Homeಮುಖಪುಟಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿಯಿಂದ ಸಾಮೂಹಿಕ ಉಪವಾಸ

ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿಯಿಂದ ಸಾಮೂಹಿಕ ಉಪವಾಸ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ವಿರುದ್ಧ ಆಮ್ ಆದ್ಮಿ ಪಕ್ಷವು (ಎಎಪಿ) ಇಂದು ಜಂತರ್ ಮಂತರ್‌ನಲ್ಲಿ ‘ಉಪವಾಸ ದಿವಸ’ ಪ್ರತಿಭಟನೆ ನಡೆಸುತ್ತಿದೆ.

ಸಾಮೂಹಿಕವಾಗಿ ಒಗ್ಗಟ್ಟಿನ ಪ್ರದರ್ಶನದ ಹಿನ್ನೆಲೆಯಲ್ಲಿ ಎಎಪಿ ಸಾಮೂಹಿಕ ಉಪವಾಸಕ್ಕೆ ಕರೆ ನೀಡಿದೆ. ಪ್ರತಿಭಟನೆಯು ದೆಹಲಿಯ ಜಂತರ್ ಮಂತರ್ ಮತ್ತು ಪಂಜಾಬ್‌ನಲ್ಲಿ ಸಭೆಯನ್ನು ಒಳಗೊಂಡಿದೆ, ಪಂಜಾಬ್‌ನಲ್ಲಿ ಆಪ್ ಶಾಸಕರು, ಸಚಿವರು, ಸಂಸದರು, ಕೌನ್ಸಿಲರ್‌ಗಳು ಒಗ್ಗೂಡಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ಎಎಪಿ ದೆಹಲಿ ಸಂಚಾಲಕ ಗೋಪಾಲ್ ರೈ ಹೇಳಿದ್ದಾರೆ. ಪಂಜಾಬ್‌ನಲ್ಲಿ ಎಎಪಿ ಶಾಸಕರು ಮತ್ತು ಕಾರ್ಯಕರ್ತರು ಸಿಎಂ ಭಗವಂತ್ ಮಾನ್ ಜೊತೆ ಉಪವಾಸ ಕುಳಿತುಕೊಳ್ಳಲಿದ್ದಾರೆ.

ದೇಶದ ಪ್ರಜಾಪ್ರಭುತ್ವದ ರಕ್ಷಣೆ, ಅನ್ಯಾಯ ಮತ್ತು ಸರ್ವಾಧಿಕಾರದ ವಿರುದ್ಧ ಹೋರಾಡಲು ಬಯಸವವರು ಇಂದು ತಮ್ಮ ತಮ್ಮ ಮನೆಗಳಲ್ಲಿ, ಗ್ರಾಮಗಳಲ್ಲಿ, ಜಿಲ್ಲಾ ಕೇಂದ್ರ, ರಾಜ್ಯ ರಾಜಧಾನಿಗಳಲ್ಲಿ ಸಾಮೂಹಿಕ ಉಪವಾಸ ನಡೆಸುವಂತೆ ಮನವಿ ಮಾಡಿದ್ದಾರೆ. ಜಂತರ್ ಮಂತರ್‌ನಲ್ಲಿ ನಡೆಯಲಿರುವ ಸಾಮೂಹಿಕ ಉಪವಾಸದಲ್ಲಿ ದೆಹಲಿಯ ಸಚಿವರು, ಶಾಸಕರು, ಸಂಸದರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಪೊಲೀಸರು ಬೃಹತ್ ಸಮಾವೇಶಕ್ಕೆ ಸಿದ್ಧತೆ ನಡೆಸಿದ್ದು, ಪ್ರತಿಭಟನಾ ಸ್ಥಳಕ್ಕೆ ತೆರಳುವ ರಸ್ತೆಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಭಾರೀ ಬ್ಯಾರಿಕೇಡ್‌ಗಳ ಅಳವಡಿಕೆಯಿಂದ ಮಧ್ಯ ದೆಹಲಿಯ ಕೆಲವು ಭಾಗಗಳಲ್ಲಿ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಏಕಕಾಲದಲ್ಲಿ ಭಾರತದ 25 ರಾಜ್ಯಗಳಲ್ಲಿ ಮತ್ತು ನ್ಯೂಯಾರ್ಕ್, ಬೋಸ್ಟನ್, ಟೊರೊಂಟೊ, ವಾಷಿಂಗ್ಟನ್ ಡಿಸಿ, ಮೆಲ್ಬೋರ್ನ್ ಮತ್ತು ಲಂಡನ್ ಸೇರಿದಂತೆ ಪ್ರಮುಖ ಅಂತರಾಷ್ಟ್ರೀಯ ಕೇಂದ್ರಗಳಲ್ಲಿ ಎಎಪಿ ಬೆಂಬಲಿಗರು ಸಾಮೂಹಿಕ ಉಪವಾಸದ ಮೂಲಕ ಕೇಜ್ರಿವಾಲ್‌ಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಲಿದ್ದಾರೆ ಎಂದು ರೈ ಘೋಷಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ದೆಹಲಿ ಮುಖ್ಯಮಂತ್ರಿಯನ್ನು ಇಡಿ ಬಂಧಿಸಿತ್ತು, ಅವರನ್ನು ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.

ಕೇಜ್ರಿವಾಲ್‌ ಬಂಧನವನ್ನು ಖಂಡಿಸಿ ಕಳೆದ ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಮೈತ್ರಕೂಟದ ಮೆಗಾ ರ್ಯಾಲಿ ನಡೆದಿತ್ತು. ರ್ಯಾಲಿಯಲ್ಲಿ ಸೋನಿಯಾ ಗಾಂಧಿ, ಸುನಿತಾ ಕೇಜ್ರಿವಾಲ್‌ ಮತ್ತು ಬಂಧಿತ ಜಾರ್ಖಾಂಡ್ ಮಾಜಿ ಸಿಎಂ ಹೇಮಂತ್ ಸೋರೆನ್ ಅವರ ಪತ್ನಿ ಕಲ್ಪನಾ ಸೋರೆನ್ ಅವರು ಭಾಗವಹಿಸಿದ್ದರು.

ಇದನ್ನು ಓದಿ: ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ: ಬಹಿರಂಗ ಚರ್ಚೆ ಆಹ್ವಾನದ ಬಗ್ಗೆ ಕೇಳಿದ್ದಕ್ಕೆ ಉಡಾಫೆಯಿಂದ ಉತ್ತರಿಸಿದ ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...