Homeಮುಖಪುಟಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿಯಿಂದ ಸಾಮೂಹಿಕ ಉಪವಾಸ

ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿಯಿಂದ ಸಾಮೂಹಿಕ ಉಪವಾಸ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ವಿರುದ್ಧ ಆಮ್ ಆದ್ಮಿ ಪಕ್ಷವು (ಎಎಪಿ) ಇಂದು ಜಂತರ್ ಮಂತರ್‌ನಲ್ಲಿ ‘ಉಪವಾಸ ದಿವಸ’ ಪ್ರತಿಭಟನೆ ನಡೆಸುತ್ತಿದೆ.

ಸಾಮೂಹಿಕವಾಗಿ ಒಗ್ಗಟ್ಟಿನ ಪ್ರದರ್ಶನದ ಹಿನ್ನೆಲೆಯಲ್ಲಿ ಎಎಪಿ ಸಾಮೂಹಿಕ ಉಪವಾಸಕ್ಕೆ ಕರೆ ನೀಡಿದೆ. ಪ್ರತಿಭಟನೆಯು ದೆಹಲಿಯ ಜಂತರ್ ಮಂತರ್ ಮತ್ತು ಪಂಜಾಬ್‌ನಲ್ಲಿ ಸಭೆಯನ್ನು ಒಳಗೊಂಡಿದೆ, ಪಂಜಾಬ್‌ನಲ್ಲಿ ಆಪ್ ಶಾಸಕರು, ಸಚಿವರು, ಸಂಸದರು, ಕೌನ್ಸಿಲರ್‌ಗಳು ಒಗ್ಗೂಡಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ಎಎಪಿ ದೆಹಲಿ ಸಂಚಾಲಕ ಗೋಪಾಲ್ ರೈ ಹೇಳಿದ್ದಾರೆ. ಪಂಜಾಬ್‌ನಲ್ಲಿ ಎಎಪಿ ಶಾಸಕರು ಮತ್ತು ಕಾರ್ಯಕರ್ತರು ಸಿಎಂ ಭಗವಂತ್ ಮಾನ್ ಜೊತೆ ಉಪವಾಸ ಕುಳಿತುಕೊಳ್ಳಲಿದ್ದಾರೆ.

ದೇಶದ ಪ್ರಜಾಪ್ರಭುತ್ವದ ರಕ್ಷಣೆ, ಅನ್ಯಾಯ ಮತ್ತು ಸರ್ವಾಧಿಕಾರದ ವಿರುದ್ಧ ಹೋರಾಡಲು ಬಯಸವವರು ಇಂದು ತಮ್ಮ ತಮ್ಮ ಮನೆಗಳಲ್ಲಿ, ಗ್ರಾಮಗಳಲ್ಲಿ, ಜಿಲ್ಲಾ ಕೇಂದ್ರ, ರಾಜ್ಯ ರಾಜಧಾನಿಗಳಲ್ಲಿ ಸಾಮೂಹಿಕ ಉಪವಾಸ ನಡೆಸುವಂತೆ ಮನವಿ ಮಾಡಿದ್ದಾರೆ. ಜಂತರ್ ಮಂತರ್‌ನಲ್ಲಿ ನಡೆಯಲಿರುವ ಸಾಮೂಹಿಕ ಉಪವಾಸದಲ್ಲಿ ದೆಹಲಿಯ ಸಚಿವರು, ಶಾಸಕರು, ಸಂಸದರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಪೊಲೀಸರು ಬೃಹತ್ ಸಮಾವೇಶಕ್ಕೆ ಸಿದ್ಧತೆ ನಡೆಸಿದ್ದು, ಪ್ರತಿಭಟನಾ ಸ್ಥಳಕ್ಕೆ ತೆರಳುವ ರಸ್ತೆಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಭಾರೀ ಬ್ಯಾರಿಕೇಡ್‌ಗಳ ಅಳವಡಿಕೆಯಿಂದ ಮಧ್ಯ ದೆಹಲಿಯ ಕೆಲವು ಭಾಗಗಳಲ್ಲಿ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಏಕಕಾಲದಲ್ಲಿ ಭಾರತದ 25 ರಾಜ್ಯಗಳಲ್ಲಿ ಮತ್ತು ನ್ಯೂಯಾರ್ಕ್, ಬೋಸ್ಟನ್, ಟೊರೊಂಟೊ, ವಾಷಿಂಗ್ಟನ್ ಡಿಸಿ, ಮೆಲ್ಬೋರ್ನ್ ಮತ್ತು ಲಂಡನ್ ಸೇರಿದಂತೆ ಪ್ರಮುಖ ಅಂತರಾಷ್ಟ್ರೀಯ ಕೇಂದ್ರಗಳಲ್ಲಿ ಎಎಪಿ ಬೆಂಬಲಿಗರು ಸಾಮೂಹಿಕ ಉಪವಾಸದ ಮೂಲಕ ಕೇಜ್ರಿವಾಲ್‌ಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಲಿದ್ದಾರೆ ಎಂದು ರೈ ಘೋಷಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ದೆಹಲಿ ಮುಖ್ಯಮಂತ್ರಿಯನ್ನು ಇಡಿ ಬಂಧಿಸಿತ್ತು, ಅವರನ್ನು ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.

ಕೇಜ್ರಿವಾಲ್‌ ಬಂಧನವನ್ನು ಖಂಡಿಸಿ ಕಳೆದ ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಮೈತ್ರಕೂಟದ ಮೆಗಾ ರ್ಯಾಲಿ ನಡೆದಿತ್ತು. ರ್ಯಾಲಿಯಲ್ಲಿ ಸೋನಿಯಾ ಗಾಂಧಿ, ಸುನಿತಾ ಕೇಜ್ರಿವಾಲ್‌ ಮತ್ತು ಬಂಧಿತ ಜಾರ್ಖಾಂಡ್ ಮಾಜಿ ಸಿಎಂ ಹೇಮಂತ್ ಸೋರೆನ್ ಅವರ ಪತ್ನಿ ಕಲ್ಪನಾ ಸೋರೆನ್ ಅವರು ಭಾಗವಹಿಸಿದ್ದರು.

ಇದನ್ನು ಓದಿ: ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ: ಬಹಿರಂಗ ಚರ್ಚೆ ಆಹ್ವಾನದ ಬಗ್ಗೆ ಕೇಳಿದ್ದಕ್ಕೆ ಉಡಾಫೆಯಿಂದ ಉತ್ತರಿಸಿದ ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...