬೇಕು. ದೆಹಲಿ ಸಿಎಂ ನಿರ್ದೇಶನದಂತೆ, ಎಎಪಿ ಸರ್ಕಾರ ಪ್ರತಿಭಟನಾಕಾರ ರೈತರಿಗೆ ಬೆಂಬಲ ನೀಡಲಿದೆ. ನಾವು ಅವರಿಗೆ ಶೆಡ್‌ಗಳು, ನೀರು, ವಿದ್ಯುತ್ ಇತ್ಯಾದಿಗಳನ್ನು ವ್ಯವಸ್ಥೆ ಮಾಡುತ್ತೇವೆ. ನಾವು ರೈತರ ಪರವಾಗಿ ನಿಲ್ಲುತ್ತೇವೆ” ಎಂದು ಪಕ್ಷದ ರಾಷ್ಟ್ರೀಯ ವಕ್ತಾರ ರಾಘವ್ ಚಾಡ್ಡಾ ಹೇಳಿದ್ದಾರೆ.

ಇದನ್ನೂ ಓದಿ: ನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳ ವಿರುದ್ಧ 32 ರೈತ ಸಂಘಟನೆಗಳು ನೇತೃತ್ವದಲ್ಲಿ ನಡೆಸುತ್ತಿರುವ ಪ್ರತಿಭಟನೆಯು ಇಂದಿಗೆ ಆರನೇ ದಿನಕ್ಕೆ ಕಾಲಿಟ್ಟಿದ್ದು, ರಾಜಧಾನಿಯ ಎಲ್ಲಾ ಪ್ರವೇಶ ದ್ವಾರಗಳನ್ನು ನಿರ್ಬಂಧಿಸಿ, ಬಂದ್ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ದೆಹಲಿಯಲ್ಲಿ ಎಲ್ಲಾ ಪ್ರವೇಶ ದ್ವಾರಗಳನ್ನು ನಿರ್ಬಂಧಿಸಿ ಪ್ರತಿಭಟನೆ ಮಾಡುವ ಎಚ್ಚರಿಕೆ ಹಿನ್ನೆಲೆ, ಇಂದು ಪ್ರತಿಭಟನೆ ತೀವ್ರಗೊಳ್ಳುವ ಲಕ್ಷಣಗಳಿವೆ. ಕೇಂದ್ರದ “ಷರತ್ತುಬದ್ಧ” ಸಂವಾದ ಪ್ರಸ್ತಾಪವನ್ನು ಪ್ರತಿಭಟನಾ ನಿರತ ರೈತ ಸಂಘಟನೆಗಳು ತಿರಸ್ಕರಿಸಿವೆ. ಸರ್ಕಾರ ಡಿಸೆಂಬರ್ 03 ರಂದು ರೈತ ಮುಖಂಡರನ್ನು ಮಾತುಕತೆಗೆ ಕರೆದಿದೆ.

ಕೃಷಿಯನ್ನು ಕಾರ್ಪೊರೇಟ್ ಕುಳಗಳ ವಶವನ್ನಾಗಿ ಮಾಡುವ ಈ ರೈತ ವಿರೋಧಿ ಕಾಯ್ದೆಗಳನ್ನು ಸರ್ಕಾರ ವಾಪಸ್ ಪಡೆದುಕೊಳ್ಳುವವರೆಗೂ ಹೋರಾಟ ನಡೆಸುತ್ತೇವೆ. ನಮ್ಮ ಬಳಿ 3-4 ತಿಂಗಳಿಗಾಗುವಷ್ಟು ರೇಷನ್ ಇದೆ. ಹಾಗಾಗಿ ಪ್ರತಿಭಟನೆ ಅನಿರ್ದಿಷ್ಠಾವಧಿ ನಡೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್‌ನ ಅಧ್ಯಕ್ಷ ಸುರ್ಜಿತ್ ಪೌಲ್ ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಭಟನೆ ರಾಜಕೀಯ ಎಂದು ನಾನು ಎಂದಿಗೂ ಆರೋಪಿಸಿಲ್ಲ ಎಂದು ತಮ್ಮನ್ನು ಸಮರ್ಥಿಸಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನಿನ್ನೆಯ ತಮ್ಮ ಮನ್ ಕಿ ಬಾತ್ ಭಾಷಣದಲ್ಲಿ ಕೃಷಿ ಸುಧಾರಣೆಗಳು ರೈತರನ್ನು ವಿವಿಧ ಸಂಕೋಲೆಗಳಿಂದ ಮುಕ್ತಗೊಳಿಸುತ್ತವೆ ಮತ್ತು ಅವರಿಗೆ ಹೊಸ ಹಕ್ಕುಗಳು ಮತ್ತು ಅವಕಾಶಗಳನ್ನು ನೀಡುತ್ತವೆ ಎಂದು ಮತ್ತೆ ಪುನರುಚ್ಚರಿಸಿದ್ದಾರೆ.


ಇದನ್ನೂ ಓದಿ: ದೆಹಲಿ ಬಂದ್ ಮಾಡುವುದಾಗಿ ರೈತರ ಎಚ್ಚರಿಕೆ: ತಡರಾತ್ರಿ BJP ಸಭೆ ನಡೆಸಿದ ಅಮಿತ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...