Homeಮುಖಪುಟಎಎಪಿ ಮುಖಂಡ ರಾಘವ್ ಚಡ್ಡಾಗೆ ರಾಖಿ ಸಾವಂತ್‌ ಪತಿಯ ತರಾಟೆ: ಧನ್ಯವಾದ ಹೇಳಿದ ನಟಿ

ಎಎಪಿ ಮುಖಂಡ ರಾಘವ್ ಚಡ್ಡಾಗೆ ರಾಖಿ ಸಾವಂತ್‌ ಪತಿಯ ತರಾಟೆ: ಧನ್ಯವಾದ ಹೇಳಿದ ನಟಿ

- Advertisement -
- Advertisement -

ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧುರನ್ನು ಬಾಲಿವುಡ್ ನಟಿ ರಾಖಿ ಸಾವಂತ್‌ಗೆ ಹೋಲಿಸಿದ್ದ ಎಎಪಿ ಮುಖಂಡ ರಾಘವ್ ಚಡ್ಡಾ ಅವರನ್ನು ನಟಿಯ ಪತಿ ರಿತೇಶ್ ತರಾಟೆ ತೆಗೆದುಕೊಂಡಿದ್ದಾರೆ. ಇದಕ್ಕೆ ನಟಿ ರಾಖಿ ಸಾವಂತ್‌ ಪತಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಶುಕ್ರವಾರ ಟ್ವೀಟ್ ಮಾಡಿದ್ದ ಎಎಪಿ ಮುಖಂಡ ರಾಘವ್ ಚಡ್ಡಾ, ನವಜೋತ್ ಸಿಂಗ್ ಸಿಧುರನ್ನು ಟೀಕಿಸುವ ಭರದಲ್ಲಿ ನಟಿ ರಾಖಿ ಸಾವಂತ್ ಅವರಿಗೆ ಹೋಲಿಸಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣಗಳ್ಲಲಿ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದರು.

ವಿವಾದಿತ ಕೃಷಿ ಕಾನೂನುಗಳ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರ ದ್ವಿಮುಖ ನಿರ್ಧಾರಗಳನ್ನು ಪ್ರಶ್ನಿಸಿ ವಿಡಿಯೋ ಮಾಡಿದ್ದ ನವಜೋತ್ ಸಿಂಗ್ ಸಿಧುರನ್ನು, ’ಪಂಜಾಬ್ ರಾಜಕಾರಣದ ರಾಖಿ ಸಾವಂತ್‌ ’ ಎಂದು ರಾಘವ್ ಚಡ್ಡಾ ಕರೆದಿದ್ದರು.

ಇದನ್ನೂ ಓದಿ: ನವಜೋತ್ ಸಿಧುರನ್ನು ’ಪಂಜಾಬ್‌ ರಾಜಕೀಯದ ರಾಖಿ ಸಾವಂತ್’ ಎಂದ ಆಪ್

 

View this post on Instagram

 

A post shared by Rakhi Sawant (@rakhisawant2511)


ರಾಘವ್ ಚಡ್ಡಾಗೆ ರಿತೇಶ್ ಪ್ರತಿಕ್ರಿಯಿಸಿರುವ ಟ್ವೀಟ್‌ನ ಸ್ಕ್ರೀನ್‌ಶಾಟ್ ಅನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ರಾಖಿ ಸಾವಂತ್‌, “ನನ್ನ ಪತಿ ರಾಘವ್ ಚಡ್ಡಾಗೆ ಪ್ರತಿಕ್ರಿಯಿಸಿದ್ದಾರೆ. ಇಲ್ಲಿಯವರೆಗೆ ನಾನು ಒಬ್ಬಂಟಿಯಾಗಿದ್ದರಿಂದ ಜನರು ನನ್ನನ್ನು ಹಿಂಸಿಸುತ್ತಿದ್ದರು. ಇಂದು ಇದನ್ನು ಹೇಳುತ್ತಾ ನನ್ನ ಕಣ್ಣಲ್ಲಿ ಕಣ್ಣೀರು ಬರುತ್ತಿದೆ. ನನ್ನ ಜೊತೆಗೆ ಯಾರೋ ಇದ್ದಾರೆ, ನನ್ನ ಘನತೆ, ಗೌರವದ ರಕ್ಷಣೆಗಾಗಿ ಜೊತೆಗೆ ನಿಂತಿದ್ದಾರೆ. ನನ್ನ ಪ್ರೀತಿಯ ಗಂಡನಿಗೆ ಧನ್ಯವಾದಗಳು” ಎಂದು ಪೋಸ್ಟ್ ಮಾಡಿದ್ದಾರೆ.

