Homeಮುಖಪುಟಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿಯಿಂದ ಸಾಮೂಹಿಕ ಉಪವಾಸ

ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿಯಿಂದ ಸಾಮೂಹಿಕ ಉಪವಾಸ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ವಿರುದ್ಧ ಆಮ್ ಆದ್ಮಿ ಪಕ್ಷವು (ಎಎಪಿ) ಇಂದು ಜಂತರ್ ಮಂತರ್‌ನಲ್ಲಿ ‘ಉಪವಾಸ ದಿವಸ’ ಪ್ರತಿಭಟನೆ ನಡೆಸುತ್ತಿದೆ.

ಸಾಮೂಹಿಕವಾಗಿ ಒಗ್ಗಟ್ಟಿನ ಪ್ರದರ್ಶನದ ಹಿನ್ನೆಲೆಯಲ್ಲಿ ಎಎಪಿ ಸಾಮೂಹಿಕ ಉಪವಾಸಕ್ಕೆ ಕರೆ ನೀಡಿದೆ. ಪ್ರತಿಭಟನೆಯು ದೆಹಲಿಯ ಜಂತರ್ ಮಂತರ್ ಮತ್ತು ಪಂಜಾಬ್‌ನಲ್ಲಿ ಸಭೆಯನ್ನು ಒಳಗೊಂಡಿದೆ, ಪಂಜಾಬ್‌ನಲ್ಲಿ ಆಪ್ ಶಾಸಕರು, ಸಚಿವರು, ಸಂಸದರು, ಕೌನ್ಸಿಲರ್‌ಗಳು ಒಗ್ಗೂಡಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ಎಎಪಿ ದೆಹಲಿ ಸಂಚಾಲಕ ಗೋಪಾಲ್ ರೈ ಹೇಳಿದ್ದಾರೆ. ಪಂಜಾಬ್‌ನಲ್ಲಿ ಎಎಪಿ ಶಾಸಕರು ಮತ್ತು ಕಾರ್ಯಕರ್ತರು ಸಿಎಂ ಭಗವಂತ್ ಮಾನ್ ಜೊತೆ ಉಪವಾಸ ಕುಳಿತುಕೊಳ್ಳಲಿದ್ದಾರೆ.

ದೇಶದ ಪ್ರಜಾಪ್ರಭುತ್ವದ ರಕ್ಷಣೆ, ಅನ್ಯಾಯ ಮತ್ತು ಸರ್ವಾಧಿಕಾರದ ವಿರುದ್ಧ ಹೋರಾಡಲು ಬಯಸವವರು ಇಂದು ತಮ್ಮ ತಮ್ಮ ಮನೆಗಳಲ್ಲಿ, ಗ್ರಾಮಗಳಲ್ಲಿ, ಜಿಲ್ಲಾ ಕೇಂದ್ರ, ರಾಜ್ಯ ರಾಜಧಾನಿಗಳಲ್ಲಿ ಸಾಮೂಹಿಕ ಉಪವಾಸ ನಡೆಸುವಂತೆ ಮನವಿ ಮಾಡಿದ್ದಾರೆ. ಜಂತರ್ ಮಂತರ್‌ನಲ್ಲಿ ನಡೆಯಲಿರುವ ಸಾಮೂಹಿಕ ಉಪವಾಸದಲ್ಲಿ ದೆಹಲಿಯ ಸಚಿವರು, ಶಾಸಕರು, ಸಂಸದರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಪೊಲೀಸರು ಬೃಹತ್ ಸಮಾವೇಶಕ್ಕೆ ಸಿದ್ಧತೆ ನಡೆಸಿದ್ದು, ಪ್ರತಿಭಟನಾ ಸ್ಥಳಕ್ಕೆ ತೆರಳುವ ರಸ್ತೆಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಭಾರೀ ಬ್ಯಾರಿಕೇಡ್‌ಗಳ ಅಳವಡಿಕೆಯಿಂದ ಮಧ್ಯ ದೆಹಲಿಯ ಕೆಲವು ಭಾಗಗಳಲ್ಲಿ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಏಕಕಾಲದಲ್ಲಿ ಭಾರತದ 25 ರಾಜ್ಯಗಳಲ್ಲಿ ಮತ್ತು ನ್ಯೂಯಾರ್ಕ್, ಬೋಸ್ಟನ್, ಟೊರೊಂಟೊ, ವಾಷಿಂಗ್ಟನ್ ಡಿಸಿ, ಮೆಲ್ಬೋರ್ನ್ ಮತ್ತು ಲಂಡನ್ ಸೇರಿದಂತೆ ಪ್ರಮುಖ ಅಂತರಾಷ್ಟ್ರೀಯ ಕೇಂದ್ರಗಳಲ್ಲಿ ಎಎಪಿ ಬೆಂಬಲಿಗರು ಸಾಮೂಹಿಕ ಉಪವಾಸದ ಮೂಲಕ ಕೇಜ್ರಿವಾಲ್‌ಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಲಿದ್ದಾರೆ ಎಂದು ರೈ ಘೋಷಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ದೆಹಲಿ ಮುಖ್ಯಮಂತ್ರಿಯನ್ನು ಇಡಿ ಬಂಧಿಸಿತ್ತು, ಅವರನ್ನು ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.

ಕೇಜ್ರಿವಾಲ್‌ ಬಂಧನವನ್ನು ಖಂಡಿಸಿ ಕಳೆದ ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಮೈತ್ರಕೂಟದ ಮೆಗಾ ರ್ಯಾಲಿ ನಡೆದಿತ್ತು. ರ್ಯಾಲಿಯಲ್ಲಿ ಸೋನಿಯಾ ಗಾಂಧಿ, ಸುನಿತಾ ಕೇಜ್ರಿವಾಲ್‌ ಮತ್ತು ಬಂಧಿತ ಜಾರ್ಖಾಂಡ್ ಮಾಜಿ ಸಿಎಂ ಹೇಮಂತ್ ಸೋರೆನ್ ಅವರ ಪತ್ನಿ ಕಲ್ಪನಾ ಸೋರೆನ್ ಅವರು ಭಾಗವಹಿಸಿದ್ದರು.

ಇದನ್ನು ಓದಿ: ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ: ಬಹಿರಂಗ ಚರ್ಚೆ ಆಹ್ವಾನದ ಬಗ್ಗೆ ಕೇಳಿದ್ದಕ್ಕೆ ಉಡಾಫೆಯಿಂದ ಉತ್ತರಿಸಿದ ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...