ದೆಹಲಿ ಶಾಸಕ ರಾಘವ್ ಚಡ್ಡಾ ವಿರುದ್ಧ ನಿಂತ ತಮ್ಮ ಪತಿ ರಿತೇಶ್ ಅವರಿಗೆ ನಟಿ ಧನ್ಯವಾದ ಸಲ್ಲಿಸಿದ್ದಾರೆ.

ರಾಘವ್ ಚಡ್ಡಾ ವಿರುದ್ಧ@riteshuk1 ಬಳಕೆದಾರರ ಹೆಸರಿನ ಟ್ವಿಟರ್ ಖಾತೆಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಲಾಗಿದೆ. “ರಾಘವ್ ಚಡ್ಡಾ, ದಯವಿಟ್ಟು ಇದನ್ನು ಎಚ್ಚರಿಕೆ ಎಂದು ಪರಿಗಣಿಸಿ !! ನಿಮ್ಮ ರಾಜಕೀಯ ವಿವಾದಗಳಲ್ಲಿ ನೀವು ನನ್ನ ಹೆಂಡತಿಯ ಹೆಸರನ್ನು ಮತ್ತೊಮ್ಮೆ ಬಳಸಿದರೆ, ನೀವು ಕಾನೂನು ಸಮಸ್ಯೆಯನ್ನು ಎದುರಿಸುತ್ತೀರಿ. ನಾನು ಮತ್ತೆ ಹೇಳುತ್ತೇನೆ, ನೀವು ಮತ್ತೆ ಎಂದಿಗೂ ಗೆಲ್ಲುವುದಿಲ್ಲ. ಏಕೆಂದರೆ ನೀವು ಆ ಸ್ಥಾನಕ್ಕೆ ಅರ್ಹರಲ್ಲ. ನೀವು ಇನ್ನೊಬ್ಬರ ಹೆಸರನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದೀರಿ” ಎಂದು ಟ್ವೀಟ್ ಮಾಡಲಾಗಿದೆ.

ಶುಕ್ರವಾರ ಟ್ವೀಟ್ ಮಾಡಿದ್ದ ರಾಘವ್ ಚಡ್ಡಾ, “ಪಂಜಾಬ್ ರಾಜಕೀಯದ ರಾಖಿ ಸಾವಂತ್ ನವಜೋತ್ ಸಿಂಗ್ ಸಿಧು. ಕ್ಯಾಪ್ಟನ್ (ಮುಖ್ಯಮಂತ್ರಿ ಅಮರಿಂದರ್ ಸಿಂಗ್) ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಗದರಿಸಿದ್ದಾರೆ. ಆದ್ದರಿಂದ ಇಂದು ಬದಲಾವಣೆಗಾಗಿ, ಅವರು ಅರವಿಂದ ಕೇಜ್ರಿವಾಲ್ ಹಿಂದೆ ಬಿದ್ದಿದ್ದಾರೆ. ನಾಳೆಯವರೆಗೆ ಕಾಯಿರಿ, ಅವರು ಕ್ಯಾಪ್ಟನ್ ವಿರುದ್ಧ ವೀರಾವೇಶದಿಂದ ಮತ್ತೆ ಹೇಳಿಕೆ ನೀಡುವುದನ್ನು ಪುನರಾರಂಭಿಸುತ್ತಾರೆ” ಎಂದು ಹೇಳಿದ್ದರು.


ಇದನ್ನೂ ಓದಿ: ಕೊರೊನಾ ಕಾಲದ ಆಪದ್ಬಾಂಧವ, ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....